Homeಮುಖಪುಟಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

- Advertisement -
- Advertisement -

ದಾವಣಗೆರೆಯಲ್ಲೂ ಕೂಡ ಶಾಹಿನ್ ಬಾಗ್ ಮಾದರಿ ಹೋರಾಟ ನಡೆಯುತ್ತಿದೆ. (ಫೆಬ್ರವರಿ 22) ಇವತ್ತಿಗೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ಬರೀ ಮುಸ್ಲಿಂ ಸಮುದಾಯವಲ್ಲದೆ ಸುತ್ತಮುತ್ತ ಹಳ್ಳಿಯ ದಲಿತ ಸಮುದಾಯವರು ಹೋರಾಟಕ್ಕೆ ಕೈ ಜೋಡಿಸುತ್ತಿದ್ದಾರೆ. ಯಾಕೆಂದರೆ ಎಲ್ಲರೂ ಪರಸ್ಪರ ಪ್ರೀತಿ ಸಮಾನತೆ, ಸಹಬಾಳ್ವೆ, ಸಹೋದರತೆಯನ್ನು ಬಯಸುವ ಮನಸುಳ್ಳವರಾಗಿದ್ದಾರೆ.

ಶಹೀದ್ ಅಶ್ಫಾಕುಲ್ಲಾ ಖಾನ್ ಒಂದು ಮಾತನ್ನು ಹೇಳುತ್ತಾರೆ, ‘ಪ್ರೀತಿ ಯಾವ ಮನುಷ್ಯನ ಹೃದಯದಲ್ಲಿ ಇರುತ್ತೋ ಆತ ದೇಶಕ್ಕಾಗಿ, ದೇಶದ ಜನರಿಗಾಗಿ, ಎಲ್ಲರಿಗಾಗಿ ಎಲ್ಲರ ಹಿತಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಾನೆ. ಮಾನವ ಪ್ರೇಮವೆ ದೇವ ಪ್ರೇಮವಾಗಿ ಮನುಷ್ಯ ಜೀವಿಸಬೇಕು, ಅದುವೆ ನಿಜವಾದ ದೇಶಪ್ರೇಮ’. ಈ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ವಿಚಿತ್ರ ಅನ್ನಿಸುತ್ತದೆ. ಯಾಕೆಂದರೆ ಬೆಳಕು ಹರಿದರೆ ಸಾಕು ದನದ ಹೆಸರಿನಲ್ಲಿ ಮನುಷ್ಯನ ಕಗ್ಗೊಲೆಗಳು ನಡೆಯುತ್ತಿವೆ.

ಲವ್‍ಜಿಹಾದ್, ಗೋಮಾಂಸ ಇತ್ಯಾದಿಗಳ ಹೆಸರಿನಲ್ಲಿ ಮುಸ್ಲಿಮರ ಹತ್ಯೆ, ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಕೊಲೆಗಳು, ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗದೆ ಪರದಾಟ, ನಿರುದ್ಯೋಗ/ಬಡತನದ ಸಲುವಾಗಿ ಆತ್ಮಹತ್ಯೆಗಳು, ಹಸಿವಿನಿಂದ ಹಾಹಾಕಾರ – ಇವುಗಳು ದೇಶದ ಇಂದಿನ ಸ್ಥಿತಿ. ಮಹಾತ್ಮ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ್, ಭಗತ್ ಸಿಂಗ್, ಆಶ್ಫಾಖ್‍ವುಲ್ಲಾಖಾನ್‍ರಂಥವರು ಬಯಸಿದ ದೇಶ ಇದಾ ಅಂತ ಪ್ರಶ್ನೆಯಾಗಿ ಕಾಡುತ್ತೆ. ಬಡತನ, ಅಪೌಷ್ಟಿಕತೆ, ನಿರುದ್ಯೋಗ,  ಅಸ್ಪೃಶ್ಯತೆ, ಅತ್ಯಾಚಾರಗಳು ತುಂಬಿ ತುಳುಕುತ್ತಿರುವಾಗ ನಾವು ಪ್ರಪಂಚಕ್ಕೇ ಮಾದರಿಯಾಗುವ ರಾಷ್ಟ್ರ ಆಗಲು ಸಾಧ್ಯವಾ? ಇಂತಹ ಜ್ವಲಂತ ಸಮಸ್ಯೆಗಳನ್ನು ಬದಿಗಿಟ್ಟು ಇವತ್ತು NPR, NRC, CAA ಅಂಥ ಕರಾಳ ಕಾಯ್ದೆಯನ್ನು ತಂದು ಧರ್ಮ/ಜಾತಿಗಳ ಮಧ್ಯೆ ಜಗಳವನ್ನು ಹಚ್ಚುವುದನ್ನು ಆಡಳಿತ ಎನ್ನುವುದು ಸಾಧ್ಯವಾ?

ಇದರ ಮೂಲಕ ತನ್ನ ರಾಜಕೀಯದ ಬೆಳೆಯನ್ನು ಬೇಯಿಸಿಕೊಳ್ಳಲು ತುಂಬಾ ಆತುರದಲ್ಲಿ ನಮ್ಮ ದೇಶದ ಮೋದಿಶಾ ಜೋಡಿ ಇತ್ತು. ಅವರ ಈ ಆಸೆಯನ್ನು ಹುಸಿಯಾಗಿಸುವ ರೀತಿಯಲ್ಲಿ ದೇಶದಾದ್ಯಂತ ನಾವು ಭಾರತಿಯರು ಒಂದೆ ಬ್ಯಾನರ್ ಅಡಿಯಲ್ಲಿ ಕೆಂಪು, ನೀಲಿ, ಹಸಿರು ವಿಚಾರ ಉಳ್ಳವರು, ಪ್ರಗತಿಪರರು, ಬರಹಗಾರರು, ವಿದ್ಯಾರ್ಥಿ ಯುವಜನರು ಬೀದಿಗಿಳಿದರು. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೋರಾಟದ ಮುಂಚೂಣಿಯಲ್ಲಿದ್ದು ಇವತ್ತು ಹೋರಾಟವನ್ನು ನಡೆಸಿಕೊಂಡು ಹೋಗುತಿದ್ದಾರೆ. ಶಾಹಿನ್ ಬಾಗ್‍ನ ತಾಯಂದಿರ ಹೋರಾಟ ಜಗತ್ತೇ ನೋಡುವಂತಹ ಮಾದರಿಯಾಗಿದೆ. ಆ ತಾಯಂದಿಯರಿಗೆ ನನ್ನ ಸಾವಿರ ಸಾವಿರ ಸಲಾಂ. ಇದೆ ಮಾದರಿಯಲ್ಲಿ ದಾವಣಗೆರೆ ಇಮಾಂ ಅಹ್ಮದ್ ರಜಾ ಪಾರ್ಕಿನಲ್ಲಿ ಅನಿರ್ದಿಷ್ಟ್ಟ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಕೂಡ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ನಾನು ಅದರ ಭಾಗವಾಗಿದ್ದೇನೆ ಎಂದುಕೊಳ್ಳಲು ಹೆಮ್ಮೆಯೆನಿಸುತ್ತದೆ.

ದಾವಣಗೆರೆಯ ಶಾಹೀನ್‌ಬಾಗ್‌

ಇವರು ಭಾರತೀಯರಾದ ನಮ್ಮೆಲ್ಲರನ್ನು ಹೊರಗೆ ಹಾಕಲು ಸಾಧ್ಯವೆಂದು ನನಗನ್ನಿಸುವುದಿಲ್ಲ. ಆದರೆ, ಸಂಘ ಪರಿವಾರದ ಉದ್ದೇಶವೇನೆಂದರೆ ಎಲ್ಲರನ್ನೂ ಆತಂಕದಲ್ಲಿಟ್ಟು ಜೀ ಹುಜೂರ್ ಅಂತ ಅನ್ನಿಸುತ್ತಿರಬೇಕು. ಬಾಂಗ್ಲಾದೇಶ್, ಆಫ್ಘಾನಿಸ್ತಾನ್, ಪಾಕಿಸ್ತಾನದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿದ್ದಾರೆಂದು ಅರ್ಜಿಯನ್ನು ಕೊಟ್ಟಿದ್ದರಾ? ಆದರೆ, ನಾವು ಬೀಡಿ ಸುತ್ತುವವರ ಪರವಾಗಿ, ಕಟ್ಟಡ ಕಟ್ಟುವವರ ಪರವಾಗಿ, ಮನೆಯಿಲ್ಲದವರ ಪರವಾಗಿ ನಿಮಗೆ ಸಾವಿರಾರು ಅರ್ಜಿಗಳನ್ನು ಕೊಟ್ಟಿದ್ದೆವಲ್ಲಾ? ಅರ್ಜಿ ಕೊಟ್ಟ ಸ್ವಂತ ದೇಶದವರಿಗೇ ನ್ಯಾಯ ಕೊಡದವರು ಬೇರೆ ದೇಶದವರಿಗೆ ಯಾವ ನ್ಯಾಯ ಕೊಡಿಸಬಲ್ಲಿರಿ?

ಒಂದು ಪ್ರಶ್ನೆ ನಿಮಗೆ. ಈ ದೇಶದಲ್ಲಿರುವ ಕೋಟಿಗಟ್ಟಲೇ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿದ್ದಾರಲ್ಲಾ ಅವರ್ಯಾರು, ದನದ ಚರ್ಮ ಸುಲಿದಿದ್ದಾರೆಂದು ಸಾಯೋ ಬದುಕುವ ಹಾಗೆ ದಲಿತರಿಗೆ ಹೊಡೆದಿದ್ದರಲ್ಲಾ ಅವರ್ಯಾರು? ಇವತ್ತು ನಿಮಿಷಕ್ಕೊಂದು ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡಿತಾಯಿದೆ ಅಲ್ವಾ ಅವರ್ಯಾರು? ಈ ಎಲ್ಲರನ್ನೂ ಸೋದರರಂತೆ ಭಾವಿಸಿ ಬದುಕದೇ ಇದ್ದಲ್ಲಿ ನಮ್ಮದೊಂದು ದೇಶವಾಗಿ ಉಳಿದೀತೇ?

ಈ ಪ್ರಶ್ನೆಗಳಿಗೆ ಅವರಲ್ಲಿ ಉತ್ತರವಿಲ್ಲ. ಆದರೆ ಶಾಹೀನ್‍ಬಾಗ್‍ಗಳಲ್ಲಿ ಕೂತವರಲ್ಲಿ ಉತ್ತರವಿದೆ. ಅಲ್ಲಿ ಬಂಧುತ್ವವನ್ನು ಬೆಸೆಯಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...