Homeಮುಖಪುಟನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

ನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

- Advertisement -
- Advertisement -

ಗದಗ: ‘ಕರೆಕ್ಟ್ ಅಂದ್ರ ಕರೆಕ್ಟ್’ ಎಂದು ಅಳತೆಪಟ್ಟಿ ಹಿಡಿದು ಮನೆ ಕಾಮಗಾರಿಯನ್ನು ಅಳೆದವರಂತೆ ಆಡುತ್ತಿರುವ ಜಿಲ್ಲೆಯ ಆಡಳಿತಶಾಹಿ, ನೆರೆ ಪ್ರವಾಹ ಬಂದು ಏಳು ತಿಂಗಳಾಗುತ್ತ ಬಂದರೂ ಮನೆ ನಿರ್ಮಾಣಕ್ಕೆ ಅಥವಾ ರಿಪೇರಿಗೆ ಎರಡನೇ ಕಂತಿನ ಹಣ ನೀಡಲು ತಯಾರಿಲ್ಲ. ಆರು ತಿಂಗಳಾದರೂ ಹಲವಾರು ಊರುಗಳ ನೂರಾರು ಕುಟುಂಬಗಳು ಸುಭದ್ರ ಸೂರಿಲ್ಲದೇ ಜೀವನ ನಡೆಸುತ್ತಿವೆ.

ಈ ಕಡೆ ಜಮೀನಿನಲ್ಲಾದ ಕೊರೆತ, ರಸ್ತೆ ಸೇರಿದಂತೆ ಒಂದಿಲ್ಲೊಂದು ಸಮಸ್ಯೆ ಇದ್ದೇ ಇದೆ. ಹೀಗಾಗಿ ಮಲಪ್ರಭೆ, ಬೆಣ್ಣೆಹಳ್ಳ ತಣ್ಣಗಾಗಿ ಒಣಗಿದರೂ, ನಮ್ಮ ಅಧಿಕಾರಿಗಳ ಒಣ ಉಸಾಬರಿ ಮಾತ್ರ ನಿಂತಿಲ್ಲ.

ಗಣಿ, ಭೂವಿಜ್ಞಾನ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರ ನರಗುಂದ ಕ್ಷೇತ್ರ ನೆರೆಪ್ರವಾಹಕ್ಕೆ ಸಿಕ್ಕು ನಜ್ಜುಗುಜ್ಜಾಗಿದೆ. ಆದರೆ ಪಾಟೀಲರು ಇದರ ಬಗ್ಗೆ ತೆಲೆ ಕೆಡಿಸಿಕೊಂಡಿಲ್ಲ. ಪರಿಹಾರ ತಂದಿದ್ದಿನಲ್ಲ ಎಂದು ಮನೆಯಿಂದ ತಂದವರಂತೆ ಮಾತಾಡುತ್ತಾರೆ ಹೊರತು, ಆ ಪರಿಹಾರ ಸಂತ್ರಸ್ತರಿಗೆ ತಲುಪಿತೋ ಇಲ್ಲವೋ ಎಂಬ ಬಗ್ಗೆ ಕಾಳಜಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ತಾವು ಗಣಿ ಸಚಿವ ಎಂಬುದು ಇಂಪಾರ್ಟೆಂಟ್, ಅದಕ್ಕೇ ಅವರು ಜಿಲ್ಲೆಯ ಜೀವನಾಡಿ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಹೊಂಚು ಹಾಕಿ ಕುಳಿತಿರುವ ಬಲ್ಡೊಟಾ ಮತ್ತು ಪೊಸ್ಕೊಗಳಂತಹ ಕಂಪನಿಗಳ ಬಗ್ಗೆ ಸಾಫ್ಟ್‌ ಕಾರ್ನರ್ ಹೊಂದಿದ್ದಾರೆ. ಗಣಿ ಖಾತೆ ನಿಭಾಯಿಸಬೇಕಲ್ಲ, ಪಾಪ, ಅವರಿಗೆ ಜಿಲ್ಲಾ ಉಸ್ತುವಾರಿ ಮಾಡಕು ಟೈಮ್ ಇಲ್ಲವಂತೆ.

 

ತಮ್ಮ ಹಕ್ಕಿನ ಹಣಕ್ಕೆ ಕಾದವರ ಎದುರು ಅಧಿಕಾರಿಗಳು ತಾಂತ್ರಿಕ ತೊಂದರೆ, ಮೆಜರ್‌ಮೆಂಟು, ಫ್ಲಿಂಥು, ನಿಯಮ ಎನ್ನುವುದಿದೆಯಲ್ಲ, ಅದಂತೂ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಿದಂತೆ.

ಜಿಲ್ಲೆಯ ನೆರೆಪೀಡಿತ ತಾಲೂಕುಗಳಾದ ನರಗುಂದ ಮತ್ತು ರೋಣಗಳಲ್ಲಿ ಅಧಿಕಾರಶಾಹಿಯ ‘ಕಂತಿನ ಲೆಕ್ಕಕ್ಕೆ’ ಹೈರಾಣಾದವರು ಡಿಸಿಯವರಿಗೆ ದೂರು ತಲುಪಿಸಿದರೂ ಪ್ರಯೋಜನವಾಗಿಲ್ಲ.

ಅಂತೂ ಇಂತೂ ಪರಿಹಾರ ಬಂತು!
ಆರಂಭದಲ್ಲಿ ಈ ಸರ್ಕಾರದಿಂದ ನೆರೆ ಪರಿಹಾರ ಸಿಗುವುದೋ ಇಲ್ಲವೋ ಎಂಬ ಅನುಮಾನ, ಆತಂಕಗಳಿದ್ದವು. ಆದರೂ ಅಂತೂ ಇಂತೂ ಪರಿಹಾರ ಬಂತು. ಆದರೀಗ ಮುಳ್ಳಾಗಿರುವುದು ಕಂತು!

ಕೊಣ್ಣೂರು, ವಾಸನ, ಬೂದಿಹಾಳ, ಮೆಣಸಗಿ.. ಹೀಗೆ ನೆರೆಪೀಡಿತ ಯಾವ ಊರಿಗೆ ಹೋದರೂ ಜನರ ಗೋಳು ನಿಂತೇ ಇಲ್ಲ. ಮನೆ ನಿರ್ಮಾಣಕ್ಕೆ ಹಣ ನೀಡುವಾಗಲೇ ಗ್ರೇಡುಗಳ ಹೆಸರಿನಲ್ಲಿ ನಿಯಮಗಳ ಗೋಡೆಗಳು ಎದ್ದವು. ಮನೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ವಿಂಗಡಿಸಲು ಎ, ಬಿ, ಮತ್ತು ಸಿ ಎಂದು ಮೂರು ಗ್ರೇಡ್‌ಗಳನ್ನು ಮಾಡಲಾಯಿತು. ಸಂಪೂರ್ಣ ಮನೆ ನೆಲಸಮವಾಗಿದ್ದರೆ ‘ಎ’ ಗ್ರೇಡ್‌ನಲ್ಲಿ ಅದಕ್ಕೆ ಪೂರ್ಣ ಪರಿಹಾರ, ಶೇ.50ರಷ್ಟು ಹಾನಿಯಾಗಿದ್ದರೆ ಅದಕ್ಕೆ ‘ಬಿ’ ಗ್ರೇಡ್‌ನಲ್ಲಿ ಶೇ.50 ಪರಿಹಾರ ಮತ್ತು ಶೇ.25ರಿಂದ 30ರಷ್ಟು ಹಾನಿಯಾಗಿದ್ದರೆ ‘ಸಿ’ ಗ್ರೇಡ್‌ನಲ್ಲಿ 25-30 ಸಾವಿರ ರೂ ನೀಡುವ ನಿಯಮ ಮಾಡಲಾಯಿತು.

ಮೊದಲನೆಯ ಕಂತೇನೋ ಬಂತು. ಆದರೆ ಇನ್ನು ಎಷ್ಟೋ ಜನರಿಗೆ ಎರಡನೇ ಕಂತು ಬರದೇ ಮನೆಗಳೆಲ್ಲ ಅರ್ಧಂಬರ್ಧ ರಿಪೇರಿಯಾಗಿ ನಿಂತಿವೆ. ಜಿಲ್ಲಾಧಿಕಾರಿ ಖಾತೆಯಲ್ಲಿ ಇನ್ನೂ 20 ಕೋಟಿ ರೂ ಉಳಿದಿದೆ. ಮೊದಲನೇ ಕಂತಿನ ಹಣದಲ್ಲಿ ಇಂತಿಷ್ಟು ಕಾಮಗಾರಿಯಾಗಿದ್ದರೆ ಮಾತ್ರ ಎರಡನೇ ಕಂತು ಎಂದು ಕ್ರೂರತನ ತೋರಲಾಗುತ್ತಿದೆ.

ಇವರು ನಿಯಮ ಮಾಡಿದ್ದು ಆರು ತಿಂಗಳ ಹಿಂದೆ. ಪ್ರತಿ ತಿಂಗಳೂ ಸಿಮೆಂಟ್, ಕಲ್ಲು, ಕಬ್ಬಿಣ, ನಿರ್ಮಾಣದ ಕೂಲಿ ಏರುತ್ತಲೇ ಇರುವಾಗ ಇವರು ಹೇಳಿದಷ್ಟು ಎತ್ತರಕ್ಕೆ ಮನೆ ತಂದು ನಿಲ್ಲಿಸಿದರಷ್ಟೇ ಇನ್ನೊಂದು ಕಂತು ಎನ್ನುವುದು ಅವೈಜ್ಞಾನಿಕ ಮತ್ತು ಹೊಣೆಗೇಡಿತನ.

ಕೊಣ್ಣೂರು ಗ್ರಾಮದಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿ ಗ್ರೇಡ್ ಫಲಾನುಭವಿಗಳಿಗೆ ಒಂದನೆಯ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಎರಡನೇ ಕಂತು ಮರೀಚಿಕೆಯಾಗಿದೆ. ಹೀಗಾಗಿ ಫಲಾನುಭವಿಗಳ ಮನೆಗಳು ಅಪೂರ್ಣವಾಗಿವೆ. ಮನೆಗಳನ್ನು ಪೂರ್ಣ ಮಾಡಬೇಕೆಂದರೆ, ಲೋಕದಲ್ಲಿಲ್ಲದ ನಿಯಮ ತೋರಿಸುವ ಅಧಿಕಾರಿಗಳು ನಿರಾಶೆ ಮೂಡಿಸುತ್ತಿದ್ದಾರೆ. ಇಂತಹ ಆಪತ್ತಿನ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಬೇಕಾದ ಜನಪ್ರತಿನಿಧಿಗಳು ಹತ್ತಿರ ಸುಳಿಯುತ್ತಿಲ್ಲ.

ನೆರೆಪ್ರವಾಹಕ್ಕೂ ಮುನ್ನ ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದ ತಮ್ಮದೇ ತೆರಿಗೆ ಹಣಕ್ಕೆ ‘ಕಂತು’ ಎಂಬ ಹಾಳೆ ಸುತ್ತಿ ಭಿಕ್ಷೆಯಂತೆ ನೀಡುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ.

ಮಾರ್ಚ್‌ನಲ್ಲೇನಾದರೂ ಅಕಾಲಿಕ ಮಳೆ ಸುರಿದರೆ ಈಗ ಮತ್ತೆ ಮನೆ ತುಂಬ ನೀರು ನಿಲ್ಲಲಿದೆ. ಇದ್ಯಾವುದರ ಪರಿವೆಯೂ ಇಲ್ಲದ ಜಿಲ್ಲಾಡಳಿತ ಫ್ಲಿಂಥು, ಜಿಪಿಎಸ್ಸು ಅಂತೆಲ್ಲ ಮಾತಾಡುತ್ತ ಕುಳಿತಿದೆ.

ಸಚಿವ ಸಿ.ಸಿ ಪಾಟೀಲ್‌

ರೋಣ ಮತ್ತು ನರಗುಂದದ ಎಲ್ಲ ಹಂತಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜನರ ಪರವಾಗಿ ಧ್ವನಿ ಎತ್ತುವುದು ಈಗ ಅನಿವಾರ್ಯ. ಅವರನ್ನು ಆರಿಸಿದ್ದು ಇನ್ನೇತಕ್ಕೆ?


ಸರ್ವೆ ನಂ. 703 ಮತ್ತು 705ರಲ್ಲಿ 15*20 ವಿಸ್ತೀರ್ಣದ ನನ್ನ ಎರಡು ಮನೆ ಇದ್ದವು. 703ರ ಮನೆ ಪೂರ್ತಿ ಬಿದ್ದಿದ್ದರೆ, 705ರ ಮನೆ ಭಾಗಶ: ಬಿದ್ದಿತ್ತು. ಸರ್ವೆ ಮಾಡಲು ಬಂದವರಿಗೆ 705ರ ಮನೆ ಬೇಡ, ಪೂರ್ತಿ ಬಿದ್ದ 703ರ ಮನೆ ಪರಿಗಣಿಸಿ ಎಂದೆ. ಎರಡನ್ನೂ ಸರ್ವೇ ಮಾಡಿಕೊಂಡು ಹೋಗಿ, ಭಾಗಶ: ಬಿದ್ದ ಮನೆ ಆಯ್ಕೆ ಮಾಡಿದ್ದಾರೆ. ಈ ಕುರಿತು ಡಿಸಿವರೆಗೆ ದೂರು ಕೊಟ್ಟರೂ ಸರಿಪಡಿಸಿಲ್ಲ.
-ವೀರಪ್ಪ ದ್ಯಾವಣ್ಣವರ, ಕೊಣ್ಣೂರು


ನನ್ನ ಹೊಲ, ಮನೆ ಎರಡೂ ಹಾನಿಯಾಗಿವೆ. ಭಾಗಶ: ಹಾನಿ ಎಂದು ಮೊದಲ ಕಂತು 25 ಸಾವಿರ ರೂ. ನೀಡಿದರು. 6 ತಿಂಗಳಾದರೂ 2ನೇ ಕಂತು ನೀಡುತ್ತಿಲ್ಲ. ತಹಸೀಲ್ದಾರ್, ಡಿಸಿ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ.
– ಕೃಷ್ಣಪ್ಪ, ವಾಸನ

ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನೆರೆ ಪರಿಹಾರಕ್ಕೆ 57 ಕೋಟಿ ರೂ. ಖರ್ಚು ಮಾಡಿದ್ದೇವೆ. ಇನ್ನೂ 20 ಕೋಟಿ ರೂ ಇದೆ. ಆದರೆ ಮನೆ ನಿರ್ಮಾಣ ಅಥವಾ ರಿಪೇರಿಗೆ ಮೊದಲ ಕಂತು ಪಡೆದ ಬಹುತೇಕರು ಅದನ್ನು ಪೂರ್ಣಗೊಳಿಸಿಲ್ಲ. ಫ್ಲಿಂಥ್‌ವರೆಗೂ ಬಂದರೆ 2ನೇ ಕಂತು ಬಿಡುಗಡೆ ಮಾಡುತ್ತೇವೆ, ಅವರೇ ಅವಸರ ಮಾಡುತ್ತಿಲ್ಲ. 10 ಕೋಟಿ ರೂ ಬೆಳೆ ಪರಿಹಾರ ನೇರವಾಗಿ ರೈತರ ಖಾತೆಗೆ ಹೋಗಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಲವರಿಗೆ ತಲುಪಿಲ್ಲ. ಸರಿಪಡಿಸುತ್ತೇವೆ.
-ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...