Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...