Homeಸಾಮಾಜಿಕಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

ಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

- Advertisement -
- Advertisement -

ಸಾಮಾಜಿಕ ಜಾಲತಾಣವೆಂಬುದು ಸ್ಯಾಡಿಸ್ಟ್‍ಗಳ ಆಡಂಬೋಲದಂತೆ ಆಗಿಹೋಗಿದೆ! ಇದು ಮಾಹಿತಿ ತಂತ್ರಜ್ಞಾನದ ಘೋರ ದುರಂತವೇ ಸರಿ. ಪರರ ಪಡಿಪಾಟಲು, ಆಸಹಾಯಕತೆ, ನೋವು, ನಷ್ಟ ಅಪಹಾಸ್ಯ ಮಾಡಿ ಟ್ರೋಲಿಸುವ ವಿಕೃತ ಸಂತಾನವೇ ಭಾರತದಲ್ಲಿ ಬೆಳೆದುನಿಂತಿದೆ. ಮಹಾ ಮಾನವತಾವಾದಿ ಧೀಮಂತ ಪತ್ರಕರ್ತೆಯೂ ಆಗಿದ್ದ ಗೌರಿಲಂಕೇಶ್‍ರ ಹತ್ಯೆ ಸಂಭ್ರಮಿಸಿದ್ದ ಕುಹಾಕಿಗಳನ್ನು ಈ ದೇಶದ ಪ್ರಧಾನಿ ಮೋದಿ ಮಹಾತ್ಮನೇ ಜಾಲತಾಣದಲ್ಲಿ ಫಾಲೋ ಮಾಡುತ್ತಾರೆ! ಸಿದ್ದು ಸಿಎಂ ಆಗಿದ್ದಾಗ ಮಗನನ್ನು ಕಳಕೊಂಡ ನೋವಿನಲ್ಲಿದ್ದ ಸಂದರ್ಭವನ್ನು ಸಾಮಾಜಿಕ ಜಾಲತಾಣದಲ್ಲಿ ಕುಳಿತು ಖುಷಿಯಿಂದ ಅನುಭವಿಸಿದವರೂ ಇದ್ದಾರೆ. ಇಂಥ ಗಲೀಜು ಸಂಸ್ಕøತಿಯ ಟ್ರೋಲಿಗರ ಕುಚೋದ್ಯದಿಂದ ಈಚೆಗೆ ಕೇರಳದಲ್ಲಿ ತಲ್ಲಣವೇ ಆಗಿಹೋಗಿದೆ. ವಿನಾಕಾರಣ ಬಡ-ಮುಗ್ಧ ಹುಡುಗಿಯೊಬ್ಬಳು ಘಾಸಿಗೊಂಡಿದ್ದಾಳೆ!
ಆಕೆಯ ಹೆಸರು ಹನಾನ್ ಹಮೀದ್. ಕೇರಳದ ತ್ರಿಶೂರ್‍ನ ಇಪ್ಪತ್ತೊಂದರ ಬಾಲಕಿ. ಬದುಕು ಕಟ್ಟಿಕೊಳ್ಳಲು ಹಗಲಿರುಳೂ ಕಷ್ಟಪಟ್ಟು ದುಡಿಯುತ್ತಲೇ ಕಾಲೇಜಿಗೂ ಹೋಗುತ್ತಿದ್ದಾಳೆ; ಕಾಲೇಜು ಮುಗಿಸಿ ಮೀನು ಮಾರುಕಟ್ಟೆಯಲ್ಲಿ ಕುಳಿತು ಮೀನೂ ಮಾರುತ್ತಾಳೆ. ಆಕೆ ಅವಸರದಲ್ಲೊಮ್ಮೆ ಕಾಲೇಜಿನ ಯೂನಿಫಾರ್ಮ್ ತೊಟ್ಟುಕೊಂಡೇ ಮೀನು ಮಾರಾಟಕ್ಕೆ ಕುಳಿತಿದ್ದಳು. ಇದು ಅದ್ಯಾವುದೋ ಕೀಳು ಅಭಿರುಚಿಯ ಟ್ರೋಲಿಗನ ಕಣ್ಣಿಗೆ ಬಿದ್ದಿದೆ. ಆ ಎವಡಾಸ ಅದ್ಭುತ ಸಂಶೋಧನೆ ಮಾಡಿದವನಂತೆ ಯೂನಿಫಾರ್ಮ್‍ನಲ್ಲಿ ಮೀನು ಮಾರುತ್ತಿದ್ದ ಪಾಪದ ಹುಡುಗಿಯ ಫೋಟೋ, ವೀಡಿಯೋ ಜಾಲತಾಣಕ್ಕೆ ಏರಿಸಿ ಬೀಗಿದ್ದಾನೆ.
ಆತನಂಥದೇ ಗುಣ-ಧರ್ಮದ ಜಾಲತಾಣಿಗರು ಆ ವೀಡಿಯೋ ಅಪಹಾಸ್ಯದಿಂದ ವೈರಲ್ ಮಾಡಿ ತೀಟೆ ತೀರಿಸಿಕೊಂಡಿದ್ದಾರೆ. ಆಕೆ ಮರ್ಯಾದೆಯಿಂದ ಜೀವನೋಪಾಯಕ್ಕೆ ಮಾಡುತ್ತಿದ್ದ ಕೆಲಸವನ್ನು ಆಡಿಕೊಂಡು ಕೇಕೆ ಹಾಕಿದ್ದಾರೆ. “…… ಕಾಲೇಜು ಓದೋದು ಬಿಟ್ಟು ಇದೆಂಥ ಕೆಲ್ಸಾ…….?!” ಎಂದು ಗೇಲಿ ಮಾಡಿದ್ದಾರೆ. ಅಸಹಾಯಕ ಹುಡುಗಿಯೊಬ್ಬಳ ಕಾರ್ಪಣ್ಯದ ಜೀವನಕ್ರಮವನ್ನು ಅಣಕಿಸುತ್ತ ಟ್ರೋಲ್‍ಮಾಡಿ ಮಜಾ ತೆಗೆದುಕೊಳ್ಳುವ ಸಂಗತಿಯಾ? ಮನುಷ್ಯರೂಪದ ಮೃಗಗಳಿಗಿದು ನಾಲ್ಕಾರು ದಿನ ಟೈಮ್‍ಪಾಸ್ ಹಾಸ್ಯವಾಗಿರಬಹುದು. ಆದರೆ ಈ ಅಪಮಾನ-ಅಪನಿಂದನೆಯಿಂದ ಸುದ್ದಿಯಾದ ಪಾಪದ ಹುಡುಗಿಯ ಹಿಂದೊಂದು ಕರುಣಾಜನಕ ಕತೆಯೇ ಇದೆ! ವಯಸ್ಸಿಗೆ ಮೀರಿದ ಸಾಂಸಾರಿಕ ಹೊಣೆ ನಿಭಾಯಿಸುತ್ತ ಊಟ-ನಿದ್ದೆ ಬಿಟ್ಟು ರಾತ್ರಿಹಗಲೆನ್ನದೆ ಬದುಕಲು ಆಕೆ ಸೆಣಸಾಡುತ್ತಿದ್ದಾಳೆ.
ಹನಾನ್ ತ್ರಿಶೂರ್‍ನ ಶ್ರೀಮಂತ ಕುಟುಂಬದ ಕೂಸು. ತಂದೆ ಹಮೀದ್, ತಾಯಿ ಜುಹ್ರಾಬಿ. ಒಬ್ಬ ತಮ್ಮನಿದ್ದಾನೆ. ಚಿಕ್ಕವಳಿದ್ದಾಗ ಆಕೆ ಖುಷಿಖುಷಿಯಾಗೇ ಇದ್ದಳು. ಆಕೆ ಪ್ರೈಮರಿಗೆ ಹೋಗುವಾಗ ಅಪ್ಪ ಇದ್ದಕ್ಕಿದ್ದಂತೆ ವಿಪರೀತ ಹೆಂಡ ಕುಡಿಯಲು ಶುರು ಹಚ್ಚಿಕೊಂಡಿದ್ದಾನೆ. ಅಷ್ಟೇ ಅಲ್ಲ, ದಿನವೂ ಕುಡಿದುಬಂದು ಅಮ್ಮನಿಗೆ ಬಡಿಯುತ್ತಿದ್ದ. ಮನೆಯೆಂಬುದು ರೌರವ ನರಕದಂತಾಗಿಹೋಯಿತು. ಹನಾನ್ ಹೈಸ್ಕೂಲಿಗೆ ಹೋಗುವ ಹೊತ್ತಿಗೆ ಆಕೆಯ ತಂದೆ-ತಾಯಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು. ತಮ್ಮ ತಂದೆಯೊಂದಿಗಿದ್ದರೆ, ಹನಾನ್ ತಾಯಿ ಜತೆ ಉಳಿದಳು. ತನ್ನ ಮತ್ತು ತಾಯಿಯ ತುತ್ತಿನ ಚೀಲ ತುಂಬಿಸುವ ಜವಾಬ್ದಾರಿ ಹನಾನ್ ಮೇಲೆ ಬಿತ್ತು.
ಆ ನತದೃಷ್ಟ ಹುಡುಗಿ ಧೃತಿಗೆಡಲಿಲ್ಲ ದುಡಿಮೆಯ ದಾರಿ ಹುಡುಕಿದಳು ತಾನು ಶಾಲೆಗೆ ಹೋಗುತ್ತಲೇ ಚಿಕ್ಕ ಮಕ್ಕಳಿಗೆ ಟ್ಯೂಶನ್ ಕೊಡಲಾರಂಭಿಸಿದಳು; ಕರಕುಶಲ ವಸ್ತು, ಕಿವಿಯೋಲೆ ತಯಾರಿಸಿ ಬಂದ ಹಣದಲ್ಲಿ ಜೀವನ ಸಾಗಿಸಹತ್ತಿದಳು. ಕೆಲದಿನದ ಬಳಿಕ ಖಾಸಗಿ ಕಂಪನಿಯೊಂದಕ್ಕೆ ಕಾರ್ಮಿಕಳಾಗಿ ಸೇರಿಕೊಂಡಳು. ಹನಾನ್ ಕಷ್ಟಕ್ಕೆ ಹೆದರಲಿಲ್ಲ. ನೈಟ್‍ಶಿಫ್ಟ್, ಮಾರ್ನಿಂಗ್‍ಶಿಫ್ಟ್ ಅಂತಾ ಹಠದಿಂದ ದುಡಿದಳು. ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಯಂತ್ರಗಳ ವಿಪರೀತ ಶಬ್ದ ಇರುತ್ತಿತ್ತು. ಹೀಗಾಗಿ ಹನಾನ್‍ಗೆ ಶ್ರವಣದೋಷ ಬಾಧಿಸಹತ್ತಿತು. ಹಾಗಾಗಿ ಆ ಕೆಲಸ ಆಕೆ ಅನಿವಾರ್ಯವಾಗಿ ಬಿಡಬೇಕಾಗಿಬಂತು. ಬಿಎಸ್ಸಿ ಓದುತ್ತಿದ್ದ ಹನಾನ್‍ಗೆ ಹೇಗಾದರೂ ಮಾಡಿ ಡಾಕ್ಟರ್ ಆಗಬೇಕೆಂಬ ಹಠ. ಕಂಪನಿ ಕೆಲಸ ಅರಸುತ್ತಲೇ ಇದ್ದಳು.
ಕೆಲವು ದಿನಗಳ ನಂತರ ಬೇರೆ ಕಂಪನಿಯಲ್ಲಿ ಉದ್ಯೋಗ ಸಿಕ್ಕಿತು. ಇದು ತಾಯಿ-ಮಗಳ ಬದುಕು ಸಾಗಿಸಲು ಸಾಕಾಗುತ್ತಿರಲಿಲ್ಲ. ಮೀನು ಮಾರಾಟ ಮಾಡಿದರೆ ಒಂದಿಷ್ಟು ಹೆಚ್ಚುವರಿ ಕಾಸು ಸಂಪಾದಿಸಬಹುದೆಂದು ಆಕೆಗೆ ಹೊಳೆಯಿತು. ಕಾಲೇಜು ಕ್ಲಾಸ್ ಮುಗಿಯುತ್ತಿದ್ದಂತೆಯೇ ಮೀನು ಮಾರ್ಕೆಟ್ಟಿಗೆ ಹೋಗಿ ಮೀನು ಮಾರಾಟ ಮಾಡಲು ಆರಂಭಿಸಿದಳು. ಒಮ್ಮೊಮ್ಮೆ ಬೆಳಗಿನ ಜಾವ 3.30ಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಮೀನು ಖರೀದಿಸಿ ಮಾರಾಟ ಮಾಡುತ್ತಿದ್ದಳು. ನಂತರ ಕಾಲೇಜಿನ ಸಮಯಕ್ಕೆ ಸರಿಯಾಗಿ ಅಲ್ಲಿರುತ್ತಿದ್ದಳು. ಇಂಥದೇ ಒಂದು ದಿನ ಆಕೆ ಮೀನು ಮಾರಲು ಹೋಗಿದ್ದಳು. ಗಡಿಬಿಡಿಯಲ್ಲಿ ಯೂನಿಫಾರ್ಮ್ ತೆಗೆಯಲು ಆಕೆಗೆ ಸಾಧ್ಯವಾಗಿರಲಿಲ್ಲ.
ಆಕೆಯ ಚಿತ್ರ ತೆಗೆದ ಅಧಮ ಮಾನÀವನೊಬ್ಬ ಸಾಮಾಜಿಕ ಮಾಧ್ಯಮಕ್ಕೆ ಟ್ರೋಲ್ ಮಾಡುತ್ತಿದ್ದಂತೆಯೇ ಕೇರಳದಲ್ಲಿ ಅಲ್ಲೋಲಕಲ್ಲೋಲವೇ ಆಯ್ತು. ಈ ಚಿತ್ರ ಶೇರ್ ಮಾಡಿ ಕುಣಿದು ಕುಪ್ಪಳಿಸಿದವರಿಗೆ ಜನ ಉಗಿದರು. ಪರ-ವಿರುದ್ಧ ಅಂತರ್ಜಾಲ ಯುದ್ಧ ನಡೆಯಿತು. ಒಪ್ಪತ್ತು ಗಂಜಿಗಾಗಿ ಹೆಣಗಾಡುತ್ತಿದ್ದ ಹನಾನ್ ದೌರ್ಭಾಗ್ಯವನ್ನು ಜೋಕ್ ಮಾಡಿ ನಕ್ಕ ಟ್ರೋಲಿಗರನ್ನು ಕೇರಳದ ಪಿಣರಾಯಿವಿಜಯನ್ ಸರ್ಕಾರ ಛೀಮಾರಿ ಹಾಕಿತು. ಇಷ್ಟಾದರೂ ನೈತಿಕ ಸ್ಥೈರ್ಯದ ಹನಾನ್ ಅಂಜಲಿಲ್ಲ, ಅಳುಕಲಿಲ್ಲ ತನ್ನ ಪಾಡಿಗೆ ತಾನು ಕಾಲೇಜು, ಮೀನು ಮಾರಾಟ, ಕಂಪನಿ ಚಾಕರಿ, ತಾಯಿಯ ದೇಖರೇಖೆಯ ಜೀವನ ಸಂಗ್ರಾಮದಲ್ಲಿ ತೊಡಗಿಕೊಂಡಿದ್ದಳು. ಇದು ಧೂರ್ತರಿಗೆ ನೋಡಲಾಗಲಿಲ್ಲ ಇದು ಹನಾನ್‍ನ ಪ್ರಚಾರದ ತಂತ್ರಗಾರಿ ಎಂದು ಆಲಾಪಿಸಿದರು.
ಇದು ಕೇರಳದಲ್ಲಿ ದೊಡ್ಡ ಸುದ್ದಿ ಸದ್ದು ಮಾಡಿತು. ಸೆಲಿಬ್ರಿಟಿಗಳು ಹನಾನ್ ಪರ ನಿಂತರು. ಸಾಮಾಜಿಕ ಕಾರ್ಯಕರ್ತರು ಸಹಾಯಕ್ಕೆ ಬಂದರು. ಆಕೆಗೆ ಚಲನಚಿತ್ರದಲ್ಲಿ ಅಭಿನಯಿಸುವ ಅವಕಾಶವೂ ಅರಸಿ ಬಂದಿದೆ. ಮೊನ್ನೆ ಹನಾನ್ ತಿರುವನಂತಪುರಂನ ಓಣಮ್, ಬಕ್ರೀದ್ ಖಾದಿ ಎಕ್ಸ್‍ಪೋನಲ್ಲಿ ‘ನಡಿಗೆ’ ಹಾಕಿದ್ದಾಳೆ. ತನ್ಮೂಲಕ ಕುಹಕದ ಕೊಳಕು ಟ್ರೋಲಿಗರಿಗೆ ಕೇರ್ ಮಾಡುವ ಪೈಕಿ ತಾನಲ್ಲವೆಂದು ತೋರಿಸಿಕೊಂಡಿದ್ದಾಳೆ. ಈ ಇಡೀ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಕುಳಿತು ಅಮಾಯಕರ ಬದುಕಲ್ಲಿ ಆಟ ಆಡೋರಿಗೆ ಪಾಠ ಕಲಿಸಬೇಕಾದ ಅನಿವಾರ್ಯತೆಯ ಎಚ್ಚರಿಕೆ ಕೊಟ್ಟಿದೆ!

-ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...