Homeಮುಖಪುಟವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ" ಎಂದು ಪಪ್ಪು ಯಾದವ್ ಹೇಳಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಬಿಹಾರದ ವಿವಿಧ ವಿರೋಧ ಪಕ್ಷಗಳ ರಾಜಕೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ನಿಂದ ಇತ್ತೀಚೆಗೆ ವಜಾಗೊಳಿಸಲ್ಪಟ್ಟ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬಿಹಾರದ ಯುವಜನರನ್ನು ಸಂಪರ್ಕಿಸಲು ಗುರುವಾರ ತಮ್ಮ ‘ಬಾತ್ ಬಿಹಾರ ಕಿ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಬಿಹಾರವನ್ನು ಅಭಿವೃದ್ಧಿಪಡಿಸಲು ಕಿಶೋರ್ ಅವರೊಂದಿಗೆ ಕೈಜೋಡಿಸಲು ಬಯಸುವ ಸಮಾನ ಮನಸ್ಕ ಯುವಜನರ ನೋಂದಣಿಯನ್ನು ಈ ಅಭಿಯಾನ ಪ್ರಾರಂಭಿಸಿದೆ. ಕಿಶೋರ್ ಅವರ ‘ಬಾತ್ ಬಿಹಾರ ಕಿ’ ಕಾರ್ಯಕ್ರಮವು ಮುಂದಿನ 10 ವರ್ಷಗಳಲ್ಲಿ ಬಿಹಾರವನ್ನು ದೇಶದ 10 ಅತ್ಯುತ್ತಮ ರಾಜ್ಯಗಳಲ್ಲಿ ಒಂದನ್ನಾಗಿ ಮಾಡುವ ಗುರಿಯನ್ನು ಹೊಂದಿದೆ.

ಕಿಶೋರ್‌ ಗುರುವಾರ ಹಿಂದೂಸ್ತಾನಿ ಅವಮ್ ಮೋರ್ಚಾ ಮುಖ್ಯಸ್ಥ ಜಿತಾನ್ ರಾಮ್ ಮಾಂಝಿಯನ್ನು ಭೇಟಿಯಾಗಿದ್ದಾರೆ. ಅದಕ್ಕೂ ಮುಂಚೆ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರನ್ನು ಭೇಟಿ ಮಾಡಿದ್ದರು. ಮಾಂಝಿ ಮತ್ತು ಕುಶ್ವಾಹ ಇಬ್ಬರೂ ಮಹಾ ಮೈತ್ರಿಕೂಟದ ನಾಯಕರಾಗಿದ್ದು, ಇದರಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಕೂಡ ಸೇರಿವೆ.

ಕಿಶೋರ್ ಅವರನ್ನು ಭೇಟಿಯಾಗಿದ್ದನ್ನು ದೃಢಪಡಿಸಿದ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರು ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ರೈತರ ದುಃಸ್ಥಿತಿಯ ಬಗ್ಗೆ ಸರ್ಕಾರ ಪೂರ್ಣ ವೈಫಲ್ಯ ಕಂಡಿದ್ದರಿಂದ ಆರ್‌ಎಲ್‌ಎಸ್‌ಪಿ ಜೆಡಿಯು ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೋರಾಟ ನಡೆಸಿತ್ತು. ಅವರ ಪಕ್ಷವು ಕಿಶೋರ್‌ರೊಂದಿಗೆ ಒಂದು ಸಾಮಾನ್ಯ ನೆಲೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಸೈದ್ಧಾಂತಿಕ ವಿಷಯದಲ್ಲಿ ನಾವು ಒಂದೇ ಪುಟದಲ್ಲಿದ್ದೇವೆ. ಇದು ಅನೌಪಚಾರಿಕ ಸಭೆಯಾಗಿದ್ದು ಬಿಹಾರದ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ” ಎಂದು ಪಕ್ಷದ ಮಾಜಿ ರಾಷ್ಟ್ರೀಯ ಪದಾಧಿಕಾರಿ ಫಜಲ್ ಇಮಾಮ್ ಮುಲ್ಲಿಕ್ ಹೇಳಿದ್ದಾರೆ.

ಜನ್‌ ಅಧಿಕಾರ್‌ ಪಕ್ಷದ ಮುಖ್ಯಸ್ಥ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ಕಿಶೋರ್ ಅವರು ಬಿಹಾರದ ಭವಿಷ್ಯದಲ್ಲಿ ಬದಲಾವಣೆಗಾಗಿ ಕೆಲಸ ಮಾಡುವ ಉದ್ದೇಶವನ್ನು ಶ್ಲಾಘಿಸಿದರು, “ಜನರು ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಬೇಸರಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಬಿಹಾರದ ಅಭಿವೃದ್ದಿಗಾಗಿ ರಾಜಕೀಯ ಬಿಟ್ಟು ಕೆಲಸ ಮಾಡುತ್ತೇನೆಂದು ಘೋಷಿಸಿದ ಪ್ರಶಾಂತ್‌ ಕಿಶೋರ್‌ ಈಗ ಯಾಕೆ ರಾಜಕೀಯ ಮುಖಂಡರನ್ನು ಭೇಟಿಯಾಗುತ್ತಿದ್ದಾರೆ ಎಂದು ಹಲವರು ಪ್ರಶ್ನಿಸಿದ್ದಾರೆ. ಜೆಡಿಯು ಇವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲು ಮುಂದಾಗಿದ್ದು ಶಾಸಕನೊಬ್ಬ ಪ್ರಶಾಂತ್‌ ಕಿಶೋರ್‌ ಯಾರು ಎಂದು ಕರೆಯುವ ಮೂಲಕ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...