Homeಮುಖಪುಟನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

ನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

- Advertisement -
- Advertisement -

ಗದಗ: ‘ಕರೆಕ್ಟ್ ಅಂದ್ರ ಕರೆಕ್ಟ್’ ಎಂದು ಅಳತೆಪಟ್ಟಿ ಹಿಡಿದು ಮನೆ ಕಾಮಗಾರಿಯನ್ನು ಅಳೆದವರಂತೆ ಆಡುತ್ತಿರುವ ಜಿಲ್ಲೆಯ ಆಡಳಿತಶಾಹಿ, ನೆರೆ ಪ್ರವಾಹ ಬಂದು ಏಳು ತಿಂಗಳಾಗುತ್ತ ಬಂದರೂ ಮನೆ ನಿರ್ಮಾಣಕ್ಕೆ ಅಥವಾ ರಿಪೇರಿಗೆ ಎರಡನೇ ಕಂತಿನ ಹಣ ನೀಡಲು ತಯಾರಿಲ್ಲ. ಆರು ತಿಂಗಳಾದರೂ ಹಲವಾರು ಊರುಗಳ ನೂರಾರು ಕುಟುಂಬಗಳು ಸುಭದ್ರ ಸೂರಿಲ್ಲದೇ ಜೀವನ ನಡೆಸುತ್ತಿವೆ.

ಈ ಕಡೆ ಜಮೀನಿನಲ್ಲಾದ ಕೊರೆತ, ರಸ್ತೆ ಸೇರಿದಂತೆ ಒಂದಿಲ್ಲೊಂದು ಸಮಸ್ಯೆ ಇದ್ದೇ ಇದೆ. ಹೀಗಾಗಿ ಮಲಪ್ರಭೆ, ಬೆಣ್ಣೆಹಳ್ಳ ತಣ್ಣಗಾಗಿ ಒಣಗಿದರೂ, ನಮ್ಮ ಅಧಿಕಾರಿಗಳ ಒಣ ಉಸಾಬರಿ ಮಾತ್ರ ನಿಂತಿಲ್ಲ.

ಗಣಿ, ಭೂವಿಜ್ಞಾನ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರ ನರಗುಂದ ಕ್ಷೇತ್ರ ನೆರೆಪ್ರವಾಹಕ್ಕೆ ಸಿಕ್ಕು ನಜ್ಜುಗುಜ್ಜಾಗಿದೆ. ಆದರೆ ಪಾಟೀಲರು ಇದರ ಬಗ್ಗೆ ತೆಲೆ ಕೆಡಿಸಿಕೊಂಡಿಲ್ಲ. ಪರಿಹಾರ ತಂದಿದ್ದಿನಲ್ಲ ಎಂದು ಮನೆಯಿಂದ ತಂದವರಂತೆ ಮಾತಾಡುತ್ತಾರೆ ಹೊರತು, ಆ ಪರಿಹಾರ ಸಂತ್ರಸ್ತರಿಗೆ ತಲುಪಿತೋ ಇಲ್ಲವೋ ಎಂಬ ಬಗ್ಗೆ ಕಾಳಜಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ತಾವು ಗಣಿ ಸಚಿವ ಎಂಬುದು ಇಂಪಾರ್ಟೆಂಟ್, ಅದಕ್ಕೇ ಅವರು ಜಿಲ್ಲೆಯ ಜೀವನಾಡಿ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಹೊಂಚು ಹಾಕಿ ಕುಳಿತಿರುವ ಬಲ್ಡೊಟಾ ಮತ್ತು ಪೊಸ್ಕೊಗಳಂತಹ ಕಂಪನಿಗಳ ಬಗ್ಗೆ ಸಾಫ್ಟ್‌ ಕಾರ್ನರ್ ಹೊಂದಿದ್ದಾರೆ. ಗಣಿ ಖಾತೆ ನಿಭಾಯಿಸಬೇಕಲ್ಲ, ಪಾಪ, ಅವರಿಗೆ ಜಿಲ್ಲಾ ಉಸ್ತುವಾರಿ ಮಾಡಕು ಟೈಮ್ ಇಲ್ಲವಂತೆ.

 

ತಮ್ಮ ಹಕ್ಕಿನ ಹಣಕ್ಕೆ ಕಾದವರ ಎದುರು ಅಧಿಕಾರಿಗಳು ತಾಂತ್ರಿಕ ತೊಂದರೆ, ಮೆಜರ್‌ಮೆಂಟು, ಫ್ಲಿಂಥು, ನಿಯಮ ಎನ್ನುವುದಿದೆಯಲ್ಲ, ಅದಂತೂ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಿದಂತೆ.

ಜಿಲ್ಲೆಯ ನೆರೆಪೀಡಿತ ತಾಲೂಕುಗಳಾದ ನರಗುಂದ ಮತ್ತು ರೋಣಗಳಲ್ಲಿ ಅಧಿಕಾರಶಾಹಿಯ ‘ಕಂತಿನ ಲೆಕ್ಕಕ್ಕೆ’ ಹೈರಾಣಾದವರು ಡಿಸಿಯವರಿಗೆ ದೂರು ತಲುಪಿಸಿದರೂ ಪ್ರಯೋಜನವಾಗಿಲ್ಲ.

ಅಂತೂ ಇಂತೂ ಪರಿಹಾರ ಬಂತು!
ಆರಂಭದಲ್ಲಿ ಈ ಸರ್ಕಾರದಿಂದ ನೆರೆ ಪರಿಹಾರ ಸಿಗುವುದೋ ಇಲ್ಲವೋ ಎಂಬ ಅನುಮಾನ, ಆತಂಕಗಳಿದ್ದವು. ಆದರೂ ಅಂತೂ ಇಂತೂ ಪರಿಹಾರ ಬಂತು. ಆದರೀಗ ಮುಳ್ಳಾಗಿರುವುದು ಕಂತು!

ಕೊಣ್ಣೂರು, ವಾಸನ, ಬೂದಿಹಾಳ, ಮೆಣಸಗಿ.. ಹೀಗೆ ನೆರೆಪೀಡಿತ ಯಾವ ಊರಿಗೆ ಹೋದರೂ ಜನರ ಗೋಳು ನಿಂತೇ ಇಲ್ಲ. ಮನೆ ನಿರ್ಮಾಣಕ್ಕೆ ಹಣ ನೀಡುವಾಗಲೇ ಗ್ರೇಡುಗಳ ಹೆಸರಿನಲ್ಲಿ ನಿಯಮಗಳ ಗೋಡೆಗಳು ಎದ್ದವು. ಮನೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ವಿಂಗಡಿಸಲು ಎ, ಬಿ, ಮತ್ತು ಸಿ ಎಂದು ಮೂರು ಗ್ರೇಡ್‌ಗಳನ್ನು ಮಾಡಲಾಯಿತು. ಸಂಪೂರ್ಣ ಮನೆ ನೆಲಸಮವಾಗಿದ್ದರೆ ‘ಎ’ ಗ್ರೇಡ್‌ನಲ್ಲಿ ಅದಕ್ಕೆ ಪೂರ್ಣ ಪರಿಹಾರ, ಶೇ.50ರಷ್ಟು ಹಾನಿಯಾಗಿದ್ದರೆ ಅದಕ್ಕೆ ‘ಬಿ’ ಗ್ರೇಡ್‌ನಲ್ಲಿ ಶೇ.50 ಪರಿಹಾರ ಮತ್ತು ಶೇ.25ರಿಂದ 30ರಷ್ಟು ಹಾನಿಯಾಗಿದ್ದರೆ ‘ಸಿ’ ಗ್ರೇಡ್‌ನಲ್ಲಿ 25-30 ಸಾವಿರ ರೂ ನೀಡುವ ನಿಯಮ ಮಾಡಲಾಯಿತು.

ಮೊದಲನೆಯ ಕಂತೇನೋ ಬಂತು. ಆದರೆ ಇನ್ನು ಎಷ್ಟೋ ಜನರಿಗೆ ಎರಡನೇ ಕಂತು ಬರದೇ ಮನೆಗಳೆಲ್ಲ ಅರ್ಧಂಬರ್ಧ ರಿಪೇರಿಯಾಗಿ ನಿಂತಿವೆ. ಜಿಲ್ಲಾಧಿಕಾರಿ ಖಾತೆಯಲ್ಲಿ ಇನ್ನೂ 20 ಕೋಟಿ ರೂ ಉಳಿದಿದೆ. ಮೊದಲನೇ ಕಂತಿನ ಹಣದಲ್ಲಿ ಇಂತಿಷ್ಟು ಕಾಮಗಾರಿಯಾಗಿದ್ದರೆ ಮಾತ್ರ ಎರಡನೇ ಕಂತು ಎಂದು ಕ್ರೂರತನ ತೋರಲಾಗುತ್ತಿದೆ.

ಇವರು ನಿಯಮ ಮಾಡಿದ್ದು ಆರು ತಿಂಗಳ ಹಿಂದೆ. ಪ್ರತಿ ತಿಂಗಳೂ ಸಿಮೆಂಟ್, ಕಲ್ಲು, ಕಬ್ಬಿಣ, ನಿರ್ಮಾಣದ ಕೂಲಿ ಏರುತ್ತಲೇ ಇರುವಾಗ ಇವರು ಹೇಳಿದಷ್ಟು ಎತ್ತರಕ್ಕೆ ಮನೆ ತಂದು ನಿಲ್ಲಿಸಿದರಷ್ಟೇ ಇನ್ನೊಂದು ಕಂತು ಎನ್ನುವುದು ಅವೈಜ್ಞಾನಿಕ ಮತ್ತು ಹೊಣೆಗೇಡಿತನ.

ಕೊಣ್ಣೂರು ಗ್ರಾಮದಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿ ಗ್ರೇಡ್ ಫಲಾನುಭವಿಗಳಿಗೆ ಒಂದನೆಯ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಎರಡನೇ ಕಂತು ಮರೀಚಿಕೆಯಾಗಿದೆ. ಹೀಗಾಗಿ ಫಲಾನುಭವಿಗಳ ಮನೆಗಳು ಅಪೂರ್ಣವಾಗಿವೆ. ಮನೆಗಳನ್ನು ಪೂರ್ಣ ಮಾಡಬೇಕೆಂದರೆ, ಲೋಕದಲ್ಲಿಲ್ಲದ ನಿಯಮ ತೋರಿಸುವ ಅಧಿಕಾರಿಗಳು ನಿರಾಶೆ ಮೂಡಿಸುತ್ತಿದ್ದಾರೆ. ಇಂತಹ ಆಪತ್ತಿನ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಬೇಕಾದ ಜನಪ್ರತಿನಿಧಿಗಳು ಹತ್ತಿರ ಸುಳಿಯುತ್ತಿಲ್ಲ.

ನೆರೆಪ್ರವಾಹಕ್ಕೂ ಮುನ್ನ ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದ ತಮ್ಮದೇ ತೆರಿಗೆ ಹಣಕ್ಕೆ ‘ಕಂತು’ ಎಂಬ ಹಾಳೆ ಸುತ್ತಿ ಭಿಕ್ಷೆಯಂತೆ ನೀಡುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ.

ಮಾರ್ಚ್‌ನಲ್ಲೇನಾದರೂ ಅಕಾಲಿಕ ಮಳೆ ಸುರಿದರೆ ಈಗ ಮತ್ತೆ ಮನೆ ತುಂಬ ನೀರು ನಿಲ್ಲಲಿದೆ. ಇದ್ಯಾವುದರ ಪರಿವೆಯೂ ಇಲ್ಲದ ಜಿಲ್ಲಾಡಳಿತ ಫ್ಲಿಂಥು, ಜಿಪಿಎಸ್ಸು ಅಂತೆಲ್ಲ ಮಾತಾಡುತ್ತ ಕುಳಿತಿದೆ.

ಸಚಿವ ಸಿ.ಸಿ ಪಾಟೀಲ್‌

ರೋಣ ಮತ್ತು ನರಗುಂದದ ಎಲ್ಲ ಹಂತಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜನರ ಪರವಾಗಿ ಧ್ವನಿ ಎತ್ತುವುದು ಈಗ ಅನಿವಾರ್ಯ. ಅವರನ್ನು ಆರಿಸಿದ್ದು ಇನ್ನೇತಕ್ಕೆ?


ಸರ್ವೆ ನಂ. 703 ಮತ್ತು 705ರಲ್ಲಿ 15*20 ವಿಸ್ತೀರ್ಣದ ನನ್ನ ಎರಡು ಮನೆ ಇದ್ದವು. 703ರ ಮನೆ ಪೂರ್ತಿ ಬಿದ್ದಿದ್ದರೆ, 705ರ ಮನೆ ಭಾಗಶ: ಬಿದ್ದಿತ್ತು. ಸರ್ವೆ ಮಾಡಲು ಬಂದವರಿಗೆ 705ರ ಮನೆ ಬೇಡ, ಪೂರ್ತಿ ಬಿದ್ದ 703ರ ಮನೆ ಪರಿಗಣಿಸಿ ಎಂದೆ. ಎರಡನ್ನೂ ಸರ್ವೇ ಮಾಡಿಕೊಂಡು ಹೋಗಿ, ಭಾಗಶ: ಬಿದ್ದ ಮನೆ ಆಯ್ಕೆ ಮಾಡಿದ್ದಾರೆ. ಈ ಕುರಿತು ಡಿಸಿವರೆಗೆ ದೂರು ಕೊಟ್ಟರೂ ಸರಿಪಡಿಸಿಲ್ಲ.
-ವೀರಪ್ಪ ದ್ಯಾವಣ್ಣವರ, ಕೊಣ್ಣೂರು


ನನ್ನ ಹೊಲ, ಮನೆ ಎರಡೂ ಹಾನಿಯಾಗಿವೆ. ಭಾಗಶ: ಹಾನಿ ಎಂದು ಮೊದಲ ಕಂತು 25 ಸಾವಿರ ರೂ. ನೀಡಿದರು. 6 ತಿಂಗಳಾದರೂ 2ನೇ ಕಂತು ನೀಡುತ್ತಿಲ್ಲ. ತಹಸೀಲ್ದಾರ್, ಡಿಸಿ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ.
– ಕೃಷ್ಣಪ್ಪ, ವಾಸನ

ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನೆರೆ ಪರಿಹಾರಕ್ಕೆ 57 ಕೋಟಿ ರೂ. ಖರ್ಚು ಮಾಡಿದ್ದೇವೆ. ಇನ್ನೂ 20 ಕೋಟಿ ರೂ ಇದೆ. ಆದರೆ ಮನೆ ನಿರ್ಮಾಣ ಅಥವಾ ರಿಪೇರಿಗೆ ಮೊದಲ ಕಂತು ಪಡೆದ ಬಹುತೇಕರು ಅದನ್ನು ಪೂರ್ಣಗೊಳಿಸಿಲ್ಲ. ಫ್ಲಿಂಥ್‌ವರೆಗೂ ಬಂದರೆ 2ನೇ ಕಂತು ಬಿಡುಗಡೆ ಮಾಡುತ್ತೇವೆ, ಅವರೇ ಅವಸರ ಮಾಡುತ್ತಿಲ್ಲ. 10 ಕೋಟಿ ರೂ ಬೆಳೆ ಪರಿಹಾರ ನೇರವಾಗಿ ರೈತರ ಖಾತೆಗೆ ಹೋಗಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಲವರಿಗೆ ತಲುಪಿಲ್ಲ. ಸರಿಪಡಿಸುತ್ತೇವೆ.
-ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...