Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಅಭಿವ್ಯಕ್ತಿ ಸ್ವಾತಂತ್ರ್ಯ ದಮನದ ‘ಆಧುನಿಕ’ ಪರಿ : ಸಾಮಾಜಿಕ ಜಾಲತಾಣ ಬಳಕೆದಾರರ ಬೇಟೆಗೆ ತಯ್ಯಾರಿ

ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ ಸುದ್ದಿ ಹರಡುವುದರಲ್ಲಿ ಮತ್ತು ಕೋಮುದ್ವೇಷ ಪಸರಿಸುವಲ್ಲಿ ಮುಂದಿರುವುದು ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರೇ. ಈಗ ‘ಇಂಥದ್ದನ್ನೆಲ್ಲ ತಡೆಯಲು ಹೊಸ ನಿಯಮಾವಳಿ’ ಜಾರಿಗೆ ತರುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದರೆ ನಂಬುವುದು ಹೇಗೆ?

ಖಂಡಿತ ಇದು, ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಮಾಡಿಕೊಂಡಿರುವ ಒಂದು ವ್ಯಸ್ಥಿಯ ಸಂಚು.
ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಹೊಸ ಸೋಷಿಯಲ್ ಮೀಡಿಯಾ ನಿಯಮಾವಳಿಗಳ ಪರಿಣಾಮವಾಗಿ ಭಾರತದ 40 ಕೋಟಿ ಸೋಷಿಯಲ್ ಮೀಡಿಯಾ ಬಳಕೆದಾರರು ತಮ್ಮ ಅನಾಮಧೇಯತೆಯನ್ನು ಕಳೆದುಕೊಳ್ಳಲಿದ್ದಾರೆ. ಜೊತೆಗೆ ಅವರ ಖಾಸಗಿತನದ ಹಕ್ಕನ್ನು ಕಳೆದಿಕೊಳ್ಳಲಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಮೂಲಕವೇ ವಿರೋಧಿಗಳನ್ನು ಹತ್ತಿಕ್ಕುತ್ತ ಬಂದ ಮೋದಿ ಸರ್ಕಾರವೀಗ ಸಾಮಾಜಿಕ ಜಾಲತಾಣಗಳ ಬಳಸುವ ತನ್ನ ಸೈದ್ದಾಂತಿಕ ವಿರೋಧಿಗಳ ಮೇಲೆ ಈ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ.

ಭಾರತ ಸರ್ಕಾರ ಕೇಳಿದರೆ, ಫೇಸ್‌ಬುಕ್, ಟ್ವಿಟರ್, ಯು-ಟ್ಯೂಬ್, ವ್ಯಾಟ್ಸಾಪ್ ಮತ್ತು ಟಿಕ್ ಟಾಕ್ ಕಂಪನಿಗಳು ಅವರ ಯಾವುದಾದರೂ ಬಳಕೆದಾರರ ಐಡೆಂಟಿಟಿಯನ್ನು ಅಂದರೆ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇದಕ್ಕೆ ಯಾವುದೇ ಪ್ರಕ್ರಿಯೆ ಇರುವುದಿಲ್ಲ, ಕಾನೂನಿನ ಮೊರೆ ಹೋಗುವಂತಿಲ್ಲ, ಕೇಳಿದಾಕ್ಷಣ ವಿವರ ನೀಡಬೇಕಷ್ಟೇ.

2018ರ ಡಿಸೆಂಬರ್‌ನಲ್ಲಿ ಸರ್ಕಾರ ಈ ನಿಯಮಾವಳಿ ರೂಪಿಸಿ, ಸಾರ್ವಜನಿಕ ಅಭಿಪ್ರಾಯ ಕೇಳಿತ್ತು. ಗೂಗಲ್, ಫೇಸ್‌ಬುಕ್‌ನಂತಹ ಕಂಪನಿಗಳನ್ನು ಒಳಗೊಂಡ ‘ದಿ ಇಂಟರ್‌ನೆಟ್ ಆ್ಯಂಡ್ ಮೊಬೈಲ್ ಅಸೋಷಿಯೇಷನ್ ಆಫ್ ಇಂಡಿಯಾ’ ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ‘ಸುಪ್ರಿಂಕೋರ್ಟ್ ತಿಳಿಸಿದಂತೆ, ಇದು ಖಸಗಿತನದ ಹಕ್ಕಿನ ಉಲ್ಲಂಘನೆ’ ಎಂದು ಹೇಳಿದ್ದವು. ಆದರೂ ಸರ್ಕಾರ ಪಟ್ಟು ಬಿಡದೇ ಈ ನಿಯಮಾವಳಿ ಜಾರಿಗೆ ತರಲು ಹೊರಟಿದೆ.

ಹೀಗಾಗಿ ಸೋಷಿಯಲ್ ಮೀಡಿಯಾ ಕಂಪನಿಗಳು ತಮ್ಮ ಬಳಕೆದಾರರಿಗೆ ತಮ್ಮ ಐಡೆಂಟಿಟಿ ವಿವರ ನೀಡುವಂತೆ ನಿಯಮ ಮಾಡಲಿವೆ. ಇಷ್ಟು ವರ್ಷ ಕೇವಲ ಆನ್‌ಲೈನ್‌ನಲ್ಲಿ ಯಾವುದೇ ದಾಖಲೆ ಇಲ್ಲದೇ, ಒಂದಿಷ್ಟು ವೈಯಕ್ತಿಕ ವಿವರ ತುಂಬುವ ಮೂಲಕ ಫೇಸ್‌ಬುಕ್, ಟ್ವಿಟರ್ ಖಾತೆ ತೆರೆದು ನಿರಾಳವಾಗಿ ಸಂವಹನ ಮಾಡುತ್ತಿರುವ 40 ಕೋಟಿ ಭಾರತೀಯರು ಇನ್ನು ಮುಂದೆ ತಮ್ಮ ಖಾಸಗೀತನವನ್ನು ಕಳೆದುಕೊಳ್ಳಲಿದ್ದಾರೆ.
ಸುಳ್‌ಸುದ್ದಿ ತಡೆಯಲು ಮತ್ತು ಸಮಾಜವಿರೋಧಿ ಶಕ್ತಿಗನ್ನು ಪತ್ತೆ ಹಚ್ಚಲು ಈ ನಿಯಮಾವಳಿ ತರುತ್ತೇವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ವಿಶ್ವದ ಹಲವಾರು ದೇಶಗಳಲ್ಲಿ ಸೈಬರ್ ಅನ್‌, ಪೋರ್ನ್‌ ಜಾಲತಾಣ (ಅಶ್ಲೀಲ ತಾಣ) ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು, ಅಂತರ್ಜಾಲ ಒದಗಿಸುವ ಸಾಮಾಜಿಕ ಜಾಲತಾಣಗಳ ಸೇವೆಯ ಮೇಲೆ ನಿಯಂತ್ರಣ ಹೊಂದಿವೆ. ಆದರೆ ಅಲ್ಲಿ ಸಾಮಾಜಿಕ ಜಾಲತಾಣಗಳ ನೆರವು ಪಡೆದು, ಸೈಬರ್ ತಜ್ಞರ ಮೂಲಕ ಅಪರಾಧಿಗಳ ಪತ್ತೆ ಹಚ್ಚುತ್ತಾರೆ. ಅಶ್ಲೀಲ ಮತ್ತು ದ್ವೇಷ ಹರಡುವ ಜಾಲತಾಣ ಮತ್ತು ಅಕೌಂಟುಗಳನ್ನು ಪತ್ತೆ ಹಚ್ಚಲು ಫೇಸ್‌ಬುಕ್ ಮತ್ತು ಟ್ವಿಟರ್‌ಗಳು ವಿಶೇಷ ಸಾಫ್ಟ್ವೇರ್ ರೂಪಿಸಿವೆ. ಅಂತಹ ಅಕೌಂಟುಗಳನ್ನು ನಿಷೇಧಿಸುತ್ತವೆ.

ಆದರೆ ಭಾರತದಲ್ಲಿ ತರಲು ಹೊರಟಿರುವ ಕಾನೂನು ಮತ್ತು ನಿಯಮಗಳು ಉಳಿದ ದೇಶಗಳ ನಿಯಮಗಳಿಗಿಂತ ಅಪಾಯಕಾರಿಯಾಗಿವೆ. ಯಾವುದೇ ಕಾನೂನು ಪ್ರಕ್ರಿಯೆ ಅಥವಾ ನೋಟಿಸ್ ಇಲ್ಲದೇ ಜಾಲತಾಣಗಳಿಗೆ ಇಂತಿಂಥವರ ವಿವರ ಬೇಕೆಂದಾಕ್ಷಣ ನೀಡಲೇಬೇಕು. ಯಾವುದೇ ಆಡಳಿತ ಪಕ್ಷ ಇದನ್ನು ತಮ್ಮ ವಿರೋಧಿಗಳನ್ನು ಹಣಿಯಲು ಬಳಸಬಹುದು. ತಮ್ಮ ಸಿದ್ದಾಂತ ಒಪ್ಪದ ಸಾಮಾನ್ಯ ಜನರನ್ನೂ ಪತ್ತೆ ಹಚ್ಚಿ ತೊಂದರೆ ನೀಡಬಹುದು. ಹೇಳಿಕೇಳಿ, ತನ್ನ ವಿರೋಧಿಸುವವರನ್ನು ದೇಶದ್ರೋಹಿ, ಅರ್ಬನ್ ನಕ್ಸಲ್ ಎಂದೆಲ್ಲ ಜೈಲಿಗಟ್ಟುವ ಈ ಸರ್ಕಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರೋಧಿಸುವವರ ಬೇಟೆಯಾಡಲು ಹೊರಟಂತಿದೆ.
(ಮಾಹಿತಿ: ದಿ ಎಕನಾಮಿಕ್ ಟೈಮ್ಸ್, ಎನ್‌ಡಿಟಿವಿಡಾಟ್ ಕಾಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...