Homeಎಕಾನಮಿನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ಬ್ಯಾಂಕಿಂಗ್, ಐಟಿ, ಆಟೋ ಮೊಬೈಲ್, ಸಿಮೆಂಟ್‌, ವಿದ್ಯುತ್‌ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಎಲ್‌.ಐ.ಸಿಯ ಕೋಟ್ಯಾಂತರ ಬೆಲೆ ಬಾಳುವ ಷೇರುಗಳನ್ನು ಹೊಂದಿದೆ. ಆದರೂ ಸರ್ಕಾರ ಇದನ್ನೇ ಮಾರಲು ಹೊರಟಿದೆ..

- Advertisement -
- Advertisement -

ದೇಶದ ಸಾರ್ವಜನಿಕ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ ದೇಶ-ವಿದೇಶಗಳ 65ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ನೂರಾರು ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದೆ. ಹೀಗೆ ಹೂಡಿಕೆ ಮಾಡಿರುವ ಶೇರುಗಳ ಡಿವಿಡೆಂಡ್ ಒಂದರಿಂದಲೇ ವಾರ್ಷಿಕ  1 ಲಕ್ಷ 76 ಸಾವಿರ ಕೋಟಿ ರೂಪಾಯಿ ಲಾಭಾಂಶ ಪಡೆದಿರುವ ಸಂಸ್ಥೆ ದೇಶಕ್ಕೆ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡುತ್ತಲೇ ಬರುತ್ತಿದೆ. ಲಾಭದ-ಪೈಪೋಟಿ ಜೊತೆಗೆ ಜನರ ವಿಶ್ವಾಸ ಗಳಿಸುತ್ತ ಸರ್ಕಾರಕ್ಕೂ ಲಾಭದ ಪಾಲು ಕೊಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಜೀವ ವಿಮಾ ನಿಗಮ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಹೂಡಿಕೆ ಮಾಡಿದೆ. ಸರ್ಕಾರಿ ಮತ್ತು ಖಾಸಗೀ ಸೇರಿಂದತೆ 21 ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂಪಾಯಿ ಶೇರುಗಳನ್ನು ಹೊಂದಿದೆ. ಐಡಿಬಿಐಯಲ್ಲಿ ಶೇ.51ರಷ್ಟು ಶೇರುಗಳನ್ನು ತೊಡಗಿಸಿದೆ.  ಆಕ್ಸಿಸ್ ಬ್ಯಾಂಕ್ ನಲ್ಲಿ ಶೇ.10.37ರಷ್ಟು, ಐಸಿಐಸಿಐ ಬ್ಯಾಂಕ್ ನಲ್ಲಿ ಶೆ.10.37ರಷ್ಟು, ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 9.25ರಷ್ಟು, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ 7.4ರಷ್ಟು, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 7.3ರಷ್ಟು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶೇ.6.4ರಷ್ಟು, ಕರ್ನಾಟಕ ಬ್ಯಾಂಕ್ ನಲ್ಲಿ ಶೇ.4.97ರಷ್ಟು ಹೂಡಿಕೆ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ 5 ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲೂ ಎಲ್.ಐ.ಸಿ ಶೇರುಗಳನ್ನು ಹೂಡಿಕೆ ಮಾಡಿದೆ. ವಿಶ್ವದ ಐಟಿ ದಿಗ್ಗಜ ಇನ್ಫೋಸಿಸ್ ನಲ್ಲಿ ಶೇ.5.85ರಷ್ಟು ಶೇರುಗಳನ್ನು ತೊಡಗಿಸಿದೆ. ವಿಪ್ರೋದಲ್ಲಿ ಶೇ.4.81ರಷ್ಟು, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಶೇ.3.98 ಹಾಗೂ ಒರೆಕಲ್ ಪಿಸ್‌ನಲ್ಲಿ 2.12ರಷ್ಟು ಶೇರುಗಳನ್ನು ಹಾಕಿದೆ.

ಕನಿಷ್ಟ 5 ಯುಟಿಲಿಟಿ ಕಂಪನಿಗಳಲ್ಲೂ ಹೂಡಿಕೆ ಮಾಡಿರುವ ಎಲ್ಐಸಿ ಅಲ್ಲಿಂದಲೂ ಲಾಂಭಾಂಶ ಪಡೆಯುತ್ತಿದೆ. ಬಾಟ ಕಂಪನಿಯಲ್ಲಿ ಶೇ.3.05ರಷ್ಟು, ಪೆಡಿಲೈಟ್ ಇಂಡಸ್ಟ್ರೀಯಲ್ಲಿ 1.56ರಷ್ಟು, ವಿಡಿಯೋ ಕಾನ್ ಕಂಪನಿಯಲ್ಲಿ 4.56ರಷ್ಟು ಶೇರುಗಳನ್ನು ತೊಡಗಿಸಿದೆ. ಔಷಧಿ ಕಂಪನಿಗಳಲ್ಲೂ ಎಲ್ಐಸಿ ತನ್ನ ಪಾರುಪತ್ಯವನ್ನು ಮೆರೆದಿದೆ. ಐದು ಪ್ರತಿಷ್ಠಿತ ಕಂಪನಿಗಳಾದ ಸನ್ ಫಾರ್ಮ, ಡಾ.ರೆಡ್ಡಿ ಲ್ಯಾಬರೋಟರಿ, ಕೆಡಿಲಾ ಹೆಲ್ತ್ ಕೇರ್ ಕಂಪನಿಗಳಲ್ಲಿ  ಶೇ. 14ರಷ್ಟು ಹಣವನ್ನು ಹೂಡಿಕೆ ಮಾಡಿದೆ.

ಅಖಿಲ ಭಾರತ ವಿಮಾ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಹೇಳುವಂತೆ, ವಿಮಾ ನಿಗಮದಲ್ಲಿ ಹೂಡಿಕೆ ವಿಭಾಗವಿದೆ. ಅದು ಯಾವ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ವರುತ್ತದೆ ಎಂಬ ಬಗ್ಗೆ ಆಲೋಚಿಸಿ ಹಣವನ್ನು ತೊಡಗಿಸುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಐಸಿ ಕೂಡ ಮಾರುಕಟ್ಟೆಯಲ್ಲಿ ಇರಲೇಬೇಕು. ಹಾಗಾಗಿ ಹೂಡಿಕೆ ವಿಭಾಗ ಬ್ಲೂಚಿಪ್ ಕಂಪನಿಗಳಲ್ಲಿ ಹೂಡಿಕೆಗೆ ತೊಡಗುತ್ತದೆ. ಅತ್ಯಂತ ವಿಶ್ವಾಸಾರ್ಹ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳಲ್ಲಿ ಹೂಡುವುದರಿಂದ ಲಾಭವೂ ಬರುತ್ತದೆ. ಪೈಪೋಟಿಯನ್ನೂ ನೀಡಿದಂತಾಗುತ್ತದೆ. ಪಾಲಿಸಿದಾರರು ಮತ್ತು ಸರ್ಕಾರಕ್ಕೆ ಲಾಭವನ್ನು ನೀಡಲು ಅನುಕೂಲವಾಗುತ್ತದೆ ಎನ್ನುತ್ತಾರೆ.

ದೇಶದ 5 ಪ್ರಮುಖ ಆಟೋ ಮೊಬೈಲ್ ಕಂಪನಿಗಳಲ್ಲು ಎಲ್ಐಸಿ ಕೋಟ್ಯಂತರ ರೂಪಾಯಿ ಹೂಡಿದೆ. ಈ ಕಂಪನಿಗಳ ಪೈಕಿ ಟಿವಿಎಸ್ ನಲ್ಲಿ 1.7ರಷ್ಟು ಹೂಡಿಕೆ ಮಾಡಿದ್ದರೆ ಬಜಾಜ್ ಕಂಪನಿಯಲ್ಲಿ 4.6ರಷ್ಟು ಹಾಗೂ ಹಿರೋ ಹೋಂಡಾ ಕಂಪನಿಯಲ್ಲಿ ಶೇ.5.54ರಷ್ಟು ಮತ್ತು ಅಶೋಕ ಲೈಲ್ಯಾಂಡ್ ನಲ್ಲಿ 1.36ರಷ್ಟು ಶೇರುಗಳನ್ನು ತೊಡಗಿಸಲಾಗಿದೆ. ಜೊತೆಗೆ ಒಎಂಸಿ ಕಂಪನಿಗಳಲ್ಲೂ ಹಣ ತೊಡಗಿಸಲಾಗಿದೆ. ಕ್ಯಾಸ್ಟ್ರೋಲ್ ಕಂಪನಿಯಲ್ಲಿ 10.32ರಷ್ಟು, ಓಎನ್.ಜಿ.ಸಿಯಲ್ಲಿ 9.48ರಷ್ಟು ಐಓಸಿಎಲ್ ನಲ್ಲಿ 6.51 ಮತ್ತು ಬಿಪಿಸಿಲ್ ನಲ್ಲಿ 5.88ರಷ್ಟು ಶೇರುಗಳನ್ನು ಹೂಡಿಕೆ ಮಾಡಲಾಗಿದೆ.

ವಿದ್ಯುತ್ ವಲಯದ 5 ಕಂಪನಿಗಳಾದ ಪವರ್ ಗ್ರೀಡ್ ನಲ್ಲಿ 4.89 ರಷ್ಟು ಕೆಇಸಿ ಇನ್  ನಲ್ಲಿ ಶೇ.1.7ರಷ್ಟು, ಜೆ.ಇ. ಪವರ್ ಕಂಪನಿಯಲ್ಲಿ 1.63ರಷ್ಟು ಶೇರುಗಳು ಇವೆ. ದೇಶದಲ್ಲಿ ಹೆಸರು ಮಾಡಿರುವ ಸಿಮೆಂಟ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಲಾಗಿದೆ. ಎಸಿಸಿ-6.5ರಷ್ಟು, ಅಂಬುಜ ಸಿಮೆಂಟ್ ಕಂಪನಿಯಲ್ಲಿ 4.80ರಷ್ಟು, ಲಕ್ಷ್ಮಿ ಸಿಮೆಂಟ್ ನಲ್ಲಿ 2.46ರಷ್ಟು ಆಲ್ಟ್ರಾಟೆಕ್ ನಲ್ಲಿ ಶೇ.4.06ರಷ್ಟು ಹೂಡಿಕೆಯಾಗಿದೆ. ಅಂದರೆ ನಾಲ್ಕು ಸಿಮೆಂಟ್ ಕಂಪನಿಗಳಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದು ಅಲ್ಲಿಂದಲೂ ಲಾಭದ ಹಣವನ್ನು ಎಲ್ಐಸಿ ಪಡೆದುಕೊಳ್ಳುತ್ತಿದೆ.

ಉಕ್ಕು ತಯಾರಿಕೆ ಕಂಪನಿಗಳಾದ ಎಸ್ಎಐಎಲ್ ನಲ್ಲಿ 9.6ರಷ್ಟು, ಟಾಟಾ ಸ್ಟೀಲ್ ಕಂಪನಿಯಲ್ಲಿ 9ರಷ್ಟು ವೇದಾಂತ ಕಂಪನಿಯಲ್ಲಿ 6.39ರಷ್ಟು, ನಾಲ್ಕೋದಲ್ಲಿ 5.27ರಷ್ಟು ಹೂಡಕೆಯಾಗಿದೆ. ಎರಡು ಖಾಸಗಿ ವಿಮಾ ಸಂಸ್ಥೆಗಳಲ್ಲೂ ಭಾರತೀಯ ಜೀವ ವಿಮಾ ನಿಗಮದಿಂದ ಹೂಡಿಕೆ ಮಾಡಿದ್ದು ಅಂತಾರಾಷ್ಟ್ರೀಯ ಮಟ್ಟದ ಐಟಿಸಿ 16.32ರಷ್ಟು ಎಲ್ ಅಂಡ್ ಟಿ ಕಂಪನಿಯಲ್ಲಿ 16.9ರಷ್ಟು ಶೇರುಗಳನ್ನು ತೊಡಗಿಸಿ ಪ್ರತಿಯೊಂದು ಕ್ಷೇತ್ರದಿಂದಲೂ ಲಾಭ ಮಾಡುತ್ತಿದೆ. 2017ರಲ್ಲಿ  ಶೇರುಗಳ ಡಿವಿಡೆಂಡ್ ನಿಂದ 1.59 ಲಕ್ಷ ಕೋಟಿ ರೂಪಾಯಿ ಲಾಭ ಬಂದಿದೆ. ಅದು 2018ನೇ ಸಾಲಿನಲ್ಲಿ ಲಾಭಾಂಶದಲ್ಲಿ ಶೇ. 0.17ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಅಂದರೆ 1.76 ಲಕ್ಷ ಕೋಟಿ ರೂಪಾಯಿ ಹಣ ಎಲ್ಐಸಿಗೆ ಬಂದಿದೆ.

ಎಲ್ಲಾ ವಲಯದಲ್ಲೂ ಹಣ ತೊಡಗಿಸಿ ಪೈಪೋಟಿ ನೀಡುತ್ತಿರುವ, ಲಾಭ ಗಳಿಸುತ್ತಿರುವ ಭಾರತೀಯ ಜೀವ ವಿಮಾ ನಿಗಮದ ಶೇರುಗಳನ್ನು ಸರ್ಕಾರ ಮಾರಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಕಾರಣಕ್ಕೂ ಭಾರತ ಸರ್ಕಾರ ಇಂತಹ ಜನವಿರೋಧಿ ಕೃತ್ಯಕ್ಕೆ ಕೈಹಾಕದೆ ಸಾರ್ವಜನಿಕ ಉದ್ಯಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜನರಿಗೆ ಉದ್ಯೋಗ ನೀಡಬೇಕು. ಪಾಲಿಸಿದಾರರು ನೌಕರರ ಹಿತಕಾಯಲು ಮುಂದಾಗಬೇಕಾದ ಜರೂರತ್ತು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...