Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...