Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...