Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...