Homeಮುಖಪುಟದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ಭವಿಷ್ಯದಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆ ಎಂಬುದರ ಝಲಕ್ ದೆಹಲಿಯ ಕಾಲೇಜಿನಲ್ಲಿ ಕಂಡಿದೆ.

- Advertisement -
- Advertisement -

ಮೊದಲವರು ಜೆಎನ್‌ಯುಗೆ ಬಂದರು, ನೀವು ದನಿಯೆತ್ತಲಿಲ್ಲವೇಕೆಂದರೆ, ‘ಅವರು ಎಡಪಂಥೀಯರು, ಅರ್ಬನ್ ನಕ್ಸಲ್‌ಗಳು, ದೇಶದ್ರೋಹಿಗಳು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಜಾಮಿಯಾಕ್ಕೆ ಬಂದರು, ನೀವು ದನಿಯೆತ್ತಲಿಲ್ಲ. ಏಕೆಂದರೆ ‘ಅವರು ಮುಸ್ಲಿಮರು, ಭಯೋತ್ಪಾದಕರು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಶಾಹೀನ್ ಬಾಗ್‌ನತ್ತ ಗುಂಡೆಸೆದರು, ನೀವು ಆಗಲೂ ಮಾತನಾಡಲಿಲ್ಲ. ‘ಅವರು ಹಣಕ್ಕಾಗಿ ಪ್ರತಿಭಟಿಸುತ್ತಿದ್ದ, ದಾರಿತಪ್ಪಿದ ಮಹಿಳೆಯರಾಗಿದ್ದರು’.

ನಂತರ ಅವರು ಈ ದೇಶದ ರಾಜಕೀಯ ರಹಿತ ಹೆಣ್ಣುಮಕ್ಕಳಾದ ಗಾರ್ಗಿ ಹುಡುಗಿಯರತ್ತ ಬಂದರು. ಆಗ ನಿಮ್ಮ ಪರವಾಗಿ ದನಿಯೆತ್ತಲು ಏನೂ ಇರಲಿಲ್ಲ.

ಕಳೆದ ವಾರದಲ್ಲಿ ಗಾರ್ಗಿ ಕಾಲೇಜಿನಲ್ಲಿ ನಡೆದದ್ದನ್ನು ಕೇಳಿ ಬಹಳಷ್ಟು ಜನರು ಶಾಕ್‌ಗೊಳಗಾಗಿದ್ದಾರೆ. ಗುಂಪೊಂದು ಹೆಣ್ಣು ಮಕ್ಕಳ ಮೈಮುಟ್ಟಿ, ಲೈಂಗಿಕ ಕಿರುಕುಳ ಕೊಟ್ಟು, ಅವರ ಮುಂದೆಯೇ ಮುಷ್ಠಿಮೈಥುನ ನಡೆಸಿದ್ದಾರೆ. ಇದೆಲ್ಲವೂ ನಡೆದದ್ದು ದೇಶದ ರಾಜಧಾನಿಯಲ್ಲಿ, ದೆಹಲಿ ಪೊಲೀಸರು, ಶಿಕ್ಷಕರು ಮತ್ತು ಕಾಲೇಜು ಭದ್ರತಾ ಸಿಬ್ಬಂದಿಯ ಎದುರು ಎಂಬುದು ಇನ್ನೂ ಶಾಕಿಂಗ್ ಆದದ್ದಾಗಿದೆ. ಸಿಎಎ ಪರವಾದ ಪ್ರತಿಭಟನೆಯೊಂದನ್ನು ಮುಗಿಸಿಕೊಂಡು ಬಂದು ಜೈ ಶ್ರೀರಾಂ ಎಂಬ ಘೋಷಣೆ ಕೂಗುತ್ತಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಈ ಲೈಂಗಿಕ ಹಲ್ಲೆ ನಡೆದಿದೆ ಎಂಬುದನ್ನು ಗಮನಿಸಬೇಕಿದೆ. ಅವರಲ್ಲಿ ಬಹುತೇಕ ಜನರಿಗೆ ದೆಹಲಿ ಹೈಕೋರ್ಟ್‌ ಜಾಮೀನು ಸಹ ನೀಡಿದೆ.

ಇದು ಏನನ್ನು ತೋರಿಸುತ್ತದೆ? ಗೋವಿನ ಹೆಸರಲ್ಲಿ, ಲವ್ ಜಿಹಾದ್ ಹೆಸರಿನಲ್ಲಿ ಮತ್ತು ಮುಸ್ಲಿಮರು ಹೆಸರಿನಲ್ಲಿ ಕೊಲ್ಲಲು ತಯಾರು ಮಾಡಲಾಗಿದ್ದ ಗುಂಪು ನಿಮ್ಮ ನೆರೆಹೊರೆಗೆ, ಮನೆಗೆ, ಕಾಲೇಜು ಕ್ಯಾಂಪಸ್ಸುಗಳ ಬಳಿಗೆ ಬಂದಿದೆ ಎಂಬುದನ್ನು ತೋರುತ್ತಿದೆ. ಇಂತಹ ಕೊಳಕು ಕೃತ್ಯಗಳನ್ನೆಸಗಲು ಸದರಿ ಗುಂಪನ್ನು ರೂಪಿಸಿದ್ದು, ಬಲ ತುಂಬಿದ್ದು ಮತ್ತು ಸಾಯುಧರನ್ನಾಗಿಸಿದ್ದು ಪುರುಷಹಂಕಾರ ತುಂಬಿದ ಫ್ಯಾಸಿಸ್ಟ್ ಬಲಪಂಥೀಯ ತಾತ್ವಿಕತೆಯೇ ಆಗಿದೆ.

ಅವರ ಆದರ್ಶ ನಾರಿ ಚೌಕಟ್ಟಿಗೆ ಸರಿಯಾಗಿ ಹೊಂದಿಕೊಳ್ಳದ ಮಹಿಳೆಯರನ್ನು ಸ್ತ್ರೀ ದ್ವೇಷ ಮತ್ತು ಅಸಹನೆಯ ಮತ್ತನ್ನು ಏರಿಸಿಕೊಂಡಿರುವ ಗುಂಪು ಇಷ್ಟಪಡುವುದಿಲ್ಲ. ಆ ಗುಂಪು ಶಹೀನ್‌ಬಾಗ್‌ನ ಮಹಿಳೆಯರನ್ನು ರೇಪ್ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತದೆ. ಅದೇ ರೀತಿ ನರೇಂದ್ರ ಮೋದಿ ಸರ್ಕಾರವನ್ನು ವಿರೋಧಿಸುವ ಜೆಎನ್‌ಯು, ಜಾಮಿಯಾ ಅಥವಾ ಯಾವುದೇ ವಿದ್ಯಾರ್ಥಿಗಳನ್ನು ಕೊಲ್ಲುವುದಾಗಿ ಅಬ್ಬರಿಸುತ್ತದೆ. ಆಳುತ್ತಿರುವವರ ಶಾಮೀಲುದಾರಿಕೆ ಮತ್ತು ಸರ್ಕಾರೀ ಯಂತ್ರಾಂಗದ ಬೆಂಬಲದೊಂದಿಗೆ ದೇಶದ ಯಾವುದೇ ಭಾಗದಲ್ಲಿ ಅಪರಾಧೀ ಕೃತ್ಯಗಳನ್ನೆಸಗಲು ತಮಗೆ ಲೈಸೆನ್ಸ್ ಸಿಕ್ಕಿದೆ ಎಂದು ಅದು ಭಾವಿಸಿದೆ.

ಮಧ್ಯಮವರ್ಗ ಅಥವಾ ಮೇಲ್ವರ್ಗದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ವಾದಿಸುವ ಸಂಸ್ಕಾರಯುತ ಜನವರ್ಗಗಳು ಫ್ಯಾಸಿಸ್ಟ್ ಗುಂಪಿನ ಇಂತಹ ಕೃತ್ಯಗಳ ಕುರಿತು ಉಸಿರೆತ್ತುವುದಿಲ್ಲ.

ಮುಂದಿನ ದಿನಗಳ ಸೂಚನೆ

ಕ್ಯಾಂಪಸ್ಸುಗಳ ಮೇಲಿನ ದಾಳಿಯು ಬಿಜೆಪಿ ಸರ್ಕಾರದ ಪ್ರಮುಖ ಗುಣಲಕ್ಷಣಗಳಲ್ಲೊಂದಾಗಿದೆ. ಈ ಸರ್ಕಾರವು ಸುಶಿಕ್ಷಿತರನ್ನು ಮತ್ತು ಶಿಕ್ಷಣ ಪಡೆಯಬಯಸುವವರನ್ನು ದ್ವೇಷಿಸುತ್ತದೆ. ದೇಶದುದ್ದಗಲದ ಹಲವಾರು ಕ್ಯಾಂಪ್ಸಸುಗಳಲ್ಲಿ ಇದು ಪುನರಾವರ್ತನೆಯಗಿದೆ. ಕಳೆದ ಐದು ವರ್ಷಗಳಲ್ಲಿ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳನ್ನು ವಿಲನ್‌ಗಳನ್ನಾಗಿಸುವ ಕೆಲಸ ಅವ್ಯಾಹತವಾಗಿ ನಡೆದದ್ದಲ್ಲದೇ ದಾಳಿ ಮಾಡಲಾಗಿದೆ.

ಮಹಿಳೆಯರ ಕುರಿತಾದ ಇವರ ದ್ವೇಷದ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆಯೋ ಅದನ್ನು ಗಾರ್ಗಿ ಕಾಲೇಜಿನ ಹುಡುಗಿಯರು ಈಗ ಅನುಭವಿಸಿದ್ದಾರೆ. ಗಾರ್ಗಿ ಕಾಲೇಜಿನ ಪ್ರಿನ್ಸಿಪಾಲೆರ ಹುಡುಗಿಯರು ಲಕ್ಷ್ಮಣರೇಖೆಯನ್ನು ದಾಟಿದ್ದರಿಂದ ಇದಾಗಿದೆಯೆಂದು ಹೇಳಿಬಿಟ್ಟಿದ್ದನ್ನೂ ಗಮನಿಸಬೇಕು. ಎಲ್ಲೆಡೆ ಮಹಿಳೆಯರು ಸಮಾನ ಅವಕಾಶಗಳು ಮತ್ತು ಸಮಾನವಾಗಿ ತಮ್ಮನ್ನು ನಡೆಸಿಕೊಳ್ಳಬೇಕೆಂಬ ಹಕ್ಕೊತ್ತಾಯವನ್ನು ಮುಂದಿಡುತ್ತಿದ್ದಾರಾದರೂ, ಇಂತಹ ಘಟನೆಗಳು ‘ರಕ್ಷಣೆ’ಯ ಹೆಸರಿನಲ್ಲಿ ಮಹಿಳೆಯರನ್ನು ಮತ್ತಷ್ಟು ಪಂಜರದ ಗೊಂಬೆಗಳನ್ನಾಗಿಸುವ ಸಾಧ್ಯತೆಯೇ ಹೆಚ್ಚು.

ಎಲ್ಲಾ ಕ್ಯಾಂಪಸ್ಸುಗಳಲ್ಲೂ ಹುಡುಗಿಯರು ತಮಗೂ 24 ಗಂಟೆಗಳ ಗ್ರಂಥಾಲಯ, ಅಲ್ಲಿಗೆ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಇತ್ಯಾದಿಗಳು ಬೇಕೆಂದು ಕೇಳುತ್ತಿದ್ದಾರೆ. ಆದರೆ, ಪುರುಷ ಕೇಂದ್ರಿತ ದೃಷ್ಟಿಕೋನವು ಇವೆಲ್ಲವನ್ನೂ ರಕ್ಷಣೆಯ ಹೆಸರಿನಲ್ಲಿ ಅಥವಾ ಹಸಿ ಹಸಿಯಾಗಿ ‘ನಿಮಗೆ ಇವುಗಳ ಅಗತ್ಯವಿಲ್ಲ’ ಎಂದು ಹೇಳುತ್ತಾ ಹಿಂದೆ ತಳ್ಳಲು ಇಂತಹ ಘಟನೆಗಳು ನೆಪವಾಗುತ್ತವೆ. ಗಾರ್ಗಿ ಕಾಲೇಜಿನ ಮೇಲೆ ದಾಳಿ ನಡೆಸಿದವರ ಮೇಲೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳದಿರುವುದು ದೇಶದೆಲ್ಲೆಡೆಯ ವಿದ್ಯಾರ್ಥಿನಿಯರ ಭವಿಷ್ಯದ ಮೇಲೂ ಹಾಕಿದ ಕಲ್ಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...