Homeಮುಖಪುಟಶಾಹೀನ್‌ ಬಾಗ್‌ ಪ್ರತಿಭಟನಾಕಾರರೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸಚಿವೆ ಸ್ಮೃತಿ ಇರಾನಿ

ಶಾಹೀನ್‌ ಬಾಗ್‌ ಪ್ರತಿಭಟನಾಕಾರರೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸಚಿವೆ ಸ್ಮೃತಿ ಇರಾನಿ

ಪಾಕಿಸ್ತಾನದಂತಹ ದೇಶದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರರಿಗೆ ಆಶ್ರಯ ನೀಡುವ ಸಿಎಎಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಸಿಎಎ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಶಾಹೀನ್ ಬಾಗ್‌ನಲ್ಲಿ ವಿಷಕಾರಿ ವಾತಾವರಣ ಇರುವುದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

“ನಾವು ಮೋದಿಯನ್ನು ಕೊಲ್ಲುತ್ತೇವೆ” ಎಂಬ ಘೋಷಣೆಗಳನ್ನು ಕೂಗುವಂತೆ ಮಕ್ಕಳನ್ನು ತರಬೇತುಗೊಳಿಸುವವರ ಬಗ್ಗೆ ನೀವು ಏನು ಹೇಳುತ್ತೀರಿ? ಜನರು ‘ಭಾರತ್ ತೇರೆ ತುಕ್ಡೆ ಹೊಂಗೆ’ ಎಂದು ಹೇಳಿದಾಗ ನೀವು ಏನು ಹೇಳುತ್ತೀರಿ. ನಾವು 15 ಕೋಟಿ ಎಂದು ಹೇಳುವವರಿಗೆ ನೀವು ಏನು ಹೇಳುತ್ತೀರಿ…?” ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರು ತಮ್ಮ ಮಕ್ಕಳನ್ನು ಪ್ರತಿಭಟನಾ ಸ್ಥಳಕ್ಕೆ ಏಕೆ ಕರೆತರುತ್ತಾರೆ ಎಂದು ಪ್ರಶ್ನಿಸಿದ ಅವರು, ಚಳಿಗಾಲದಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ಕು ತಿಂಗಳ ಮಗುವನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದದ್ದು ಅಂತಿಮವಾಗಿ ಶಿಶುವಿನ ಸಾವಿಗೆ ಕಾರಣವಾಯಿತು ಎಂಬುದು ವಿವರಿಸಲಾಗದಷ್ಟು ಆಘಾತಕಾರಿ ಎಂದಿದ್ದಾರೆ.

ಪ್ರತಿಭಟನಾಕಾರರಿಗೆ ಪ್ರತಿಭಟಿಸುವ ಹಕ್ಕಿದೆ ಎಂದು ಒಪ್ಪಿಕೊಂಡ ಅವರು, ಆದರೆ ಕಾಂಗ್ರೆಸ್ ನ ಸಲ್ಮಾನ್ ಖುರ್ಷಿದ್ ಅವರಂತಹ ನಾಯಕರು ಶಾಹೀನ್ ಬಾಗ್ ನಲ್ಲಿ ವಿಭಜಕ ಘೋಷಣೆಗಳೊಂದಿಗೆ ಭಾವೋದ್ರೇಕದ ಮಾತುಗಳನ್ನಾಡುತ್ತಾರೆ ಎಂದು ಆರೋಪಿಸಿದರು.

“ಪಂಡಿತರನ್ನು ಕಾಶ್ಮೀರದಿಂದ ಹೊರಹಾಕಿದಾಗ ಖುರ್ಷಿದ್‌ ಅದೇ ಕಾಳಜಿಯನ್ನು ಏಕೆ ತೋರಿಸಲಿಲ್ಲ?” ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಶಹೀನ್ ಬಾಗ್‌ ಪ್ರತಿಭಟನೆಯ ಜಾಗವನ್ನು ಬದಲಾಯಿಸುವಂತೆ ಪರಿಹಾರವನ್ನು ಕಂಡುಕೊಳ್ಳಲು ಪ್ರತಿಭಟನಾಕಾರರೊಂದಿಗೆ ಮಾತನಾಡಲು ಸುಪ್ರೀಂ ಕೋರ್ಟ್‌ ಮೂರು ಮಧ್ಯವರ್ತಿಗಳನ್ನು ನೇಮಿಸಿದೆ. ಆದರೆ ಗುರುವಾರ ಮತ್ತು ಶುಕ್ರವಾರದ ಎರಡು ಸುತ್ತಿನ ಮಾತುಕತೆಗಳು ಸಹ ವಿಫಲವಾಗಿವೆ.

ಪಾಕಿಸ್ತಾನದಂತಹ ದೇಶದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರರಿಗೆ ಇದು ಆಶ್ರಯ ನೀಡುತ್ತದೆ ಎಂಬ ಬಗ್ಗೆ ಹೆಮ್ಮೆ ಇದೆ ಎಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಸಮರ್ಥಿಸಿಕೊಂಡಿದ್ದಾರೆ.

“ಸಿಖ್ ಅಥವಾ ಹಿಂದೂ ಹುಡುಗಿಯರ ಮೇಲೆ ಅತ್ಯಾಚಾರ ಮತ್ತು ಅವಳ ಅತ್ಯಾಚಾರಿಗಳನ್ನು ಮದುವೆಯಾಗುವಂತೆ ಒತ್ತಾಯಿಸಿದ ಪ್ರಕರಣಗಳು ನಡೆದಿವೆ. ಅವರು ಭಾರತದಲ್ಲಿ ಆಶ್ರಯ ಬಯಸುವ ಜನರು. ಅವರಿಗೆ ಅಗತ್ಯವಾದ ಆಶ್ರಯವನ್ನು ನೀಡುವ ಈ ಕಾನೂನು ನನಗೆ ಹೆಮ್ಮೆ ತಂದಿದೆ ”ಎಂದು ಲಖನೌದ ಹಿಂದೂಸ್ತಾನ್ ಸಮಾಗಂನಲ್ಲಿ ಇರಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...