Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...