HomeಮುಖಪುಟCAAಕುರಿತು ಚರ್ಚೆ: ಅಮಿತ್‌ ಜಿ 5 ದಿನಗಳು ಮುಗಿದಿವೆ ಮತ್ತು ಕಣ್ಣನ್‌ ಗೋಪಿನಾಥ್‌ ಕಾಯುತ್ತಲೇ ಇದ್ದಾರೆ..

CAAಕುರಿತು ಚರ್ಚೆ: ಅಮಿತ್‌ ಜಿ 5 ದಿನಗಳು ಮುಗಿದಿವೆ ಮತ್ತು ಕಣ್ಣನ್‌ ಗೋಪಿನಾಥ್‌ ಕಾಯುತ್ತಲೇ ಇದ್ದಾರೆ..

ಸಿಎಎ ಬಗ್ಗೆ ‘ತಪ್ಪು ಕಲ್ಪನೆಗಳನ್ನು’ ಹೋಗಲಾಡಿಸಲು ಕೇಂದ್ರ ಗೃಹ ಸಚಿವರು ಯಾರೊಂದಿಗೆ ಬೇಕಾದರೂ ಚರ್ಚೆಗೆ ಸಿದ್ದ ಎಂದು ಭರವಸೆ ನೀಡಿದ್ದರು.

- Advertisement -
- Advertisement -

CAA, NRC, NPR ಕುರಿತು ಗೃಹ ಸಚಿವ ಅಮಿತ್‌ ಶಾರವರು ಚರ್ಚೆಗೆ ಆಹ್ವಾನಿಸಿದ್ದರ ಕುರಿತು ಪತ್ರ ಬರೆದಿದ್ದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌, ಭೇಟಿಗೆ ಸಮಯ ನೀಡಬೇಕೆಂದು ಆಗ್ರಹಿಸಿದ್ದರು.

ಫೆಬ್ರವರಿ 13, ಗುರುವಾರ: ಸಿಎಎ ಯಿಂದ ದೇಶಕ್ಕೆ ಯಾವುದೇ ಅಪಾಯಗಳಿಲ್ಲ. ಈ ಕುರಿತು ಯಾರಾದರೂ ನನ್ನೊಡನೆ ಬಹಿರಂಗ ಚರ್ಚೆಗೆ ಬರಬಹುದು. ನಿಮ್ಮ ತಪ್ಪು ಕಲ್ಪನೆಗಳನ್ನು ತೆಗೆದುಹಾಕುತ್ತೇವೆ. ಮೂರು ದಿನ ಸಮಯ ಕೊಡುತ್ತೇವೆ ನಮ್ಮ ಕಚೇರಿಯಲ್ಲಿಯೇ ಚರ್ಚಿಸಬಹುದು ಎಂದು ಗೃಹ ಸಚಿವ ಅಮಿತ್‌ ಶಾ ಈ ಹಿಂದೆ ಘೋಷಿಸಿದ್ದರು.

ಫೆಬ್ರವರಿ 14, ಶುಕ್ರವಾರ: ಈ ಕುರಿತು ಅವರಿಗೆ ಇಮೇಲ್‌ ಮೂಲಕ ಪತ್ರ ಬರೆದಿರುವ ಗೋಪಿನಾಥನ್‌, ಚರ್ಚೆಗೆ ಬರುತ್ತೇನೆ, ಸಮಯ ತಿಳಿಸಿ ಎಂದು ಮನವಿ ಮಾಡಿದ್ದರು.

ಫೆಬ್ರವರಿ 17, ಸೋಮವಾರ: “ಮೂರು ದಿನಗಳ ಗಡುವು ಮುಗಿದಿದೆ ಆದರೆ ಸಚಿವರು ನನ್ನ ಮೇಲ್‌ಗೆ ಇನ್ನೂ ಪ್ರತಿಕ್ರಿಯಿಸಿಲ್ಲ” ಎಂದು ಗೋಪಿನಾಥನ್ ತಿಳಿಸಿದ್ದಾರೆ.

ಸಿಎಎ ಬಗ್ಗೆ ಚರ್ಚಿಸಲು ‘ಮೂರು ದಿನಗಳಲ್ಲಿ’ ಯಾರಿಗಾದರೂ ಸಮಯ ನೀಡುತ್ತೇನೆ ಎಂದು ಅಮಿತ್ ಶಾ ಹೇಳಿದ್ದರು. ಈಗ ಐದು ದಿನಗಳು ಕಳೆದಿವೆ ಮತ್ತು ಅಮಿತ್ ಶಾ ಇನ್ನೂ ತಮ್ಮ ಭರವಸೆಯನ್ನು ಉಳಿಸಿಕೊಂಡಿಲ್ಲ ಎಂದು ಗೋಪಿನಾಥನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಷಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಸಿಗದ ನಂತರ, ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿ “ಮೂರು ದಿನಗಳು ಮುಗಿದಿವೆ. ಯಾವುದೇ ಪ್ರತಿಕ್ರಿಯೆ ಇಲ್ಲ. ಅಮಿತ್‌ಶಾ ಅವರ ಮಾತುಗಳಿಗೆ ಯಾವುದೇ ಬೆಲೆ ನೀಡಬಾರದು. ಅವರನ್ನು ಬ್ಲಫ್ ಎಂದು ಕರೆಯಬೇಕಾಗುತ್ತದೆ. ಒಂದು ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿರುವಾಗ ಟಿವಿಯಲ್ಲಿ ಕೂತು ಬಾಯಿಗೆ ಬಂದಹಾಗೆ ಮಾತನಾಡಬಾರದು. ನಾನು ಮತ್ತೆ ನಿಮಗೆ ನೆನಪಿಸಿ ತೊಂದರೆ ಕೊಡುವುದಿಲ್ಲ ಚಿಂತಿಸಬೇಡಿ. ಆದರೆ ದಯವಿಟ್ಟು ಇದನ್ನು ಪ್ರಜಾಪ್ರಭುತ್ವದ ಪಾಠ ಎಂದು ತೆಗೆದುಕೊಳ್ಳಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...