Homeಮುಖಪುಟಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

- Advertisement -
- Advertisement -

ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ನಡೆದ ಪೊಲೀಸ್ ದೌರ್ಜನ್ಯ ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬರುತ್ತಿವೆ. ಅದರಲ್ಲಿ ವಿದ್ಯಾರ್ಥಿಯೊಬ್ಬ ಎರಡು ಕೈಯಲ್ಲಿ ಕಲ್ಲು ಹಿಡಿದಿದ್ದ ಎಂದು ಹಲವಾರು ಚಾನೆಲ್‌ಗಳು ಪ್ರತಿಪಾದಿಸಿವೆ.

ಫೆಬ್ರುವರಿ 16ರಂದು ಇಂಡಿಯಾ ಟುಡೇ ಚಾನೆಲ್ ಎಸ್‌ಐಟಿಯ ಅಧಿಕಾರಿಯೊಬ್ಬರು ನೀಡಿದ ಫೂಟೇಜ್ ಅನ್ನು ಅಥೆಂಟಿಕ್ ಎಂದು ತೋರಿಸುತ್ತ, ವಿದ್ಯಾರ್ಥಿಗಳು ಗ್ರಂಥಾಲಯದೊಳಕ್ಕೆ ಕಲ್ಲು ಒಯ್ದಿದ್ದರು ಎಂದು ಪ್ರತಿಪಾದಿಸಿತು. ಕೊಂಚ ಲಿಬರಲ್ ಎನಿಸಿದ ಈ ಚಾನೆಲ್ಲೇ ಹೀಗೆ ಮೂರ್ಖತನ ಪ್ರದರ್ಶಿಸಿದ ಮೇಲೆ ಹೆಂಡ ಕುಡಿದ ಮಂಗಗಳಂತಿರುವ ಸ್ವರಾಜ್ ಇಂಡಿಯಾ, ಒಪಿ ಇಂಡಿಯಾದಂತಹ ಖಟ್ಟರ್ ಬಲಪಂಥಿಯ ವೆಬ್‌ಸೈಟ್‌ಗಳಂತೂ ಇದನ್ನು ವ್ಯಾಪಕವಾಗಿ ಹರಡಿದವು.

ಆದರೆ ಫ್ಯಾಕ್ಟ್ ಚೆಕ್ ಮಾಡುವ ದಿ ಕ್ವಿಂಟ್ ಸೇರಿದಂತೆ ಇಂಗ್ಲಿಷ್ ಸುದ್ದಿ ಸಂಸ್ಥೆಗಳಾದ ಟೈಮ್ಸ್ ಆಫ್ ಇಂಡಿಯಾ, ಟೈಮ್ಸ್ ನೌ, ರಿಪಬ್ಲಿಕ್ ಭಾರತ್, ಮಿರರ್ ನೌ, ಡಿಎನ್‌ಎ ಮತ್ತು ಹಿಂದಿ ಸುದ್ದಿ ಸಂಸ್ಥೆಗಳಾದ ಜೀ ನ್ಯೂಸ್, ಆಜ್‌ತಕ್, ಇಂಡಿಯಾ ಟುಡೇ, ಎನ್‌ಡಿಟಿವಿ ಇಂಡಿಯಾ, ನ್ಯೂಸ್ ನೇಷನ್ ಕೂಡ ಇದೇ ಸತ್ಯ ಎಂಬಂತೆ ಪ್ರತಿಪಾದಿಸಿದವು.

ಕ್ಲಿಪ್ಪಿಂಗ್‌ನಲ್ಲಿ ಮೇಲ್ನೋಟಕ್ಕೆ ವಾಲೆಟ್ ಕಲ್ಲಿನಂತೆ ಕಾಣುತ್ತದೆ. ವಿಡಿಯೋವನ್ನು ಒಡೆದೊಡೆದು ಜೂಮ್‌ ಮಾಡಿ ಸೂಕ್ಷ್ಮವಾಗಿ ನೋಡಿದಾಗ ಕಲ್ಲು ಕರಗುವ ಸಮಯ ಸಿಗುತ್ತದೆ. ಅಲ್ಟ್ ನ್ಯೂಸ್ ಈ ಕೆಲಸವನ್ನು ಮಾಡಿದೆ.

ಇಂಡಿಯಾ ಟುಡೇ ತೋರಿಸಿದ ಫೂಟೇಜ್ ಇರುವ ವಿಡಿಯೋದ ಹೈ ರೆಸ್ಯುಲೂಷನ್ ಆವೃತ್ತಿಯನ್ನು ಪಡೆದುಕೊಂಡ ಅಲ್ಟ್ ನ್ಯೂಸ್, ವಿಡಿಯೋವನ್ನು ಸ್ಲೋ ಮಾಡಿ, ಸಣ್ಣ ಸಣ್ಣ ಫ್ರೇಮ್‌ಗಳಾಗಿ ಒಡೆದು ವಿಶ್ಲೇಷಣೆ ಮಾಡಿದೆ.

ಸತ್ಯ ಏನೆಂದರೆ, ವಿದ್ಯಾರ್ಥಿ ಒಂದು ಕೈಯಲ್ಲಿ ವಾಲೆಟ್ ಮತ್ತು ಇನ್ನೊಂದು ಕೈಯಲ್ಲಿ  ಬಹುಷ: ಮೊಬೈಲ್ ಹಿಡಿದಿದ್ದಾನೆ. ಚಿತ್ರಗಳಲ್ಲಿ ಇದನ್ನು ಗಮನಿಸಬಹುದು.

ಆದರೆ, ಮಾಹಿತಿ ಸಿಕ್ಕ ತಕ್ಷಣ ಹಿಂದೆ ಮುಂದೆ ನೋಡದೇ ಪ್ರಸಾರ ಮಾಡುವ ಕಲ್ಲು ಮನಸ್ಸುಗಳನ್ನು ಕರಗಿಸುವುದು ಸದ್ಯಕ್ಕೆ ಕಷ್ಟವೇ. ಆದರೆ, ಪ್ರಗತಿಪರ ಎನಿಸಿದ ಹಲವಾರು ಚಾನೆಲ್‌ಗಳು ಈ ವಿಷಯದಲ್ಲಿ ದುಡುಕಿದ್ದು ಖೇದಕರ. ಎಸ್‌ಐಟಿಯ ಅಧಿಕಾರಿ ಕ್ಲಿಪ್ಪಿಂಗ್ ಕೊಟ್ಟಾಗಲೇ ಇಂಡಿಯಾ ಟುಡೇ ಟ್ರಾಪ್‌ ಗೆ ಬಿದ್ದಿತ್ತು ಅಲ್ಲವೇ?

ಈಗಲಾದರೂ ಪೊಲೀಸರ  ಆ ಅಮಾನುಷ ದೌರ್ಜನ್ಯವನ್ನು ಈ ಟಿವಿ ಚಾನೆಲ್‌ಗಳು ಖಂಡಿಸುತ್ತವೇ ಎಂದು ಆಶಿಸೋಣವೇ?


ಇದನ್ನೂ ಓದಿ | ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...