Homeಮುಖಪುಟಶಹೀನ್ ಬಾಗ್ ಪ್ರತಿಭಟನಾಕಾರರು ಬಡವರು, ಅನಕ್ಷರಸ್ಥರು: ಮತ್ತೇ ವಿವಾದವೆಬ್ಬಿಸಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್...

ಶಹೀನ್ ಬಾಗ್ ಪ್ರತಿಭಟನಾಕಾರರು ಬಡವರು, ಅನಕ್ಷರಸ್ಥರು: ಮತ್ತೇ ವಿವಾದವೆಬ್ಬಿಸಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ “ದೆಹಲಿಯ ಶಾಹೀನ್ ಬಾಗ್ ಮತ್ತು ಕೋಲ್ಕತ್ತಾದ ಪಾರ್ಕ್ ಸರ್ಕಸ್‌ನಲ್ಲಿನ ಪ್ರತಿಭಟನಾಕಾರರು ಬಡವರಾಗಿದ್ದಾರೆ ,ಇವರು ಹಣಕ್ಕಾಗಿ ರಸ್ತೆಯಲ್ಲಿ ಕುಳಿತಿದ್ದಾರೆ” ಎಂದು ಪುನ: ವಿವಾದವೆಬ್ಬಿಸಿದ್ದಾರೆ.

“ದೆಹಲಿಯ ಶಾಹೀನ್ ಬಾಗ್ ಹಾಗೂ ಕೊಲ್ಕತ್ತಾದ ಪಾರ್ಕ್ ಸರ್ಕಸ್ ನಲ್ಲಿನ ಪ್ರತಿಭಟನಾಕಾರರು ಬಡವರು ಮತ್ತು ಅನಕ್ಷರಸ್ಥರಾಗಿದ್ದಾರೆ. ಏನೂ ತಿಳಿಯದ ಬಡ ಜನರನ್ನು ರಸ್ತೆಗಳಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿದೆ. ಅದಕ್ಕೆ ಪ್ರತಿಯಾಗಿ ಅವರು ಪ್ರತಿದಿನ ಹಣವನ್ನು ಪಡೆಯುತ್ತಿದ್ದಾರೆ. ವಿದೇಶಿ ನಿಧಿಯಿಂದ ಖರೀದಿಸಿದ ಬಿರಿಯಾನಿಯನ್ನು ಅವರಿಗೆ ನೀಡಲಾಗುತ್ತಿದೆ. ಜನರು ತಮ್ಮೊಂದಿಗಿದ್ದಾರೆ ಎಂದು ತೋರಿಸಲು ಬೇಕಾಗಿ ಇದನ್ನು ಮಾಡಲಾಗುತ್ತಿದೆ ”ಎಂದು ಕೋಲ್ಕತ್ತಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಘೋಷ್ ಹೇಳಿದ್ದಾರೆ.

“ಅದು ದೆಹಲಿಯ ಶಾಹೀನ್ ಬಾಗ್ ಆಗಿರಲಿ ಅಥವಾ ಕೋಲ್ಕತ್ತಾದ ಪಾರ್ಕ್ ಸರ್ಕಸ್ ಆಗಿರಲಿ, ಚಿತ್ರಣ ಎಲ್ಲೆಡೆಯೂ ಒಂದೇ ಆಗಿರುತ್ತದೆ. ಬೃಂದಾ ಕಾರಟ್ ಮತ್ತು ಪಿ ಚಿದಂಬರಂ ಅವರಂತಹ ಜನರು ದೆಹಲಿ ಅಥವಾ ಕೋಲ್ಕತ್ತಾಗೆ ಹೋದಾಗ ಈ ಸಭೆಗಳಿಗೆ ಹಾಜರಾಗುತ್ತಾರೆ. ಕೆಲವು ಅನಕ್ಷರಸ್ಥ ಮಹಿಳೆಯರು ತಮ್ಮ ತೊಡೆಯ ಮೇಲೆ ಶಿಶುಗಳನ್ನು ಇಟ್ಟುಕೊಂಡಿದ್ದಾರೆ. ಆದರೆ ಅವರು ಕೇವಲ ಪ್ರೇಕ್ಷಕರಷ್ಟೇ” ಎಂದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಮಹಿಳೆಯರು ಡಿಸೆಂಬರ್ 15 ಮತ್ತು ಜನವರಿ 7 ರಿಂದ ಶಾಹೀನ್ ಬಾಗ್ ಮತ್ತು ಪಾರ್ಕ್ ಸರ್ಕಸ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಶಾಹೀನ್ ಬಾಗ್ ಪ್ರತಿಭಟನೆಯೂ ಪಾರ್ಕ್ ಸರ್ಕಸ್ ಸೇರಿದಂತೆ ದೇಶಾದ್ಯಂತ ಅನೇಕ ಧರಣಿಗಳಿಗೆ ಪ್ರೇರಣೆ ನೀಡಿದೆ.

ಘೋಷ್ ಈ ಹಿಂದೆ “ಶಹೀನ್ ಬಾಗ್ ಪ್ರತಿಭಟನಾಕಾರರಿಗೆ ಯಾರು ಹಣ ನೀಡುತ್ತಿದ್ದಾರೆ ಮತ್ತು ದೆಹಲಿಯ ಶೀತದಲ್ಲಿ ಕುಳಿತಿದ್ದರೂ ಅವರಲ್ಲಿ ಯಾರೂ ಸತ್ತಿಲ್ಲ, ಹೇಗೆ ?” ಎಂಬ ಹೇಳಿಕೆ ನೀಡಿದ್ದರು.

ಮೇದಿನಿಪುರದ ಬಿಜೆಪಿ ಸಂಸದರಾದ ಘೋಷ್ ಮೇಲೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...