Homeಎಕಾನಮಿಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ.

- Advertisement -
- Advertisement -

ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ದೇಶ ಭಾರತ ಹಲವು ರಾಜ್ಯಗಳು ಸೇರಿ ಆಗಿರುವಂತದು. ಹಾಗೆಯೇ ನಮ್ಮ ಕರ್ನಾಟಕ ರಾಜ್ಯವೂ ಭಾರತದ ಅವಿಭಾಜ್ಯ ಅಂಗ.

ಇಡೀ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊತ್ತ ಭಾರತದ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ಅವುಗಳ ಅಗತ್ಯಕ್ಕನುಗುಣವಾಗಿ ಆರ್ಥಿಕ ಬೆಂಬಲವನ್ನು ಕೊಡುವ ಕರ್ತವ್ಯ ನಿಭಾಯಿಸಬೇಕಾಗಿರುತ್ತದೆ.

ಕೇಂದ್ರದ ಬೆಂಬಲವನ್ನು ಸದುಪಯೋಗಿಸಿಕೊಳ್ಳುವ ರಾಜ್ಯಗಳು ಸಮಗ್ರ ಅಭಿವೃದ್ಧಿ ಹೊಂದುತ್ತಾ ಅದರ ಫಲವಾಗಿ ತಮ್ಮ ರಾಜ್ಯಗಳಲ್ಲಿ ಹೆಚ್ಚು ಹೆಚ್ಚು ತೆರಿಗೆ ಸಂಗ್ರಹಿಸಲು ಶಕ್ತವಾಗುತ್ತವೆ. ಹೊಸ ಜಿಎಸ್ಟಿ ಪದ್ಧತಿ ಜಾರಿಗೆ ಬಂದಮೇಲೆ ಅಬಕಾರಿ ಸುಂಕ, ಪೆಟ್ರೋಲ್ ಸುಂಕ ಮತ್ತಿತರ ಕೆಲ ತೆರಿಗೆ ಹೊರತುಪಡಿಸಿ ಬಹುತೇಕ ಉಳಿದೆಲ್ಲಾ ವಲಯದ ತೆರಿಗೆಯನ್ನೂ ರಾಜ್ಯಗಳು ಕೇಂದ್ರಕ್ಕೆ ತಲುಪಿಸಿ ಅಲ್ಲಿಂದ ತಮ್ಮ ಪಾಲಿನ ಜಿಎಸ್ಟಿ ತೆರಿಗೆ ಪಾಲನ್ನು ಪಡೆದು ಅದನ್ನು ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತವೆ.

ಹೀಗೆ ತಮ್ಮ ಪ್ರಯತ್ನ ಮತ್ತು ಕೇಂದ್ರದ ಆರ್ಥಿಕ ಬೆಂಬಲ ಇವೆರಡನ್ನೂ ಬಳಸಿ ಅಭಿವೃದ್ಧಿಯ ದಾರಿಯಲ್ಲಿ ಸರಿಯಾಗಿ ಮುನ್ನಡೆಯುತ್ತಿರುವಂತ ರಾಜ್ಯಗಳು ದೇಶದ ಒಟ್ಟಾರೆ ಅಭಿವೃದ್ಧಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿರುತ್ತವೆ. ಅಂತಹ ರಾಜ್ಯಗಳನ್ನು ಗುರುತಿಸಿ ಅವುಗಳಿಗೆ ಮತ್ತಷ್ಟು ಉತ್ತೇಜನ ನೀಡುವುದು ಕೇಂದ್ರದ ಆದ್ಯ ಕರ್ತವ್ಯವಾಗಿರಬೇಕಾಗಿರುತ್ತದೆ.

ಆದರೆ, ನಮ್ಮ ಕರ್ನಾಟಕದ ವಿಷಯದಲ್ಲಿ ಆಗುತ್ತಿರುವುದು ಇದಕ್ಕೆ ತದ್ವಿರುದ್ಧವಾಗಿದೆ. ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ. ದೇಶದ ಒಟ್ಟು ನೇರ ತೆರಿಗೆಯಲ್ಲಿ ಶೇ. 61ರಷ್ಟು ಈ ಮೂರು ರಾಜ್ಯಗಳಿಂದಲೇ ಬರುತ್ತಿದೆ ಮತ್ತು ದೇಶದ ಒಟ್ಟು ತೆರಿಗೆಯಲ್ಲಿ ನೇರ ತೆರಿಗೆಯ ಪಾಲು ಶೇ. 50ಕ್ಕಿಂತ ಹೆಚ್ಚಿದೆ.

ಇದು ಕರ್ನಾಟಕದ ಅಭಿವೃದ್ಧಿಯ ವೇಗವನ್ನು ಒಂದು ಮಟ್ಟಿಗೆ ತೋರುತ್ತದೆ. ಆರ್ಥಿಕತೆಯ ಜೊತೆಗೆ ಕರ್ನಾಟಕವು ಮಾನವ ಅಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಸಾಧಿಸಿದೆ. 1971 ರಿಂದ 2011 ರ ನಡುವೆ ಜನಸಂಖ್ಯೆ ಸ್ಫೋಟವನ್ನು ಕರ್ನಾಟಕ ಗಮನಾರ್ಹವಾಗಿ ತಡೆದಿದ್ದು 2011 ರ ವೇಳೆಗೆ ಒಂದು ಆರೋಗ್ಯಕರ ಜನಸಂಖ್ಯಾ ಬೆಳವಣಿಗೆಯ ಹಂತವನ್ನು ತಲುಪಿದೆ.

ಆದರೆ, ಕರ್ನಾಟಕದ ಈ ಸಮಗ್ರ ಅಭಿವೃದ್ಧಿಯೇ ಈ ರಾಜ್ಯಕ್ಕೆ ಈಗ ಮುಳುವಾಗಿ ಪರಿಣಮಿಸಿದೆ. ನಮ್ಮ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಕೊಡಬೇಕಿದ್ದ ಕೇಂದ್ರವು ಅದರ ಬದಲಿಗೆ ಕೇಂದ್ರದ ಅನುದಾನದಲ್ಲಿ ಕಡಿತ ಮಾಡುವ ಮೂಲಕ ಶಿಕ್ಷೆ ವಿಧಿಸಿದೆ. ಹದಿನೈದನೇ ಹಣಕಾಸು ಆಯೋಗವು ರಾಜ್ಯಗಳಿಗೆ ಕೇಂದ್ರದ ಅನುದಾನ ನಿಗದಿ ಮಾಡಲು 2011 ರ ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದೆ. 2011 ರ ಜನಗಣತಿಯ ಪ್ರಕಾರ ಹೆಚ್ಚಿನ ಜನಸಂಖ್ಯೆ ಇರುವ ರಾಜ್ಯಕ್ಕೆ ಹೆಚ್ಚಿನ ಅನುದಾನ. ಅಂದರೆ, ಸರಿಯಾದ ಅಭಿವೃದ್ಧಿ ಮಾರ್ಗದಲ್ಲಿ ಸಾಗಿ ಜನಸಂಖ್ಯೆಯನ್ನು ನಿಯಂತ್ರಿಸಿದ ಕರ್ನಾಟಕದಂತ ರಾಜ್ಯಕ್ಕೆ ಮತ್ತೂ ಹೆಚ್ಚಿನ ಪ್ರೋತ್ಸಾಹ ಕೊಡುವ ಬದಲು ಶಿಕ್ಷೆ ವಿಧಿಸಿದಂತಾಗಿದೆ.

ಈ ಹೊಸ ಮಾನದಂಡವನ್ನು ಅನುಸರಿಸಿದ ಕೇಂದ್ರ ಸರ್ಕಾರ ಈ ಸಾರಿಯ 2020-21 ರ ಬಜೆಟ್ ನಲ್ಲಿ ಹೋದ ವರ್ಷಕ್ಕಿಂತ 5,495 ಕೋಟಿ ರೂಪಾಯಿಗಳಷ್ಟು ಕಡಿಮೆ ಅನುದಾನವನ್ನು ಕರ್ನಾಟಕಕ್ಕೆ ನಿಗದಿಪಡಿಸಿದೆ. 2019-20 ರಲ್ಲಿ ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು 36,675 ಕೋಟಿ ರೂಪಾಯಿಗಳಾಗಿದ್ದರೆ ಈ ವರ್ಷ ಅದನ್ನು 31,180 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ.

ಇದರಿಂದಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮನಗಂಡ ಹಣಕಾಸು ಆಯೋಗವೇ ಕೊರತೆ ಬೀಳುವ 5,495 ಕೋಟಿಗಳನ್ನು ವಿಶೇಷ ಅನುದಾನದ ಅಡಿಯಲ್ಲಿ ಕೊಡಬೇಕೆಂದು ಹೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೊಡುವ ಮನಸ್ಸು ಮಾಡುತ್ತಿಲ್ಲ.

ಇನ್ನು ಈ ಹೊಸ ಫಾರ್ಮುಲಾದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಕನಿಷ್ಟ ಮೂವತ್ತು ಸಾವಿರ ಕೋಟಿಗಳಷ್ಟು ಅನುದಾನದ ಕೊರತೆ ಬೀಳಲಿದ್ದು ರಾಜ್ಯದ ಅಭಿವೃದ್ಧಿಗೆ ಭಾರೀ ತೊಂದರೆಯಾಗಲಿದೆ.

ಇದರ ಜೊತೆಗೆ, ಈ 2019-20 ರ ಸಾಲಿನಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿದ್ದ ಜಿಎಸ್ಟಿಯಲ್ಲಿ ಅಂದಾಜು ಹತ್ತುಸಾವಿರ ಕೋಟಿ ರೂಪಾಯಿಗಳಷ್ಟನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿಯೇ ಇದೆ (ಮೋಟಾರು ವಾಹನ ಮತ್ತು ಸ್ಟ್ಯಾಂಪ್ ಸುಂಕ ಹೊರತುಪಡಿಸಿ). ಆದರೂ ಕೇಂದ್ರ ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನು ಯಾವಾಗ ಕೊಡಲಾಗುವುದೆಂದು ಹೇಳುತ್ತಿಲ್ಲ.

ಇದರಿಂದಾಗಿ, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಭಾರೀ ಹಣದ ಕೊರತೆ ಬೀಳಲಿದೆ. ರಸ್ತೆಗಳ ಅಗಲೀಕರಣ, ಕುಡಿಯುವ ನೀರಿನ ಯೋಜನೆಗಳು, ತ್ಯಾಜ್ಯ ನಿರ್ವಹಣೆ, ಶಿಕ್ಷಣ ಮತ್ತು ಆರೋಗ್ಯ ಉನ್ನತೀಕರಣದಂತಹ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಬೀಳಲಿದೆ. ಅಭಿವೃದ್ಧಿ ಯೋಜನೆಗಳಿರಲಿ, ಈಗ ಸರ್ಕಾರ ನಡೆಸುತ್ತಿರುವ ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೇ ಹಣಕಾಸಿನ ಕೊರತೆ ಉಂಟಾಗುತ್ತದೆ.

ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ, ಕರ್ನಾಟಕದಲ್ಲಿ ಪ್ರವಾಹದಿಂದ ಆದ ನಷ್ಟ ಅಂದಾಜು 38,000 ಕೋಟಿ ರೂಪಾಯಿಗಳು. ಆದರೆ ಕೇಂದ್ರ ಸರ್ಕಾರ ಅದರಲ್ಲಿನ ಶೇಕಡಾ ಹತ್ತರಷ್ಟನ್ನೂ ಬಿಡುಗಡೆ ಮಾಡಲಿಲ್ಲ. ಅದರಿಂದಾಗಿ ಇಂದಿಗೂ ಪ್ರವಾಹ ಸಂತ್ರಸ್ತ ಮಕ್ಕಳು ಹಾಳುಬಿದ್ದ ಶಾಲೆಗಳಲ್ಲಿಯೇ ಕಲಿಯುವಂತ ಪರಿಸ್ಥಿತಿ ಇದೆ.

ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಅತ್ಯಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಅತ್ಯವಶ್ಯ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಸಾಲ ಮಾಡಬೇಕಾಗುತ್ತದೆ.

ಆದರೆ ಆರ್ಥಿಕ ನಿಯಮಗಳ ಪ್ರಕಾರ (FRBM – Fiscal responsibility and budget management) ರಾಜ್ಯ ಸರ್ಕಾರ ತನ್ನ ರಾಜ್ಯದ ಒಟ್ಟು ಜಿಡಿಪಿಯ ಗರಿಷ್ಟ (ಕರ್ನಾಟಕದ ಜಿಡಿಪಿ ಒಟ್ಟು 18 ಲಕ್ಷ ಕೋಟಿ ರೂಪಾಯಿಗಳು) ಶೇ.3 ರಷ್ಟು ಮಾತ್ರ ಸಾಲ ಮಾಡಬಹುದು.

ರಾಜ್ಯದ ಸಾಲ ಜಿಡಿಪಿಯ ಶೇ. 3 ರ ಮಿತಿಯೊಳಗಿದ್ದರೆ ಅದನ್ನು ಆರೋಗ್ಯಕರ ಆರ್ಥಿಕತೆ ಎಂದು ಪರಿಗಣಿಸಲಾಗುತ್ತದೆ. ಈಗ ಕರ್ನಾಟಕದ ಸಾಲ 42,000 ಕೋಟಿಗಳಷ್ಟಿದ್ದು ಗರಿಷ್ಠ 54,000 ಕೋಟಿಯ ತನಕ ಸಾಲ ಮಾಡಬಹುದಾಗಿರುತ್ತದೆ. ಅಂದರೆ ಈಗ ರಾಜ್ಯ ಸರ್ಕಾರ ಇನ್ನೂ 12,000 ಕೋಟಿಗಳಷ್ಟು ಸಾಲಮಾಡಬಹುದು. ಆದರೆ, ಅಷ್ಟು ದುಡ್ಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಸಾಲದಿರುವುದರಿಂದ ಸರ್ಕಾರ FRBM ಮಿತಿಯನ್ನು ಮೀರಿ ಸಾಲ ಮಾಡಬೇಕಾಗುತ್ತದೆ. ಇದು ರಾಜ್ಯದ ಆರ್ಥಿಕತೆಯನ್ನು ಮತ್ತೂ ದುರ್ಬಲಗೊಳಿಸಲಿದೆ.

ಒಟ್ಟಾರೆಯಾಗಿ, ಮೊದಲಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ಕೇಂದ್ರ ಸರ್ಕಾರದ ಅವಕೃಪೆಯಿಂದಾಗಿ ಅನ್ಯಾಯವಾಗಿ ಆರ್ಥಿಕ ಕ್ಷೋಭೆಗೆ ಸಿಲುಕಿ ಅಭಿವೃದ್ಧಿ ಹೊಂದಲು ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ. ಒಂದು ಕಡೆ ತಾನು ವೇಗವಾಗಿ ಸಮಗ್ರ ಅಭಿವೃದ್ಧಿ ಹೊಂದುತ್ತಾ ಮತ್ತೊಂದು ಕಡೆ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಕೇಂದ್ರದ ತಪ್ಪು ನೀತಿಯಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಯಾವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆಯೋ ಆ ಸರ್ಕಾರಗಳು ತಮ್ಮ ಪಾಲಿನ ಜಿಎಸ್ಟಿ ಹಣಕ್ಕೋಸ್ಕರ ಕೇಂದ್ರದ ಮೇಲೆ ಸುಪ್ರೀಂಕೋರ್ಟ್ ಮೊರೆಹೋಗುವ ಧಮಕಿ ಹಾಕಿವೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯ ಸರ್ಕಾರಗಳು ತಮ್ಮದೇ ಪಕ್ಷದ ಕೇಂದ್ರ ಸರ್ಕಾರವನ್ನು ತಮ್ಮ ನ್ಯಾಯಯುತ ಪಾಲನ್ನು ಕನಿಷ್ಟ ಗಟ್ಟಿ ದನಿಯಲ್ಲಿಯೂ ಕೇಳಲಾಗದೆ ಉಳಿದಿವೆ (ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಆಗ ಕಾಂಗ್ರೆಸ್ ರಾಜ್ಯ ಸರ್ಕಾರಗಳ ಸ್ಥಿತಿಯೂ ಇದೇ ಆಗಿರುತ್ತಿತ್ತು). ನಮ್ಮ ಕರ್ನಾಟಕದಿಂದ ಇಪ್ಪತ್ತೈದು ಬಿಜೆಪಿ ಸಂಸದರಿದ್ದೂ ಕೂಡ ತನ್ನ ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ರಾಜ್ಯ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ನಮ್ಮ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಪಾಲನ್ನು ಗಟ್ಟಿ ದನಿಯಲ್ಲಿ ಕೇಳಿ ದಕ್ಕಿಸಿಕೊಳ್ಳಬೇಕಾದರೆ ನಮ್ಮ ರಾಜ್ಯದ್ದೇ ಒಂದು ಸ್ವಾಭಿಮಾನಿ, ಪ್ರಾಮಾಣಿಕ, ಪ್ರಬಲ ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...