Homeಮುಖಪುಟಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

- Advertisement -
- Advertisement -

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ, ರಾಷ್ಟ್ರ ನಿರ್ಮಾಣದಲ್ಲಿ ನೆಹರೂರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಈ ಪ್ರಶ್ನೆಗಳು ಬಿಜೆಪಿ ಅಥವಾ ಆರ್‌ಎಸ್‌ಎಸ್‌ ವರ್ಕಶಾಪ್‌ನಲ್ಲಿ ಕೇಳಿಬಂದವು ಅಲ್ಲ. ಬದಲಿಗೆ ಮಣಿಪುರದ ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್‌ ಪ್ರಶ್ನೆಪತ್ರಿಕೆಯಲ್ಲಿರುವವು ಎಂದರೆ ನೀವು ನಂಬಲೇಬೇಕು.

ಹೌದು ಹೀಗೊಂದು ದೊಡ್ಡ ರಾದ್ಧಾಂತ ಮಣಿಪುರ ರಾಜ್ಯದಲ್ಲಿ ಉದ್ಭವಿಸಿದೆ. ಅಲ್ಲಿನ ದ್ವಿತೀಯ ಪಿ.ಯು.ಸಿಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್‌ ಆಗಿದ್ದು, ಅಲ್ಲಿನ ಹಲವು ಪ್ರಶ್ನೆಗಳು ನೆಹರೂವನ್ನು ತೆಗಳಲು, ಬಿಜೆಪಿಯನ್ನು ಹೊಗಳಲು ಬಳಕೆಯಾಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿವೆ.

ಪ್ರಾದೇಶಿಕ ಅಸ್ಮಿತೆಯು ರಾಷ್ಟ್ರದ ಏಕತೆಗೆ ಹೇಗೆ ಸವಾಲಾಗಬಹುದು ವಿವರಿಸಿ ಎಂಬಂತಹ ಪ್ರಶ್ನೆಗಳು ಪ್ರಶ್ನೆ ಪತ್ರಿಕೆಯಲ್ಲಿ ತೂರಿಕೊಂಡ ಕಾರಣ ಇದು ಪಕ್ಕಾ ರಾಜಕೀಯ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ದಿ ಟೈಮ್ಸ್‌ ಆಫ್‌ ಇಂಡಿಯಾ ಪತ್ರಿಕೆಯು ಈ ಕುರಿತು ಮಣಿಪುರದ ಹಲವು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಪ್ರಕಟಿಸಿದೆ. ಅದರಂತೆ, “ಅಂತಹ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ರೀತಿಯ ರಾಜಕೀಯ ಮನಸ್ಥಿತಿಯನ್ನು ಹುಟ್ಟುಹಾಕುವ ಪ್ರಯತ್ನವಾಗಿವೆ” ಎಂದು ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಪಿಸಿಸಿ ವಕ್ತಾರ ಖಾಯ್ ಜಾಯ್ಕಿಶನ್ ಆರೋಪಿಸಿದ್ದಾರೆ.

ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ: ಕಾಂಗ್ರೆಸ್ ನಾಯಕ

ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ (ಕೋಹೆಸ್ಸೆಮ್) ಅಧ್ಯಕ್ಷ ಎಲ್ ಮಹೇಂದ್ರ ಸಿಂಗ್ ಅವರು “ಈ ವಿಷಯದ ಬಗ್ಗೆ ಪರೀಕ್ಷಾ ನಿಯಂತ್ರಕರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಶ್ನೆಗಳನ್ನು ‘ಪಾರ್ಟಿ ಸಿಸ್ಟಮ್ ಇನ್ ಇಂಡಿಯಾ’ ಅಧ್ಯಾಯದಿಂದ ಹೊಂದಿಸಲಾಗಿದೆ ಎಂದು ತಿಳಿಸಲಾಯಿತು, ಇದು ಒಂದು ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ” ಎಂದು ಹೇಳಿದ್ದಾರೆ.

ಸಿಪಿಐ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಮಾಜಿ ಶಾಸಕ ಮೊಯಿರಾಂಗ್ಥೆಮ್ ನಾರಾ, “ಅಂತಹ ಪ್ರಶ್ನೆಗಳನ್ನು ಹೊಂದಿಸುವ ವಿಧಾನವು ರಾಜಕೀಯ ಸಂಬಂಧವನ್ನು ಮಾತ್ರ ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಬಹಳಷ್ಟು ಜನ ತಮ್ಮ ರಾಜಕೀಯ ಅಜೆಂಡಾವನ್ನು ಮಕ್ಕಳ ಮೇಲೆ ಹೇರಲು ಶಿಕ್ಷಣ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರಿಯಾದುದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಮಣಿಪುರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ನಿಂಬಸ್ ಸಿಂಗ್, “ರಾಷ್ಟ್ರ ನಿರ್ಮಾಣದಲ್ಲಿ ನೆಹರುರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಎಂಬುದು ಅವರು ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದರಿಂದ ಸಂಬಂಧಿತ ಪ್ರಶ್ನೆಯಾಗಿದೆ. ಭಾರತವನ್ನು ನಿರ್ಮಿಸುವಲ್ಲಿ ನೆಹರೂ ಪಾತ್ರವಹಿಸಿದ್ದರಿಂದ, ಅವರ ನಾಯಕತ್ವದಲ್ಲಿ ವ್ಯವಸ್ಥೆಯಲ್ಲಿ ಸಕಾರಾತ್ಮಕ ಮತ್ತು ನಕರಾತ್ಮಕ ಅಂಶಗಳು ಇದ್ದಿರಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...