Homeಮುಖಪುಟತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

- Advertisement -
- Advertisement -

ಥಪ್ಪಡ್‌ (ಕೆನ್ನೆಗೆ ಬಾರಿಸುವುದು) ಎಂಬ ಮಹಿಳಾ ಪ್ರಧಾನ ಚಿತ್ರವೊಂದು ಬಾಲಿವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.  ಮುಖ್ಯ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದರೆ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಇವರಿಬ್ಬರೂ ಸಹ ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಜೆಎನ್‌ಯು ವಿದ್ಯಾರ್ಥಿಗಳ ಪರ ನಿಂತಿದ್ದಾರೆ.

ಈ ಕಾಂಬಿನೇಷನ್‌ನ ಥಪ್ಪಡ್‌ ಸಿನೆಮಾದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ. ಥಪ್ಪಡ್‌ ಟ್ರೈಲರ್ ಬಿಡುಗಡೆಯಾದ ಕೆಲವು ದಿನಗಳ ನಂತರ “ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ ಮತ್ತು ಜನರು ಅದನ್ನು ತಮ್ಮ ಕುಟುಂಬಗಳೊಂದಿಗೆ ನೋಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಸಚಿವೆ ಹೇಳಿದ್ದಾರೆ.

ಥಪ್ಪಡ್‌ ಚಿತ್ರದ ಟ್ರೈಲರ್

“ನಾನು ನಿರ್ದೇಶಕರ ರಾಜಕೀಯ ಸಿದ್ಧಾಂತವನ್ನು ಬೆಂಬಲಿಸದಿರಬಹುದು ಅಥವಾ ಕೆಲವು ವಿಷಯಗಳ ಬಗ್ಗೆ ಕೆಲವು ನಟಿರೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಇದು ನಾನು ಖಂಡಿತವಾಗಿ ನೋಡುವ ಕಥೆಯಾಗಿದೆ” ಎಂದು ಸ್ಮೃತಿ ಇರಾನಿ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್ನಲ್ಲಿ, ಸ್ಮೃತಿ ಇರಾನಿ ಅವರು ಕುಟುಂಬದೊಳಗಿನ ಕಿರುಕುಳವನ್ನು ಒಳಗೊಂಡ ಸಂದರ್ಭಗಳಲ್ಲಿ “ಹೊಂದಾಣಿಕೆ” ಮಾಡಬೇಕಾದ ನಿದರ್ಶನಗಳ ಸಿನಿಮಾ ಮಾತನಾಡುತ್ತದೆ. “ಮಹಿಳೆಯರಿಗೆ ಹೊಡೆಯುವುದು ಸರಿಯಲ್ಲ … ಒಂದು ಕಪಾಳಮೋಕ್ಷವೂ ಸರಿಯಲ್ಲ. ಕೇವಲ ಒಂದು ಕಪಾಳಮೋಕ್ಷವೂ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಸಂತೋಷದಿಂದ ಮದುವೆಯಾದ ದಂಪತಿಗಳಲ್ಲಿ ಒಂದು ದಿನ ಪತಿಯು ಮನೆಯ ಪಾರ್ಟಿಯಲ್ಲಿ ಕೆಲವು ಅತಿಥಿಗಳ ಮುಂದೆ ಹೆಂಡತಿಗೆ ಕಪಾಳಕ್ಕೆ ಹೊಡೆಯುತ್ತಾನೆ. ಇದನ್ನು ಪ್ರತಿಭಟಿಸಿ ಹೆಂಡತಿ ಮದುವೆಯಿಂದ ಹೊರನಡೆಯಲು ನಿರ್ಧರಿಸುತ್ತಾಳೆ. ಇವೆಲ್ಲವೂಗಳ ನಡುವೆ ನಡೆಯುವ ಕಥೆಯೆ ಥಪ್ಪಡ್‌ ಸಿನಿಮಾವಾಗಿದೆ. ಆರ್ಟಿಕಲ್‌ 15 ಎಂಬ ಜಾತಿ ತಾರತಮ್ಯ ಮತ್ತು ಅತ್ಯಾಚಾರದ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ಅನುಭವ್‌ ಸಿನ್ಹಾರವರ ಮುಂದಿನ ಚಿತ್ರ ಇದಾಗಿದೆ.

ಥಪ್ಪಡ್‌ನಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸಿರುವ ತಾಪ್ಸಿ ಪನ್ನು ನಟಿಸಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಪಾತ್ರವು ತನಗೆ ಹೇಗೆ ಸವಾಲಿನದು ಎಂಬುದರ ಕುರಿತು ಮಾತನಾಡುತ್ತಾ, “ಅಮೃತಾ ಪಾತ್ರವು ಕೊನೆಯಲ್ಲಿ ನನಗೆ ಉಸಿರುಗಟ್ಟಿಸುತ್ತಿತ್ತು ಮತ್ತು ನಾನು ಅದನ್ನು ಸವಾಲಾಗಿ ತೆಗೆದುಕೊಂಡೆ. 15 ದಿನಗಳ ಶೂಟಿಂಗ್ ನಂತರ, ನಾನು ಕ್ಲಾಸ್ಟ್ರೋಫೋಬಿಕ್ ಅನ್ನು ಅನುಭವಿಸಲು ಪ್ರಾರಂಭಿಸಿದೆ. ನನ್ನ ಫೈರ್‌ಬ್ರಾಂಡ್ ಇಮೇಜ್ ಮತ್ತು ಮನಸ್ಸಿನ ಸ್ಥಳದಿಂದ ಹೊರಬರಲು ಮತ್ತು ಈ ಪಾತ್ರದಿಂದ ಹೊರಬರುವುದು ನನಗೆ ಕಠಿಣವಾಗಿತ್ತು” ಎಂದು ಹೇಳಿದ್ದರು.

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...