Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...