Homeಮುಖಪುಟದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

ದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ರಾಜ್ಯದ ಹೆಮ್ಮೆ ದೊರೆಸ್ವಾಮಿಯವರು ನಿತ್ಯ ನಿರಂತರ ಹೋರಾಟಗಾರರು. ಭ್ರಷ್ಟಾಚಾರದ ವಿರುದ್ಧ, ಬಡವರ ಪರವಾಗಿ ಕಳೆದ ಹಲವು ದಶಕಗಳಿಂದ ರಾಜ್ಯದ ಹತ್ತಾರು ಪ್ರಮುಖ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಯುವ ಸಮಾಜಕ್ಕೆ ದಾರಿದೀಪವಾದವರು ದೊರೆಸ್ವಾಮಿಯವರು.

ಆದರೆ, ಅವರು ಕೇಂದ್ರ ಸರ್ಕಾರದ ಸಿಎಎ ಕಾನೂನನ್ನು ವಿರೋಧಿಸಿದರು ಎಂಬ ಏಕೈಕ ಕಾರಣಕ್ಕೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇಂದು ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಹೀಗೆಳೆಯುವ ಮೂಲಕ ಅವಮಾನಿಸಿದ್ದಾರೆ.

ಯತ್ನಾಳ್‌ನವರ ಕೀಳುಮಟ್ಟದ ಹೇಳಿಕೆಗೆ ರಾಜ್ಯದ್ಯಾಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಲವು ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿಗಳು ಪ್ರತಿಭಟನೆಗಳು ಆರಂಭವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಯತ್ನಾಳ್‌ರವರ ಬಗೆಗೆ ಆಕ್ರೋಶ ತೀವ್ರವಾಗಿದೆ. ಇಂತಹ ಸಂದರ್ಭದಲ್ಲಿ ದೊರೆಸ್ವಾಮಿಯವರನ್ನು ನಿಂದಿಸಿದ ಯತ್ನಾಳ್‌ ಮೇಲೆ ಎಂತೆಂಥ ಕ್ರಿಮಿನಲ್‌ ಪ್ರಕರಣಗಳಿವೆ ಎಂಬ ಸಂದೇಶವೊಂದು ವೈರಲ್‌ ಆಗಿದೆ. ಅದರ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಅದು ಸತ್ಯವೆಂದು ತಿಳಿದುಬಂದಿದ್ದು ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಯತ್ನಾಳ್‌ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಯೋಗ್ಯತಾ ಪಟ್ಟಿ (ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳ ಪಟ್ಟಿ) ಲಭ್ಯವಾಗಿದೆ.

(1) ಮೋಸ ಮತ್ತು ಆಸ್ತಿಯ ಅಪ್ರಾಮಾಣಿಕ ವಿತರಣೆಗೆ ಸಂಬಂಧಿಸಿದಂತೆ IPC Section-420 ಅಂದರೆ ಚೀಟಿಂಗ್ ಅಡಿಯಲ್ಲಿ 2 ಪ್ರಕರಣ ದಾಖಲಾಗಿದೆ.

(2) ಭದ್ರತಾ ಠೇವಣಿ ಸೇರಿದಂತೆ ಇತರೆ ವಿಚಾರಗಳಲ್ಲಿ ಮೋಸ ಎಸಗಿದ್ದಕ್ಕಾಗಿ IPC Section -467ರ ಅಡಿಯಲ್ಲಿ 2 ಪ್ರಕರಣ ದಾಖಲಿಸಲಾಗಿದೆ.

(3) ನಕಲಿ ಕರೆನ್ಸಿ ನೋಟುಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ IPC Section -489 C ಅಡಿಯಲ್ಲಿ 2 ಪ್ರಕರಣಗಳನ್ನು ದಾಖಲಿಸಲಾಗಿದೆ

(4) ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಅಥವಾ ಸಾಧನಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದಂತೆ IPC Section -324ರ ಅಡಿಯಲ್ಲಿ 1 ಪ್ರಕರಣ ದಾಖಲಿಸಲಾಗಿದೆ.

(5) ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ IPC Section-506ರ ಅಡಿಯಲ್ಲಿ 1 ಪ್ರಕರಣವನ್ನು ದಾಖಲಿಸಲಾಗಿದೆ.

(6) ಪ್ರತಿಕ್ರಿಯಾತ್ಮಕವಾಗಿ ಪ್ರಚೋದನೆ ಮಾಡಿದ್ದರೆ ನೀಡಲಾಗುವ ಶಿಕ್ಷೆಗೆ ಸಂಬಂಧಿಸಿದ IPC Section-109ರ ಅಡಿಯಲ್ಲಿ 3 ಪ್ರಕರಣಗಳನ್ನು ದಾಖಲು

(7) ನಕಲಿ ದಾಖಲೆಯನ್ನು ಸೃಷ್ಟಿಸಿ ನೈಜವಾಗಿ ಬಳಸಿದ್ದಕ್ಕಾಗಿ IPC Section-471ರ ಅಡಿಯಲ್ಲಿ 2 ಪ್ರಕರಣ ದಾಖಲಾಗಿದೆ.

(8) ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ IPC Section-323ರ ಅಡಿಯಲ್ಲಿ 2 ಪ್ರಕರಣ ದಾಖಲಾಗಿವೆ.

(9) ಅಪರಾಧ ಪ್ರಕರಣ ನಡೆದಾಗ ಅಬೆಟ್ಟರ್ಗೆ ಸಂಬಂಧಿಸಿದಂತೆ IPC Section -114ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(10) ಕ್ರಿಮಿನಲ್ ಪಿತೂರಿಯ ಶಿಕ್ಷೆಗೆ ಸಂಬಂಧಿಸಿದ IPC Section -120B ಅಡಿಯಲ್ಲಿ 2 ಪ್ರಕರಣ ದಾಖಲಾಗಿವೆ.

(11) ವಿಧಾನಸಭೆಯಲ್ಲಿ ಪ್ರತಿಯೊಬ್ಬ ಸದಸ್ಯರು ಎದುರಿಸಬೇಕಾದ ವಿಚಾರಣೆಯ ಸಂದರ್ಭದಲ್ಲಿ ಮಾಡಿರುವ ಅಪರಾಧಕ್ಕೆ IPC Section -149ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(12) ಕೃತ್ಯದ ಉದ್ದೇಶಕ್ಕಾಗಿ ಸುಳ್ಳು ವ್ಯಕ್ತಿತ್ವವನ್ನು ಸೃಷ್ಟಿಸಿದ್ದಕ್ಕಾಗಿ IPC Section-205ರ ಅಡಿಯಲ್ಲಿ 2 ಪ್ರರಕಣಗಳು ದಾಖಲಾಗಿವೆ.

(13) ಆಸ್ತಿಯನ್ನು ವಶಪಡಿಸಿಕೊಳ್ಳುವ ವಿಚಾರದಲ್ಲಿ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ IPC Section -207ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(14) ವರ್ಗವಣೆ ಪತ್ರದಲ್ಲಿ ಮೋಸ ಅಥವಾ ಅಪ್ರಾಮಾಣಿಕತೆ ತೋರಿಸಿದ ಆರೋಪಕ್ಕೆ ಸಂಬಂಧಿಸಿದಂತೆ IPC Section -423ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(15) ಟ್ರೇಡ್ ಮಾರ್ಕ್ಗಳಿಗೆ ಸಂಬಂಧಿಸಿದಂತೆ IPC Section -478ರ ಅಡಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

(16) ಮಾನಹಾನಿ ಶಿಕ್ಷೆಗೆ ಸಂಬಂಧಿಸಿದಂತೆ IPC Section – 500ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(17) ಪ್ರಚೋದನೆಯ ಮೇಲೆ ಸ್ವಯಂಪ್ರೇರಿತವಾಗಿ ತೀವ್ರವಾದ ನೋವನ್ನುಂಟುಮಾಡುವ IPC Section -335ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(18) ಶಾಂತಿಯನ್ನು ಉಲ್ಲಂಘಿಸಲು ಮತ್ತು ಉದ್ದೇಶಪೂರ್ವಕವಾಗಿ ಪ್ರಚೋಧಿಸುವಂತ ಭಾಷಣ ಮಾಡಿದ್ದಕ್ಕೆ ಸಂಬಂಧಿಸಿದಂತೆ IPC Section -504ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(19) ಕಾನೂನು ಬಾಹೀರವಾಗಿ ವಿಧಾನಸಭೆ ಸದಸ್ಯರಾಗಿರುವುದಕ್ಕೆ ಸಂಬಂಧಿಸಿದಂತೆ IPC Section -143ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(20) ಉದ್ದೇಶಪೂರ್ವಕವಾಗಿ ಗಲಭೆ ಸೃಷ್ಟಿಗೆ ಸಂಬಂಧಿಸಿದಂತೆ IPC Section -147ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(21) ಇತರರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕ್ರಿಯೆಗೆ ಸಂಬಂಧಿಸಿದ IPC Section -336 ಅಡಿಯಲ್ಲಿ 1 ಪ್ರಕರಣ

(22) ಇತರರ ವೈಯಕ್ತಿಕ ಸುರಕ್ಷತೆಗೆ ಅಥವಾ ಜೀವಕ್ಕೆ ಅಪಾಯಕಾರಿಯಾದ ಕೃತ್ಯದಿಂದ ಅವರಿಗೆ ನೋವನ್ನುಂಟುಮಾಡುವುದಕ್ಕೆ ಸಂಬಂಧಿಸಿದಂತೆ IPC Section -337ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

(23) ಮಾನಹಾನಿಗೆ ಸಂಬಂಧಿಸಿದಂತೆ IPC Section -499ರ ಅಡಿಯಲ್ಲಿ ಒಂದು ಪ್ರಕರಣ.

ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 489 C ಐಪಿಸಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. 489 C ಸೆಕ್ಷನ್ ಅಸಲಿ ಎಂದು…

Posted by Dinesh Kumar Dinoo on Tuesday, February 25, 2020

ಇವಿಷ್ಟು ಯತ್ನಾಳ್‌ ಮೇಲಿರುವ ಪ್ರಕರಣಗಳು. ಇಷ್ಟು ಗಂಭೀರ ಪ್ರಕರಣಗಳನ್ನಿಟ್ಟುಕೊಂಡು ಇನ್ನೊಬ್ಬರ ಮೇಲೆ ಹೇಗೆ ಆರೋಪ ಮಾಡುತ್ತಾರೆ ಎಂದು ಜಾಲತಾಣಿಗರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ಮೇಲಿನ ಯತ್ನಾಳ್ ಹೇಳಿಕೆ ಖಂಡಿಸಿ ಇಂದು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...