Homeಮುಖಪುಟಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮನುವಾದಿ ಕಾರ್ಯಸೂಚಿಗೆ ಸಾರ್ವಜನಿಕ ಬೆಂಬಲವಿದೆಯೇ ಎಂದು ಪರೀಕ್ಷಿಸಲು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೇರ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸವಾಲು ಹಾಕಿದ್ದಾರೆ.

ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಆಜಾದ್, ಹೊಸ ಪೌರತ್ವ ಕಾನೂನು (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಆರ್‌ಎಸ್‌ಎಸ್‌ನ “ಹಿಡನ್‌ ಅಜೆಂಡಾಗಳಾಗಿವೆ” ಎಂದು ಆರೋಪಿಸಿದ್ದಾರೆ.

“ನಾನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಸಲಹೆಯನ್ನು ನೀಡಲು ಬಯಸುತ್ತೇನೆ … ಸುಳ್ಳಿನ ಮುಸುಕನ್ನು ತೆಗೆದು ನಿಮ್ಮ ಕಾರ್ಯಸೂಚಿಯೊಂದಿಗೆ ನೇರ ಚುನಾವಣೆಗಳಲ್ಲಿ ಸ್ಪರ್ಧಿಸಿ. ಇದು ಪ್ರಜಾಪ್ರಭುತ್ವ .. ಆಗ ಈ ದೇಶ ನಡೆಯುತ್ತಿರುವುದು ನಿಮ್ಮ ಮನುಸ್ಮೃತಿಯಿಂದಲೋ  ಅಥವಾ ಸಂವಿಧಾನದಿಂದಲೋ ಎಂದು ಜನರು ತಿಳಿಸುತ್ತಾರೆ ಎಂದು ಆಜಾದ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಹೆದರಿ ಸ್ಥಳೀಯ ಪೊಲೀಸರು ಅನುಮತಿಯನ್ನು ನಿರಾಕರಿಸಿದ ನಂತರ,  ಬಾಂಬೆ ಹೈಕೋರ್ಟ್‌ನ ನಾಗ್ಪುರ ನ್ಯಾಯಪೀಠವು ಭೀಮ್ ಆರ್ಮಿಯು ತನ್ನ ಕಾರ್ಯಕರ್ತರ ಸಭೆಯನ್ನು ರೇಶಿಂಬಾಗ್ ಮೈದಾನದಲ್ಲಿ ನಡೆಸಲು ಅನುಮತಿ ನೀಡಿತು.

ನಾಗ್ಪುರ ಪೊಲೀಸರ ವಾದವನ್ನು ಉಲ್ಲೇಖಿಸಿದ ಆಜಾದ್, ಎರಡು ಸಿದ್ಧಾಂತಗಳು ಯಾವಾಗಲೂ ಘರ್ಷಣೆಗೆ ಒಳಗಾಗುತ್ತವೆ. ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ ಎಂದಿದ್ದಾರೆ.

ಆರ್‌ಎಸ್‌ಎಸ್ ಬಿಜೆಪಿಯನ್ನು ನಡೆಸುತ್ತಿರುವುದರಿಂದ ಪ್ರಧಾನ ಮಂತ್ರಿಗಳು ಸಂಘದ ಮುಖ್ಯಸ್ಥರನ್ನು ಭೇಟಿಯಾಗಿ ಕೈಮುಗಿದು ತಮ್ಮ ಕಾರ್ಯಕ್ರಮಗಳನ್ನು ವಿವರಿಸುತ್ತಾರೆ ಎಂದು ಅವರು ಹೇಳಿದರು.

“ಅವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಆದರೆ ಮನುಸ್ಮೃತಿಯ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಾರೆ” ಎಂದ ಅವರು, ಆರ್‌ಎಸ್‌ಎಸ್ ಹಿಂಬಾಗಿಲ ಮೂಲಕ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನಮ್ಮ ಜನರು ಸರ್ಕಾರಿ ಉದ್ಯೋಗಗಳಲ್ಲಿ ಇನ್ನೂ ಪ್ರಮುಖ ಹುದ್ದೆಗಳನ್ನು ಪಡೆಯಬೇಕಿದೆ. ಒಂದು ದಿನ, ನಮ್ಮ ಪ್ರಧಾನಿ ಮತ್ತು ಇತರ ರಾಜ್ಯಗಳಲ್ಲಿ ಸರ್ಕಾರಗಳನ್ನು ನಾವು ರಚಿಸುತ್ತೇವೆ. ಆಗ ನಾವು ನಿಮಗೆ ಮೀಸಲಾತಿ ನೀಡುತ್ತೇವೆ. ಸಮಾಜದ ಇತರ ವರ್ಗಗಳಿಗೂ ಸಹ ಮೀಸಲಾತಿ ನೀಡುತ್ತೇವೆ “ನಾವು ನೀಡುವವರಾಗುತ್ತೇವೆಯೇ ಹೊರತು ತೆಗೆದುಕೊಳ್ಳುವವರಲ್ಲ” ಎಂದು ಆಜಾದ್ ಹೇಳಿದರು.

ಮೀಸಲಾತಿ ವ್ಯವಸ್ಥೆ ಕುರಿತು ಚರ್ಚೆ ನಡೆಸಲು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸವಾಲು ಕೂಡ ಹಾಕಿದ್ದಾರೆ. ಅಲ್ಲದೇ “ಜನರ ಹಿತದೃಷ್ಟಿಯಿಂದ” ರಾಜ್ಯದಲ್ಲಿ ಎನ್‌ಪಿಆರ್‌ಗೆ ಅವಕಾಶ ನೀಡದಂತೆ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಆಜಾದ್ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...