Homeಎಕಾನಮಿಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ.

- Advertisement -
- Advertisement -

ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ದೇಶ ಭಾರತ ಹಲವು ರಾಜ್ಯಗಳು ಸೇರಿ ಆಗಿರುವಂತದು. ಹಾಗೆಯೇ ನಮ್ಮ ಕರ್ನಾಟಕ ರಾಜ್ಯವೂ ಭಾರತದ ಅವಿಭಾಜ್ಯ ಅಂಗ.

ಇಡೀ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊತ್ತ ಭಾರತದ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ಅವುಗಳ ಅಗತ್ಯಕ್ಕನುಗುಣವಾಗಿ ಆರ್ಥಿಕ ಬೆಂಬಲವನ್ನು ಕೊಡುವ ಕರ್ತವ್ಯ ನಿಭಾಯಿಸಬೇಕಾಗಿರುತ್ತದೆ.

ಕೇಂದ್ರದ ಬೆಂಬಲವನ್ನು ಸದುಪಯೋಗಿಸಿಕೊಳ್ಳುವ ರಾಜ್ಯಗಳು ಸಮಗ್ರ ಅಭಿವೃದ್ಧಿ ಹೊಂದುತ್ತಾ ಅದರ ಫಲವಾಗಿ ತಮ್ಮ ರಾಜ್ಯಗಳಲ್ಲಿ ಹೆಚ್ಚು ಹೆಚ್ಚು ತೆರಿಗೆ ಸಂಗ್ರಹಿಸಲು ಶಕ್ತವಾಗುತ್ತವೆ. ಹೊಸ ಜಿಎಸ್ಟಿ ಪದ್ಧತಿ ಜಾರಿಗೆ ಬಂದಮೇಲೆ ಅಬಕಾರಿ ಸುಂಕ, ಪೆಟ್ರೋಲ್ ಸುಂಕ ಮತ್ತಿತರ ಕೆಲ ತೆರಿಗೆ ಹೊರತುಪಡಿಸಿ ಬಹುತೇಕ ಉಳಿದೆಲ್ಲಾ ವಲಯದ ತೆರಿಗೆಯನ್ನೂ ರಾಜ್ಯಗಳು ಕೇಂದ್ರಕ್ಕೆ ತಲುಪಿಸಿ ಅಲ್ಲಿಂದ ತಮ್ಮ ಪಾಲಿನ ಜಿಎಸ್ಟಿ ತೆರಿಗೆ ಪಾಲನ್ನು ಪಡೆದು ಅದನ್ನು ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತವೆ.

ಹೀಗೆ ತಮ್ಮ ಪ್ರಯತ್ನ ಮತ್ತು ಕೇಂದ್ರದ ಆರ್ಥಿಕ ಬೆಂಬಲ ಇವೆರಡನ್ನೂ ಬಳಸಿ ಅಭಿವೃದ್ಧಿಯ ದಾರಿಯಲ್ಲಿ ಸರಿಯಾಗಿ ಮುನ್ನಡೆಯುತ್ತಿರುವಂತ ರಾಜ್ಯಗಳು ದೇಶದ ಒಟ್ಟಾರೆ ಅಭಿವೃದ್ಧಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿರುತ್ತವೆ. ಅಂತಹ ರಾಜ್ಯಗಳನ್ನು ಗುರುತಿಸಿ ಅವುಗಳಿಗೆ ಮತ್ತಷ್ಟು ಉತ್ತೇಜನ ನೀಡುವುದು ಕೇಂದ್ರದ ಆದ್ಯ ಕರ್ತವ್ಯವಾಗಿರಬೇಕಾಗಿರುತ್ತದೆ.

ಆದರೆ, ನಮ್ಮ ಕರ್ನಾಟಕದ ವಿಷಯದಲ್ಲಿ ಆಗುತ್ತಿರುವುದು ಇದಕ್ಕೆ ತದ್ವಿರುದ್ಧವಾಗಿದೆ. ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ. ದೇಶದ ಒಟ್ಟು ನೇರ ತೆರಿಗೆಯಲ್ಲಿ ಶೇ. 61ರಷ್ಟು ಈ ಮೂರು ರಾಜ್ಯಗಳಿಂದಲೇ ಬರುತ್ತಿದೆ ಮತ್ತು ದೇಶದ ಒಟ್ಟು ತೆರಿಗೆಯಲ್ಲಿ ನೇರ ತೆರಿಗೆಯ ಪಾಲು ಶೇ. 50ಕ್ಕಿಂತ ಹೆಚ್ಚಿದೆ.

ಇದು ಕರ್ನಾಟಕದ ಅಭಿವೃದ್ಧಿಯ ವೇಗವನ್ನು ಒಂದು ಮಟ್ಟಿಗೆ ತೋರುತ್ತದೆ. ಆರ್ಥಿಕತೆಯ ಜೊತೆಗೆ ಕರ್ನಾಟಕವು ಮಾನವ ಅಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಸಾಧಿಸಿದೆ. 1971 ರಿಂದ 2011 ರ ನಡುವೆ ಜನಸಂಖ್ಯೆ ಸ್ಫೋಟವನ್ನು ಕರ್ನಾಟಕ ಗಮನಾರ್ಹವಾಗಿ ತಡೆದಿದ್ದು 2011 ರ ವೇಳೆಗೆ ಒಂದು ಆರೋಗ್ಯಕರ ಜನಸಂಖ್ಯಾ ಬೆಳವಣಿಗೆಯ ಹಂತವನ್ನು ತಲುಪಿದೆ.

ಆದರೆ, ಕರ್ನಾಟಕದ ಈ ಸಮಗ್ರ ಅಭಿವೃದ್ಧಿಯೇ ಈ ರಾಜ್ಯಕ್ಕೆ ಈಗ ಮುಳುವಾಗಿ ಪರಿಣಮಿಸಿದೆ. ನಮ್ಮ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಕೊಡಬೇಕಿದ್ದ ಕೇಂದ್ರವು ಅದರ ಬದಲಿಗೆ ಕೇಂದ್ರದ ಅನುದಾನದಲ್ಲಿ ಕಡಿತ ಮಾಡುವ ಮೂಲಕ ಶಿಕ್ಷೆ ವಿಧಿಸಿದೆ. ಹದಿನೈದನೇ ಹಣಕಾಸು ಆಯೋಗವು ರಾಜ್ಯಗಳಿಗೆ ಕೇಂದ್ರದ ಅನುದಾನ ನಿಗದಿ ಮಾಡಲು 2011 ರ ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದೆ. 2011 ರ ಜನಗಣತಿಯ ಪ್ರಕಾರ ಹೆಚ್ಚಿನ ಜನಸಂಖ್ಯೆ ಇರುವ ರಾಜ್ಯಕ್ಕೆ ಹೆಚ್ಚಿನ ಅನುದಾನ. ಅಂದರೆ, ಸರಿಯಾದ ಅಭಿವೃದ್ಧಿ ಮಾರ್ಗದಲ್ಲಿ ಸಾಗಿ ಜನಸಂಖ್ಯೆಯನ್ನು ನಿಯಂತ್ರಿಸಿದ ಕರ್ನಾಟಕದಂತ ರಾಜ್ಯಕ್ಕೆ ಮತ್ತೂ ಹೆಚ್ಚಿನ ಪ್ರೋತ್ಸಾಹ ಕೊಡುವ ಬದಲು ಶಿಕ್ಷೆ ವಿಧಿಸಿದಂತಾಗಿದೆ.

ಈ ಹೊಸ ಮಾನದಂಡವನ್ನು ಅನುಸರಿಸಿದ ಕೇಂದ್ರ ಸರ್ಕಾರ ಈ ಸಾರಿಯ 2020-21 ರ ಬಜೆಟ್ ನಲ್ಲಿ ಹೋದ ವರ್ಷಕ್ಕಿಂತ 5,495 ಕೋಟಿ ರೂಪಾಯಿಗಳಷ್ಟು ಕಡಿಮೆ ಅನುದಾನವನ್ನು ಕರ್ನಾಟಕಕ್ಕೆ ನಿಗದಿಪಡಿಸಿದೆ. 2019-20 ರಲ್ಲಿ ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು 36,675 ಕೋಟಿ ರೂಪಾಯಿಗಳಾಗಿದ್ದರೆ ಈ ವರ್ಷ ಅದನ್ನು 31,180 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ.

ಇದರಿಂದಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮನಗಂಡ ಹಣಕಾಸು ಆಯೋಗವೇ ಕೊರತೆ ಬೀಳುವ 5,495 ಕೋಟಿಗಳನ್ನು ವಿಶೇಷ ಅನುದಾನದ ಅಡಿಯಲ್ಲಿ ಕೊಡಬೇಕೆಂದು ಹೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೊಡುವ ಮನಸ್ಸು ಮಾಡುತ್ತಿಲ್ಲ.

ಇನ್ನು ಈ ಹೊಸ ಫಾರ್ಮುಲಾದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಕನಿಷ್ಟ ಮೂವತ್ತು ಸಾವಿರ ಕೋಟಿಗಳಷ್ಟು ಅನುದಾನದ ಕೊರತೆ ಬೀಳಲಿದ್ದು ರಾಜ್ಯದ ಅಭಿವೃದ್ಧಿಗೆ ಭಾರೀ ತೊಂದರೆಯಾಗಲಿದೆ.

ಇದರ ಜೊತೆಗೆ, ಈ 2019-20 ರ ಸಾಲಿನಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿದ್ದ ಜಿಎಸ್ಟಿಯಲ್ಲಿ ಅಂದಾಜು ಹತ್ತುಸಾವಿರ ಕೋಟಿ ರೂಪಾಯಿಗಳಷ್ಟನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿಯೇ ಇದೆ (ಮೋಟಾರು ವಾಹನ ಮತ್ತು ಸ್ಟ್ಯಾಂಪ್ ಸುಂಕ ಹೊರತುಪಡಿಸಿ). ಆದರೂ ಕೇಂದ್ರ ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನು ಯಾವಾಗ ಕೊಡಲಾಗುವುದೆಂದು ಹೇಳುತ್ತಿಲ್ಲ.

ಇದರಿಂದಾಗಿ, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಭಾರೀ ಹಣದ ಕೊರತೆ ಬೀಳಲಿದೆ. ರಸ್ತೆಗಳ ಅಗಲೀಕರಣ, ಕುಡಿಯುವ ನೀರಿನ ಯೋಜನೆಗಳು, ತ್ಯಾಜ್ಯ ನಿರ್ವಹಣೆ, ಶಿಕ್ಷಣ ಮತ್ತು ಆರೋಗ್ಯ ಉನ್ನತೀಕರಣದಂತಹ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಬೀಳಲಿದೆ. ಅಭಿವೃದ್ಧಿ ಯೋಜನೆಗಳಿರಲಿ, ಈಗ ಸರ್ಕಾರ ನಡೆಸುತ್ತಿರುವ ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೇ ಹಣಕಾಸಿನ ಕೊರತೆ ಉಂಟಾಗುತ್ತದೆ.

ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ, ಕರ್ನಾಟಕದಲ್ಲಿ ಪ್ರವಾಹದಿಂದ ಆದ ನಷ್ಟ ಅಂದಾಜು 38,000 ಕೋಟಿ ರೂಪಾಯಿಗಳು. ಆದರೆ ಕೇಂದ್ರ ಸರ್ಕಾರ ಅದರಲ್ಲಿನ ಶೇಕಡಾ ಹತ್ತರಷ್ಟನ್ನೂ ಬಿಡುಗಡೆ ಮಾಡಲಿಲ್ಲ. ಅದರಿಂದಾಗಿ ಇಂದಿಗೂ ಪ್ರವಾಹ ಸಂತ್ರಸ್ತ ಮಕ್ಕಳು ಹಾಳುಬಿದ್ದ ಶಾಲೆಗಳಲ್ಲಿಯೇ ಕಲಿಯುವಂತ ಪರಿಸ್ಥಿತಿ ಇದೆ.

ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಅತ್ಯಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಅತ್ಯವಶ್ಯ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಸಾಲ ಮಾಡಬೇಕಾಗುತ್ತದೆ.

ಆದರೆ ಆರ್ಥಿಕ ನಿಯಮಗಳ ಪ್ರಕಾರ (FRBM – Fiscal responsibility and budget management) ರಾಜ್ಯ ಸರ್ಕಾರ ತನ್ನ ರಾಜ್ಯದ ಒಟ್ಟು ಜಿಡಿಪಿಯ ಗರಿಷ್ಟ (ಕರ್ನಾಟಕದ ಜಿಡಿಪಿ ಒಟ್ಟು 18 ಲಕ್ಷ ಕೋಟಿ ರೂಪಾಯಿಗಳು) ಶೇ.3 ರಷ್ಟು ಮಾತ್ರ ಸಾಲ ಮಾಡಬಹುದು.

ರಾಜ್ಯದ ಸಾಲ ಜಿಡಿಪಿಯ ಶೇ. 3 ರ ಮಿತಿಯೊಳಗಿದ್ದರೆ ಅದನ್ನು ಆರೋಗ್ಯಕರ ಆರ್ಥಿಕತೆ ಎಂದು ಪರಿಗಣಿಸಲಾಗುತ್ತದೆ. ಈಗ ಕರ್ನಾಟಕದ ಸಾಲ 42,000 ಕೋಟಿಗಳಷ್ಟಿದ್ದು ಗರಿಷ್ಠ 54,000 ಕೋಟಿಯ ತನಕ ಸಾಲ ಮಾಡಬಹುದಾಗಿರುತ್ತದೆ. ಅಂದರೆ ಈಗ ರಾಜ್ಯ ಸರ್ಕಾರ ಇನ್ನೂ 12,000 ಕೋಟಿಗಳಷ್ಟು ಸಾಲಮಾಡಬಹುದು. ಆದರೆ, ಅಷ್ಟು ದುಡ್ಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಸಾಲದಿರುವುದರಿಂದ ಸರ್ಕಾರ FRBM ಮಿತಿಯನ್ನು ಮೀರಿ ಸಾಲ ಮಾಡಬೇಕಾಗುತ್ತದೆ. ಇದು ರಾಜ್ಯದ ಆರ್ಥಿಕತೆಯನ್ನು ಮತ್ತೂ ದುರ್ಬಲಗೊಳಿಸಲಿದೆ.

ಒಟ್ಟಾರೆಯಾಗಿ, ಮೊದಲಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ಕೇಂದ್ರ ಸರ್ಕಾರದ ಅವಕೃಪೆಯಿಂದಾಗಿ ಅನ್ಯಾಯವಾಗಿ ಆರ್ಥಿಕ ಕ್ಷೋಭೆಗೆ ಸಿಲುಕಿ ಅಭಿವೃದ್ಧಿ ಹೊಂದಲು ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ. ಒಂದು ಕಡೆ ತಾನು ವೇಗವಾಗಿ ಸಮಗ್ರ ಅಭಿವೃದ್ಧಿ ಹೊಂದುತ್ತಾ ಮತ್ತೊಂದು ಕಡೆ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಕೇಂದ್ರದ ತಪ್ಪು ನೀತಿಯಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಯಾವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆಯೋ ಆ ಸರ್ಕಾರಗಳು ತಮ್ಮ ಪಾಲಿನ ಜಿಎಸ್ಟಿ ಹಣಕ್ಕೋಸ್ಕರ ಕೇಂದ್ರದ ಮೇಲೆ ಸುಪ್ರೀಂಕೋರ್ಟ್ ಮೊರೆಹೋಗುವ ಧಮಕಿ ಹಾಕಿವೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯ ಸರ್ಕಾರಗಳು ತಮ್ಮದೇ ಪಕ್ಷದ ಕೇಂದ್ರ ಸರ್ಕಾರವನ್ನು ತಮ್ಮ ನ್ಯಾಯಯುತ ಪಾಲನ್ನು ಕನಿಷ್ಟ ಗಟ್ಟಿ ದನಿಯಲ್ಲಿಯೂ ಕೇಳಲಾಗದೆ ಉಳಿದಿವೆ (ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಆಗ ಕಾಂಗ್ರೆಸ್ ರಾಜ್ಯ ಸರ್ಕಾರಗಳ ಸ್ಥಿತಿಯೂ ಇದೇ ಆಗಿರುತ್ತಿತ್ತು). ನಮ್ಮ ಕರ್ನಾಟಕದಿಂದ ಇಪ್ಪತ್ತೈದು ಬಿಜೆಪಿ ಸಂಸದರಿದ್ದೂ ಕೂಡ ತನ್ನ ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ರಾಜ್ಯ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ನಮ್ಮ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಪಾಲನ್ನು ಗಟ್ಟಿ ದನಿಯಲ್ಲಿ ಕೇಳಿ ದಕ್ಕಿಸಿಕೊಳ್ಳಬೇಕಾದರೆ ನಮ್ಮ ರಾಜ್ಯದ್ದೇ ಒಂದು ಸ್ವಾಭಿಮಾನಿ, ಪ್ರಾಮಾಣಿಕ, ಪ್ರಬಲ ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...