Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...