Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...