Homeಮುಖಪುಟಯಾವುದೇ ಕಾರಣಕ್ಕೂ NPR ಜಾರಿಗೊಳಿಸುವುದಿಲ್ಲ : ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ ಘೋಷಣೆ

ಯಾವುದೇ ಕಾರಣಕ್ಕೂ NPR ಜಾರಿಗೊಳಿಸುವುದಿಲ್ಲ : ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ ಘೋಷಣೆ

ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಜನಗಣತಿಯ ಜೊತೆಗೆ ಎನ್‌ಪಿಆರ್ ಕೈಗೊಳ್ಳಲು ಈ ಮೊದಲು ನಿರ್ಧರಿಸಲಾಗಿತ್ತು.

- Advertisement -
- Advertisement -

ಮಧ್ಯಪ್ರದೇಶದಲ್ಲಿ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕಮಲ್‌ನಾಥ್‌ ಇಂದು ಸಂಜೆ ಘೋಷಿಸಿದ್ದಾರೆ.

ಭೋಪಾಲ್‌ನ ಶಾಸಕ ಆರಿಫ್‌ ಮಸೂದ್‌ರವರು ಎನ್‌ಪಿಆರ್‌ ಕುರಿತು ತಮ್ಮ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು, ಎನ್‌ಪಿಆರ್‌ ವಿರುದ್ಧ ನಿಲುವು ಮಂಡಿಸಬೇಕು ಇಲ್ಲದಿದ್ದಲ್ಲಿ ಪಕ್ಷ ತೊರೆಯುತ್ತೇನೆ ಎಂದು ಬೆದರಿಕೆ ಹಾಕಿದ ಬೆನ್ನಲ್ಲೇ ಮುಖ್ಯಮಂತ್ರಿ ಕಮಲ್‌ನಾಥ್‌ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಮ್ಮಲ್ಲಿ ಎನ್‌ಪಿಆರ್ ಅಧಿಸೂಚನೆಯನ್ನು 2019ರ ಡಿಸೆಂಬರ್ 9ರಂದು ಹೊರಡಿಸಲಾಯಿತು. ಆದರೆ ಪ್ರಸ್ತುತ ನಾವು ರಾಜ್ಯದಲ್ಲಿ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸಲು ಹೋಗುತ್ತಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೌರತ್ವ ಕಾಯ್ದೆ- 1955ರಂತೆ ನಾವು ಮೊದಲು ಮುಂದುವರೆಯುತ್ತಿದ್ದೆವೆ. 2003 ರ ನಿಯಮ 3ರ ನಿಬಂಧನೆಗಳಂತೆ ನಮ್ಮ ಆದೇಶ ಹೊರಡಿಸಿದ್ದೆವು. ಆದರೆ ಇದರ ಹೊರತಾಗಿಯೂ ನಾವು ಎನ್‌ಪಿಆರ್ ಅನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ. ಏಕೆಂದರೆ ಕೇಂದ್ರ ಸರ್ಕಾರವು ಸೂಚಿಸಿದ ಎನ್‌ಪಿಆರ್ ಅನ್ನು ಸಿಎಎ 2019ರ ನಂತರ ಜಾರಿ ಮಾಡುತ್ತಿರುವುದು ಸರಿಯಿಲ್ಲ ಎಂದು ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಮಧ್ಯಪ್ರದೇಶ ಸರ್ಕಾರದ ವಕ್ತಾರ ಮತ್ತು ಜನಸಂಪರ್ಕ ಸಚಿವ ಪಿ ಒ ಶರ್ಮಾ ಅವರು ರಾಜ್ಯದಲ್ಲಿ ಎನ್‌ಪಿಆರ್ ಜಾರಿಗೆ ಬರುವುದಿಲ್ಲ ಎಂದು ಸಮರ್ಥಿಸಿಕೊಂಡರು. ಈ ವಿಷಯದ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಮೊದಲೇ ನೀಡಲಾಗಿದೆ ಮತ್ತು ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ದಿನ ತಾನೇ ಕಾಂಗ್ರೆಸ್‌ ಶಾಸಕ ಆರಿಫ್‌ ಮಸೂದ್‌ರವರು ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರವು ಎನ್‌ಪಿಆರ್‌ ಮಾಡಬೇಕೆಂದು ಮಾರ್ಗದರ್ಶನ ನೀಡುತ್ತಿದೆ. ಇದು ಸರಿಯಾದುದ್ದಲ್ಲ ಇದನ್ನು ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿದ್ದರು.

ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಜನಗಣತಿಯ ಜೊತೆಗೆ ಎನ್‌ಪಿಆರ್ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಜನಗಣತಿ ಆಯೋಗವು ದೇಶದ ಪ್ರತಿ ಸಾಮಾನ್ಯ ನಿವಾಸಿಯ ಸಮಗ್ರ ಗುರುತಿನ ಡೇಟಾಬೇಸ್ ರಚಿಸುವುದು ಎನ್‌ಪಿಆರ್‌ನ ಉದ್ದೇಶವೆಂದು ಹೇಳಿತ್ತು.

ಆದರೆ ಬಿಜೆಪಿಯೇತರ ಹೆಚ್ಚಿನ ಪಕ್ಷಗಳು ಸಿಎಎಯನ್ನು ವಿರೋಧಿಸಿದ್ದವಾದರೂ ಎನ್‌ಪಿಆರ್ ಅನ್ನು ವಿರೋಧಿಸಿ ತೀರ್ಮಾನ ತೆಗೆದುಕೊಂಡಿದ್ದು ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮಾತ್ರವಾಗಿದ್ದವು. ಎನ್‌ಪಿಆರ್ ಎನ್‌ಆರ್‌ಸಿ ಅನುಷ್ಠಾನಕ್ಕೆ ಪೂರ್ವಭಾವಿಯಾಗಿದೆ ಎಂಬ ಕಾರಣಕ್ಕೆ ಈ ನಿಲುವಿಗೆ ಬರಲಾಗುತ್ತಿದೆ.

ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರವು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...