HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...