Homeಮುಖಪುಟನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

- Advertisement -
- Advertisement -

ದೇಶದ್ರೋಹ, ರಾಷ್ಟ್ರದ್ರೋಹ ಇದು ನಿತ್ಯ ಕೇಳುತ್ತಿರುವಂತಹ ಸುದ್ದಿ. ದೇಶದ್ರೋಹ ಅಂದರೇನು? ದೇಶದ್ರೋಹ ಎನ್ನುವಂತಹದ್ದು ಮೊದಲು ರಾಜದ್ರೋಹ ಎಂದಿತ್ತು. ದೇಶದೆಲ್ಲೆಡೆ ವ್ಯತಿರಿಕ್ತವಾಗಿ ಬೆಳೆಯುತ್ತಿದ್ದ ಚಳವಳಿಗಳನ್ನು ಹತ್ತಿಕ್ಕಲು ಬ್ರಿಟಿಷರು 1879ರಲ್ಲಿ ತಂದ ಕಾನೂನೇ ರಾಜದ್ರೋಹದ ಕಾನೂನು. ಅದರಡಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಎಲ್ಲಾ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಹಾಕಿದರು.. ಬ್ರಿಟಿಷರ ರಾಜದ್ರೋಹದ ಕಾನೂನಿನಡಿಯಲ್ಲಿ ಚರ್ಚಿತವಾದ 2 ಪ್ರಕರಣಗಳೆಂದರೆ ಒಂದು ಬಾಲಗಂಗಾಧರ ತಿಲಕರ ಪ್ರಕರಣ, ಇನ್ನೊಂದು ಮಹಾತ್ಮ ಗಾಂಧಿಯವರ ಪ್ರಕರಣಗಳು.

ಮಹಾತ್ಮ ಗಾಂಧೀಜಿಯವರ ಪ್ರಕರಣ, ಅವರು ಬರೆದು ಪ್ರಕಟಿಸಿದ ಮೂರು ಲೇಖನಗಳ ವಿರುದ್ಧ ಬ್ರಿಟಿಷ್ ಸರ್ಕಾರ ರಾಜದ್ರೋಹದ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಗಾಂಧೀಜಿ, ನ್ಯಾಯಾಧೀಶರಾಗಿ ನಿಮಗೆ 2 ಅವಕಾಶವಿದೆ. ನೀವು ನ್ಯಾಯ ನೀಡುತ್ತೀರೋ, ಕಾನೂನು ಮಾತನಾಡುತ್ತೀರೋ? ನೀವು ಕಾನೂನು ಬಗ್ಗೆ ಮಾತನಾಡುತ್ತೀರಿ ಅಂತಾದರೆ ನಿಮ್ಮ ಕಾನೂನಿನ ಕೆಳಗೆ ನಾನು ಅಪರಾಧಿ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಬ್ರಿಟಿಷ್ ಸರ್ಕಾರ ತೊಲಗಲೇಬೇಕು ಎಂದು ನಾನು ಬರೆದ ಪ್ರತಿಯೊಂದು ಅಕ್ಷರ ಸಹ ಸತ್ಯ. ಅದನ್ನು ತಪ್ಪು ಎಂದು ಹೇಳಲು ನಾನು ತಯಾರಿಲ್ಲ. ನೀವು ಅದಕ್ಕೆ ಅತ್ಯುಗ್ರವಾದ ಶಿಕ್ಷೆ ನೀಡಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ ಎಂದಾದರೆ ನೀವು ಈ ಕೆಲಸಕ್ಕೆ ರಾಜಿನಾಮೆ ಕೊಟ್ಟು ಹೋಗಿ. ಯಾಕೆಂದರೆ ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ ಎಂದು ಹೇಳುತ್ತಾರೆ.. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಕಾನೂನೇ ರಾಜದ್ರೋಹದ ಕಾನೂನು..

ನಮಗೆ ಸ್ವಾತಂತ್ರ್ಯ ಸಿಕ್ಕಮೇಲೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಮೇಲೆ ರಾಜದ್ರೋಹ ಉಳಿಯಲು ಸಾಧ್ಯವಿಲ್ಲ ಎನ್ನುವ ಚರ್ಚೆ ಬಂತು. ಇಂತಹ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮೊದಲುಗೊಂಡು ಬಾಂಬೆ ಹೈಕೋರ್ಟ್ ಆದಿಯಾಗಿ ಎಲ್ಲಾ ಕೋರ್ಟ್‍ಗಳು ಕೂಡಾ ರಾಜದ್ರೋಹದ ಕಾನೂನು ಉಳಿಯಲು ಸಾಧ್ಯವಿಲ್ಲ, ಅದು ಹೋಗಲೇಬೇಕು. ಯಾಕೆಂದರೆ ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಲ್ಲಿ ರಾಜದ್ರೋಹದ ಕಾನೂನಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯಪಟ್ಟವು.. ಎಲ್ಲಾ ತೀರ್ಪುಗಳ ನಡುವೆಯೂ ಸೆಡಿಷನ್ ಕಾನೂನು ಉಳಿದುಕೊಂಡುಬರಲು ಕಾರಣವೇನೆಂದರೆ ಆಗಿದ್ದಂತಹ ರಾಜಕೀಯ ತಳಮಳದ ಸ್ಥಿತಿ, ವಿಭಜನೆ. ದೇಶದಲ್ಲಿ ಇದ್ದ ಅತಂತ್ರ ಸ್ಥಿತಿಯಿಂದ ಅದನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು.

ದೇಶದ್ರೋಹ ಕಾನೂನಿನಲ್ಲಿ ಎರಡು ಭಾಗವಿದೆ. ಒಂದು ರಾಷ್ಟ್ರದ ಬಗ್ಗೆ ದ್ವೇಷ ಇರುವಂತಹದ್ದು ಎರಡನೇಯದ್ದು ರಾಷ್ಟ್ರದ ಸರ್ಕಾರದ ನೀತಿಯನ್ನು ವಿರೋಧಿಸುವಂತಹದ್ದು. ಈ ಕಾನೂನಿಗೆ ಸಂಬಂಧಿಸಿದಂತೆ ಮುಖ್ಯವಾದ ತೀರ್ಪು ಬಂದಿದ್ದು ಕೇದಾರನಾಥ ಪ್ರಕರಣದಲ್ಲಿ. 1962 ರಲ್ಲಿ ಬಂದ ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‍ನ ಸಂವಿಧಾನ ಪೀಠ ಹೇಳಿದ್ದು ‘ಸರ್ಕಾರವನ್ನು ಇಲ್ಲದಾಗಿಸುವಾಗ, ಈ ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಪ್ರಶ್ನೆ ಬಂದಾಗ ಅದು ದೇಶದ್ರೋಹ ಆಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ಒಂದು ಮಿತಿಯಿದೆ. ಈ ಸಂದರ್ಭದಲ್ಲಿ ರಾಷ್ಟ್ರದ್ರೋಹದ ಕಾನೂನು ಸಿಂಧುವಾಗುತ್ತದೆ’.

2ನೇ ಭಾಗದಲ್ಲಿ ಸರ್ಕಾರದ ನೀತಿಯ ವಿರುದ್ಧ ಯಾವುದೇ ಪ್ರತಿರೋಧ, ವಿಮರ್ಶೆ, ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದೇಶದ್ರೋಹ ಆಗುವುದಿಲ್ಲ. ದೇಶದ ವ್ಯವಸ್ಥೆಯನ್ನೇ ಕಿತ್ತೊಗೆಯುವ ಹೇಳಿಕೆ ಬಂದಾಗ ಮಾತ್ರ ದೇಶದ್ರೋಹ ಆಗುತ್ತದೆ. ಇದರ ನಂತರ ಸಾಕಷ್ಟು ತೀರ್ಪುಗಳು ಬಂದಿದೆ. ಅದರಲ್ಲಿ ಮುಖ್ಯವಾದುದು “ಬಲವಂತ್ ಸಿಂಗ್” ತೀರ್ಪು. ಇದರಲ್ಲಿ ಖಾಲಿಸ್ಥಾನ್ ಜಿಂದಾಬಾದ್ ಎನ್ನುವ ಹೇಳಿಕೆಯನ್ನಿಟ್ಟುಕೊಂಡು ಹೊಸ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಲಾಯಿತು. ಆದರೆ ಸುಪ್ರೀಂ ಇದು ದೇಶದ್ರೋಹ ಆಗುವುದಿಲ್ಲ ಎಂದು ತೀರ್ಪು ನೀಡಿತು.

ದೇಶದ ವ್ಯವಸ್ಥೆ ಬದಲಾಯಿಸುವ ಬಗ್ಗೆ ಹೇಳುವುದಿಲ್ಲವೊ ಅದು ದೇಶದ್ರೋಹವಲ್ಲ. ದುರಂತವೆಂದರೆ 1962ರ ನಂತರ ಬಂದ ಎಲ್ಲಾ ರಾಜಕೀಯ ಪಕ್ಷಗಳು ಈ ಕಾನೂನನ್ನು ದುರುಪಯೋಗಪಡಿಸಿಕೊಂಡಿವೆ. ತಮ್ಮ ವಿರುದ್ಧ ಯಾರು ಮಾತನಾಡಿದರೂ ದೇಶದ್ರೋಹದ ಕಾನೂನು ಉಪಯೋಗಿಸಿ ಮೊಕದ್ದಮೆ ದಾಖಲುಮಾಡಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಈ ಪ್ರವೃತ್ತಿ ಈಗ ಇನ್ನು ಹೆಚ್ಚಾಗಿದೆ.

ದುರಂತವೆಂದರೆ ಒಂದು ಚಿಕ್ಕ ನಾಟಕದಲ್ಲಿ ಬರೆದ “ಚಪ್ಪಲಿಯಲ್ಲಿ ಹೊಡೆಯಿರಿ” ಎಂಬ ವಾಕ್ಯದ ಕಾರಣಕ್ಕೆ ದೇಶದ್ರೋಹದ ಪ್ರಕರಣ ಬೀದರಿನಲ್ಲಿ ತಾಯಿ ಮತ್ತು ಶಿಕ್ಷಕಿಯ ಮೇಲೆ ದಾಖಲಾಗಿರುತ್ತದೆ. “ಫ್ರೀ ಕಾಶ್ಮೀರ” ಎಂಬ ಪೋಸ್ಟರ್ ಹಿಡಿದ ಹುಡುಗಿಯ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎಂದು ಹುಡುಗಿಯನ್ನು ದೇಶದ್ರೋಹದ ಮೇಲೆ ಜೈಲಿಗೆ ಅಟ್ಟಲಾಗುತ್ತದೆ. ಈ ದೇಶದ್ರೋಹದ ಕಲ್ಪನೆಯನ್ನು ತುಂಬಾ ಜಾಳಾಗಿ ಸರ್ಕಾರ ತನ್ನ ವಿರುದ್ಧ ಮಾತನಾಡುವ ಪ್ರತಿಯೊಬ್ಬರ ವಿರುದ್ಧ ಪ್ರಯೋಗ ಮಾಡುತ್ತಿದೆ. ಇದು ಕಳೆದ ಐವತ್ತೇಳು ವರ್ಷದ ಇತಿಹಾಸದಲ್ಲಿ ಬಂದಿರುವ ತೀರ್ಪುಗಳಿಗೆ ತೀರಾ ವ್ಯತಿರಿಕ್ತವಾಗಿದೆ.

ದೇಶದ್ರೋಹದ ಕಾನೂನನ್ನು ವಿಮರ್ಶೆ ಅಂದರೆ ಪ್ರಸ್ತುತತೆಯನ್ನು ನೋಡಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಜೊತೆಗೆ ಪ್ರಪಂಚದ ಸಾಕಷ್ಟು ದೇಶಗಳಲ್ಲಿ ದೇಶದ್ರೋಹದ ಕಾನೂನನ್ನು ತೆಗೆದುಹಾಕಲಾಗಿದೆ ಅನ್ನುವುದನ್ನು ನಾವು ಮರೆಯಬಾರದು..
ನಮಗೆ ಎಪ್ಪತ್ತು ವರ್ಷದಲ್ಲಿ ಪ್ರಜಾಪ್ರಭುತ್ವದ ಭದ್ರವಾದ ತಳಹದಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಬಗ್ಗೆ ಅನುಮಾನಗಳು ಇಲ್ಲ. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ, ನಮ್ಮಲ್ಲಿ ಪ್ರತಿರೋಧ ಇದೆ. ಚುನಾಯಿತ ಸರ್ಕಾರಗಳೇ ಅಧಿಕಾರ ನಡೆಸುತ್ತಿವೆ ಇದು ಇರಬೇಕಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಪ್ರಮುಖವಾಗಿದೆ. ಸರ್ಕಾರದ ಕಾನೂನನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ವಿರೋಧಿಸುವ ಹಕ್ಕಿರುತ್ತದೆ ಅಲ್ಲಿ ದೇಶದ್ರೋಹದ ಕಾನೂನಿಗೆ ಅವಕಾಶ ಇರುವುದಿಲ್ಲ. ದೇಶದ್ರೋಹವನ್ನು ಹೊರತುಪಡಿಸಿ ಸಾಕಷ್ಟು ಕಾನೂನು ನಮ್ಮ ಭಾರತೀಯ ದಂಡ ಸಂಹಿತೆಯಲ್ಲಿ ಇದೆ ಅದರ್ರ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಹುದು.

ನಮ್ಮಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಂಡಿದೆ ಎಂದು ಒಪ್ಪುವುದೇ ಆದರೆ ಅಲ್ಲಿ ದೇಶದ್ರೋಹದ ಕಾನೂನು ಇರಲು ಅವಕಾಶವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...