Homeಅಂಕಣಗಳುತಲ್ಲಣದ ಜೀವನಾನುಭವಗಳ ಅನಾವರಣ

ತಲ್ಲಣದ ಜೀವನಾನುಭವಗಳ ಅನಾವರಣ

- Advertisement -
ಇತ್ತೀಚಿನ ದಿನಗಳಲ್ಲಿ ವರ್ತಮಾನದ ಸಾಮಾಜಿಕ ಆಗುಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತಿರುವ ವಿಕಾಸ್ ಮೌರ್ಯ, ಹೊಸತಲೆಮಾರಿನ ಪ್ರಖರ ಚಿಂತಕರಲ್ಲೊಬ್ಬರು. ಇದಕ್ಕೆ ಪುರಾವೆಯೆಂದರೆ ಕಳೆದ ಐದಾರು ವರ್ಷಗಳಿಂದ ಅವರು ಬರೆದ ಇಲ್ಲಿನ ಲೇಖನಗಳು. ಎಲ್ಲವೂ ಪುಟ್ಟ ಪುಟ್ಟ ಲೇಖನಗಳು; ಸರಳವೂ ನೇರವೂ ಸಂವಹನಶೀಲವೂ ಆದ ಭಾಷೆ; ಸಮಾಜ ಬದಲಾವಣೆಯ ದಿಕ್ಕಿನಲ್ಲಿ ಚಿಂತಿಸಲು ಮತ್ತು ಕ್ರಿಯಾಶೀಲರಾಗಲು ಕರೆಗೊಡುವ ಸಂಕಲ್ಪ ತುಂಬಿದ ವಾಕ್ಯಗಳು; ಪ್ರಾಮಾಣಿಕವಾದ ವೇದನೆಯನ್ನೂ ಆಕ್ರೋಶವನ್ನು ಚಿಂತನೆಯಾಗಿ ಮಾರ್ಪಡಿಸುವ ಸಂಯಮದ ಶೈಲಿ; ಎಚ್ಚರ ಮತ್ತು ಕನಸುಗಾರಿಕೆಯಿಂದ ಕೂಡಿದ ತರುಣ ಮನಸ್ಸು; ವರ್ತಮಾನದ ಇಂಡಿಯಾ ದಲಿತರನ್ನು ನಡೆಸಿಕೊಳ್ಳುತ್ತಿರುವ ಭೀಷಣ ವಾಸ್ತವವನ್ನು ಕಾಣಿಸುವಿಕೆ-ಇವು ಲೇಖನಗಳ ಹಿಂದಿರುವ ಮುಖ್ಯ ಚಹರೆಗಳು. ಈ ಲೇಖನಗಳಲ್ಲಿ ಕನ್ನಡ ಪ್ರಗತಿಪರ ಚಿಂತನೆ ಈಗಾಗಲೇ ಚರ್ಚಿಸಿರುವ ಎಳೆಗಳೇ ಇವೆ. ಆದರೆ ಇವುಗಳ ಹಿಂದಿನ ಬದ್ಧತೆ ಕಳಕಳಿ ತಲ್ಲಣ ಪ್ರಾಮಾಣಿಕತೆಗಳು ಲೇಖನಗಳಿಗೆ ಹೊಸ ಜೀವಂತಿಕೆಯನ್ನು ಹಾಯಿಸಿವೆ. ದಮನಿತ ಸಮುದಾಯದ ಪ್ರಾತಿನಿಧ್ಯ ಅವಾಹಿಸಿಕೊಂಡು ಹುಟ್ಟುವ ಆಕ್ಟಿವಿಸ್ಟ್ ಬರಹಗಳಲ್ಲಿ ಎದುರಾಳಿಯನ್ನು ಕಟಕಟೆಯಲ್ಲಿ ನಿಲ್ಲಿಸುವ ನಿಲುಮೆ ಸಾಮಾನ್ಯ. ವಿಶೇಷವೆಂದರೆ ಇಲ್ಲಿನ ಬರಹಗಳಲ್ಲಿ ಸ್ವವಿಮರ್ಶೆಯ ದನಿಯೂ ಸೇರಿರುವುದು. ಮೊದಲ ಲೇಖನವೇ ದಲಿತ ಮಧ್ಯಮವರ್ಗ ಮತ್ತು ದಲಿತ ಚಳವಳಿಗಳನ್ನು ಕುರಿತ ನಿಷ್ಠೂರವಾದ ಆತ್ಮವಿಮರ್ಶೆಯಿಂದ ಕೂಡಿದೆ. ಅಂಬೇಡ್ಕರರನ್ನು ದೈವವಾಗಿಸಿ ಅವರ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಮರೆತಿರುವ ದಲಿತರ ಬಗ್ಗೆ ಇಲ್ಲಿ ಕೋಪವಿದೆ. ತಲ್ಲಣ ಮತ್ತು ಭಾವನಾತ್ಮಕತೆ ಪ್ರಧಾನವಾಗಿರುವ ಇಲ್ಲಿನ ಚಿಂತನೆ, ಅಧ್ಯಯನಶೀಲತೆ ಮತ್ತು ಅಂಕಿಅಂಶಗಳ ಬಲವನ್ನೂ ಪಡೆದುಕೊಂಡಿದೆ. ಕೆಲವು ದಲಿತ ಚಿಂತಕರನ್ನು ಆವರಿಸಿಕೊಂಡಿರುವ ಸೈದ್ಧಾಂತಿಕ ಜಡತೆ, ಪಾಂಥಿಕ ಸಂಕುಚಿತತೆ ಮತ್ತು ನಿರಾಳತೆಗಳು ಇಲ್ಲಿಲ್ಲ. ಬದಲಿಗೆ ಸಿದ್ಧಾಂತಗಳಿಗೆ ಕಟ್ಟುಗೊಳ್ಳದೆ ಅವುಗಳ ಮೂಲಕ ಹೊಸಕಾಲಕ್ಕೆ ಬೇಕಾದ ಚೌಕಟ್ಟು ರೂಪಿಸಿಕೊಳ್ಳುವ ಚಲನಶೀಲತೆ ಮತ್ತು ತೆರೆದಮನಸ್ಸಿದೆ; ಸಂಗಾತಿ ಚಿಂತನೆಗಳ ಅಥವಾ ಚಳುವಳಿಗಳ ಮುಂದೆ ತಾತ್ವಿಕ ಭಿನ್ನಮತವನ್ನು ಪ್ರಶ್ನೆರೂಪದಲ್ಲಿ ಮುಂದಿಟ್ಟು ಸಂವಾದ ಮಾಡಬಯಸುವ ಧಾಟಿಯಿದೆ. ಇದು ಸದ್ಯ ಜರೂರಾಗಿರುವ ಪ್ರಜಾತಂತ್ರವಾದಿ ಕ್ರಮ ಕೂಡ. ಕರ್ನಾಟಕದಲ್ಲಿ ಪ್ರಜಾತಂತ್ರವಾದಿ ಮತ್ತು ಪ್ರಗತಿಪರ ಶಕ್ತಿಗಳು ಸಾಕಷ್ಟಿವೆ. ಆದರೆ ಅವು ಸೈದ್ಧಾಂತಿಕ ಭಿನ್ನತೆ ಮತ್ತು ಪಾಂಥಿಕವಾದ ಬಣರಾಜಕಾರಣದಲ್ಲಿ ಮುಳುಗಿ ಕೂಡಿಕಟ್ಟುವ ಬಂಧುತ್ವದ ಪರಿಭಾಷೆಯನ್ನೇ ಮರೆತುಬಿಟ್ಟಿವೆ. ಭಾರತದಲ್ಲಿ ಮಾರುಕಟ್ಟೆ ಸಂಸ್ಕøತಿಯ ಭಾಗವಾಗಿ ನವಫ್ಯಾಸಿಸಂ ಮೈದಳೆಯುತ್ತಿರುವ ಈ ಕಾಲದಲ್ಲಿ, ಜನಪರ ಸಿದ್ಧಾಂತ ಮತ್ತು ಚಳವಳಿಗಳು ಒಗ್ಗೂಡುವ ವಿಶಾಲ ರಾಜಕಾರಣ ರೂಪುಗೊಳ್ಳಬೇಕಿದೆ. ಇಂತಹ ಚಾರಿತ್ರಿಕ ಮತ್ತು ಸಂಕ್ರಮಣದ ಕಾಲಘಟ್ಟದಲ್ಲಿ ಈ ಕೃತಿ ಪ್ರಕಟವಾಗುತ್ತಿದ್ದು, ಇದು ಒಡಕಲು ಬಿಂ¨ಗಳಾಗಿರುವ ಚಳವಳಿ ಮತ್ತು ನಾಯಕತ್ವಗಳನ್ನು ಸಮಾನ ಆಶಯಕ್ಕಾಗಿ ಒಂದು ಹಾದಿಯ ಮೇಲೆ ತರುವ ಇರಾದೆಯನ್ನೂ ಹೊಂದಿದೆ.
ಅಂಬೇಡ್ಕರ್‍ವಾದದ ಹಿನ್ನೆಲೆಯಿಂದ ಹುಟ್ಟಿರುವ ಇಲ್ಲಿನ ಲೇಖನಗಳಲ್ಲಿ, ಭಾರತದ ದಲಿತರ ಕಷ್ಟಗಳು ಪ್ರಧಾನವಾಗಿ ಚರ್ಚಿತವಾಗಿರುವುದು ಸಹಜವೇ. ವಿಶೇಷವೆಂದರೆ, ಈ ಚರ್ಚೆಯು ಸಮಾಜದ ಎಲ್ಲಾ ದಮನಿತರ ನೋವಿಗೆ ಮಿಡಿಯುವಂತೆ ತನ್ನನ್ನು ವಿಸ್ತರಿಸಿಕೊಳ್ಳುವುದು. ಕೋಮುವಾದವು ದಲಿತರ ಸಮಸ್ಯೆಯಲ್ಲ, ಮಾರುಕಟ್ಟೆ ಪ್ರಣೀತ ಅಭಿವೃದ್ಧಿ ಪರಿಕಲ್ಪನೆಯ ಬಲಿಪಶುಗಳಾಗಿರುವ ಆದಿವಾಸಿಗಳ ಕಷ್ಟ ನಮ್ಮದಲ್ಲ, ಪುರುಷವಾದವು ಮಹಿಳೆಯರ ಸಮಸ್ಯೆ- ಎಂದೆಲ್ಲ ಭಾವಿಸುವ ಬಿಡಿತನದ ಆಲೋಚನೆ ನಮ್ಮ ನಡುವಿದೆ. ನಮಗೆ ರಾಜಕೀಯ ಅಧಿಕಾರ ಸಿಗುವುದಾದರೆ ರಾಜಕೀಯ ಪಕ್ಷಗಳಲ್ಲಿ ಅಸ್ಪøಶ್ಯತೆ ಆಚರಿಸಬೇಕಿಲ್ಲ ಎಂಬ ಅವಕಾಶವಾದವೂ ಇದೆ. ಈ ಹಿನ್ನೆಲೆಯಲ್ಲಿ ದಲಿತರು ಬಡವರು ಮಹಿಳೆಯರು ಕಾರ್ಮಿಕರು ಹಾಗೂ ಮುಸ್ಲಿಮರನ್ನು ಒಳಗೊಂಡಂತೆ ಸಮಸ್ತ ದಮನಿತರನ್ನು ತನ್ನವರೆಂದು ಭಾವಿಸುವ ಇಡಿತನದ  ವಿಶಾಲವಾದ ಗ್ರಹಿಕೆ ಈ ಕೃತಿಯಲ್ಲಿದೆ. ಇದನ್ನು ಅಂಬೇಡ್ಕರ್‍ವಾದ ಮತ್ತು ದಲಿತ ಚಿಂತನೆಯ ಹೊಸ ರೂಪಾಂತರ ಮತ್ತು ಸಮಕಾಲೀನ ವಿಸ್ತರಣೆ ಎನ್ನಬಹುದು. ಇಂತಹ ವಿಸ್ತರಣೆ ಮತ್ತು ರೂಪಾಂತರ ಮೊದಲಿಂದಲೂ ದೇವನೂರರ ಬರಹಗಳಲ್ಲಿದೆ. ಚಳುವಳಿಯ ಹೊಸ ಪ್ರತಿಭೆಗಳಾದ ಜಿಗ್ನೇಶ್, ಕನ್ಹಯ್ಯ ಕುಮಾರ್ ಹಾಗೂ ರೋಹಿತ್ ವೇಮುಲಾ ಅವರಲ್ಲೂ ಇದೆ. ಸ್ವವಿಮರ್ಷೆ ಮತ್ತು ಸಮಕಾಲೀನ ಆಶೋತ್ತರಗಳಿಗಾಗಿ ಪಡೆಯುವ ಈ ಮರುಹುಟ್ಟು ಮತ್ತು ವಿಸ್ತರಣೆಯ ರೂಪಾರಂತವು, ಕರ್ನಾಟಕದ ಚಳವಳಿಗಳಿಗೂ ದಮನಿತ ಸಮುದಾಯಗಳಿಗೂ ಅಗತ್ಯವಾಗಿದೆ. ನಿರ್ದಿಷ್ಟ ಸಿದ್ಧಾಂತದ ಹಿನ್ನೆಲೆಯುಳ್ಳ ಯಾವುದೇ ಒಂದು ಚಳುವಳಿ ಈಗ ಸಾಲುತ್ತಿಲ್ಲ. ಬದಲಿಗೆ ಸ್ವವಿಮರ್ಶೆ ಮತ್ತು ಸಮಾನ ಆಶಯದಲ್ಲಿ ಒಗ್ಗೂಡುವ ಸಹಮತದ ಚಳುವಳಿ ರಾಜಕಾರಣ, ನಮ್ಮ ಕಾಲದ ಪರ್ಯಾಯ ಹಾದಿಯಾಗುವಂತೆ ತೋರುತ್ತಿದೆ. ನೀಲಿ ಮತ್ತು ಕೆಂಪುಗಳು ತಮ್ಮ ಹಳೇ ವ್ಯಾಜ್ಯಗಳನ್ನು ಬದಿಗಿಟ್ಟು, ಒಗ್ಗೂಡಿ ಹೊಸ ಭಾರತ ಕಟ್ಟಬಲ್ಲವು ಎಂದು ಆಸೆ ಹುಟ್ಟಿಸುತ್ತಿವೆ. ಇವುಗಳೊಟ್ಟಿಗೆ ಭಾರತದ ಸಮಸ್ತ ಜಾತಿ-ಮತ-ಧರ್ಮಗಳಲ್ಲಿರುವ ಮಹಿಳೆಯರ ನಸುಗೆಂಪು ಸೇರಿಕೊಳ್ಳಬೇಕಾದ ಮೂರನೇ ಬಣ್ಣವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಕೃತಿಯಲ್ಲಿ ಸ್ತ್ರೀವಿಮೋಚನೆಯ ಪ್ರಸ್ತಾಪಗಳಿವೆ. ಚರಿತ್ರೆಯಿಂದ ಪಾಠ ಕಲಿಯುವ ಮಾತು ಸಾಕಷ್ಟು ಸವೆದುಹೋಗಿದೆ; ಚಳುವಳಿಗಳಿಗೆ ಅನೇಕ ಸಲ ಚಲನಶೀಲ ದೃಷ್ಟಿಕೋನದಲ್ಲಿ ಮರುವ್ಯಾಖ್ಯಾನ ಪಡೆಯದ ಚರಿತ್ರೆಯೇ ಕಾಲ್ತೊಡಕಾಗುವಷ್ಟು ಭಾರವಾಗಿದೆ. ಈ ದೃಷ್ಟಿಯಿಂದ ಚರಿತ್ರೆಯ ಹ್ಯಾಂಗೋವರುಗಳಿಂದ ಬಿಡಿಸಿಕೊಂಡು ಮುನ್ನಡೆಯುವ ಚಲನಶೀಲತೆಯನ್ನು ಈ ಕೃತಿ ತೋರುತ್ತಿದೆ.
– ರಹಮತ್ ತರೀಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...