Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...