Homeಅಂತರಾಷ್ಟ್ರೀಯಐಸಿಸ್' ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! - ಜೂಲಿಯನ್ ಅಸ್ಸಾಂಜ್

ಐಸಿಸ್’ ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! – ಜೂಲಿಯನ್ ಅಸ್ಸಾಂಜ್

ಐದು ಲಕ್ಷ ಯುಎಸ್‌ಎ ಕೇಬಲ್ ಸಂದೇಶ ಬಿಡುಗಡೆಗೊಳಿಸಿದ ವೀಕಿಲೀಕ್ಸ್.

- Advertisement -
- Advertisement -

ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾದಲ್ಲಿ ಇಸ್ಲಾಮಿಕ್ ಮುಖವಾಡದಲ್ಲಿ ಭಯೋತ್ಪಾದನೆ ನಡೆಸಿದ ಐಸಿಸ್ (ISIS) ಸಂಘಟನೆಯನ್ನು ಹುಟ್ಟುಹಾಕಿದ್ದೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಗುಪ್ತಚರ ಸಂಸ್ಥೆಯಾಗಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ ಅಥವಾ ಸಿಐಎ ಎಂದು ವಿಶ್ವದಾದ್ಯಂತದ ನೂರಾರು ಮಹಾನಾಯಕರ ಮತ್ತು ದೇಶಗಳ ಗುಟ್ಟುಗಳನ್ನು ರಟ್ಟು ಮಾಡಿ, ಲಕ್ಷಾಂತರ ದಾಖಲೆಗಳನ್ನು ಅಂತರ್ಜಾಲದಲ್ಲಿ ಬಹಿರಂಗಗೊಳಿಸಿದ ‘ವೀಕಿ ಲೀಕ್ಸ್’ ಸ್ಥಾಪಕ ಜೂಲಿಯನ್ ಅಸ್ಸಾಂಜ್ ಹೇಳಿದ್ದಾರೆ.

ಅದಕ್ಕೆ ಪೂರಕವಾಗಿ 1979ರಷ್ಟು ಹಳೆಯ ಯುಎಸ್‌ಎಯ ರಾಜತಾಂತ್ರಿಕ ಸಂಪರ್ಕ ಕೇಬಲ್‌ಗಳನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಈ ತನಕ ಈ ದಾಖಲೆಗಳು ಗುಪ್ತವಾಗಿದ್ದವು. express.co.uk ಯಲ್ಲಿ ಜೋನ್ ಅಸ್ಟಿನ್ ಬರೆದಿರುವ ವರದಿಯಲ್ಲಿ ಇದನ್ನು ವಿವರಿಸಲಾಗಿದೆ.

ನವೆಂಬರ್ 28, 2010ರಂದು ‘ವೀಕಿಲೀಕ್ಸ್’ ಯುಎಸ್‌ಎ ಸಹಿತ ಹಲವು ದೇಶಗಳ ಸೂಕ್ಷ್ಮ ಮತ್ತು ಹಿಂದೆ ಗುಪ್ತವಾಗಿದ್ದ ದಾಖಲೆಗಳನ್ನು ಬಹಿರಂಗಪಡಿಸಿತ್ತು. ನಂತರ ಅದು ಪಬ್ಲಿಕ್ ಲೈಬ್ರರಿ ಫಾರ್ ಯುಎಸ್ ಡಿಪ್ಲೋಮೆಸಿ (ಪಿಎಲ್‌ಯುಎಸ್‌ಡಿ) ಎಂಬ ವಿಭಾಗ ತೆರೆದಿತ್ತು. ಅದರಲ್ಲಿ ಈಗ ಹೊಸದಾಗಿ 1979ರ ನಂತರದ 5,31,525 ಹೊಸ ಸಂಪರ್ಕ ಕೇಬಲ್‌ಗಳನ್ನು ಬಹಿರಂಗಪಡಿಸಲಾಗಿದೆ.

ಈ ವರದಿಯಲ್ಲಿ ಇರುವಂತೆ, “ಕಾರ್ಟರ್ ಕೇಬಲ್ III” ಎಂದು ಕರೆಯಲಾಗುವ ಈ ಕೇಬಲ್‌ಗಳ ಮೂಲಕ ಅಸ್ಸಾಂಜ್ ಜಿಮ್ಮಿ ಕಾರ್ಟರ್ ಕಾಲದ ಬೆಳವಣಿಗೆಗಳನ್ನು ವಿವರಿಸುತ್ತಾರೆ. ಅವುಗಳಿಂದಲೇ ಐಸಿಸ್ ತಲೆಯೆತ್ತಲು ಸಾಧ್ಯವಾಯಿತು ಎನ್ನುತ್ತಾರವರು.

ನಮ್ಮ ಆಧುನಿಕ ಯುಗದ ಆರಂಭ ಯಾವುದು ಎಂದರೆ, 1979 ಎನ್ನಬಹುದು ಎಂಬ ಮಾತು ಇಲ್ಲಿ ದಾಖಲಾಗಿದೆ. ಸೋವಿಯತ್ ಒಕ್ಕೂಟವನ್ನು (ಯುಎಸ್‌ಎಸ್‌ಆರ್) ಬಗ್ಗುಬಡಿಯಲು ಅಫಘಾನಿಸ್ತಾನದ ಮುಜಾಹಿದ್ದೀನ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಸಲುವಾಗಿ ಸಾವಿರಾರು ಕೋಟಿ ಡಾಲರುಗಳನ್ನು ಒದಗಿಸುವ ಸೌದಿ ಅರೇಬಿಯಾ ಜೊತೆಗೆ ಸಿಐಎ ಮಾಡಿದ ನಿರ್ಧಾರ ಅಲ್ ಖಾಯಿದ ಎಂಬ ಉಗ್ರಗಾಮಿ ಸಂಘಟನೆಯ ಸ್ಥಾಪನೆಗೆ ಕಾರಣವಾಯಿತು ಎಂದು ಅಸ್ಸಾಂಜ್ ವಾದಿಸಿದ್ದಾರೆ. ಪರಿಣಾಮವಾಗಿ 9/11 ಭಯೋತ್ಪಾದಕ ದಾಳಿ, ಅಫಘಾನಿಸ್ತಾನ್ ಮತ್ತು ಇರಾಕ್ ಮೇಲಿನ ದಾಳಿ ಮತ್ತು ಐಸಿಸ್ ಸ್ಥಾಪನೆಗೆ ಕಾರಣವಾಯಿತೆಂದು ಅವರ ವಾದ.

ನಂತರದಲ್ಲಿ ಐಸಿಸ್ ಹೆಸರಿನಲ್ಲಿಯೇ ಯುಎಸ್‌ಎ, ಲಿಬಿಯಾ, ಸುಡಾನ್, ಈಜಿಪ್ಟ್, ಯೆಮೆನ್ ಮತ್ತು ಸಿರಿಯಾದಂತಹ ತೈಲ ಸಮೃದ್ಧ ದೇಶಗಳಲ್ಲಿ ಹಸ್ತಕ್ಷೇಪ ನಡೆಸಿದ್ದು, ಇದೀಗ ಇನ್ನೊಂದು ತೈಲಸಮೃದ್ಧ ದೇಶ ಇರಾನ್‌ನಲ್ಲಿಯೂ ಹಾಗೆ ಮಾಡಲು ಹವಣಿಸುತ್ತಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...