Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...