HomeಮುಖಪುಟCAAಕುರಿತು ಚರ್ಚೆ: ಅಮಿತ್‌ ಜಿ 5 ದಿನಗಳು ಮುಗಿದಿವೆ ಮತ್ತು ಕಣ್ಣನ್‌ ಗೋಪಿನಾಥ್‌ ಕಾಯುತ್ತಲೇ ಇದ್ದಾರೆ..

CAAಕುರಿತು ಚರ್ಚೆ: ಅಮಿತ್‌ ಜಿ 5 ದಿನಗಳು ಮುಗಿದಿವೆ ಮತ್ತು ಕಣ್ಣನ್‌ ಗೋಪಿನಾಥ್‌ ಕಾಯುತ್ತಲೇ ಇದ್ದಾರೆ..

ಸಿಎಎ ಬಗ್ಗೆ ‘ತಪ್ಪು ಕಲ್ಪನೆಗಳನ್ನು’ ಹೋಗಲಾಡಿಸಲು ಕೇಂದ್ರ ಗೃಹ ಸಚಿವರು ಯಾರೊಂದಿಗೆ ಬೇಕಾದರೂ ಚರ್ಚೆಗೆ ಸಿದ್ದ ಎಂದು ಭರವಸೆ ನೀಡಿದ್ದರು.

- Advertisement -
- Advertisement -

CAA, NRC, NPR ಕುರಿತು ಗೃಹ ಸಚಿವ ಅಮಿತ್‌ ಶಾರವರು ಚರ್ಚೆಗೆ ಆಹ್ವಾನಿಸಿದ್ದರ ಕುರಿತು ಪತ್ರ ಬರೆದಿದ್ದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌, ಭೇಟಿಗೆ ಸಮಯ ನೀಡಬೇಕೆಂದು ಆಗ್ರಹಿಸಿದ್ದರು.

ಫೆಬ್ರವರಿ 13, ಗುರುವಾರ: ಸಿಎಎ ಯಿಂದ ದೇಶಕ್ಕೆ ಯಾವುದೇ ಅಪಾಯಗಳಿಲ್ಲ. ಈ ಕುರಿತು ಯಾರಾದರೂ ನನ್ನೊಡನೆ ಬಹಿರಂಗ ಚರ್ಚೆಗೆ ಬರಬಹುದು. ನಿಮ್ಮ ತಪ್ಪು ಕಲ್ಪನೆಗಳನ್ನು ತೆಗೆದುಹಾಕುತ್ತೇವೆ. ಮೂರು ದಿನ ಸಮಯ ಕೊಡುತ್ತೇವೆ ನಮ್ಮ ಕಚೇರಿಯಲ್ಲಿಯೇ ಚರ್ಚಿಸಬಹುದು ಎಂದು ಗೃಹ ಸಚಿವ ಅಮಿತ್‌ ಶಾ ಈ ಹಿಂದೆ ಘೋಷಿಸಿದ್ದರು.

ಫೆಬ್ರವರಿ 14, ಶುಕ್ರವಾರ: ಈ ಕುರಿತು ಅವರಿಗೆ ಇಮೇಲ್‌ ಮೂಲಕ ಪತ್ರ ಬರೆದಿರುವ ಗೋಪಿನಾಥನ್‌, ಚರ್ಚೆಗೆ ಬರುತ್ತೇನೆ, ಸಮಯ ತಿಳಿಸಿ ಎಂದು ಮನವಿ ಮಾಡಿದ್ದರು.

ಫೆಬ್ರವರಿ 17, ಸೋಮವಾರ: “ಮೂರು ದಿನಗಳ ಗಡುವು ಮುಗಿದಿದೆ ಆದರೆ ಸಚಿವರು ನನ್ನ ಮೇಲ್‌ಗೆ ಇನ್ನೂ ಪ್ರತಿಕ್ರಿಯಿಸಿಲ್ಲ” ಎಂದು ಗೋಪಿನಾಥನ್ ತಿಳಿಸಿದ್ದಾರೆ.

ಸಿಎಎ ಬಗ್ಗೆ ಚರ್ಚಿಸಲು ‘ಮೂರು ದಿನಗಳಲ್ಲಿ’ ಯಾರಿಗಾದರೂ ಸಮಯ ನೀಡುತ್ತೇನೆ ಎಂದು ಅಮಿತ್ ಶಾ ಹೇಳಿದ್ದರು. ಈಗ ಐದು ದಿನಗಳು ಕಳೆದಿವೆ ಮತ್ತು ಅಮಿತ್ ಶಾ ಇನ್ನೂ ತಮ್ಮ ಭರವಸೆಯನ್ನು ಉಳಿಸಿಕೊಂಡಿಲ್ಲ ಎಂದು ಗೋಪಿನಾಥನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಷಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಸಿಗದ ನಂತರ, ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿ “ಮೂರು ದಿನಗಳು ಮುಗಿದಿವೆ. ಯಾವುದೇ ಪ್ರತಿಕ್ರಿಯೆ ಇಲ್ಲ. ಅಮಿತ್‌ಶಾ ಅವರ ಮಾತುಗಳಿಗೆ ಯಾವುದೇ ಬೆಲೆ ನೀಡಬಾರದು. ಅವರನ್ನು ಬ್ಲಫ್ ಎಂದು ಕರೆಯಬೇಕಾಗುತ್ತದೆ. ಒಂದು ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿರುವಾಗ ಟಿವಿಯಲ್ಲಿ ಕೂತು ಬಾಯಿಗೆ ಬಂದಹಾಗೆ ಮಾತನಾಡಬಾರದು. ನಾನು ಮತ್ತೆ ನಿಮಗೆ ನೆನಪಿಸಿ ತೊಂದರೆ ಕೊಡುವುದಿಲ್ಲ ಚಿಂತಿಸಬೇಡಿ. ಆದರೆ ದಯವಿಟ್ಟು ಇದನ್ನು ಪ್ರಜಾಪ್ರಭುತ್ವದ ಪಾಠ ಎಂದು ತೆಗೆದುಕೊಳ್ಳಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...