Homeಕರ್ನಾಟಕಜೆಡಿಎಸ್ ಒಳಗೆ ಶುರುವಾಗಿರುವ ಬಂಡಾಯದ ರೋಗಕ್ಕೆ ಫೀನಿಕ್ಸ್ ಗೌಡರ ಬಳಿ ಮದ್ದಿದೆಯೇ?

ಜೆಡಿಎಸ್ ಒಳಗೆ ಶುರುವಾಗಿರುವ ಬಂಡಾಯದ ರೋಗಕ್ಕೆ ಫೀನಿಕ್ಸ್ ಗೌಡರ ಬಳಿ ಮದ್ದಿದೆಯೇ?

- Advertisement -
- Advertisement -

ರಾಜಕೀಯದಲ್ಲಿ ಯಾವುದು ಶಾಶ್ವತವೂ ಅಲ್ಲ, ನಿರ್ದಿಷ್ಟವೂ ಅಲ್ಲ. ಆದರೆ, ಜೆಡಿಎಸ್‍ನಲ್ಲಿ ತಲ್ಲಣ ಆರಂಭವಾಗಿರುವುದಂತೂ ಸತ್ಯ. ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಸಾಕ್ಷಾತ್ ದೇವೇಗೌಡ ಮತ್ತು ಕುಮಾರಸ್ವಾಮಿಯಂತವರನ್ನೂ ಸಹ ಹಣ್ಣುಗಾಯಿ ನೀರುಗಾಯಿ ಮಾಡಿದೆ.ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ, ರಾಜಕೀಯ ಫೀನಿಕ್ಸ್ ಖ್ಯಾತಿಯ ದೇವೇಗೌಡರ ನಡೆ ಏನು?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷ ಅತಿಹೆಚ್ಚು ಸ್ಥಾನಗಳಿಸಿದರೂ ಜೆಡಿಎಸ್ ಕಿಂಗ್ ಮೇಕರ್ ಎಂಬ ಹಣೆಪಟ್ಟಿ ಕಳೆದ ಎರಡು ದಶಕಗಳಿಂದ ಗಟ್ಟಿಯಾಗಿತ್ತು. ಕರ್ನಾಟಕದ ಪಾಲಿನ ಪ್ರಬಲ ಪ್ರಾದೇಶಿಕ ಪಕ್ಷ ಎಂಬ ಶ್ರೇಯ ಒಂದು ಕಾಲದಲ್ಲಿ ಜೆಡಿಎಸ್‍ಗೆ ಇದ್ದದ್ದು ನಿಜ. ಆದರೆ, ಜೆಡಿಎಸ್ ಕೋಟೆ ಈಗ ಮುಂಚಿನಂತೆ ಭದ್ರವಾಗಿಲ್ಲ. ಕೆ.ಆರ್. ಪೇಟೆ ಸೋಲಿನ ನಂತರ ಸ್ವತಃ ಮಂಡ್ಯದಲ್ಲೇ ಜೆಡಿಎಸ್ ಬುನಾದಿ ಮೆಲ್ಲನೆ ಅಲುಗಾಡುತ್ತಿರುವುದು ತಿಳಿಯದ ವಿಚಾರವೇನಲ್ಲ.

ಜೆಡಿಎಸ್‍ನಲ್ಲಿ ಪರಿಸ್ಥಿತಿ ಇದೀಗ ಹೇಗಾಗಿದೆ ಎಂದರೆ ಪಕ್ಷದ ವರಿಷ್ಠ ಮಾಜಿ ಸಿಎಂ ಕುಮಾರಸ್ವಾಮಿ ಮಾತಿಗಿರಲಿ, ಸ್ವತಃ ಮಾಜಿ ಪ್ರಧಾನಿ ದೇವೇಗೌಡರ ಮಾತಿಗೂ ಶಾಸಕರು ಕ್ಯಾರೇ ಎನ್ನುತ್ತಿಲ್ಲ. ಜಿ.ಟಿ. ದೇವೇಗೌಡರಂತಹ ಹಿರಿಯ ನಾಯಕರು ಬಹಿರಂಗವಾಗಿಯೇ ಬಿಜೆಪಿಯನ್ನು ಸಮರ್ಥಿಸಿಕೊಂಡು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸುತ್ತಿದ್ದಾರೆ.

ಅಲ್ಲದೆ, ಯಾವುದೇ ಸಮಯದಲ್ಲಿ ಮತ್ತಷ್ಟು ಶಾಸಕರು ಬಿಜೆಪಿ ಪಾಲಾದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಕನಿಷ್ಟ 13ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದರೂ ಅಚ್ಚರಿ ಇಲ್ಲ ಎನ್ನುತ್ತಿವೆ ರಾಜ್ಯ ರಾಜಕೀಯ ವಠಾರ. ಇದಕ್ಕೆ ಕಾರಣಗಳು ಇಲ್ಲದೇ ಏನಿಲ್ಲ.
ಹಾಗೆ ನೋಡಿದರೆ ಕಿಂಗ್ ಮೇಕರ್ ಎಂಬ ಜೆಡಿಎಸ್ ಕೋಟೆಯನ್ನು ಕೆಡವಿ ಈ ಕೋಟೆಯ ಶವ ಪೆಟ್ಟಿಗೆಗೆ ಮೊದಲ ಮೊಳೆ ಹೊಡೆದದ್ದೇ ಶಾಸಕ ಜಮೀರ್ ಅಹಮದ್ ಅಂಡ್ ಟೀಮ್.

2017ರಲ್ಲಿ ಶಾಸಕ ಜಮೀರ್ ಅಹಮದ್, ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಒಟ್ಟು 9 ಶಾಸಕರು ಹೋಲ್‍ಸೇಲ್ ಆಗಿ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಪಕ್ಷಕ್ಕೆ ಮೊದಲ ಆಘಾತ ನೀಡಿದ್ದರು. ಜೆಡಿಎಸ್ ಈ ಶಾಕ್‍ನಿಂದ ಹೊರಬರುವುದು ಅಷ್ಟು ಸುಲಭದ ಮಾತಲ್ಲ ಎನ್ನಲಾಗಿತ್ತು. ಆದರೂ, 2018ರ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ರಾಜ್ಯಾದ್ಯಂತ ಮಿಂಚಿನಂತೆ ಪ್ರಚಾರ ಕಾರ್ಯ ನಡೆಸಿದ್ದರು. ಪರಿಣಾಮ ಜೆಡಿಎಸ್ 37 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

ತದನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧಿಸಿ ಒಂದು ವರ್ಷ ಅಧಿಕಾರ ನಡೆಸಿದ್ದು, ಕುಮಾರಸ್ವಾಮಿ ಎರಡನೇ ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ತರುವಾಯ ಈ ಸರ್ಕಾರವನ್ನೂ ಬೀಳಿಸಿ ಆಪರೇಷನ್ ಕಮಲದ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಿದ್ದು ಯಡಿಯೂರಪ್ಪ ಸಿಎಂ ಆಗಿದ್ದು ಇಂದು ಇತಿಹಾಸ.

ಆದರೆ, ಬಹುನಿರೀಕ್ಷಿತ ಉಪ ಚುನಾವಣೆಗೂ ಮುನ್ನ ಜೆಡಿಎಸ್ ಶಾಸಕರ ಸಭೆಯಲ್ಲಿ ಶಾಸಕರು ಬಹಿರಂಗವಾಗಿಯೇ ಕುಮಾರಸ್ವಾಮಿಗೆ ಬೆದರಿಕೆ ಹಾಕಿದ್ದರು. ಬಿಜೆಪಿಗೆ ಬಾಹ್ಯ ಬೆಂಬಲ ನೀಡದಿದ್ದರೆ ಪಕ್ಷ ತೊರೆಯುವ ಬೆದರಿಕೆ ಬ್ಲ್ಯಾಕ್‍ಮೇಲ್ ಮಾಡಿದ್ದರು. ಜೆಡಿಎಸ್‍ನೊಳಗಿನ ಈ ಅಂತಃಕಲಹವೂ ಮಾಜಿ ಅನರ್ಹರು ಮೈತ್ರಿಗೆ ಗುಡ್‍ಬೈ ಹೇಳಿ ಬಿಜೆಪಿ ಸೇರುವಲ್ಲಿ ಒಂದು ಪ್ರೇರಣೆಯ ಅಂಶ.

ಜೆಡಿಎಸ್‍ನಲ್ಲಿ ವರಿಷ್ಠರ ವಿರುದ್ಧವೇ ಬ್ಲ್ಯಾಕ್‍ಮೇಲ್ ತಂತ್ರ!

ಹಾಗೆ ನೋಡಿದರೆ ಮೈತ್ರಿ ಸರ್ಕಾರವನ್ನು ಬೀಳಿಸಿದ್ದೆ ಬಿಜೆಪಿ ಮತ್ತು ಬಿ.ಎಸ್. ಯಡಿಯೂರಪ್ಪ ಎಂಬ ವಿಚಾರ ಇದೀಗ ಗುಟ್ಟಾಗೇನು ಉಳಿದಿಲ್ಲ. ಹೀಗಾಗಿ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸಲು ಜೆಡಿಎಸ್ ನಾಯಕರು ಮತ್ತೆ ಕಾಂಗ್ರೆಸ್ ಜೊತೆಗೂಡಿ ಮೈತ್ರಿಯಾಗಿಯೇ ಸೆಣಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಉಭಯ ಪಕ್ಷದ ಪ್ರಮುಖ ನಾಯಕರು ಕೊನೆವರೆಗೂ ಉಪಚುನಾವಣೆಯನ್ನೂ ಮೈತ್ರಿಯಾಗಿಯೇ ಎದುರಿಸಲಿದ್ದೇವೆ ಎಂದು ಹೇಳಿಕೆ ನೀಡುತ್ತಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಮೈತ್ರಿ ಮುರಿದು ಬಿದ್ದಿತ್ತು. ಪರಿಣಾಮ ಚುನಾವಣೆ ಎದುರಿಸಿದ್ದ 14 ಅನರ್ಹ ಶಾಸಕರ ಪೈಕಿ 12 ಜನ ಗೆಲುವು ಸಾಧಿಸಿದ್ದರು ಮತ್ತು ಈ ಗೆಲುವಿನ ಹಿಂದೆ ಇದ್ದದ್ದು ಸ್ವತಃ ಜೆಡಿಎಸ್ ಶಾಸಕರೇ ಎನ್ನಲಾಗುತ್ತಿದೆ.

ಬಲ್ಲ ಮೂಲಗಳ ಪ್ರಕಾರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮತ್ತೆ ಮೈತ್ರಿ ಸಾಧಿಸುವ ಮೂಲಕ ಅನರ್ಹರಿಗೆ ತಕ್ಕ ಪಾಠ ಕಲಿಸಬೇಕು ಎಂಬುದೇ ಜೆಡಿಎಸ್ ವರಿಷ್ಠರ ಆಶಯವೂ ಆಗಿತ್ತು.

ಆದರೆ, ಚುನಾವಣೆಗೂ ಮುಂಚಿತವಾಗಿ ನಡೆದ ಪಕ್ಷದ ಸಭೆಯಲ್ಲಿ ಜೆಡಿಎಸ್ ಶಾಸಕರು ವರಿಷ್ಠರ ವಿರುದ್ಧವೇ ತಿರುಗಿ ಬಿದ್ದಿದ್ದರು. “ತಾವು ಮಧ್ಯಂತರ ಚುನಾವಣೆ ಎದುರಿಸಲು ಸಿದ್ಧರಿಲ್ಲ, ಹೀಗಾಗಿ ಬಿಜೆಪಿ ಸರ್ಕಾರವನ್ನು ಬೀಳಿಸಬಾರದು. ಅಕಸ್ಮಾತ್ ಚುನಾವಣೆ ನಂತರ ಸಂಖ್ಯೆ ಕೊರತೆ ಆದರೂ ಸಹ ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದರು. ಇಲ್ಲದಿದ್ದರೆ ಪಕ್ಷದ 13 ಜನ ಶಾಸಕರು ಈಗಿಂದೀಗಲೆ ಬಿಜೆಪಿಗೆ ಪಕ್ಷಾಂತರ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇದಕ್ಕೆ ಪೂರಕವಾಗಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಪುಟ್ಟಣ್ಣಯ್ಯ ತಾವು ಜೆಡಿಎಸ್ ತೊರೆಯುವುದಾಗಿ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಕೊನೆಗೆ ಪಕ್ಷದಿಂದಲೇ ಉಚ್ಚಾಟಿತರಾಗಿದ್ದರು. ಇನ್ನು ಹಿರಿಯ ನಾಯಕ ಬಸವರಾಜ ಹೊರಟ್ಟಿ ಪಕ್ಷದಲ್ಲಿ ನಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ನೇರಾನೇರ ಆರೋಪ ಮಾಡಿದ್ದರೆ, ಶಾಸಕ ಜಿ.ಟಿ. ದೇವೇಗೌಡ ಅದಾಗಲೇ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಾಗಿತ್ತು. ಅಲ್ಲದೆ, ಉಪ ಚುನಾವಣೆ ನಂತರ ಮತ್ತಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳು ಜೆಡಿಎಸ್ ವರಿಷ್ಠರಲ್ಲಿ ಆತಂಕ ಹುಟ್ಟುಹಾಕಿದ್ದು ಸುಳ್ಳಲ್ಲ.

ಇದೇ ಕಾರಣಕ್ಕೆ ಚುನಾವಣೆ ಸಂದರ್ಭದಲ್ಲಿ ಸ್ವತಃ ಕುಮಾರಸ್ವಾಮಿ ಮತ್ತು ದೇವೇಗೌಡ ಬಹಿರಂಗವಾಗಿಯೇ ತಾವು ಬಿಜೆಪಿ ಸರ್ಕಾರ ಬೀಳುವುದಕ್ಕೆ ಬಿಡುವುದಿಲ್ಲ ಎಂಬಂತಹ ಹೇಳಿಕೆಗಳನ್ನು ನೀಡಲು ಮುಂದಾದದ್ದು. ಕೊನೆಗೂ ಅಂದುಕೊಂಡಂತೆ ಬಿಜೆಪಿ ಏನೋ ಈ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಆದರೆ, ಜೆಡಿಎಸ್ ಒಳಗಿನ ಆಂತರಿಕ ಕ್ಷೋಭೆ ಮಾತ್ರ ಈವರೆಗೆ ಶಮನವಾಗಿಲ್ಲ.

ಪರಿಷತ್ ಚುನಾವಣೆಯಿಂದ ದಳ ಹಿಂದೆ ಸರಿಯಲು ಕಾರಣವೇನು?

ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ದಾಖಲಿಸಬೇಕಾದಂತಹ ಅನಿವಾರ್ಯತೆಗೆ ಸಿಲುಕಿದ್ದರು. ಹೀಗಾಗಿ ಸವದಿಗೆ ಸೋಲುಣಿಸುವ ಸಲುವಾಗಿಯೇ ಕಾಂಗ್ರೆಸ್-ಜೆಡಿಎಸ್ ಒಂದಾಗಿತ್ತು. ಪರಿಣಾಮ ಅನಿಲ್ ಕುಮಾರ್ ಎಂಬುವವರು ಕೊನೆ ಗಳಿಗೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಆದರೆ, ಈ ಸಂದರ್ಭದಲ್ಲೂ ಸಹ ಜೆಡಿಎಸ್ ಶಾಸಕರು ವರಿಷ್ಠರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಅಕಸ್ಮಾತ್ ಚುನಾವಣೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಸೋಲನುಭವಿಸಿದರೆ ತಾವು ಪಕ್ಷ ಬಿಡುವುದಾಗಿ ಮತ್ತು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಅಂದು ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಭಾಗವಹಿಸಿದ್ದರೆ 15ಕ್ಕಿಂತ ಹೆಚ್ಚು ಶಾಸಕರು ಅಡ್ಡ ಮತದಾನ ಮಾಡಲು ಸಿದ್ಧರಿದ್ದರು. ಆಗ ಜೆಡಿಎಸ್‍ನೊಳಗಿನ ಭಿನ್ನಮತ ಅಧಿಕೃತವಾಗಿಯೇ ಬೀದಿಗೆ ಬರುತ್ತಿತ್ತು.

ಇದರ ವಾಸನೆ ಅರಿತಿದ್ದ ಕಾರಣಕ್ಕೆ ಕುಮಾರಸ್ವಾಮಿ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹೊರ ನಡೆದಿದ್ದರು. ಅಲ್ಲದೆ, ಮೈತ್ರಿ ಅಭ್ಯರ್ಥಿಗೆ ತಮ್ಮ ಬೆಂಬಲ ಇಲ್ಲ ಎಂದು ಘೋಷಿಸುವ ಮೂಲಕ ಪ್ರತ್ಯಕ್ಷವಾಗಿಯೇ ಸವದಿ ಗೆಲುವಿಗೆ ಕಾರಣರಾಗಿದ್ದರೂ. ಅಲ್ಲದೇ ತಮ್ಮ ಶಾಸಕರು ಚುನಾವಣೆಯಿಂದ ದೂರ ಉಳಿಯುವಂತೆ ಆದೇಶಿಸಿದ್ದರು. ಆದರೆ, ಹಿರಿಯ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರು ದಿಗ್ಗಜರ ಈ ಆದೇಶವನ್ನೂ ಮೀರಿ ಮತದಾನ ಮಾಡಿದ್ದಾರೆ. ಅವರು ಯಾರಿಗೆ ಮತ ಹಾಕಿದ್ದಾರೆ ಅನ್ನೋದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ.

ಜೆಡಿಎಸ್ ಶವಪೆಟ್ಟಿಗೆಯ ಕೊನೆಯ ಮೊಳೆ ಜಿಟಿಡಿ ಕೈಲಿದೆ

ಮಂಡ್ಯ ಮತ್ತು ಹಳೆ ಮೈಸೂರು ಭಾಗದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ನಾಯಕ ಜಿ.ಟಿ. ದೇವೇಗೌಡ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನೇ ಸೋಲಿಸುವಷ್ಟು ತಾಕತ್ ಇರುವ ಜೆಡಿಎಸ್‍ನ ಏಕೈಕ ನಾಯಕ ಅವರು.

ಆದರೆ, ಕಳೆದ ದಿನಗಳಿಂದ ‘ಜಿಟಿಡಿ ನಡೆ ಬಿಜೆಪಿ ಕಡೆ’ ಎಂಬಂತಹ ವಾತಾವರಣ ನಿರ್ಮಾಣವಾಗಿದೆ. ಜೆಡಿಎಸ್ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿರುವ ಜಿ.ಟಿ. ದೇವೇಗೌಡರು, ಇತ್ತೀಚೆಗೆ ಹೆಚ್ಚಾಗಿ ಬಿಜೆಪಿ ನಾಯಕರ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ವರಿಷ್ಠರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

ಈ ನಡುವೆ ಪಕ್ಷದಲ್ಲಿರುವ ಮತ್ತೊಂದು ಅಸಮಾಧಾನಿತರ ಗುಂಪನ್ನು ಮುನ್ನಡೆಸುತ್ತಿರುವುದೇ ಜಿ.ಟಿ. ದೇವೇಗೌಡ ಎನ್ನಲಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಎ.ಟಿ. ರಾಮಸ್ವಾಮಿ ಸೇರಿದಂತೆ 12 ರಿಂದ 13 ಶಾಸಕರು ಬಿಜೆಪಿ ಪಾಲಾಗಲಿದ್ದಾರೆ. ಈ ಮೂಲಕ ಜಿ.ಟಿ. ದೇವೇಗೌಡರು ಜೆಡಿಎಸ್ ಪಕ್ಷದ ಶವ ಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯಲಿದ್ದಾರೆ ಎಂದು ವಿಶ್ಲೇಷಿಸುತ್ತಿದೆ ರಾಜಕೀಯ ಪಡಸಾಲೆ.

ಆದರೆ, ರಾಜಕೀಯದಲ್ಲಿ ಯಾವುದೂ ಶಾಶ್ವತವೂ ಅಲ್ಲ, ನಿರ್ದಿಷ್ಟವೂ ಅಲ್ಲ. ಆದರೆ, ಜೆಡಿಎಸ್‍ನಲ್ಲಿ ತಲ್ಲಣ ಆರಂಭವಾಗಿರುವುದಂತೂ ಸತ್ಯ. ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಸಾಕ್ಷಾತ್ ದೇವೇಗೌಡ ಮತ್ತು ಕುಮಾರಸ್ವಾಮಿಯಂತವರನ್ನೂ ಸಹ ಹಣ್ಣುಗಾಯಿ ನೀರುಗಾಯಿ ಮಾಡಿರುವುದು ನಿಜ. ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ, ರಾಜಕೀಯ ಫೀನಿಕ್ಸ್ ಖ್ಯಾತಿಯ ದೇವೇಗೌಡರ ನಡೆ ಏನು? ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...