Homeಮುಖಪುಟಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

ಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

- Advertisement -
- Advertisement -

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‌ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ರಾಜ್ಯದ ಅವಳಿ ಮಲೆನಾಡು ಜಿಲ್ಲೆ ಎಂದರೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು. ಈ ಎರಡೂ ಜಿಲ್ಲೆಯ ಸುಮಾರು 16 ತಾಲೂಕುಗಳೂ ಸೇರಿದಂತೆ ಇಲ್ಲಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕರಾವಳಿ ಭಾಗವಾದ ಮಂಗಳೂರಿಗೂ ಸಂಪರ್ಕ ಕಲ್ಪಿಸುವ ರಾಜ್ಯದ ಅತಿದೊಡ್ಡ ರಸ್ತೆ ಸಾರಿಗೆ ಸಂಪರ್ಕ ಜಾಲದಲ್ಲೊಂದಾದ ಸಹಕಾರ ಸಾರಿಗೆ ಇಂದು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದೆ. ಇಲ್ಲದೆ, ಸರ್ಕಾರದ ಅಸಹಕಾರಕ್ಕೆ ಬೇಸತ್ತು ಫೆಬ್ರವರಿ 17 ರಿಂದ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‍ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಸೇವೆ ಎಂದೇ ಪರಿಗಣಿಸುತ್ತದೆ. ಆದರೆ ಸರ್ಕಾರ ಇದನ್ನು ನಿಜಕ್ಕೂ ಪಾಲಿಸುತ್ತದೆಯೋ ಇಲ್ಲವೋ? ಆದರೆ, ಇದನ್ನು ರಾಜ್ಯದ ಮಟ್ಟಿಗೆ ನಿಜವಾಗಿಯೂ ಪಾಲಿಸಿದ್ದು ಸಹಕಾರ ಸಾರಿಗೆ. ಇಂದು ದೇಶ-ವಿದೇಶದಲ್ಲಿ ಉನ್ನತ ಮಟ್ಟದ ನಾನಾ ಕೆಲಸದಲ್ಲಿರುವ ವಿದ್ಯಾರ್ಥಿಗಳು ಇದೇ ಸಹಕಾರ ಸಾರಿಗೆ ರಿಯಾಯಿತಿ ಬಸ್ ಪಾಸ್‍ನಲ್ಲಿ ಓಡಾಡಿದವರು. ಇನ್ನೂ ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು ವಿಕಲಚೇತನರಿಗೆ ಶೇ.50 ರಷ್ಟು ರಿಯಾಯಿತಿ ನೀಡಿದ ಮೊದಲ ಖಾಸಗಿ ಸಾರಿಗೆ ಸಂಸ್ಥೆ ಎಂಬ ಖ್ಯಾತಿಯೂ ಸಹಕಾರಿ ಸಾರಿಗೆಗೆ ಇದೆ.

ಹೀಗೆ ಮಲೆನಾಡು ಭಾಗದ ಇಂಚಿಂಚೂ ಓಡಾಡಿ ಅಕ್ಷರಶಃ ಜನರ ಜೀವನಾಡಿಯೇ ಆಗಿಹೋದ ಸಹಕಾರ ಸಾರಿಗೆ ಇಂದು ತನ್ನ ಸೇವೆಯನ್ನೇ ಸ್ಥಗಿತಗೊಳಿಸಿದೆ. ಸಹಕಾರ ವಿಭಾಗದಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದ ಸಾರಿಗೆ ವ್ಯವಸ್ಥೆ ಇಂದು ಅಕ್ಷರಶಃ ಇತಿಹಾಸ ಪುಟಕ್ಕೆ ಸೇರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ಈ ಹಿನ್ನೆಲೆ ಸಹಕಾರ ಸಾರಿಗೆ ವ್ಯವಸ್ಥೆಯ ಇತಿಹಾಸ ಹಿನ್ನೆಲೆ ಏನು? ಮಲೆನಾಡು ಭಾಗದಲ್ಲಿ ಈ ಸಂಸ್ಥೆ ಸೃಷ್ಟಿಸಿರುವ ಇತಿಹಾಸ ಎಂಥಾದ್ದು? ಈಗನ ನಷ್ಟಕ್ಕೆ ಕಾರಣವೇನು? ಈ ಸಂಸ್ಥೆಯ ಸಂಕಷ್ಟಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಹಕಾರ ಸಾರಿಗೆ ಹಿನ್ನೆಲೆ ಮತ್ತು ಇತಿಹಾಸ
ಮಲೆನಾಡಿನಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶಂಕರ್ ಟ್ರಾನ್ಸ್ಪೋರ್ಟ್ ಕಂಪೆನಿ 1991ರಲ್ಲಿ ನಷ್ಟದ ಕಾರಣ ಮುಚ್ಚಲಾಯಿತು. ಈ ವೇಳೆ ಕಂಪೆನಿಯಲ್ಲಿ ಕೆಲಸ ನಿರ್ವಹಿಸಿದ್ದ ಸುಮಾರು 300 ಕಾರ್ಮಿಕರ ಬದುಕು ಬೀದಿಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ದಿವಂಗತ ಬಿ.ಕೆ. ಸುಂದರೇಶ್ ಮತ್ತು ಹೋರಾಟಗಾರ ಸಿರಿಮನೆ ನಾಗರಾಜ್ ಇದೇ ಕಾರ್ಮಿಕರನ್ನು ಒಟ್ಟುಗೂಡಿಸಿ ಎಲ್ಲರೂ ತಮ್ಮ ಕೈಲಾದ ಹಣವನ್ನು ಕ್ರೋಢೀಕರಿಸಿ ಕೇವಲ 12 ಲಕ್ಷ ರೂ. ಬಂಡವಾಳದಲ್ಲಿ ಹುಟ್ಟು ಹಾಕಿದ ಸಂಸ್ಥೆಯೇ ಸಹಕಾರ ಸಾರಿಗೆ ಸಂಸ್ಥೆ. ಭಾಗಶಃ ಇಡೀ ದೇಶದಲ್ಲೇ ಕಾರ್ಮಿಕರೇ ಮಾಲೀಕರಾಗಿ ಆರಂಭಿಸಿದ ಮೊದಲ ಸಂಸ್ಥೆ ಇದು.

ಸಂಸ್ಥೆಯಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ತಾನೇ ಮಾಲೀಕ ಎಂಬಂತೆ ಹಗಲಿರುಳು ಶ್ರಮಿಸಿದ ಫಲವಾಗಿ 6 ಬಸ್‍ಗಳಿಂದ ಆರಂಭವಾದ ಸಂಸ್ಥೆಯಲ್ಲಿ ಇಂದು 76 ಬಸ್‍ಗಳಿವೆ. ಕೊಪ್ಪದಲ್ಲಿ ಕೇಂದ್ರ ಕಚೇರಿ ಇದ್ದರೆ, ಕೊಪ್ಪ ಮತ್ತು ಶೃಂಗೇರಿ ಎರಡು ಕಡೆಗಳಲ್ಲಿ ಸ್ವಂತ ಗ್ಯಾರೇಜ್ ಅನ್ನು ಈ ಸಂಸ್ಥೆ ಹೊಂದಿದೆ.

ಮಲೆನಾಡಿನ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ನೌಕರ ವರ್ಗ ಹಾಗೂ ಪ್ರವಾಸಿಗರು ಸೇರಿದಂತೆ ಅನೇಕರು ಕಳೆದ 3 ದಶಕಗಳಿಂದ ಈ ಸಾರಿಗೆಯನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ಸಂಚಾರ, ಸಮಯ ಪಾಲನೆ ಹಾಗೂ ಶಿಸ್ತಿಗೆ ಈ ಸಂಸ್ಥೆ ಹೆಸರುವಾಸಿ. ಆದರೆ, 2017ರಲ್ಲಿ ಬೆಳ್ಳಿಹಬ್ಬ ಆಚರಿಸಿದ ಈ ಸಂಸ್ಥೆ ಕೇವಲ ಮೂರು ವರ್ಷದಲ್ಲಿ ಇದೀಗ ನಷ್ಟದ ಸುಳಿಯಲ್ಲಿ ಸಿಲುಕಿ ಏದುಸಿರು ಬಿಡುತ್ತಿದೆ.

ಸಂಸ್ಥೆಯ ನಷ್ಟಕ್ಕೆ ಕಾರಣವೇನು?
ಕಳೆದ ಮೂರು ನಾಲ್ಕು ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನನಿತ್ಯ ಏರಿಸಲಾಗುತ್ತಿದೆ. ಆದರೆ, 2013ರಿಂದ ಸಹಕಾರಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಸಲಾಗಿಲ್ಲ. ಇದರಿಂದ ಸಂಸ್ಥೆಯ ಆದಾಯ ಕುಂಠಿತವಾಗಿದೆ. ಅಲ್ಲದೆ, ಡೀಸೆಲ್ ಬೆಲೆ ಏರಿಕೆಯಿಂದಲೇ ಪ್ರತಿ ತಿಂಗಳು ಕನಿಷ್ಟ 24 ಲಕ್ಷ ಹಣ ಸಂಸ್ಥೆಗೆ ನಷ್ಟವಾಗುತ್ತಿದೆ ಎನ್ನಲಾಗುತ್ತಿದೆ.

ಇದರ ಜೊತೆಗೆ ವರ್ಷಕ್ಕೆ 1.5 ಕೋಟಿ ಹಣವನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿ ಮಾಡಲಾಗುತ್ತಿದೆ. ಇನ್ನೂ ಬಸ್ ಪ್ರಯಾಣ ದರದಲ್ಲಿ ವಿದ್ಯಾರ್ಥಿಗಳು , ವಿಕಲಚೇತನರು, ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗವಹಿಸಿದವರಿಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಪರಿಣಾಮ ಸಂಸ್ಥೆಗೆ ಆರ್ಥಿಕ ಹೊರೆ ಅಧಿಕವಾಗಿದ್ದು, ಪ್ರತಿ ತಿಂಗಳ ಖರ್ಚನ್ನು ನಿಭಾಯಿಸುವುದೇ ದುಸ್ತರವಾಗಿದೆ ಎನ್ನುತ್ತಾರೆ ಸಂಸ್ಥೆಯ ಪದಾಧಿಕಾರಿಗಳು.

ಸರ್ಕಾರದ ಎದುರು ಸಂಸ್ಥೆ ಇಟ್ಟಿರುವ ಬೇಡಿಕೆ ಏನು?
ಸಹಕಾರ ಸಾರಿಗೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಿದೆ. ಈ ಪೈಕಿ ಸರ್ಕಾರ ಪ್ರತಿವರ್ಷ ರಿಯಾಯಿತಿ ಪಾಸ್ ಬಾಬ್ತು 6.6 ಕೋಟಿ ಹಣವನ್ನು ಸಂಸ್ಥೆಗೆ ಪಾವತಿ ಮಾಡಬೇಕು. ಆದರೆ, ಈವರೆಗೆ ಈ ಹಣ ಬಿಡುಗಡೆಯಾಗಿಲ್ಲ.

ಇದಲ್ಲದೆ, ಸಂಸ್ಥೆಯ ಬಸ್‍ಗಳ ಡೀಸೆಲ್ ಖರೀದಿಯಲ್ಲಿ ತೆರಿಗೆ ವಿನಾಯಿತಿ ನೀಡಬೇಕು, ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಸಹಕಾರ ತತ್ವದ ಅಡಿಯಲ್ಲಿ ನಡೆಯುತ್ತಿರುವ ಸಹಕಾರ ಸಾರಿಗೆಗೂ ನೀಡಬೇಕು ಎಂಬುದು ಸಂಸ್ಥೆಯ ಬೇಡಿಕೆ. ಆದರೆ, ಈವರೆಗೆ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗಿಲ್ಲ ಎಂಬುದೇ ದುರದೃಷ್ಟಕರ ಸಂಗತಿ.

ಮಲೆನಾಡಿನ ಈ ಸಹಕಾರ ಸಾರಿಗೆಯ ಸೇವಾ ಮನೋಭಾವವನ್ನು ಜಪಾನ್ ಸರ್ಕಾರ ಮೆಚ್ಚಿಕೊಂಡಿತ್ತು. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಡಾಕ್ಟರೇಟ್ ಪದವಿ ಪಡೆದರು, ಮಣಿಪಾಲ್ ಸ್ನಾತಕೋತ್ತರ ಪದವಿಗೆ ಸಹಕಾರ ಸಾರಿಗೆ ಪಠ್ಯವಾಗಿಯೇ ಬದಲಾಗಿತ್ತು. ಇನ್ನೂ ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಯ ಇದರ ಮೇಲಿನ ಸಂಶೋಧನೆಗೆ ಪಿಹೆಚ್ಡಿ ಪದವಿಯನ್ನು ಪ್ರದಾನ ಮಾಡಿತ್ತು.

ಆದರೆ, ಇಷ್ಟೆಲ್ಲಾ ಶ್ರೇಯಕ್ಕೆ ಪಾತ್ರವಾದ ಸಹಕಾರ ಸಾರಿಗೆ ಇಂದು ಅಳಿವಿನ ಅಂಚಿನಲ್ಲಿದೆ, ಇತಿಹಾಸದ ಕಾಲಗರ್ಭ ಸೇರಲು ಅವಸರಿಸುತ್ತಿದೆ ಎಂಬ ವಿಚಾರವನ್ನು ಜೀರ್ಣಿಸಿಕೊಳ್ಳುವುದು ನಿಜಕ್ಕೂ ಕಷ್ಟದಾಯಕವಾದ ವಿಚಾರ. ಅಲ್ಲದೆ, ಮಲೆನಾಡಿಗರ ಅತೀ ಅವಶ್ಯಕವಾದ ವಿಚಾರಗಳಲ್ಲಿ ಸಹಕಾರ ಸಾರಿಗೆ ಪ್ರಮುಖವಾದದ್ದು. ಹೀಗಾಗಿ ಸರ್ಕಾರ ಈ ಸಂಸ್ಥೆಯ ಪುನಶ್ಚೇತನಕ್ಕೆ ಸಹಕಾರ ನೀಡಲೇಬೇಕಿದೆ.

ನಷ್ಟಕ್ಕೆ ಸರ್ಕಾರವೇ ಕಾರಣ ಹೊರತು ಸಹಕಾರಿ ಸಾರಿಗೆಯಲ್ಲ- ಸಿರಿಮನೆ ನಾಗರಾಜ್

ಸಹಕಾರಿ ಸಂಸ್ಥೆಯ ಸದಸ್ಯರು ಸದ್ಯಕ್ಕೆ ಧರಣಿ ಕೂತಿದ್ದಾರೆ. ಕೆ.ಎಸ್.ಆರ್.ಟಿ.ಸಿಗೆ ನೀಡುವ ಸವಲತ್ತುಗಳನ್ನು ನಮಗೂ ನೀಡಿ ಎಂಬುದು ಅವರ ಬೇಡಿಕೆ. ಏಕೆಂದರೆ ಸಹಕಾರಿ ಸಾರಿಗೆಯವರು ಲಾಭ ನಷ್ಟದ ಯೋಚನೆಯಿಲ್ಲದೇ ಸಾಮಾಜಿಕ ಜವಾಬ್ದಾರಿ ಎಂದು ತಿಳಿದು ಮಲೆನಾಡಿನ ದೂರ ದೂರದ ಹಳ್ಳಿಗಳಿಗೂ ಬಸ್ ಸೌಲಭ್ಯ ನೀಡಿದ್ದಾರೆ. ಅಲ್ಲದೇ ಶಾಲಾಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗೆ ಬಹಳಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ.

ಸದ್ಯ ಸರ್ಕಾರದ ನಿಷ್ಕ್ರಿಯತೆ ಮತ್ತು ನಿಷ್ಕಾಳಜಿಯಿಂದು ಒಂದು ವೇಳೆ ಈ ಸಹಕಾರಿ ಸಾರಿಗೆ ಮುಚ್ಚಿಹೋದರೆ ಅರ್ಧ ಮಲೆನಾಡು ಸಮರ್ಪಕ ಸಂಪರ್ಕವಿಲ್ಲದೇ ಸ್ತಬ್ದವಾಗುವುದರಲ್ಲಿ ಅನುಮಾನವಿಲ್ಲ. ಸಹಕಾರಿ ಸಂಸ್ಥೆಯ ನಷ್ಟಕ್ಕೆ ಮಿಸ್ ಮ್ಯಾನೇಜ್‍ಮೆಂಟ್, ಹಣದ ದುರ್ಬಳಕೆ ಕಾರಣವಲ್ಲ. ಡೀಸೆಲ್ ಸಬ್ಸಿಡಿ, ರಸ್ತೆ ತೆರಿಗೆ ವಿನಾಯಿತಿಯಂತಹ ಹಲವು ಸರ್ಕಾರದ ಸವಲತ್ತುಗಳು ಸಿಗದಿರುವುದು, ಡಿಸೇಲ್ ಬೆಲೆ ದಿನೇ ದಿನೇ ಏರುತ್ತಿರುವುದು ಕಾರಣವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಐತಿಹಾಸಿಕ ಸಹಕಾರಿ ಸಾರಿಗೆಯನ್ನು ಉಳಿಸಬೇಕು. ಅವರ ಹೋರಾಟಕ್ಕೆ ನಾನು ಸಂಪೂರ್ಣವಾಗಿ ಬೆಂಬಲ ಕೊಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...