HomeUncategorizedಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

ಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

- Advertisement -
- Advertisement -

ಹಣದುಬ್ಬರ ಅಥವಾ ಇನಫ್ಲೇಷನ್ ಅನ್ನೋದನ್ನ ಕೇಳಿಕೇಳಿ ಸಾಕಾಗಿಹೋಗೇದ. ಅದರ ಬಗ್ಗೆ ಸರಕಾರದವರು ಏನೂ ಮಾಡಲಾರದೇ ಇರೋದು ನೋಡಿ-ನೋಡಿ ಸಾಕಾಗಿಹೋಗೇದ. ಅದಕ್ಕ ಹೊಸಾದೊಂದು ಹುಡುಕೋಣ. ಅದರ ಹೆಸರು ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್.

ಅದು ಸ್ಟ್ಯಾಗ್ನೇಷನ್ ಹಾಗೂ ಇನಫ್ಲೇಷನ್ ಸೇರಿದ ಆರ್ಥಿಕ ಮಾರಿ. ವಾರ್ಷಿಕ ಆರ್ಥಿಕ ಬೆಳವಣಿಗೆ 5 ಶೇಕಡಾ ಇದ್ದು ಹಣದುಬ್ಬರ ಶೇ. 8ರ ಆಸುಪಾಸಿಗೆ ಬಂದಿದ್ದಕ್ಕೆ ಭಾರತ ಜಡದುಬ್ಬರವನ್ನು ಎದುರು ನೋಡ್ತಾ ಇದೆ ಅಂತ ತಜ್ಞರ ಅಂಬೋಣ.

ಸರ್ವೇಸಾಮಾನ್ಯವಾಗಿ ಏನಾಗತದ ಅಂದರ ಹಣದುಬ್ಬರ ಇದ್ದಾಗ ಬೇಡಿಕೆ ಹೆಚ್ಚಿತ್ತು ಅಂದರ ಬೆಳವಣಿಗೆ ಇರತದ. ಜನರಿಗೆ ಹಣ ಖರ್ಚು ಆಗೋದು ಹೆಚ್ಚಾದರೂ ಸಹ ಅವರ ವರಮಾನ ಹೆಚ್ಚು ಆಗೋದಕ್ಕ ಜನರಿಗೆ ತೊಂದರೆ ಆಗಂಗಿಲ್ಲ. ಆದರ ಹಣದುಬ್ಬರ ಇದ್ದು, ಸರಕು-ಸೇವೆಗಳಿಗೆ ಬೇಡಿಕೆ ಕಡಿಮೆ ಆಗಿ ಆರ್ಥಿಕ ಹಿಂಜರಿತ ಉಂಟಾದರ, ಅದು ಆ ದೇಶದ ಜನರಿಗೆ ಭಾಳ ಕಿರಿಕಿರಿ ಆಗತದ. ಅವರ ದಿನ ನಿತ್ಯದ ಕೆಲಸನೂ ಆಗದಂಗ ತೊಂದರೆ ಆಗತದ.

ಹಿಂಗ 1973 ರಾಗ ಇಡಿ ಜಗತ್ತಿನೊಳಗ ಆಗಿತ್ತು. ಪೆಟ್ರೋಲು- ಡೀಸಲ್ ಬೆಲೆ ಹೆಚ್ಚಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಿ, ಸರಕುಗಳ ಬೆಲೆ ಜಾಸ್ತಿ ಆತು. ಜನ ನೌಕರಿ ಕಳಕೊಂಡರು, ಸರಕು ಖರೀದಿ ಮಾಡೋದು ಕಡಿಮೆ ಮಾಡಿದರು, ಆದರ ಜನ ಖರೀದಿ ಕಮ್ಮಿ ಮಾಡಿದರು ಅಂತ ವೆಚ್ಚಕಮ್ಮಿ ಆಗಲಿಲ್ಲ. ಇಡೀ ವಿಶ್ವದ ಆರ್ಥಿಕ ವ್ಯವಸ್ಥೆ ಅಲುಗಾಡಿ ಹೋತು.

ಇನ್ನೊಮ್ಮೆ ಹಿಂಗಾಗಿದ್ದು ಯಾವಾಗ ಅಂದರ ಚಂದ್ರಶೇಖರ ಅವರ ಕಾಲದಾಗ. ಸರಕಾರದ ನೀತಿಗಳು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿಲ್ಲ. ಅದರ ಸರಕುಗಳ ಬೆಲೆ ಹೆಚ್ಚಾಗಿ ಕೂತವು. ಮಾರುವವರಿಗೂ ಅನುಕೂಲ ಆಗಲಿಲ್ಲ, ಖರೀದಿ ಮಾಡೋರಿಗೂ ಅನುಕೂಲ ಆಗಲಿಲ್ಲ.

ಇದನ್ನು ಕುಡಿಯಾಗಿದ್ದಾಗ ಚಿವುಟದಿದ್ದರೆ ಇದು ಅತ್ಯಂತ ದೊಡ್ಡ ಸಮಸ್ಯೆ ಆಗಬಹುದು. ಭಾಳ ದಿವಸ ಜಡದುಬ್ಬರ ಮುಂದುವರೆದರ ಅದು ಮಧ್ಯಮ ವರ್ಗದವರನ್ನೆಲ್ಲ ಬಡತನರೇಖೆಯ ಕೆಳಗೆ ದಬ್ಬಿ ಬಿಡತದ. ಆಡಳಿತ ಪಕ್ಷಕ್ಕೂ ಇದು ಒಳ್ಳೇದಲ್ಲ. ಸರಕಾರದ ಇಮೇಜು ಇದರಿಂದ ಕೆಡಬಹುದು. ಜನರನ್ನು ರೊಚ್ಚಿಗೆ ಎಬ್ಬಿಸಬಹುದು.

ಹಂಗಂತ ಅದನ್ನು ಸಂಭಾಳಿಸೋದು ಸರಳ ಇಲ್ಲ. ಸರಕಾರ ಅಥವಾ ರಿಸರ್ವ ಬ್ಯಾಂಕಿನಂಥ ಕೇಂದ್ರ ಬ್ಯಾಂಕು ಬಡ್ಡಿ ದರ ಹೆಚ್ಚು ಮಾಡಿದರ ಸಾಲಗಳು ದುಬಾರಿಯಾಗಿ ಯಾರೂ ತೊಗೊಳ್ಳಲಾರದಂತಾಗಿ, ಅಥವಾ ತೊಗೊಂಡವರು ವಾಪಸು ಕೊಡಲಿಕ್ಕೆ ಆಗಲಾರದಂತಾಗಿ ವ್ಯಾಪಾರ -ವ್ಯವಹಾರಕ್ಕೆ ತೊಂದರೆ ಆಗಬಹುದು. ಬಡ್ಡಿ ದರ ಕಮ್ಮಿ ಮಾಡಿದರ ಹಣದುಬ್ಬರ ಹೆಚ್ಚಾಗಿ ಜನ ಏನನ್ನೂ ಖರೀದಿ ಮಾಡದಂಗಾಗಬಹುದು, ಮಾಡಿದರ ಅವರ ಉಳಿತಾಯ ಕರಗಬಹುದು.

ಈ ವರ್ಷ ಏನಾಗೇದಪಾ ಅಂದರ ಪ್ರವಾಹ- ಬರಗಾಲದಿಂದ ಕೃಷಿ ಉತ್ಪನ್ನ ಕಮ್ಮಿ ಆಗೇದ. ಇದರಿಂದ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗೇದ. ಇದು ಕೇಂದ್ರದ ಹೊಸ ಆಮದು ನೀತಿಯಿಂದ ಕಮ್ಮಿ ಆದರ, ಅಥವಾ ಆರ್ಥಿಕ ಬೆಳವಣಿಗೆ ಮುಂದಿನ ಎರಡು – ಮೂರು ತಿಂಗಳಲ್ಲಿ ಹೆಚ್ಚಿದರ ಜಡದುಬ್ಬರದ ಬರೋ ಸಾಧ್ಯತೆ ಕಮ್ಮಿ ಆಗಬಹುದು. ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಮಂಡಳಿ ಅವರು ಈಗಿನ ಹಣದುಬ್ಬರ ಕಮ್ಮಿ ಆಗತದ ಅಂತ ಹೇಳ್ಯಾರ.

ದೇಶದ ವರಮಾನ ಅಷ್ಟೇ ಉಳದು ಅಥವಾ ಕಮ್ಮಿ ಆಗುವಾಗ ಖರ್ಚು ಜಾಸ್ತಿ ಆದಂಗನ, ಪ್ರತಿ ಗೃಹಸ್ಥನ ಪರಿಸ್ಥಿತಿನೂ ಆಗಬಹುದು. ಅವನ ನೌಕರಿಗೆ ಖತರಾ ಬಂದು, ಯಾವಾಗ ಕೆಲಸ ಕಳಕೋತೇನಿ ಅನ್ನುವ ಹೆದರಿಕೆಯೊಳಗ ಇರೋವಾಗ, ಅಥವಾ ಅವನಿಗ ವಾರ್ಷಿಕ ಬಡ್ತಿ ಸಿಗಲಾರದೇ, ಸಂಬಳ ಹೆಚ್ಚಾಗಲಾರದೇ ಇದ್ದು, ವಸ್ತುಗಳ ಬೆಲೆ ಜಾಸ್ತಿ ಆಗತಾ ಹೋದರ ಅವನು ಬರೇ ಊಟ, ಮನಿ ಬಾಡಗಿ, ಅರವಿ- ಅಂಚಡಿ, ಸಾಲಿ ಫೀಸು ಇಷ್ಟ ಖರ್ಚು ಮಾಡತಾ ಹೋದಾ ಅಂದರ ಅವನು ದೇಶದ ಆರ್ಥಿಕ ಪರಿಸ್ಥಿತಿಗೆ ಯಾವ ಕೊಡುಗೆ ಕೊಡಲಾರ.

ಹೊಸ ಬಂಡವಾಳ ದೇಶಕ್ಕೆ ಬರಲಾರದು, ಹೊಸ ಉದ್ಯೋಗ ಸೃಷ್ಟಿ ಆಗಲಾರವು. ಜನರ ಕೈಯೊಳಗ ದುಡ್ಡು ನಿಲ್ಲಂಗಿಲ್ಲ. ಜನ ಬ್ಯಾಂಕಿನೊಳಗ, ಷೇರು ಮಾರುಕಟ್ಟೆಯೊಳಗ ಉಳಿತಾಯ ಮಾಡಿದರ ಅದಕ್ಕ ಬೇಕಷ್ಟು ಬಡ್ಡಿ ಬರಂಗಿಲ್ಲ.

ಜಡದುಬ್ಬರವನ್ನ ಸರಕಾರಗಳು ಕಮ್ಮಿ ಮಾಡಲಿಕ್ಕೆ ಕ್ರಮ ಕೈಕೊಳ್ಳಬೇಕು. ಸರಿಯಾದ ನೀತಿ ಪಾಲಿಸಿ ಮತ್ತ ಬರಲಾರದ ಹಂಗ ನೋಡಿಕೊಳ್ಳಬೇಕು. ಇಲ್ಲದಿದ್ದರ ಅನೇಕ ವರ್ಷಗಳ ಬೆಳವಣಿಗಿ ಹೊಳಿಯೊಳಗ ಹುಣಸೀಹಣ್ಣು ತೊಳದಂಗ ಆಗಿ ಬಿಡತದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...