Homeಮುಖಪುಟಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರ ಭಾಷಣ ಎಂದರೆ ನಿರ್ದಿಷ್ಟ ವಿಷಯದ ಮೇಲೆ ಮಾತನಾಡಬೇಕು ಎಂದೇನಿಲ್ಲ. ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮಾತನಾಡಬಹುದು. ರಾಜಕೀಯ ಕೂಡ ಮಾತಾಡಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತು ಆರಂಭಿಸಿದರು.

ನಾಲ್ಕನೇ ದಿನ ಸದನ ಆರಂಭದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಶ್ರದ್ಧಾ ರೀತಿ ಆಗಿಬಿಟ್ಟಿದೆ. ಪಾಲಿಸಿಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಈ ರಾಜ್ಯಪಾಲರ ಭಾಷಣದಲ್ಲಿ ಅಂತಹ ಮಹತ್ವದ ಅಂಶಗಳಿಲ್ಲ ಎಂದರು.

ಚುನಾವಣೆ ನಡೆದಾಗ ಈ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶಕೊಟ್ಟರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ರಾಜೀನಾಮೆ ಕೊಟ್ಟರು. ಆನಂತರ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದರು. ಆನಂತರ ಬಿಜೆಪಿ ಪಕ್ಷವು ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 03 ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಬೀಳಿಸಿ ಈ ಸರ್ಕಾರ ತಂದರು ಎಂದರು.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ ಎಂದು ಹೇಳುತ್ತೇನೆ. ಇದು ಜನಾದೇಶದ ಮೂಲಕ ರಚನೆಯಾದುದ್ದು ಅಲ್ಲ. 17ಜನ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರಿಂದ ಸರ್ಕಾರ ರಚನೆಯಾಗಿದೆಯೇ ಹೊರತು, ಜನಾರ್ಶಿವಾದದಿಂದ ಅಲ್ಲ. ಹಾಗಾಗಿ ಆಪರೇಷನ್‌ ಕಮಲದಿಂದ ಬಂದಿದ್ದೇವೆ ಎಂದು ಹೇಳಬೇಕು ಎಂದರು.

ರಾಜ್ಯಪಾಲರು ಜಂಟಿ ಸದನ ಉಲ್ಲೇಖಿಸಿ ಭಾಷಣ ಮಾಡಿದ್ದಾರೆ. ಈ ಸರ್ಕಾರದ ಕಾರ್ಯಕ್ರಮ, ಮುನ್ನೋಟ,  ನೀತಿಯ ಕುರಿತು ಏನೂ ಇಲ್ಲ ಅದರಲ್ಲಿ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಬಿಟ್ಟರೆ ಮತ್ತೇನಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಏಳು ತಿಂಗಳಾಗುತ್ತಾ ಬಂದಿದೆ. ಇಷ್ಟರಲ್ಲಿ ಹೆಸರಿಸಬಹುದಾದ ಯಾವುದೇ ಕಾರ್ಯಕ್ರಮಗಳಿಲ್ಲ ಎಂದರು.

2 ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಮತ್ತು 1 ಲಕ್ಷದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿಯವರು. ಉಳಿದೆಲ್ಲ ಕಾರ್ಯಕ್ರಮಗಳು ನಮ್ಮ ಸರ್ಕಾರ 2013-18ರವರೆಗೆ ನಾವು ಮಾಡಿದ್ದು. ಕಾಡು ಬೆಳವಣಿಗೆಯಲ್ಲಿ ಕರ್ನಾಟಕ ನಂಬರ್‌ 1 ಆಗಲು ಕಾಡು ಬೆಳೆಸಿದ್ದು ನಾವು. ಹೈನುಗಾರಿಕೆಯಲ್ಲಿ ಗುಜರಾತ್‌ ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾವಿದ್ದೇವೆ. ದಿನಕ್ಕೆ 80 ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ಕಾರಣ ಲೀಟರ್‌ 5 ರೂ ಪ್ರೋತ್ಸಾಹ ಧನ ಕೊಡಲು ಆರಂಭಿಸಿದೆವು. ಅಂದಾಜು 4 ಕೋಟಿ ರೂ ದಿನಕ್ಕೆ ಕೊಡಲು ಶುರು ಮಾಡಿದ್ದೇ ನಾವು ಎಂದರು.

ಸಿದ್ದರಾಮಯ್ಯ ಭಾಷಣ ಆರಂಭಕ್ಕೂ ಮೊದಲು ಸದನದ ಅವಧಿ ವಿಸ್ತರಿಸಲು ಸದಸ್ಯರು ಮನವಿ ಮಾಡಿದರು. ಸದನದಲ್ಲಿ ಜಟಾಪಟಿ ನಡೆಯಿತು. ಯತ್ನಾಳ್‌ ಮಾತನಾಡಲು ಅವಕಾಶ ಕೋರಿದರು.

ಸಿದ್ದರಾಮಯ್ಯನವರು ಮಾತನಾಡಿ ಯತ್ನಾಳ್‌ ನೀವು ಸೀನಿಯರ್‌ ಲೀಡರ್‌ ನೀವು ಹೀಗೆ ಹೇಳಿದರೆ ಹೇಗೆ ಎಂದರು. ಆಗ ನಮಗೆ ಏನು ಕೊಡುತ್ತಿಲ್ಲ ಎಂದು ಯತ್ನಾಳ್‌ ಹೇಳಿದರು.

ಮಾಧುಸ್ವಾಮಿಯವರು ಮಧ್ಯಪ್ರವೇಶಿಸಿ ಆಡಳಿತ ಪಕ್ಷ ನಾವು ಉತ್ತರ ಕೊಡಲು ಇದ್ದೇವೆ. ಮಾತನಾಡಲು ಅಲ್ಲ ಸುಮ್ಮನಿರಿ ಎಂದು ಯತ್ನಾಳ್‌ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...