Homeಮುಖಪುಟಕೇವಲ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

ಕೇವಲ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

- Advertisement -
- Advertisement -

2016ರಲ್ಲಿ ಕನ್ಹಯ್ಯ ಕುಮಾರ್ ವಿಚಾರದ ಕುರಿತು ರಾಹುಲ್ ಕುನ್ವಾಲ್ (ನಿರ್ವಾಹಕ ಸಂಪಾದಕ, ಟೈಮ್ಸ್ ಆಫ್ ಇಂಡಿಯಾ) ನಡೆಸಿದ ಸಂದರ್ಶನ

ಅನುವಾದ: ನಿಖಿಲ್ ಕೋಲ್ಪೆ

ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಲ್ಲಿ ಕೂಗಲಾದ ಕೆಲವು ಘೋಷಣೆಗಳು ‘ಸಮಸ್ಯಾತ್ಮಕ’ವಾಗಿದ್ದರೂ, ಈ ಘಟನೆ ನಡೆಯುವಾಗ ಸ್ಥಳದಲ್ಲಿದ್ದ ಕನ್ನಯ್ಯ ಕುಮಾರ್ ವಿರುದ್ಧ ಹೊರಿಸಲಾದ ರಾಷ್ಟ್ರದ್ರೋಹದ ಆರೋಪಕ್ಕೆ ಸಮವಲ್ಲ ಎಂದು ಹೇಳಿರುವ ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ ದೇಶದ್ರೋಹದ ಕಾನೂನನ್ನು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆ: ನಿಮ್ಮೆಲ್ಲಾ ಖ್ಯಾತಿ ಮತ್ತು ಅನುಭವದ ಹಿನ್ನೆಲೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿದ್ದು ಸರಿಯೋ, ತಪ್ಪೋ ಎಂದು ವಿಶ್ಲೇಷಿಸುವಂತೆ ನಾವು ಕೋರುತ್ತೇವೆ.

ಸೊರಾಬ್ಜಿ: ಅವೆಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿವೆ. ಮೊತ್ತಮೊದಲಾಗಿ ರಾಷ್ಟ್ರದ್ರೋಹ ಎಂದರೆ ಏನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಸರಕಾರದ ಮೇಲಿನ ಯಾವುದೇ ಟೀಕೆ, ಸರಕಾರ ಕೈಗೊಂಡ ಕಾರ್ಯಗಳ ನಿರಾಕರಣೆ- ಅದೆಷ್ಟೇ ಬಲವಾಗಿ ಅಭಿವ್ಯಕ್ತಗೊಳಿಸಿದರೂ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಕೇದಾರನಾಥ ಪ್ರಕರಣದಲ್ಲಿ ವಿಧಿ 124ಎಯ ಸಿಂಧುತ್ವವನ್ನು ಪರಿಗಣಿಸಿದಾಗ, ಈ ವಿಧಿಯು ಸಾರ್ವಜನಿಕ ಶಿಸ್ತನ್ನು ಭಂಗಗೊಳಿಸುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಮಾತು, ಶಬ್ದಗಳು ಅಥವಾ ಕೃತಿಗೆ ಸೀಮಿತವಾಗಿದೆ.

ಪ್ರಶ್ನೆ: ನಾವು 1962ರ ಕೇದಾರನಾಥ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಂಡು, ಅದೇ ಮಾನದಂಡವನ್ನು ಜೆಎನ್‌ಯು ಪ್ರಕರಣಕ್ಕೆ ಅನ್ವಯಿಸಿದರೆ, ರಾಷ್ಟ್ರದ್ರೋಹದ ಆರೋಪವನ್ನು ತಪ್ಪಾಗಿ ಅನ್ವಯಿಸಲಾಗಿದೆಯೇ?

ಸೊರಾಬ್ಜಿ: ಅದು ಬೇರೆಬೇರೆ ವಿಷಯಗಳ ಮೇಲೆ ಅವಲಂಬಿಸಿದೆ. ಅವರು ಕೇವಲ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ, ನನ್ನ ಮಟ್ಟಿಗೆ ಅದು ತೀರಾ ಖಂಡನೀಯ. ಆದರೆ, ಅದು ರಾಷ್ಟ್ರದ್ರೋಹವಲ್ಲ. ಆದರೆ, ಅವರು ಈ ಸರಕಾರವೊಂದು ದಬ್ಬಾಳಿಕೆಯ ಸರಕಾರ, ಜನರಿಗೆ ಅವರ ಮೂಲಭೂತ ಹಕ್ಕುಗಳನ್ನು ತಿಳಿಯುವ ಅವಕಾಶವಿಲ್ಲ, ಅದರ ವಿರುದ್ಧ ಪ್ರತಿಭಟಿಸಿ ಪ್ರಯೋಜನವಿಲ್ಲ, ನಾವದನ್ನು ಕಿತ್ತೆಸೆಯಬೇಕು ಎಂದು ಹೇಳಿದ್ದರೆ, ಅದು ಹಿಂಸೆಗೆ ಪ್ರಚೋದನೆಯಾಗುತ್ತದೆ ಮತ್ತು ರಾಷ್ಟ್ರದ್ರೋಹದ ಪ್ರಕರಣವನ್ನು ಆಕರ್ಷಿಸುತ್ತದೆ. ಆದರೆ, ಎಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿದೆ.

ಪ್ರಶ್ನೆ: ವಾಸ್ತವಾಂಶಗಳು. ಜೆಎನ್‌ಯುನಲ್ಲಿ ಕೂಗಲಾದ ಕೆಲವು ಘೋಷಣೆಗಳೆಂದರೆ, ‘ಪಾಕಿಸ್ತಾನ್ ಜಿಂದಾಬಾದ್’, ‘ಭಾರತ್‌ಕೆ ಬರ್ಬಾದಿ ತಕ್ ಜಂಗ್ ರಹೇಗಿ’ (ಭಾರತದ ಸರ್ವನಾಶದ ತನಕ ಯುದ್ಧ), ‘ಕಾಶ್ಮೀರ್ ಕಿ ಆಜಾದಿ ತಕ್ ಜಂಗ್ ರಹೇಗಿ’ (ಕಾಶ್ಮೀರದ ಸ್ವಾತಂತ್ರ್ಯದ ತನಕ ಯುದ್ಧ), ‘ಅಫ್ಜಲ್ ಹಮ್ ಶರ್ಮಿಂದಾ ಹೈ. ತೇರೇ ಕಾತಿಲ್ ಜಿಂದಾ ಹೈ’ ( ಅಫ್ಜಲ್ ನಮಗೆ ನಾಚಿಕೆಯಾಗುತ್ತಿದೆ, ನಿನ್ನ ಹಂತಕರು ಜೀವಂತವಿದ್ದಾರೆ), ‘ತುಮ್ ಕಿತ್ನೇ ಅಫ್ಜಲ್ ಮಾರೋಗೆ, ಹರ್ ಘರ್‌ಮೇ ಅಫ್ಜಲ್ ನಿಕ್ಲೇಗಾ’ ( ನೀನೆಷ್ಟು ಅಫ್ಜಲ್‌ಗಳನ್ನು ಕೊಲ್ಲುವೆ, ಪ್ರತಿ ಮನೆಯಲ್ಲಿ ಅಫ್ಜಲ್ ಹುಟ್ಟುವನು), ‘ಅಫ್ಜಲ್ ತೇರೆ ಖೂನ್ ಸೆ ಇಂಕ್ವಿಲಾಬ್ ಆಯೇಗಾ’ (ಅಫ್ಜಲ್ ನಿನ್ನ ರಕ್ತದಿಂದ ಕ್ರಾಂತಿ ಬರುವುದು)

ಸೊರಾಬ್ಜಿ: ಕೇವಲ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುವುದು ರಾಷ್ಟ್ರದ್ರೋಹವಲ್ಲ. ಭಾರತ್ ಕೆ ಬರ್ಬಾದಿ… ಇದು ಸಮಸ್ಯಾತ್ಮಕ. ಆದರೆ, ರಾಷ್ಟ್ರದ್ರೋಹವೆಂದು ನಾನು ಹೇಳಲಾರೆ. ಈ ವಿಧಿ ಅತ್ಯಂತ ಗಂಭೀರವಾದ ದಂಡನಾ ವಿಧಿ. ಅದು ಅತ್ಯಂತ ಸುಸ್ಪಷ್ಟ ಪ್ರಕರಣಗಳಿಗೆ ಅನ್ವಯಿಸುತ್ತದೆ. ಉಳಿದವುಗಳು ಪ್ರಚೋದನೆ. ಆದರೆ, ಅದನ್ನು ಸಾಬೀತುಪಡಿಸಬೇಕಾಗುತ್ತದೆ.

ಪ್ರಶ್ನೆ: ಕನ್ನಯ್ಯ ಕುಮಾರ್ ಈ ಘೋಷಣೆ ಕೂಗಿಲ್ಲ. ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಎಂಬ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಈ ಘೋಷಣೆಗಳನ್ನು ಕೂಗಿತ್ತು. ಆದರೆ, ಅವರೆಲ್ಲರೂ ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದಾರೆ. ಆದರೆ, ಈ ಘೋಷಣೆಗಳನ್ನು ಕೂಗದವರ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲಾಗಿದೆ.

ಸೊರಾಬ್ಜಿ: ನೀವು ಹೇಳುವುದು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ಸಂಪೂರ್ಣ ತಪ್ಪಾಗಿ ರಾಷ್ಟ್ರದ್ರೋಹವನ್ನು ಅನ್ವಯಿಸಲಾಗಿದೆ. ಒಂದು ಸಭೆಯಲ್ಲಿ ಕೇವಲ ಹಾಜರಿರುವುದು ರಾಷ್ಟ್ರದ್ರೋಹವಾಗುವುದಿಲ್ಲ. ಆತ ಸಕ್ರಿಯವಾಗಿ ಅವರನ್ನು ಪ್ರಚೋದಿಸದೇ ಇದ್ದರೆ, (ಆತ ಈ ಘೋಷಣೆಗಳನ್ನು ಕೂಗಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದರೆ) ಹೇಗೆ ಆತನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲು ಸಾಧ್ಯ? ಅದು ಸಂಪೂರ್ಣ ಅನ್ಯಾಯ. ನೀವು ಹೇಳಿದ ವಾಸ್ತವಾಂಶಗಳು ನಿಜವಾಗಿದ್ದರೆ, ಆ ನಿರ್ಧಾರ ಒಂದು ಗಂಭೀರವಾದ ಪ್ರಮಾದ. ಇದನ್ನೆಲ್ಲಾ ಒಟ್ಟಿನಲ್ಲಿ ನೋಡೋಣ. ವಿದ್ಯಾರ್ಥಿಗಳಿಗೆ ಒಂದು ದೃಷ್ಟಿಕೋನವಿದೆ. ಅವರದನ್ನು ಅಭಿವ್ಯಕ್ತಗೊಳಿಸಲು ಬಯಸುತ್ತಾರೆ. ಹಿಂದೂಸ್ತಾನ್ ಕಿ ಬರ್ಬಾದಿ…ಸೇರಿದಂತೆ ಅವರು ಹಾಗೆ ಮಾಡುವಾಗ ಎಲ್ಲೆ ಮೀರಿ ಅಭಿವ್ಯಕ್ತಗೊಳಿಸಿರಬಹುದು. ಇದು ಬಹುವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...