Homeಮುಖಪುಟಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಸ್ವಾತಂತ್ರ‍್ಯದ ಮಹತ್ವದ ಅರಿವಿದೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವದ ಅರಿವಿದೆ.

- Advertisement -
- Advertisement -
  • ಕವಿತಾ ರೆಡ್ಡಿ

ಅನುವಾದ: ನಿಖಿಲ್ ಕೋಲ್ಪೆ

ಇಂದು ಇಡೀ ದೇಶವೇ ಮಹಾತ್ಮಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಚ್ಚೊತ್ತಿರುವ ಗುರುತು ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಷಮ ಹಾದಿಯಲ್ಲಿರುವ ಹೊತ್ತಿನಲ್ಲಿ, 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಗಾಂಧೀವಾದಿ ಡಾ. ಎಚ್.ಎಸ್. ದೊರೆಸ್ವಾಮಿ ಅವರು 2024ರ ಚುನಾವಣೆಯತನಕ ಪ್ರತೀ ತಿಂಗಳೂ ಪ್ರತಿಭಟನೆ ನಡೆಸಿ, ದೇಶದ ಮೇಲೆ ಪರಿಣಾಮ ಬೀರುತ್ತಿರುವ ಪ್ರಶ್ನೆಗಳನ್ನು ಎತ್ತುವ ಮೂಲಕ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವುದು ಮಾತ್ರವಲ್ಲದೆ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ವಿಭಜನಕಾರಿ ಧೋರಣೆಗಳನ್ನು ತರುತ್ತಿರುವ ಫ್ಯಾಸಿಸ್ಟ್ ಸರಕಾರವನ್ನು ಕೊನೆಗೊಳಿಸುವ ಸಲುವಾಗಿ ಹೋರಾಟ ನಡೆಸುವುದಾಗಿ ಶಪಥ ಮಾಡಿದ್ದಾರೆ.

ಮೋದಿ ಸರಕಾರವು ಸಂವಿಧಾನದ ಮೂಲ ಅಡಿಪಾಯವನ್ನೇ ವ್ಯವಸ್ಥಿತವಾಗಿ ಶಿಥಿಲಗೊಳಿಸುತ್ತಿದ್ದು, ಕಳೆದ ಆರು ವರ್ಷಗಳ ಸರಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ. ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟು, 45 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ನಿರುದ್ಯೋಗ ದರ, ಕೃಷಿ ಬಿಕ್ಕಟ್ಟು, ಆಡಳಿತಾತ್ಮಕ ಅಧಿಕಾರಗಳ ದುರುಪಯೋಗ, ಮೂಲಭೂತ ಹಕ್ಕುಗಳ ಉಲ್ಲಂಘನೆ, ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸಿರುವುದು, ಹೆಚ್ಚುತ್ತಿರುವ ಭ್ರಷ್ಟಾಚಾರ ಇವುಗಳು ಡಾ. ಎಚ್. ಎಸ್. ದೊರೆಸ್ವಾಮಿಯವರು ಫೆಬ್ರುವರಿ 6ರಿಂದ 9ರ ತನಕ ನಡೆಸಿದ ನಾಲ್ಕು ದಿನಗಳ ಪ್ರತಿಭಟನೆಯ ವೇಳೆ ಎತ್ತಿದ ಗಂಭೀರ ಪ್ರಶ್ನೆಗಳಲ್ಲಿ ಕೆಲವು.

ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಹೆಜ್ಜೆಹೆಜ್ಜೆಗೂ ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಎತ್ತುವ ಅಗತ್ಯವಿದೆ ಎಂದು ದೊರೆಸ್ವಾಮಿಯವರು ಬಲವಾಗಿ ಪ್ರತಿಪಾದಿಸಿದರು. ಮೋದಿ, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಕಳೆದ ಆರು ವರ್ಷಗಳಲ್ಲಿ ದೇಶವು ಅನುಭವಿಸುತ್ತಿರುವ ದ್ವೇಷ ಮತ್ತು ವಿಭಜನೆಯನ್ನು ನೋಡಿದರೆ, ಅವು ಕೇವಲ ಪೊಳ್ಳು ಘೋಷಣೆಗಳೇ ಹೊರತು ಬೇರೇನಲ್ಲ.

‘ಸಿಟಿಜನ್ಸ್ ರೈಟ್ಸ್ ಏಕ್ಷನ್ ಕಮಿಟಿ’ (ನಾಗರಿಕ ಹಕ್ಕುಗಳ ಕಾರ್ಯ ಸಮಿತಿ) ಹೆಸರಿನಡಿಯಲ್ಲಿ, ವಿವಿಧ ವಿಷಯಗಳ ಕುರಿತು ಕೆಲಸ ಮಾಡುತ್ತಿರುವ ಹಲವಾರು ಸಂಘಟನೆಗಳು ಈ ಹೋರಾಟವನ್ನು ಬಲಗೊಳಿಸಲು ಜೊತೆ ಸೇರಿದ್ದು, ವಿಭಜನಕಾರಿ ಕಾನೂನು/ ಧೋರಣೆಗಳನ್ನು ಹಿಂತೆಗೆದುಕೊಳ್ಳುವ ತನಕ ರಾಜ್ಯ ಮತ್ತು ದೇಶದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಬೇಕು ಮತ್ತು ಸಮಿತಿಯು ಮೋದಿ ಸರಕಾರದ ವೈಫಲ್ಯಗಳನ್ನು ಬಯಲುಗೊಳಿಸುವ ಮೂಲಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ.

ದೇಶದಲ್ಲಿನ ವಾತಾವರಣವು 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರರನ್ನು ಮತ್ತೆ ಬೀದಿಗಿಳಿದು ಪ್ರತಿಭಟಿಸುವಂತೆ ಪ್ರೇರೇಪಿಸಿರುವುದು ನಿಜಕ್ಕೂ ದುರದೃಷ್ಟಕರ. ಆದರೆ, ಅದು ದೇಶಕ್ಕಾಗಿ ಹೋರಾಡಲು ಏನು ಮಾಡಬೇಕು ಎಂಬುದನ್ನು ಕಲಿಯುವಂತೆ ಯುವಜನರನ್ನು ಪ್ರೇರೇಪಿಸುತ್ತಿದೆ. ಪೊಲೀಸ್ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರಕಾರವು ಮೊದಲಿಗೆ ದೊರೆಸ್ವಾಮಿಯವರ ಹೋರಾಟದ ಸಂಕಲ್ಪಕ್ಕೆ ಅಡ್ಡಗಾಲು ಹಾಕಲು ಯತ್ನಿಸಿತು. ಆದರೆ, ಅವರು ಫೆಬ್ರವರಿ 6ರಂದು ಟೌನ್‌ಹಾಲ್‌ನಲ್ಲಿ ತನ್ನ ಪ್ರತಿಭಟನೆ ಆರಂಭಿಸಿ, ಬಂಧನಕ್ಕೆ ಒಳಗಾದ ಬಳಿಕ ಅವರು ಪ್ರತಿಭಟಿಸಲು ಅವಕಾಶ ನೀಡುವುದು ಪೊಲೀಸ್ ಮತ್ತು ಆಡಳಿತಕ್ಕೆ ಅನಿವಾರ್ಯವಾಯಿತು. ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಡಚಣೆಯಾಗದಂತೆ, ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಲ್ಲಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಗಣ್ಯ ಪ್ರಜೆಗಳಿಗೆ ಕರೆ ನೀಡಲಾಗಿತ್ತು. ರಾಮಚಂದ್ರ ಗುಹಾ, ವಿದ್ಯಾರ್ಥಿ ನಾಯಕ ರಾಜೀವ ಗೌಡ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪ್ರತಿಭಟನೆಯಲ್ಲಿ ಕೈಜೋಡಿಸಿದರು.

ಮುಂದಿನ ನಾಲ್ಕು ವರ್ಷಗಳವರೆಗೆ ಅವಿರತ ಹೋರಾಟವೇ ಫ್ಯಾಸಿಸ್ಟ್ ಯುಗವನ್ನು ಕೊನೆಗೊಳಿಸುವ ಹಾದಿಯಾಗಿದ್ದು, ಫ್ಯಾಸಿಸ್ಟ್ ಶಕ್ತಿಗಳನ್ನು ತಡೆದು, ಎಲ್ಲಾ ರಂಗಗಳಲ್ಲಿ ಸೋಲಿಸುವುದರ ಮೂಲಕ, ಮಾನವ ಹಕ್ಕು, ರಾಜಕೀಯ ಹಕ್ಕು, ಆರ್ಥಿಕ ಹಕ್ಕು, ಸಾಮಾಜಿಕ ಹಕ್ಕು, ನಾಗರಿಕ ಹಕ್ಕುಗಳ ಮರುಸ್ಥಾಪನೆ ಮಾಡದಿದ್ದರೆ, ದೇಶಕ್ಕೆ ಸ್ಪಷ್ಟವಾದ ಅಪಾಯವಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಚೋದಿಸಿದ್ದರೂ, ದೇಶವು ಇಂದು ಎದುರಿಸುತ್ತಿರುವ ಎಲ್ಲಾ ವಿಷಯಗಳ ಬಗ್ಗೆ ಹಲವರು ಅಷ್ಟೇ ಆತಂಕಿತರಾಗಿದ್ದು, ಅವುಗಳನ್ನು ಕುರಿತು ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗುತ್ತದೆ.

ಸುಮಾರು 130 ಕೋಟಿ ಜನರಿರುವ ದೇಶದಲ್ಲಿ 90 ಕೋಟಿ ಮತದಾರರಿದ್ದು, 22 ಕೋಟಿಗಿಂತಲೂ ಕಡಿಮೆ ಮತದಾರರು ಮೋದಿಗೆ ಮತ ಚಲಾಯಿಸಿರುವಾಗ, ಸಂಸತ್ತಿನಲ್ಲಿ ಭಾರೀ ಬಹುಮತದ ಶಕ್ತಿಯಷ್ಟೇ ಸರಕಾರಕ್ಕೆ ನಾಗರಿಕರ ಹಕ್ಕುಗಳನ್ನು ದಮನಿಸಿ, ಪ್ರತಿಯೊಬ್ಬ ಸಂಸದರು ಪ್ರತಿಜ್ಞೆ ಸ್ವೀಕರಿಸಿರುವ ಸಂವಿಧಾನವನ್ನೇ ಉಲ್ಲಂಘಿಸುವ ಅಧಿಕಾರ ನೀಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...