Homeರಾಜಕೀಯಕುರುಬ್ರು ವಿಶ್ವನಾಥನ ಹಿಂದೋದ್ರೆ?

ಕುರುಬ್ರು ವಿಶ್ವನಾಥನ ಹಿಂದೋದ್ರೆ?

- Advertisement -
- Advertisement -

ಕಾಲ ಎಂತೆಂತಹ ವಿಚಿತ್ರ ಸನ್ನಿವೇಶಗಳನ್ನು. ಸೃಷ್ಟಿ ಮಾಡುತ್ತದಲ್ಲವೆ! ಕಳೆದ ಚುನಾವಣೆಯಲ್ಲಿ ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೊಲ್ಲ ಎಂದು ಹೋದಲ್ಲಿಬಂದಲ್ಲಿ ಭಾಷಣ ಬಿಗಿದಿದ್ದ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶ ಇನ್ನ ಬಾಕಿ ಇರುವಾಗಲೇ ಕುಮಾರಸ್ವಾಮಿ ಮನೆಯ ಕರೆಗಂಟೆ ಒತ್ತಿ ಕೈಕಟ್ಟಿ ನಿಂತಿದ್ದಾರಲ್ಲಾ. ಆಗ ಸಿದ್ದು ನಮ್ಮಪ್ಪನಾಣೆ ನೀನೇ ಮುಖ್ಯಮಂತ್ರಿ ಎನ್ನುವುದೊಂದು ಬಾಕಿ ಇತ್ತು. ಸಿದ್ದು ಸ್ಥಿತಿ ನೋಡಿ ನಗು ಅದುಮಿಕೊಂಡ ದೇವೇಗೌಡರು ಮಗ ಮುಖ್ಯಮಂತ್ರಿ ಯಾದರೂ ಬಿಡದೆ, ಸಿದ್ದು ಬಗೆಗಿನ ಸೇಡನ್ನು ಮುಂದುವರಿಸುವ ಸಲುವಾಗಿ, ವಿಶ್ವನಾಥನನ್ನೇ ಪಾರ್ಟಿ ಪ್ರೆಸಿಡೆಂಟು ಮಾಡಿಬಿಟ್ಟಿದ್ದಾರಲ್ಲಾ, ಈ ಬಗ್ಗೆ ಸಿದ್ದುವನ್ನು ಕೇಳಬೇಕೆಂದು ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್‍ಠೋನ್ “ಕರಿಯ ಕಂಬಳಿ ಗದ್ದುಗೆ ಮಾಡಿ ವೀರದೊಳ್ಳತಂದಿರಿಸಿದರೊ, ವೀರದೊಳತಂದಿರಿಸಿದರೊ. ವಿಶ್ವನಾಥನ ಭಜಿಸಿದರೊ….. ಹಲೊ.
“ಯಾರು.”
“ನಾನು ಸಾರ್ ಯಾಹೂ.”
“ಏನ್ರಿ ಯಾಹೂ.”
“ಏನ್ ಸಾರ್ ಮುಖ್ಯಮಂತ್ರಿಯಾದಾಗ ನೋಡಕ್ಕೂ ಸಿಗಲಿಲ್ಲ, ಈಗ್ಲು ಸಿಗದಿ¯ವಲ್ಲ ಸಾರ್ ಅಷ್ಟು ಬಿಜಿನ.”
“ಅಂಗೇನಿಲ್ಲ ಹೇಳಿ.”
“ನಿಮ್ಮ ಸರಕಾರ ಸೋತಿದ್ದರ ಬಗ್ಗೆ ನೀವೇನೇಳ್ತಿರಿ ಸಾರ್.”
“ಜನ ಮೋಸ ಮಾಡಿದ್ರು.”
“ನಿಮ್ಮ ಭಾಗದ ತಪ್ಪುಗಳೇನಾದ್ರು ಇದ್ದವೆ?’’
“ಆಂಂ.’’
“ನೀವೇನಾರ ತೆಪ್ಪು ಮಾಡಿದ್ರ ಸಾರ್.”
“ನಾನೇನು ಮಾಡಿದೇ.”
“ ಮೊದಲನೆದಾಗಿ ನಿಮ್ಮ ಪ್ರತಿ ಭಾಷಣದಲ್ಲಿ ಎಡೂರಪ್ಪನ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ರಿ? ಜನ ಚಪ್ಪಾಳೆ ತಟ್ಟಿದ್ರು, ಆದ್ರೆ ಲಿಂಗಾಯಿತ್ರು ಎಡೂರಪ್ಪನ ಹಿಂದೆ ಒಗ್ಗಟ್ಟಾದ್ರು. ಆಮೇಲೆ ಕುಮಾರಸ್ವಾಮಿಯ ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ್ಲ ಅಂದ್ರಿ. ಅದ್ಯಂಗಾಗಲ್ಲ ನೋಡನ ಅಂತ ಒಕ್ಕಲಿಗರೆಲ್ಲ ಒಂದಾದ್ರು. ಅಂತೂ ನಿಮ್ಮ ಭಾಷಣನೆ ಜಾತಿಜನ ಒಟ್ಟು ಮಾಡ್ತು. ಇದೇ ಕಾರಣ ಸೋಲಿಗೆ ಅಂತ ನಮ್ಮ ಲೆಕ್ಕಾಚಾರ.”
“ಈಗಾಯ್ತಲ್ಲ ಬುಡ್ರಿ ಆ ಸುದ್ದಿ ತಗಂಡೇನು.”
“ವಿಶ್ಲೇಷಣೆ ಮಾಡ್ಬೇಕಲ್ಲವಾ ಸಾರ್.”
“ಈಗ ಮಾಡಿ ಏನು ಪ್ರಯೋಜನ.”
“ಮುಂದೆ ರಾಜಕಾರಣ ಮಾಡೋರಿಗೆ ಒಂದು ಅನುಭವ ಆಗುತ್ತೆ ಸಾರ್.”
“ಆ….”
“ಅಷ್ಟೊಂದು ಹಟದ ಅಗತ್ಯ ಇರಲಿಲ್ಲ, ಆ ಮುಸ್ಲಿಮರು ಏನು ಕೇಳ್ತಾರೆ ಅದನ್ನ ಮಾತ್ರ ಕೊಡಬೇಕು. ಅದು ಬುಟ್ಟು ಏನೇನೋ ಕೊಡಕೋದ್ರೆ ಅದವುರಿಗೂ ಬೇಕಿರಲಿಲ್ಲ. ಬೇರೆ ಜನಗಳೂ ಅದನ್ನ ಸಯಿಸದಿಲ್ಲ ಸಾರ್.”
“ಸಯಿಸದಿಲ್ಲ ಅಂತ ನಾವು ಮಾಡದನ್ನ ಬಿಡಬಾರ್ದು, ಅಧಿಕಾರ ಸಿಕ್ಕಿದಾಗ ದುರ್ಬಲರಿಗೆ ಸಹಾಯ ಮಾಡ್ಳೇಬೇಕು.”
“ನಿಮ್ಮ ಸಹಾಯ ಸಾಲಮನ್ನಾ, ಬಿಟ್ಟಿ ಅನ್ನ, ಹಲವಾರು ಭಾಗ್ಯ, ಸರಕಾರಿ ಕವರ್iಜಾರಿಗಳ ಸಂಬಳ ಏರಿಸಿ, ದಲಿತ್ರ ಸಾಲ ಮನ್ನ ಮಾಡಿದ್ರೂ ಜನ ಕೈ ಹಿಡಿಲಿಲ್ಲವಲ್ಲ. ಇದರ ಕಾರಣ ಗೊತ್ತಾಯ್ತಾ ಸಾರ್.”
“ಇಲ್ಲ ಹೇಳಿ.”
“ಜನ ಜಾತ್ಯಂದ್ರಾದಾಗ ಏನು ಕೊಟ್ರೂ ಜಾತಿ ಮಕ್ಕಳಾಗೇ ವರ್ತುಸ್ತಾರೆ, ಜೊತೆಗೆ ನೀವು ತಿರಗ ನಾನೇ ಮುಖ್ಯಮಂತ್ರಿ ಅಂದ್ರೆ ಅದು ರಿವರ್ಸಾಯ್ತು. ದಲಿತ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದ ಜನ ಹಗಲುರಾತ್ರಿ ಓಡಾಡಿ ಬಿಜೆಪಿಗೆ ಓಟು ಮಾಡಿಸಿದ್ರು ಗೊತ್ತಾ.”
“ಹೋಗ್ಲಿಬುಡಿ.”
“ಬುಡದಲ್ಲ ಸಾರ್, ಅಧಿಕಾರದ ಅಂತ್ಯದಲ್ಲಿ ಯಲ್ಲಾರಿಗೂ ಅಹಂಕಾರ ಬತ್ತದೆ, ನಿಮಿಗೊಂಚೂರು ಜಾಸ್ತಿನೆ ಬಂತು.”
“ನಾನೇನು ಮಾಡಿದೆ.”
“ನಿಮ್ಮನ್ನ ಕಾಂಗ್ರೆಸಿಗೆ ಕರೆತಂದ ವಿಶ್ವನಾಥನ್ನ ಕಾಸಿಗಿಂತ ಕಡೆಮಾಡಿದ್ರಿ, ನೀವು ಗೆಲ್ಲಲಿ ಅಂತ ಓಡಾಡಿದ ರೇವಣಸಿದ್ದಯ್ಯನ್ನ ಐದೊರ್ಸ ಎಲ್ಯವುರೆ ಅಂತ ನೋಡಲಿಲ್ಲ, ಚಾಮುಂಡೇಶ್ವರಿಗಾರ ಟಿಕೆಟ್ ಕೊಡಬವುದಿತ್ತು. ಅಂಗೇ ನೋಡಿದ್ರೆ ಕಾಂಗ್ರೆಸ್ ಸೋಲಿನ ದೊಡ್ಡಪಾಲು ನಿಮ್ಮದೆ ಸಾರ್.”
“ಸೋತಾಯ್ತಲ್ಲ ಬುಡಿ.”
“ಇನ್ನೋಂದು ವಿಷಯ ಸಾರ್.”
“ಏನು.”
“ದೇವೇಗೌಡ್ರು ವಿಶ್ವನಾಥನ್ನ ಜೆಡಿಎಸ್ ಪಾರ್ಟಿ ಪ್ರೆಸಿಡೆಂಟ್ ಮಾಡ್ಯವುರೇ.”
“ಮಾಡ್ಲಿ ಬುಡ್ರಿ.”
“ಅದರಿಂದ ನಿಮಗೇನು ಬೇಜಾರಾಗಿಲ್ವೇ.”
“ಬೇಜಾರ್ಯಾಕೆ, ನಾನು ಜೆಡಿಎಸ್ ಅಧ್ಯಕ್ಷ ಆಗಿದ್ದೆ, ನನ್ನ ಹುಟ್ಟುಹಬ್ಬದ ದಿನವೇ ದೇವೇಗೌಡ ನನ್ನನ್ನ ತಗದು ಆ ತಿಪ್ಪಣ್ಣನ್ನ ಪ್ರೆಸಿಡೆಂಟ್ ಮಾಡಿದ್ರು, ಅವುರು ಪಾರ್ಟಿ ಬುಟ್ಟು ಬಿಜೆಪಿಗೋದ್ರು, ಅಂಗೆ ಒಂದಿನ ಈ ಅಪ್ಪ ಮಕ್ಕಳಿಗೆ ಬೇಜಾರಾದ್ರೆ ವಿಶ್ವನಾಥನ್ನ ತೆಗೆದಾಕ್ತರೆ. ಆದ್ರಿಂದ ವಿಶ್ವನಾಥ ನನ್ನ ಎದುರಾಳಿನೂ ಅಲ್ಲ, ಸ್ಪರ್ಧಿನೂ ಅಲ್ಲ.”
“ಕುರುಬ್ರು ವಿಶ್ವನಾಥನ ಹಿಂದೋದ್ರೆ.”
“ಹೋಗ್ಲಿ ಬುಡ್ರಿ ನಂಗೇನು.”
“ಥೂತ್ತೇರಿ.”

-ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...