Homeಮುಖಪುಟವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ" ಎಂದು ಪಪ್ಪು ಯಾದವ್ ಹೇಳಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಬಿಹಾರದ ವಿವಿಧ ವಿರೋಧ ಪಕ್ಷಗಳ ರಾಜಕೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ನಿಂದ ಇತ್ತೀಚೆಗೆ ವಜಾಗೊಳಿಸಲ್ಪಟ್ಟ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬಿಹಾರದ ಯುವಜನರನ್ನು ಸಂಪರ್ಕಿಸಲು ಗುರುವಾರ ತಮ್ಮ ‘ಬಾತ್ ಬಿಹಾರ ಕಿ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಬಿಹಾರವನ್ನು ಅಭಿವೃದ್ಧಿಪಡಿಸಲು ಕಿಶೋರ್ ಅವರೊಂದಿಗೆ ಕೈಜೋಡಿಸಲು ಬಯಸುವ ಸಮಾನ ಮನಸ್ಕ ಯುವಜನರ ನೋಂದಣಿಯನ್ನು ಈ ಅಭಿಯಾನ ಪ್ರಾರಂಭಿಸಿದೆ. ಕಿಶೋರ್ ಅವರ ‘ಬಾತ್ ಬಿಹಾರ ಕಿ’ ಕಾರ್ಯಕ್ರಮವು ಮುಂದಿನ 10 ವರ್ಷಗಳಲ್ಲಿ ಬಿಹಾರವನ್ನು ದೇಶದ 10 ಅತ್ಯುತ್ತಮ ರಾಜ್ಯಗಳಲ್ಲಿ ಒಂದನ್ನಾಗಿ ಮಾಡುವ ಗುರಿಯನ್ನು ಹೊಂದಿದೆ.

ಕಿಶೋರ್‌ ಗುರುವಾರ ಹಿಂದೂಸ್ತಾನಿ ಅವಮ್ ಮೋರ್ಚಾ ಮುಖ್ಯಸ್ಥ ಜಿತಾನ್ ರಾಮ್ ಮಾಂಝಿಯನ್ನು ಭೇಟಿಯಾಗಿದ್ದಾರೆ. ಅದಕ್ಕೂ ಮುಂಚೆ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರನ್ನು ಭೇಟಿ ಮಾಡಿದ್ದರು. ಮಾಂಝಿ ಮತ್ತು ಕುಶ್ವಾಹ ಇಬ್ಬರೂ ಮಹಾ ಮೈತ್ರಿಕೂಟದ ನಾಯಕರಾಗಿದ್ದು, ಇದರಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಕೂಡ ಸೇರಿವೆ.

ಕಿಶೋರ್ ಅವರನ್ನು ಭೇಟಿಯಾಗಿದ್ದನ್ನು ದೃಢಪಡಿಸಿದ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರು ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ರೈತರ ದುಃಸ್ಥಿತಿಯ ಬಗ್ಗೆ ಸರ್ಕಾರ ಪೂರ್ಣ ವೈಫಲ್ಯ ಕಂಡಿದ್ದರಿಂದ ಆರ್‌ಎಲ್‌ಎಸ್‌ಪಿ ಜೆಡಿಯು ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೋರಾಟ ನಡೆಸಿತ್ತು. ಅವರ ಪಕ್ಷವು ಕಿಶೋರ್‌ರೊಂದಿಗೆ ಒಂದು ಸಾಮಾನ್ಯ ನೆಲೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಸೈದ್ಧಾಂತಿಕ ವಿಷಯದಲ್ಲಿ ನಾವು ಒಂದೇ ಪುಟದಲ್ಲಿದ್ದೇವೆ. ಇದು ಅನೌಪಚಾರಿಕ ಸಭೆಯಾಗಿದ್ದು ಬಿಹಾರದ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ” ಎಂದು ಪಕ್ಷದ ಮಾಜಿ ರಾಷ್ಟ್ರೀಯ ಪದಾಧಿಕಾರಿ ಫಜಲ್ ಇಮಾಮ್ ಮುಲ್ಲಿಕ್ ಹೇಳಿದ್ದಾರೆ.

ಜನ್‌ ಅಧಿಕಾರ್‌ ಪಕ್ಷದ ಮುಖ್ಯಸ್ಥ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ಕಿಶೋರ್ ಅವರು ಬಿಹಾರದ ಭವಿಷ್ಯದಲ್ಲಿ ಬದಲಾವಣೆಗಾಗಿ ಕೆಲಸ ಮಾಡುವ ಉದ್ದೇಶವನ್ನು ಶ್ಲಾಘಿಸಿದರು, “ಜನರು ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಬೇಸರಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಬಿಹಾರದ ಅಭಿವೃದ್ದಿಗಾಗಿ ರಾಜಕೀಯ ಬಿಟ್ಟು ಕೆಲಸ ಮಾಡುತ್ತೇನೆಂದು ಘೋಷಿಸಿದ ಪ್ರಶಾಂತ್‌ ಕಿಶೋರ್‌ ಈಗ ಯಾಕೆ ರಾಜಕೀಯ ಮುಖಂಡರನ್ನು ಭೇಟಿಯಾಗುತ್ತಿದ್ದಾರೆ ಎಂದು ಹಲವರು ಪ್ರಶ್ನಿಸಿದ್ದಾರೆ. ಜೆಡಿಯು ಇವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲು ಮುಂದಾಗಿದ್ದು ಶಾಸಕನೊಬ್ಬ ಪ್ರಶಾಂತ್‌ ಕಿಶೋರ್‌ ಯಾರು ಎಂದು ಕರೆಯುವ ಮೂಲಕ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...