Homeಕರ್ನಾಟಕಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

- Advertisement -
- Advertisement -

“ನಿಮ್ಮ ಕಸ ನಿಮಗೆ” ಅಭಿಯಾನದ ಮೂಲಕ ಪ್ಲಾಸ್ಟಿಕ್‌ ವಿರುದ್ಧ ರಚನಾತ್ಮಕ ಪ್ರತಿಭಟನೆಗಿಳಿದಿರುವ ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ” ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಇಡೀ ರಾಜ್ಯದ ಮಕ್ಕಳ ಮುಂದೆ ಒಂದು ಆದರ್ಶದ ದಾರಿಯನ್ನು ತೆರೆದಿಟ್ಟಿದ್ದಾರೆ. ಮಕ್ಕಳು ದನಿ ಎತ್ತಿದರೆ, ಹೆಗ್ಗಡಹಳ್ಳಿಯ ಮಕ್ಕಳ ರೀತಿ ಸಾತ್ವಿಕ ಪ್ರತಿಭಟನೆ ಮಾಡಿದರೆ ಪರಿಣಾಮಕಾರಿಯಾಗಿರುತ್ತದೆ” ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಕಳೆದೊಂದು ವರ್ಷದಿಂದ ಆರಂಭಿಸಲಿದ್ದಾರೆ.

ಇದರ ಕುರಿತು ಮಾತನಾಡಿದ ಸಚಿವರು ’ಶಿಕ್ಷಣ ಇಲಾಖೆಯವರು ಈ ಶಾಲೆಯನ್ನು ಗುರುತಿಸಿದ್ದಕ್ಕಿಂತ ಹೆಚ್ಚು ದೊಡ್ಡ ದೊಡ್ಡ ಕಂಪೆನಿಗಳು ಗುರುತಿಸಿದ್ದಾರೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ತಿಳುವಳಿಕೆ ಬುದ್ಧಿ ಹೇಳಿರುವಂತ ಶಾಲೆ ಇದ್ದರೆ ಅದು ಹೆಗ್ಗಡಹಳ್ಳಿಯ ಶಾಲೆ. ಇಡೀ ರಾಜ್ಯದಲ್ಲಿ ಈ ರೀತಿಯ ಮತ್ತೊಂದು ಶಾಲೆ ಎಲ್ಲೂ ಇಲ್ಲ. ಅಂತಹ ಶಾಲೆಗೆ ಎರಡನೇ ಬಾರಿ ನಾನಿಂದು ಬಂದಿದ್ದೇನೆ’ ಎಂದು ಹರ್ಷವ್ಯಕ್ತಪಡಿಸಿದರು.

ಪ್ಲಾಸ್ಟಿಕ್ಕಿನಿಂದಾಗುವ ಅಪಾಯ ಎಲ್ಲರಿಗೂ ತಿಳಿದಿದೆ, ಆದರೆ ಅದನ್ನು ಬಿಡಲಿಕ್ಕೆ ಆಗುತ್ತಿಲ್ಲ. ಬಿಡದೆ ಇದ್ದರೆ ಅದು ಭಸ್ಮಾಸುರ ಆಗುತ್ತದೆ. ನಿಮ್ಮ ಭವಿಷ್ಯಕ್ಕಾಗಿ ನಿಮ್ಮ ಹೋರಾಟ ನಿರಂತರವಾಗಿರಲಿ. ಕೇವಲ ಪ್ಲಾಸ್ಟಿಕ್ ವಿರುದ್ಧವಷ್ಟೇ ಅಲ್ಲ ಸಮಾಜದಲ್ಲಿ ನಡೆಯುವ ಯಾವುದೇ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆಯ ದನಿ ಇರಬೇಕು. ಮುಂದೆ ಪರೀಕ್ಷೆ ಹತ್ತಿರ ಬರುತ್ತಿದೆ ಚನ್ನಾಗಿ ಓದಿ. ಮೊಬೈಲ್ ನಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಇದೇ ಸಂದರ್ಭದಲ್ಲಿ ನಿಮ್ಮ ಕಸ ನಿಮಗೆ ಅಭಿಯಾನದ ಎಂಟನೇ ಕಂತಿನ ಕಸವನ್ನು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮತ್ತು ಶಾಸಕರು ಮತ್ತು ಮಕ್ಕಳು ಪೋಸ್ಟ್ ಮಾಸ್ಟರ್ ಸುರೇಶ್ ಅವರಿಗೆ ಹಸ್ತಾಂತರಿಸಿದರು.

ಶಾಸಕ ಹರ್ಷವರ್ಧನ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಪಾಂಡುರಂಗ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸಿ.ಎನ್. ರಾಜು, ಇಲಾಖೆಯ ಹಿರಿಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಾದ ಎ.ಎಂ. ಲಿಂಗರಾಜು ಮತ್ತು ಮಕ್ಕಳ ಈ ಚಟುವಟಿಕೆಗಳಿಗೆ ಪ್ರೇರಣೆಯಾದ ರಂಗ ಶಿಕ್ಷಕರಾದ ಸಂತೋಷ್‌ ಗುಡ್ಡಿಯಂಗಡಿ ಕೂಡ ಉಪಸ್ಥಿತಿರಿದ್ದರು.


ಇದ್ನನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...