Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...