Homeಮುಖಪುಟಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಸ್ವಾತಂತ್ರ‍್ಯದ ಮಹತ್ವದ ಅರಿವಿದೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವದ ಅರಿವಿದೆ.

- Advertisement -
- Advertisement -
  • ಕವಿತಾ ರೆಡ್ಡಿ

ಅನುವಾದ: ನಿಖಿಲ್ ಕೋಲ್ಪೆ

ಇಂದು ಇಡೀ ದೇಶವೇ ಮಹಾತ್ಮಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಚ್ಚೊತ್ತಿರುವ ಗುರುತು ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಷಮ ಹಾದಿಯಲ್ಲಿರುವ ಹೊತ್ತಿನಲ್ಲಿ, 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಗಾಂಧೀವಾದಿ ಡಾ. ಎಚ್.ಎಸ್. ದೊರೆಸ್ವಾಮಿ ಅವರು 2024ರ ಚುನಾವಣೆಯತನಕ ಪ್ರತೀ ತಿಂಗಳೂ ಪ್ರತಿಭಟನೆ ನಡೆಸಿ, ದೇಶದ ಮೇಲೆ ಪರಿಣಾಮ ಬೀರುತ್ತಿರುವ ಪ್ರಶ್ನೆಗಳನ್ನು ಎತ್ತುವ ಮೂಲಕ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವುದು ಮಾತ್ರವಲ್ಲದೆ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ವಿಭಜನಕಾರಿ ಧೋರಣೆಗಳನ್ನು ತರುತ್ತಿರುವ ಫ್ಯಾಸಿಸ್ಟ್ ಸರಕಾರವನ್ನು ಕೊನೆಗೊಳಿಸುವ ಸಲುವಾಗಿ ಹೋರಾಟ ನಡೆಸುವುದಾಗಿ ಶಪಥ ಮಾಡಿದ್ದಾರೆ.

ಮೋದಿ ಸರಕಾರವು ಸಂವಿಧಾನದ ಮೂಲ ಅಡಿಪಾಯವನ್ನೇ ವ್ಯವಸ್ಥಿತವಾಗಿ ಶಿಥಿಲಗೊಳಿಸುತ್ತಿದ್ದು, ಕಳೆದ ಆರು ವರ್ಷಗಳ ಸರಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ. ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟು, 45 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ನಿರುದ್ಯೋಗ ದರ, ಕೃಷಿ ಬಿಕ್ಕಟ್ಟು, ಆಡಳಿತಾತ್ಮಕ ಅಧಿಕಾರಗಳ ದುರುಪಯೋಗ, ಮೂಲಭೂತ ಹಕ್ಕುಗಳ ಉಲ್ಲಂಘನೆ, ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸಿರುವುದು, ಹೆಚ್ಚುತ್ತಿರುವ ಭ್ರಷ್ಟಾಚಾರ ಇವುಗಳು ಡಾ. ಎಚ್. ಎಸ್. ದೊರೆಸ್ವಾಮಿಯವರು ಫೆಬ್ರುವರಿ 6ರಿಂದ 9ರ ತನಕ ನಡೆಸಿದ ನಾಲ್ಕು ದಿನಗಳ ಪ್ರತಿಭಟನೆಯ ವೇಳೆ ಎತ್ತಿದ ಗಂಭೀರ ಪ್ರಶ್ನೆಗಳಲ್ಲಿ ಕೆಲವು.

ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಹೆಜ್ಜೆಹೆಜ್ಜೆಗೂ ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಎತ್ತುವ ಅಗತ್ಯವಿದೆ ಎಂದು ದೊರೆಸ್ವಾಮಿಯವರು ಬಲವಾಗಿ ಪ್ರತಿಪಾದಿಸಿದರು. ಮೋದಿ, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಕಳೆದ ಆರು ವರ್ಷಗಳಲ್ಲಿ ದೇಶವು ಅನುಭವಿಸುತ್ತಿರುವ ದ್ವೇಷ ಮತ್ತು ವಿಭಜನೆಯನ್ನು ನೋಡಿದರೆ, ಅವು ಕೇವಲ ಪೊಳ್ಳು ಘೋಷಣೆಗಳೇ ಹೊರತು ಬೇರೇನಲ್ಲ.

‘ಸಿಟಿಜನ್ಸ್ ರೈಟ್ಸ್ ಏಕ್ಷನ್ ಕಮಿಟಿ’ (ನಾಗರಿಕ ಹಕ್ಕುಗಳ ಕಾರ್ಯ ಸಮಿತಿ) ಹೆಸರಿನಡಿಯಲ್ಲಿ, ವಿವಿಧ ವಿಷಯಗಳ ಕುರಿತು ಕೆಲಸ ಮಾಡುತ್ತಿರುವ ಹಲವಾರು ಸಂಘಟನೆಗಳು ಈ ಹೋರಾಟವನ್ನು ಬಲಗೊಳಿಸಲು ಜೊತೆ ಸೇರಿದ್ದು, ವಿಭಜನಕಾರಿ ಕಾನೂನು/ ಧೋರಣೆಗಳನ್ನು ಹಿಂತೆಗೆದುಕೊಳ್ಳುವ ತನಕ ರಾಜ್ಯ ಮತ್ತು ದೇಶದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಬೇಕು ಮತ್ತು ಸಮಿತಿಯು ಮೋದಿ ಸರಕಾರದ ವೈಫಲ್ಯಗಳನ್ನು ಬಯಲುಗೊಳಿಸುವ ಮೂಲಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ.

ದೇಶದಲ್ಲಿನ ವಾತಾವರಣವು 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರರನ್ನು ಮತ್ತೆ ಬೀದಿಗಿಳಿದು ಪ್ರತಿಭಟಿಸುವಂತೆ ಪ್ರೇರೇಪಿಸಿರುವುದು ನಿಜಕ್ಕೂ ದುರದೃಷ್ಟಕರ. ಆದರೆ, ಅದು ದೇಶಕ್ಕಾಗಿ ಹೋರಾಡಲು ಏನು ಮಾಡಬೇಕು ಎಂಬುದನ್ನು ಕಲಿಯುವಂತೆ ಯುವಜನರನ್ನು ಪ್ರೇರೇಪಿಸುತ್ತಿದೆ. ಪೊಲೀಸ್ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರಕಾರವು ಮೊದಲಿಗೆ ದೊರೆಸ್ವಾಮಿಯವರ ಹೋರಾಟದ ಸಂಕಲ್ಪಕ್ಕೆ ಅಡ್ಡಗಾಲು ಹಾಕಲು ಯತ್ನಿಸಿತು. ಆದರೆ, ಅವರು ಫೆಬ್ರವರಿ 6ರಂದು ಟೌನ್‌ಹಾಲ್‌ನಲ್ಲಿ ತನ್ನ ಪ್ರತಿಭಟನೆ ಆರಂಭಿಸಿ, ಬಂಧನಕ್ಕೆ ಒಳಗಾದ ಬಳಿಕ ಅವರು ಪ್ರತಿಭಟಿಸಲು ಅವಕಾಶ ನೀಡುವುದು ಪೊಲೀಸ್ ಮತ್ತು ಆಡಳಿತಕ್ಕೆ ಅನಿವಾರ್ಯವಾಯಿತು. ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಡಚಣೆಯಾಗದಂತೆ, ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಲ್ಲಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಗಣ್ಯ ಪ್ರಜೆಗಳಿಗೆ ಕರೆ ನೀಡಲಾಗಿತ್ತು. ರಾಮಚಂದ್ರ ಗುಹಾ, ವಿದ್ಯಾರ್ಥಿ ನಾಯಕ ರಾಜೀವ ಗೌಡ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪ್ರತಿಭಟನೆಯಲ್ಲಿ ಕೈಜೋಡಿಸಿದರು.

ಮುಂದಿನ ನಾಲ್ಕು ವರ್ಷಗಳವರೆಗೆ ಅವಿರತ ಹೋರಾಟವೇ ಫ್ಯಾಸಿಸ್ಟ್ ಯುಗವನ್ನು ಕೊನೆಗೊಳಿಸುವ ಹಾದಿಯಾಗಿದ್ದು, ಫ್ಯಾಸಿಸ್ಟ್ ಶಕ್ತಿಗಳನ್ನು ತಡೆದು, ಎಲ್ಲಾ ರಂಗಗಳಲ್ಲಿ ಸೋಲಿಸುವುದರ ಮೂಲಕ, ಮಾನವ ಹಕ್ಕು, ರಾಜಕೀಯ ಹಕ್ಕು, ಆರ್ಥಿಕ ಹಕ್ಕು, ಸಾಮಾಜಿಕ ಹಕ್ಕು, ನಾಗರಿಕ ಹಕ್ಕುಗಳ ಮರುಸ್ಥಾಪನೆ ಮಾಡದಿದ್ದರೆ, ದೇಶಕ್ಕೆ ಸ್ಪಷ್ಟವಾದ ಅಪಾಯವಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಚೋದಿಸಿದ್ದರೂ, ದೇಶವು ಇಂದು ಎದುರಿಸುತ್ತಿರುವ ಎಲ್ಲಾ ವಿಷಯಗಳ ಬಗ್ಗೆ ಹಲವರು ಅಷ್ಟೇ ಆತಂಕಿತರಾಗಿದ್ದು, ಅವುಗಳನ್ನು ಕುರಿತು ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗುತ್ತದೆ.

ಸುಮಾರು 130 ಕೋಟಿ ಜನರಿರುವ ದೇಶದಲ್ಲಿ 90 ಕೋಟಿ ಮತದಾರರಿದ್ದು, 22 ಕೋಟಿಗಿಂತಲೂ ಕಡಿಮೆ ಮತದಾರರು ಮೋದಿಗೆ ಮತ ಚಲಾಯಿಸಿರುವಾಗ, ಸಂಸತ್ತಿನಲ್ಲಿ ಭಾರೀ ಬಹುಮತದ ಶಕ್ತಿಯಷ್ಟೇ ಸರಕಾರಕ್ಕೆ ನಾಗರಿಕರ ಹಕ್ಕುಗಳನ್ನು ದಮನಿಸಿ, ಪ್ರತಿಯೊಬ್ಬ ಸಂಸದರು ಪ್ರತಿಜ್ಞೆ ಸ್ವೀಕರಿಸಿರುವ ಸಂವಿಧಾನವನ್ನೇ ಉಲ್ಲಂಘಿಸುವ ಅಧಿಕಾರ ನೀಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...