Homeಮುಖಪುಟಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಸಂಜಯ್‌ ಗಾಂಧಿಗೂ ನರೇಂದ್ರ ಮೋದಿಗೂ ವ್ಯತ್ಯಾಸವೇನು? ಗೋಡೆ ಹಿಂದಿದೆ ಭಾರತದ ಕರಾಳ ಅಧ್ಯಾಯ..

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೂ ಗೋಡೆಗೂ ಎಲ್ಲಿಲ್ಲದ ನಂಟಿದೆ. ನಿಮಗಿದು ತಮಾಷೆ ಏನಿಸಿದರೂ ನಿಜ..! 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಟ್ರಂಪ್ ವೀರಾವೇಶದ ಭಾಷಣ ಮಾಡಿದ್ದರು. ಅಮೆರಿಕ ಅಮೆಕನ್ನರಿಗೆ ಮಾತ್ರ. ಹೀಗಾಗಿ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕಲಾಗುವುದು. ಮೆಕ್ಸಿಕೋ ದೇಶದಿಂದ ಅಮೆರಿಕದ ಒಳಗೆ ನುಸುಳುವವರನ್ನು ತಡೆಯಲು ಅಮೆರಿಕ-ಮೆಕ್ಸಿಕೋ ಗಡಿಯುದ್ದಕ್ಕೂ ಬೃಹತ್ ಗೋಡೆಯನ್ನು ಕಟ್ಟಲಾಗುವುದು ಎಂದಿದ್ದರು.

ರಾಜಕೀಯ ಅನನುಭವಿಯ ಈ ವೀರಾವೇಶದ ಭಾಷಣಕ್ಕೆ ಇಡೀ ಜಗತ್ತು ಮುಸಿಮುಸಿ ನಕ್ಕಿತ್ತು. ಆದರೆ, ಬಲಪಂಥೀಯ ವಿಚಾರ ಧೋರಣೆಗಳು ಇಡೀ ವಿಶ್ವದಾದ್ಯಂತ ಗಟ್ಟಿಯಾಗಿ ಬೇರು ಬಿಡುತ್ತಿದ್ದ ಪರಿಣಾಮವೋ ಏನೋ? ಟ್ರಂಪ್ ಆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ, 6 ಸಾವಿರ ಮೈಲಿಯುದ್ದಕ್ಕೂ ಗೋಡೆ ಕಟ್ಟುವುದು ಭಾಷಣ ಮಾಡಿದಷ್ಟು ಸುಲಭವಲ್ಲ ಎಂಬುದು ನಂತರ ಟ್ರಂಪ್‌ಗೆ ಅರಿವಾಯಿತೇನೋ? ನಂತರ ಗೋಡೆ ಕುರಿತ ಚಿಂತೆಯನ್ನೇ ಬಿಟ್ಟುಬಿಟ್ಟಿದ್ದಾರೆ.

ಆದರೆ, ಟ್ರಂಪ್ ಮಾತನ್ನು ಶಿರಸಾವಹಿಸಿ ಪಾಲಿಸುವ ಅವರ ಆಪ್ತ ಗೆಳೆಯ ನರೇಂದ್ರ ಮೋದಿ ಇದೀಗ ಭಾರತ ದೇಶದಲ್ಲಿ ಸಣ್ಣ ಪ್ರಮಾಣದ ಗೋಡೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆ ಮೂಲಕ ಭಾರತದಲ್ಲಿ ಸ್ಲಂ ಇಲ್ಲ, ಬಡತನ, ಹಸಿವು, ನಿರುದ್ಯೋಗ ಸಮಸ್ಯೆ ಇಲ್ಲ, ಮಹಿಳೆಯರ ಮಕ್ಕಳ ಅಪೌಷ್ಠಿಕತೆ, ಶಿಶು ಮರಣವಂತೂ ಇಲ್ಲವೇ ಇಲ್ಲ ಎಂದು ಹೇಳಲು ಹೊರಟಿದ್ದಾರೆ. ಯಕಶ್ಚಿತ್ 7-8 ಅಡಿ ಎತ್ತರ ಗೋಡೆಯ ಆ ಬದಿಯಲ್ಲಿರುವ ಮತ್ತೊಂದ ನೈಜ ಭಾರತವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ.

ಅಸಲಿಗೆ ಭಾರತದಲ್ಲಿನ ಬಡತನ, ಹಸಿವು, ನಿರುದ್ಯೋಗಗಳಂತಹ ಗಂಭೀರ ಸಮಸ್ಯೆಗಳನ್ನು ಮರೆಮಾಚುವ ಯತ್ನ ಇದೇ ಮೊದಲೇನಲ್ಲ. ಈ ಹಿಂದೆಯೂ ಭಾರತದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿತ್ತು. ಭಾಗಶಃ ಸ್ವಾತಂತ್ರ್ಯ ಭಾರತದ ಮೊದಲ ಕಪ್ಪು ಇತಿಹಾಸಕ್ಕೆ ಅಂಕಿತ ಹಾಕಿದ ಘಟನೆ ಎಂದೇ ಇದನ್ನು ಬಿಂಬಿಸಲಾಗುತ್ತದೆ.

ಸಂಜಯ್ ಗಾಂಧಿ ಮತ್ತು 150 ಸ್ಲಂ ಜನರ ಸಾವು

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಹಿಂದೆಂದೂ ಕಾಣದ ರಾಜಕೀಯ ಸಂದಿಗ್ಧತೆಗೆ ಒಳಗಾಗಿದ್ದ ಕಾಲ ಅದು. ಇಂದಿರಾ ಗಾಂಧಿ ಈ ದೇಶದ ಪ್ರಧಾನಿಯಾಗಿದ್ದರು, ಅವರ ಮಗ ಸಂಜಯ್ ಗಾಂಧಿ ಅವರ ನೆರಳಿನಂತೆ ವಾಸ್ತವದಲ್ಲಿ ಸೂಪರ್ ಪಿಎಂ ಎಂಬಂತೆ ಕೆಲಸ ನಿರ್ವಹಿಸುತ್ತಿದ್ದರು. ಅವರ ಪ್ರೇರಣೆಯಿಂದಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವಂತಹ ತುರ್ತು ಪರಿಸ್ಥಿತಿಯನ್ನು 1975ರಲ್ಲಿ ಭಾರತದ ಮೇಲೆ ಹೇರಲಾಗಿತ್ತು ಎನ್ನುತ್ತದೆ ಈ ದೇಶದ ಇತಿಹಾಸ.

ದೇಶದಲ್ಲಿ ಹಸಿವನ್ನು ನೀಗಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದ ಇಂದಿರಾ ಗಾಂಧಿ ಹಸಿರು ಕ್ರಾಂತಿಯ ಘೋಷಣೆ ಕೂಗಿದ್ದರು. ಗರೀಬಿ ಹಠಾವೋ ನಂತಹ ಯೋಜನೆಗಳ ಮೂಲಕ ಈ ದೇಶದಿಂದ ಹಸಿವನ್ನು ಶಾಶ್ವತವಾಗಿ ನೀಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದರು ಎಂಬುದು ಎಷ್ಟು ಸತ್ಯವೋ? ಅವರ ಮಗ ಸಂಜಯ್ ಗಾಂಧಿ ಇಂದಿರಾ ಗುಣಕ್ಕೆ ತದ್ವಿರುದ್ದ ಧೃವದಂತಿದ್ದರು ಎಂಬುದು ಅಷ್ಟೇ ಸತ್ಯ.

ದೆಹಲಿಯಲ್ಲಿರುವ ಸ್ಲಂಗಳನ್ನು ಅಕ್ಷರಶಃ ಈ ದೇಶದ ಶಾಪವೇನೋ ಎಂಬಂತೆ ಪರಿಗಣಿಸಿದ್ದ ಸಂಜಯ್ ಗಾಂಧಿ, ದೆಹಲಿಯನ್ನು ಸ್ಲಂ ಮುಕ್ತ ಹಾಗೂ ವಿದೇಶಿ ಗುಣಮಟ್ಟದ ನಗರವನ್ನಾಗಿ ಮಾಡಬೇಕು ಎಂಬ ಕನಸನ್ನು ಕಂಡಿದ್ದರು. ಅಕ್ಷರಶಃ ಬಡವರ ಭಾವನೆಗೆ ಸ್ಪಂದಿಸುವ ಯಾವ ಔದಾರ್ಯವೂ ಅವರಲ್ಲಿ ಉಳಿದಿರಲಿಲ್ಲ.

ಅದು 1976 ಏಪ್ರಿಲ್ 13ರ ಬೆಳಗ್ಗಿನ ಜಾವ. ರಾಷ್ಟ್ರ ರಾಜಧಾನಿಯ ಗರ್ಭದಲ್ಲಿದ್ದ ತುರ್ಕ್‌ಮನ್ ಗೇಟ್ ಸ್ಲಂ ಪ್ರದೇಶವನ್ನು ಖಾಲಿ ಮಾಡುವ ಸಲುವಾಗಿ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಜಗಮೋಹನ್ ಹಾಗೂ ಬ್ರಿಜ್ ವರ್ಧನ್ ಅವರೊಂದಿಗೆ ಈ ಸ್ಲಂ ಪ್ರದೇಶಕ್ಕೆ ಭೇಟಿ ನೀಡಿದ್ದರು ಸಂಜಯ್ ಗಾಂಧಿ.

ಸಂಜಯ್ ಗಾಂಧಿ

ಸ್ಲಂನಲ್ಲಿನ ಗುಡಿಸಲುಗಳ ಮೇಲೆ ಏಕಾಏಕಿ ಬುಲ್ಡೋಜರ್‌ಗಳನ್ನು ಹರಿಸಲಾಗಿತ್ತು. ತೀರಾ ಅಮಾನವೀಯವಾಗಿ ಇಡೀ ಸ್ಲಂ ಅನ್ನು ನೆಲಸಮಗೊಳಿಸಲಾಗಿತ್ತು. ಇದನ್ನು ತಡೆಯಲು ಬಂದಂತಹ ಜನರ ಮೇಲೆ ದೆಹಲಿ ಪೊಲೀಸರು ನಿರ್ದಾಕ್ಷೀಣ್ಯವಾಗಿ ಗುಂಡಿನ ಮಳೆಗೆರೆದಿದ್ದರು. ಈ ಘಟನೆಯಲ್ಲಿ ಕನಿಷ್ಟ 150 ಜನ ಬಡವರು-ನಿರ್ಗತಿಕರು ಸಾವನ್ನಪ್ಪಿದ್ದರು. ಕೊನೆಗೆ ಇಲ್ಲಿ ವಾಸವಾಗಿದ್ದ ಸುಮಾರು 70,000 ಜನರನ್ನು ಯಮುನಾ ನದಿ ತೀರದಲ್ಲಿ ಇನ್ನೂ ಅಭಿವೃದ್ಧಿಯಾಗದ ವಸತಿ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.

ಭಾಗಶಃ ಬ್ರಿಟೀಷ್ ಭಾರತದಲ್ಲೂ ಸಹ ಜಲಿಯನ್ ವಾಲಾಬಾಗ್ ಹೊರತಾಗಿ ಭಾರತೀಯರ ಮೇಲೆ ಹೀಗೊಂದು ಅಮಾನವೀಯ ಸಾಮೂಹಿಕ ಶೂಟ್ಔಟ್ ನಡೆಸಿರುವ ಉದಾಹರಣೆಗಳಿಲ್ಲ. ಆದರೆ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಕೇವಲ 29 ವರ್ಷದಲ್ಲಿ ಪ್ರಭುತ್ವವೇ ತನ್ನ ಜನರನ್ನು ಅನಾಮತ್ತಾಗಿ ಬೀದಿ ಹೆಣದಂತೆ ಕೇವಲ ಸ್ಲಂ ತೆರವುಗೊಳಿಸುವ ಸಲುವಾಗಿ ಹೊಡೆದು ಹಾಕಿತ್ತು. ಪ್ರಜಾಪ್ರಭುತ್ವದಲ್ಲಿ ಹೀಗೊಂದು ಕರಾಳ ಇತಿಹಾಸಕ್ಕೆ ಅಂಕಿತ ಹಾಕಲಾಗಿತ್ತು.

ಆದರೆ, ಅಂದು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತದ ಕರಾಳ ಇತಿಹಾಸಕ್ಕೆ ಸಂಜಯ್ ಗಾಂಧಿ ಹಾಕಿಹೋಗಿದ್ದ ಅಂಕಿತವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಸರಿಸುತ್ತಿದೆಯೇ ಎಂಬ ಅನುಮಾನ ಇದೀಗ ಎಲ್ಲೆಡೆ ಮೂಡುತ್ತಿದೆ.

ಮೋದಿ ಮಾಡುತ್ತಿರುವುದೇನು?

ಅಸಲಿಗೆ ವ್ಯಾಪಾರ ವಹಿವಾಟು ಸೇರಿದಂತೆ ಅನೇಕ ವಿಚಾರಗಳಲ್ಲಿ ಅಮೆರಿಕ-ಭಾರತ ಎರಡು ದೇಶಗಳ ನಡುವಿನ ಸಂಬಂಧದ ಕುರಿತು ಮಾತುಕತೆ ನಡೆಸುವ ಸಲುವಾಗಿ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ಕ್ಕೆ ಭಾರತಕ್ಕೆ ಎರಡು ದಿನದ ಪ್ರವಾಸದ ಮೇಲೆ ಆಗಮಿಸುತ್ತಿದ್ದಾರೆ.

ಮೊದಲ ದಿನವೇ ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ’ನಮಸ್ತೆ ಟ್ರಂಪ್’ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಅದ್ದೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನಿಷ್ಟ 1 ಲಕ್ಷ ಜನ ಭಾಗವಹಿಸಲಿದ್ದು, ಮೋದಿ ಹಾಗೂ ಟ್ರಂಪ್ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಮೆರಿಕಾದಿಂದ ನೇರವಾಗಿ ಗುಜರಾತ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ಟ್ರಂಪ್ ಅಲ್ಲಿಂದ ಇಂದಿರಾ ಬ್ರಿಡ್ಜ್ ತನಕ ರಸ್ತೆ ಮಾರ್ಗದಲ್ಲಿ ಚಲಿಸಲಿದ್ದಾರೆ. ಹೀಗಾಗಿ ಈ ಮಾರ್ಗದಲ್ಲಿರುವ ಸ್ಲಂಗಳು ಕಾಣದಂತೆ ಅಲ್ಲಿನ ನಗರಾಡಳಿತ ಮೊದಲು ಸ್ಲಂ ಸುತ್ತಾ 6 ರಿಂದ 7 ಅಡಿ ಎತ್ತರದ ಗೋಡೆ ಕಟ್ಟಿ ಸ್ಲಂಗಳು ಕಾಣದಂತೆ ಮಾಡಲು ಮುಂದಾಗಿವೆ.

ಅಲ್ಲದೆ, ಈಗ ಮೊಟೆರಾ ಕ್ರೀಡಾಂಗಣದ ಪಕ್ಕದಲ್ಲೇ ಇರುವ ಸ್ಲಂ ಜನರನ್ನು ಜಾಗ ಖಾಲಿ ಮಾಡುವಂತೆ ನೋಟೀಸ್ ನೀಡಲಾಗಿದೆ. 45 ಕುಟುಂಬಗಳಲ್ಲಿ ಒಟ್ಟು 200ಕ್ಕೂ ಹೆಚ್ಚು ಜನರು ವಾಸವಿರುವ ಜನರನ್ನು 7 ದಿನಗಳ ಒಳಗಾಗಿ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಲಾಗಿದೆ.

ಅಸಲಿಗೆ 44 ವರ್ಷಗಳ ಹಿಂದೆ ಸಂಜಯ್ ಗಾಂಧಿ ಮಾಡಿದ ಕೆಲಸಕ್ಕೂ, ಇಂದು ನರೇಂದ್ರ ಮೋದಿ ಮಾಡುತ್ತಿರುವ ಕೆಲಸಕ್ಕೂ ಹೆಚ್ಚೇನು ವ್ಯತ್ಯಾಸವಿಲ್ಲ. ಸಂಜಯ್ ಗಾಂಧಿ ಕಾಲದಲ್ಲಿ ಸ್ಲಂ ತೆರವಿಗೆ ಒತ್ತಾಯಪೂರ್ವಕವಾಗಿ ರಕ್ತಪಾತ ನಡೆಸಲಾಗಿದ್ದರೆ, ಮೋದಿ ಕಾಲದಲ್ಲಿ ನಗರ ನಾಗರೀಕತೆ ಮತ್ತು ಸ್ಲಂಗಳ ನಡುವೆ ಗೋಡೆ ಎಬ್ಬಿಸಲಾಗುತ್ತಿದೆ ಅಷ್ಟೇ. ಆದರೆ, ಈ ಇಬ್ಬರೂ ನಾಯಕರ ಉದ್ದೇಶ ಒಂದೇ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಎಂಬುದು ಇನ್ನೂ ಅಭಿವೃದ್ಧಿ ಹೊಂದುತ್ತಿರುವ ತೃತೀಯ ಜಗತ್ತಿನ ರಾಷ್ಟ್ರ. ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವುದು ಈ ದೇಶವನ್ನೇ. ಸ್ಲಂ ಜನರು, ಬಡವರು ಹಾಗೂ ನಿರುದ್ಯೋಗಿಗಳು ಇರುವ ಈ ಭಾರತವನ್ನೇ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುತ್ತಿರುವುದು ಸಹ ಈ ಎಲ್ಲಾ ರೀತಿಯ ಜನರನ್ನೂ ತನ್ನ ಒಡಲಲ್ಲಿಟ್ಟುಕೊಂಡಿರುವ ಭಾರತಕ್ಕೆ.

ಹೀಗಾಗಿ ಇವರು ಗೋಡೆಗಳನ್ನು ಕಟ್ಟಿ ಏನನ್ನು ಮೆರೆಮಾಚಲು ಹೊರಟಿದ್ದಾರೆ. ಇಡೀ ವಿಶ್ವದ ಗುರು ಭಾರತ ಎಂದು ಹೆಮ್ಮೆ ಪಡುವ ಇದೇ ಜನರಿಗೆ ನೈಜ ಭಾರತವನ್ನು ಇಡೀ ವಿಶ್ವಕ್ಕೆ ಪರಿಚಯಿಸಲು ಮುಜುಗುರವೇಕೆ? ಇಲ್ಲಿ ಗೋಡೆ ಕಟ್ಟಲು ಬಳಸಿದ ಅದೇ ಇಟ್ಟಿಗೆ, ಸಿಮೆಂಟು ಬಳಸಿ ಈ ಸ್ಲಂ ಜನರಿಗೆ ಒಂದು ಸೂರನ್ನು, ಉತ್ತಮ ಬದುಕನ್ನು ಕಟ್ಟಿಕೊಡಬಹುದಲ್ಲವೇ? ಈ ಕುರಿತು ಭಾರತೀಯ ಪ್ರಭುತ್ವ ಎಂದಿಗೂ ಯೋಚಿಸಿಯೇ ಇಲ್ಲವೇಕೆ?

ಇವು ಭಾರತದ ಮಟ್ಟಿಗೆ ಗೋಡೆಗಳ ನೆಪದಲ್ಲಿ ಹುಟ್ಟಿದ ಉತ್ತರವಿಲ್ಲದ ಪ್ರಶ್ನೆಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...