Homeಮುಖಪುಟ’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ...

’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ…

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
- Advertisement -

ಸ್ಯಾಮುಯಲ್ ಬೆಕೆಟ್ ಐರಿಷ್ ಕವಿ. ಅವನೊಬ್ಬ ಶ್ರೇಷ್ಟ ಕಾದಂಬರಿಕಾರ. ಕಥೆಗಾರ ಹಾಗೆಯೇ ನಾಟಕಕಾರ. ಅಷ್ಟೇ ಅಲ್ಲ ಭಾಷಾಂತರಕಾರ ಕೂಡ. ಫ್ರೆಂಚ್ ಮತ್ತು ಐರೀಷ್ ಎರಡು ಭಾಷೆಗಳಲ್ಲೂ ಹಲವು ಶ್ರೇಷ್ಟಮಟ್ಟದ ಕೃತಿಗಳನ್ನು ರಚಿಸಿರುವ ಬೆಕೆಟ್ 1906 ರಲ್ಲಿ ಜನಿಸಿ 1989ರಲ್ಲಿ ತೀರಿಕೊಂಡ. ಜೀವಿತದ ಅವಧಿಯಲ್ಲಿ ಮರ್ಫಿ, ವಾಲ್, ಮಲೋನೆ ಡೈಸ್, ವೈಟಿಂಗ್ ಫಾರ್ ಗಾಡೋ, ಎಂಡ್ ಗೇಮ್ ಹೀಗೆ ಹತ್ತಾರು ಪ್ರಮುಖ ಕೃತಿಗಳನ್ನು ರಚಿಸಿದ್ದು ಈತನಿಗೆ 1969ರಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ.

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಕೆಟ್ ನ ‘ವೇಟಿಂಗ್ ಫಾರ್ ಗಾಡೋ ನಾಟಕ ‘ಸುಖದುಃಖಾಂತ್ಯ’ ನಾಟಕ. ಕೇವಲ ಐದೇ ಐದು ಪಾತ್ರಗಳು ಮನುಷ್ಯನ ದುಖಃ, ಸುಖ, ನೋವಿಗೆ ತಾವಾಗಿಯೇ ತೆರೆದುಕೊಳ್ಳುತ್ತವೆ. ತಮ್ಮೊಳಗಿನ ಗೊಂದಲಗಳನ್ನು ಪ್ರೇಕ್ಷಕರ ಮುಂದೆ ಇಡುತ್ತವೆ. ನಾಳೆಗಳ ಕನಸುಗಳನ್ನು ಕಟ್ಟಿಕೊಳ್ಳುತ್ತಲೇ ಆ ಕನಸುಗಳನ್ನು ಕೊಂದುಕೊಳ್ಳುತ್ತವೆ. ಇಂಥದ್ದೊಂದು ನಾಟಕವನ್ನು ತುಮಕೂರಿನಲ್ಲಿ ಪ್ರದರ್ಶಿಸಲಾಯಿತು. ಲೋಕಚರಿತ ರಂಗ ಕೇಂದ್ರ ಎಂಬ ಚಿಕ್ಕದಾಳವಟ್ಟದ ಗ್ರಾಮೀಣ ಸಂಘಟನೆ ಬೆಕೆಟ್ ನ ವೇಟಿಂಗ್ ಫಾರ್ ಗಾಡೋ ನಾಟಕ ಪ್ರದರ್ಶನಕ್ಕೆ ವೇದಿಕೆ ಒದಗಿಸಿತ್ತು. ರಂಗ ತಂಡದ ಕಲಾವಿದರು ಪುಟ್ಟ ಹೆಜ್ಜೆಗಳನ್ನು ಇಡುತ್ತಿದ್ದರೂ ಅವು ದೃಢವಾಗಿದ್ದವು. ಅವರು ಪ್ರತಿಯೊಂದು ಸನ್ನಿವೇಶದಲ್ಲೂ ಸಭಿಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾದರು.

ಬರಡುಭೂಮಿ, ಬೆಟ್ಟಗುಡ್ಡಗಳು, ಎಲೆಗಳೇ ಇಲ್ಲದ ಮರಗಳು. ಅಂಥ ಪ್ರದೇಶದಲ್ಲಿ ಇಬ್ಬರು ದಿಕ್ಕುದೆಸ (ಬೇವರ್ಸಿಗಳು) ಇಲ್ಲದ ಅಬ್ಬೇಪಾರಿಗಳು. ಮೊದಲಿಗೆ ಗುಡ್ಡವೊಂದರ ಮೇಲೆ ಕುಳಿತು ತನ್ನ ಎಡಗಾಲಿನ ಬೂಟು ಬಿಚ್ಚುವ ದೃಶ್ಯದಿಂದ ಆರಂಭವಾಗುವ ನಾಟಕ ಮುಂದೆ ತನ್ನ ಕಥಾಹಂದರವನ್ನು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಮೊದಲು ಗುಡ್ಡದ ಮೇಲೆ ಕುಳಿತ ವ್ಯಕ್ತಿಯ ಜೊತೆಗೆ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಅಮೂರ್ತ ರೂಪದ ಗಾಡೋನಿಗಾಗಿ ಕಾಯುವುದು. ಕಾಲದೂಡಲು, ಬೇಸರ ನಿವಾರಣೆಗೆ ಮತ್ತು ಮೌನ ವಾತಾವರಣ ಮುರಿದು ಹಾಕಲು ಇಬ್ಬರು ಬೇವರ್ಸಿಗಳು ಮಾತಿಗೆ ಆರಂಭಿಸುತ್ತಾರೆ. ಅವರ ಮಾತುಗಳು ಎಲ್ಲೆಲ್ಲೋ ಹೋಗುತ್ತವೆ. ಇಬ್ಬರು ಅಬ್ಬೇಪಾರಿಗಳ ನಡುವಿನ ಸಂಭಾಷಣೆ ಅಸಂಬದ್ದವಾಗಿರುತ್ತದೆ. ತಾಳತಪ್ಪುತ್ತದೆ. ಒಂದಕ್ಕೊಂದು ಸಂಬಂಧವೇ ಇಲ್ಲದಂತೆ ಆಗುತ್ತದೆ. ಇದು ಎರಡು ಮಹಾಯುದ್ದದ ಸಮಯದಲ್ಲಾದ ಸನ್ನಿವೇಶಕ್ಕೆ ಹಿಡಿದ ಕನ್ನಡಿಯಾಗಿದೆ.

ಈ ನಾಟಕ ಸಂಪೂರ್ಣವಾಗಿ ಸಂಗತವೂ ಅಲ್ಲದ, ಅಸಂಗತವೂ ಅಲ್ಲದ ಸ್ಥಿತಿಯಲ್ಲಿ ಮುಂದುವರಿಯುತ್ತದೆ. ಶಬರಿ ರಾಮನಿಗಾಗಿ ವರ್ಷಾನುಗಟ್ಟಲೆ ಕಾಯುವಂತೆ (ಕೊನೆಗೂ ಶಬರಿಗೆ ರಾಮನ ದರ್ಶನವಾಗುತ್ತದೆ.) ಈ ಇಬ್ಬರು ಬೇವರ್ಸಿಗಳು ತಾವೂ ನೋಡಿಯೇ ಇಲ್ಲದ, ಪರಿಚಯವೇ ಇಲ್ಲದ ಗಾಡೋನಿಗಾಗಿ ಕಾಯುತ್ತಾ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸುತ್ತಾರೆ. ಈ ಪಾತ್ರಗಳು ಪ್ರತಿಯೊಬ್ಬ ವ್ಯಕ್ತಿಯ ಮನದಾಳದ ಗೊಂದಲಗಳಿಗೆ ಮುಖಾಮುಖಿಯಾಗುತ್ತಾರೆ. ಇಂದಿನ ಸಮಾಜದಲ್ಲೂ ವ್ಯಕ್ತಿ ಯಾರನ್ನೋ ಕಾಯುತ್ತಾ, ನಿರೀಕ್ಷೆ ಮಾಡುತ್ತ, ಅವರು ಸಿಗದೇ, ಬೇಸರ, ನೋವು ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸುವ ಸನ್ನಿವೇಶಕ್ಕೂ ಈ ಪಾತ್ರಗಳು ಮುಖಾಮುಖಿಯಾಗುತ್ತವೆ. ಯುದ್ದದಂತಹ ಸನ್ನಿವೇಶದಲ್ಲಿ ಮನುಷ್ಯನ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಈ ಪಾತ್ರಗಳು ಕಟ್ಟಿಕೊಡುತ್ತವೆ.

ಮನುಷ್ಯನ ಮನಸ್ಸು ಕ್ಷಣಕ್ಷಣಕ್ಕೂ ಬದಲಾಗುತ್ತಿರುತ್ತದೆ. ಒಮ್ಮೆ ಆಡಿದ ಮಾತು ಮತ್ತೊಮ್ಮೆ ಆಡುವುದಿಲ್ಲ. ಹಾಗೆಯೇ ಈ ಬೇವರ್ಸಿ ಪಾತ್ರಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆ. ನಮ್ಮ ನಿರೀಕ್ಷೆಗಳು ಸುಳ್ಳಾಗಬಹುದು. ನೋವು, ಸಂಕಟ, ದುಃಖ ಕ್ಷಣ ಕಾಲ ಮರೆಯಾಗಬಹುದು. ಆದರೆ ದುತ್ತೆಂದು ಒಕ್ಕರಿಸುತ್ತವೆ ಎಂಬುದನ್ನು ಈ ಪಾತ್ರಗಳು ಸಾಕ್ಷೀಕರಿಸುತ್ತವೆ. ಒಮ್ಮೆ ಒಣಗಿದ ಮರವೂ ಚಿಗುರಬಹುದು. ಹಾಗೆಯೇ ಮನುಷ್ಯನಲ್ಲೂ ಬದುಕುವ ಉತ್ಸಾಹ ಮೂಡಬಹುದು. ಅದು ಹೆಚ್ಚು ದಿನ ಇರುವುದಿಲ್ಲ. ಕೊನೆಗೆ ಆ ಎರಡು ಪಾತ್ರಗಳು ಹೀಗೆ ಸಾರುತ್ತವೆ. ನಾವು ನಾಳೆ ಇಲ್ಲಿಗೆ ಮರಳಿ ಬಂದರೆ ಬದುಕಿರುತ್ತೇವೆ. ಬಾರದೆ ಇದ್ದರೆ ನಾವು ಸತ್ತಂತೆ ಎಂಬಲ್ಲಿಗೆ ನಾಟಕ ಅಂತ್ಯವಾಗುತ್ತದೆ. ಇಡೀ ನಾಟಕದ ಉದ್ದಕ್ಕೂ ಎರಡು ಬೇವರ್ಸಿ ಪಾತ್ರಗಳೇ ಪ್ರಧಾನವಾಗಿವೆ.

ಈ ನಡುವೆ ಆ ಬರಡು ಭೂಮಿಯಲ್ಲಿದ್ದ ಇಬ್ಬರು ಬೇವರ್ಸಿ ಪಾತ್ರಗಳಗಳ ಜೊತೆಗೆ ಎಷ್ಟೋ ದಿನ ಕಳೆದ ಮೇಲೆ ಅಲ್ಲಿಗೆ ಪೋಜೋ ಅಲ್ಲಿಗೆ ಲಕ್ಕಿಯೊಂದಿಗೆ ಬರುತ್ತಾನೆ. ಆತ ವಿರಾಮ ಪಡೆಯಲು ಆ ಬೇವರ್ಸಿಗಳೊಂದಿಗೆ ಕೆಲಕಾಲ ಮಾತಿಗೆ ಇಳಿಯುತ್ತಾನೆ. ಅವರ ನಡುವೆ ನಡೆಯುವ ಸಂಭಾಷಣೆ ನಗೆಯುಕ್ಕಿಸುತ್ತದೆ. ಪೋಜೋ ಬಿಸುಟ ಮೋಟು ಬೀಡಿ, ಮೂಳೆ ಚಿಕನ್ ಗಳನ್ನು ಆ ಇಬ್ಬರು ಬೇವರ್ಸಿ ಪಾತ್ರಗಳು ತೆಗೆದುಕೊಂಡು ಮೋಜು ಮಾಡುತ್ತವೆ. ಲಕ್ಕಿಯದು ಪೋಜೇನ ಸಾಮಾನುಗಳನ್ನು ಹೊರುವ ಕೆಲಸ. ಹೇಳಿದ್ದು ಮಾಡುವ ಚಾಕರಿ. ಯುದ್ದದಂತಹ ಪರಿಸ್ಥಿತಿಯಲ್ಲಿ ಶ್ರೀಮಂತರು ಬಡವರನ್ನು ಗುಲಾಮರನ್ನಾಗಿ ಇಟ್ಟುಕೊಳ್ಳುತ್ತಿದ್ದರು ಎಂಬುದನ್ನು ಈ ಪಾತ್ರ ಹೇಳುತ್ತದೆ.  ಇವರ ನುಡವೆ ನಡೆಯುವ ಸಂಭಾಷಣೆಯಲ್ಲಿ ಕಪ್ಪು, ಬಿಳುಪು, ಹಸಿರು ಮೊದಲಾದ ಬಣ್ಣಗಳ ಕುರಿತು ವ್ಯಕ್ತವಾಗುವ ಮಾತುಗಳು ಅಸಂಬದ್ದತೆ ಪ್ರೇಕ್ಷಕರಲ್ಲಿ ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ.

ಹುಡುಗನ ಪಾತ್ರ ಎರಡೇ ಬಾರಿ ರಂಗದ ಮೇಲೆ ಕಂಡು ಬಂದರೂ ಗಮನ ಸೆಳೆಯುತ್ತದೆ. ಬೇವರ್ಸಿಗಳ ಬಳಿ ಬರುವ ಆ ಹುಡುಗ ನಾನು ಗಾಡೋನನ್ನು ನೋಡಿದ್ದೇನೆ. ಅವನ ಬಳಿಯಿಂದಲೇ ಬಂದಿದ್ದೇನೆ ಎನ್ನುತ್ತಾನೆ. ಅದಕ್ಕೆ ಬೇವರ್ಸಿಗಳು ನಾವು ಗಾಡೋಗಾಗಿ ಕಾಯುತ್ತಿದ್ದೇವೆ ಎಂಬುದನ್ನು ತಿಳಿಸುವಂತೆ ಆ ಹುಡುಗನಿಗೆ ಹೇಳುತ್ತಾರೆ. ಆದರೆ ಆ ಹುಡುಗ ಎರಡನೇ ಬಾರಿ ಬಂದಾಗ ನಾನು ನೆನ್ನೆ ಬಂದ ಹುಡುಗನಲ್ಲ. ನಾನು ಗಾಡೋ ನೋಡಿಲ್ಲ. ನೀವು ಯಾರು? ನಿಮ್ಮನ್ನೂ ನಾನು ಭೇಟಿ ಮಾಡಿಲ್ಲ ಎಂದು ಪ್ರೇಕ್ಷಕರನ್ನು ಗೊಂದಲದಲ್ಲಿ ಕೆಡವುತ್ತಾನೆ. ಮತ್ತೆ ಆ ಬೇವರ್ಸಿಗಳು ನಿನ್ನೆ ನೀನು ಬಂದಿದ್ದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರೂ ಒಪ್ಪಿಕೊಳ್ಳುವುದಿಲ್ಲ ಆ ಹುಡುಗ. ಇಂದು ಕೂಡ ಅಂಥವೇ ಸಂಗತಿಗಳು ನಮ್ಮ ನಡುವೆ ನಡೆಯುತ್ತಿರುವುದನ್ನು ನೋಡುತ್ತೇವೆ.

ಜಗತ್ತಿನಲ್ಲಿ ಜನಾಂಗೀಯ ದಬ್ಬಾಳಿಕೆ ನಡೆಯುತ್ತಿರುವುದಕ್ಕೆ, ಸಮಾಜದಲ್ಲಿ ತಾರತಮ್ಯದ ಮನೋಭಾವ ಇಂದಿಗೂ ಇರುವ ಬಗ್ಗೆ ಮಾರ್ಮಿಕವಾಗಿ ಧ್ವನಿಸುತ್ತದೆ. ಆಧುನಿಕ ಜಗತ್ತಿನ ನಾಗಾಲೋಟದಲ್ಲಿ ಮನುಷ್ಯ ಕ್ಷಣ ನಿಂತು ಆಲೋಚಿಸುವುದಕ್ಕೂ ಸಮಯವಿಲ್ಲದ ಪರಿಯನ್ನು ಹೇಳುತ್ತದೆ. ಗೊಂದಲದಲ್ಲಿರುವ ಮನುಷ್ಯನ ಮಾನಸಲೋಕದ ಅಲ್ಲೋಲಕಲ್ಲೋಲಗಳಿಗೆ ಪಾತ್ರಗಳು ಜೀವ ತುಂಬುತ್ತವೆ. ವೇಟಿಂಗ್ ಪಾರ್ ಗಾಡೋ ಇಂದಿಗೂ ಪ್ರಸ್ತುತವಾಗಿದೆ. ಮನುಷ್ಯನಲ್ಲಾಗುವ ಬದಲಾವಣೆಗಳನ್ನು ಹೇಳುತ್ತದೆ.

ರವಿಶಂಕರ್ ಆರ್ ನೀನಾಸಂ ನಿರ್ದೇಶನದಲ್ಲಿ ನಾಟಕ ಚನ್ನಾಗಿ ಮೂಡಿಬಂತು. ಚನ್ನಕೇಶವ, ಜಿತೇಂದ್ರ, ಜಿ.ಎಸ್. ಮೋಹನ್, ಶ್ರೀಕಾಂತ್, ಸುಮಂತ್ ಜಿ.ಜಿ. ವೇಟಿಮಗ್ ಫಾರ್ ಗಾಡೋ ನಾಟಕದ ಪಾತ್ರಗಳಿಗೆ ಜೀವ ತುಂಬಿದರು. ಲೋಕಚರಿತ ರಂಗ ಕೇಂದ್ರದ ಮುಖ್ಯಸ್ಥ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...