Homeಅಂಕಣಗಳುತಲ್ಲಣದ ಜೀವನಾನುಭವಗಳ ಅನಾವರಣ

ತಲ್ಲಣದ ಜೀವನಾನುಭವಗಳ ಅನಾವರಣ

- Advertisement -
ಇತ್ತೀಚಿನ ದಿನಗಳಲ್ಲಿ ವರ್ತಮಾನದ ಸಾಮಾಜಿಕ ಆಗುಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತಿರುವ ವಿಕಾಸ್ ಮೌರ್ಯ, ಹೊಸತಲೆಮಾರಿನ ಪ್ರಖರ ಚಿಂತಕರಲ್ಲೊಬ್ಬರು. ಇದಕ್ಕೆ ಪುರಾವೆಯೆಂದರೆ ಕಳೆದ ಐದಾರು ವರ್ಷಗಳಿಂದ ಅವರು ಬರೆದ ಇಲ್ಲಿನ ಲೇಖನಗಳು. ಎಲ್ಲವೂ ಪುಟ್ಟ ಪುಟ್ಟ ಲೇಖನಗಳು; ಸರಳವೂ ನೇರವೂ ಸಂವಹನಶೀಲವೂ ಆದ ಭಾಷೆ; ಸಮಾಜ ಬದಲಾವಣೆಯ ದಿಕ್ಕಿನಲ್ಲಿ ಚಿಂತಿಸಲು ಮತ್ತು ಕ್ರಿಯಾಶೀಲರಾಗಲು ಕರೆಗೊಡುವ ಸಂಕಲ್ಪ ತುಂಬಿದ ವಾಕ್ಯಗಳು; ಪ್ರಾಮಾಣಿಕವಾದ ವೇದನೆಯನ್ನೂ ಆಕ್ರೋಶವನ್ನು ಚಿಂತನೆಯಾಗಿ ಮಾರ್ಪಡಿಸುವ ಸಂಯಮದ ಶೈಲಿ; ಎಚ್ಚರ ಮತ್ತು ಕನಸುಗಾರಿಕೆಯಿಂದ ಕೂಡಿದ ತರುಣ ಮನಸ್ಸು; ವರ್ತಮಾನದ ಇಂಡಿಯಾ ದಲಿತರನ್ನು ನಡೆಸಿಕೊಳ್ಳುತ್ತಿರುವ ಭೀಷಣ ವಾಸ್ತವವನ್ನು ಕಾಣಿಸುವಿಕೆ-ಇವು ಲೇಖನಗಳ ಹಿಂದಿರುವ ಮುಖ್ಯ ಚಹರೆಗಳು. ಈ ಲೇಖನಗಳಲ್ಲಿ ಕನ್ನಡ ಪ್ರಗತಿಪರ ಚಿಂತನೆ ಈಗಾಗಲೇ ಚರ್ಚಿಸಿರುವ ಎಳೆಗಳೇ ಇವೆ. ಆದರೆ ಇವುಗಳ ಹಿಂದಿನ ಬದ್ಧತೆ ಕಳಕಳಿ ತಲ್ಲಣ ಪ್ರಾಮಾಣಿಕತೆಗಳು ಲೇಖನಗಳಿಗೆ ಹೊಸ ಜೀವಂತಿಕೆಯನ್ನು ಹಾಯಿಸಿವೆ. ದಮನಿತ ಸಮುದಾಯದ ಪ್ರಾತಿನಿಧ್ಯ ಅವಾಹಿಸಿಕೊಂಡು ಹುಟ್ಟುವ ಆಕ್ಟಿವಿಸ್ಟ್ ಬರಹಗಳಲ್ಲಿ ಎದುರಾಳಿಯನ್ನು ಕಟಕಟೆಯಲ್ಲಿ ನಿಲ್ಲಿಸುವ ನಿಲುಮೆ ಸಾಮಾನ್ಯ. ವಿಶೇಷವೆಂದರೆ ಇಲ್ಲಿನ ಬರಹಗಳಲ್ಲಿ ಸ್ವವಿಮರ್ಶೆಯ ದನಿಯೂ ಸೇರಿರುವುದು. ಮೊದಲ ಲೇಖನವೇ ದಲಿತ ಮಧ್ಯಮವರ್ಗ ಮತ್ತು ದಲಿತ ಚಳವಳಿಗಳನ್ನು ಕುರಿತ ನಿಷ್ಠೂರವಾದ ಆತ್ಮವಿಮರ್ಶೆಯಿಂದ ಕೂಡಿದೆ. ಅಂಬೇಡ್ಕರರನ್ನು ದೈವವಾಗಿಸಿ ಅವರ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಮರೆತಿರುವ ದಲಿತರ ಬಗ್ಗೆ ಇಲ್ಲಿ ಕೋಪವಿದೆ. ತಲ್ಲಣ ಮತ್ತು ಭಾವನಾತ್ಮಕತೆ ಪ್ರಧಾನವಾಗಿರುವ ಇಲ್ಲಿನ ಚಿಂತನೆ, ಅಧ್ಯಯನಶೀಲತೆ ಮತ್ತು ಅಂಕಿಅಂಶಗಳ ಬಲವನ್ನೂ ಪಡೆದುಕೊಂಡಿದೆ. ಕೆಲವು ದಲಿತ ಚಿಂತಕರನ್ನು ಆವರಿಸಿಕೊಂಡಿರುವ ಸೈದ್ಧಾಂತಿಕ ಜಡತೆ, ಪಾಂಥಿಕ ಸಂಕುಚಿತತೆ ಮತ್ತು ನಿರಾಳತೆಗಳು ಇಲ್ಲಿಲ್ಲ. ಬದಲಿಗೆ ಸಿದ್ಧಾಂತಗಳಿಗೆ ಕಟ್ಟುಗೊಳ್ಳದೆ ಅವುಗಳ ಮೂಲಕ ಹೊಸಕಾಲಕ್ಕೆ ಬೇಕಾದ ಚೌಕಟ್ಟು ರೂಪಿಸಿಕೊಳ್ಳುವ ಚಲನಶೀಲತೆ ಮತ್ತು ತೆರೆದಮನಸ್ಸಿದೆ; ಸಂಗಾತಿ ಚಿಂತನೆಗಳ ಅಥವಾ ಚಳುವಳಿಗಳ ಮುಂದೆ ತಾತ್ವಿಕ ಭಿನ್ನಮತವನ್ನು ಪ್ರಶ್ನೆರೂಪದಲ್ಲಿ ಮುಂದಿಟ್ಟು ಸಂವಾದ ಮಾಡಬಯಸುವ ಧಾಟಿಯಿದೆ. ಇದು ಸದ್ಯ ಜರೂರಾಗಿರುವ ಪ್ರಜಾತಂತ್ರವಾದಿ ಕ್ರಮ ಕೂಡ. ಕರ್ನಾಟಕದಲ್ಲಿ ಪ್ರಜಾತಂತ್ರವಾದಿ ಮತ್ತು ಪ್ರಗತಿಪರ ಶಕ್ತಿಗಳು ಸಾಕಷ್ಟಿವೆ. ಆದರೆ ಅವು ಸೈದ್ಧಾಂತಿಕ ಭಿನ್ನತೆ ಮತ್ತು ಪಾಂಥಿಕವಾದ ಬಣರಾಜಕಾರಣದಲ್ಲಿ ಮುಳುಗಿ ಕೂಡಿಕಟ್ಟುವ ಬಂಧುತ್ವದ ಪರಿಭಾಷೆಯನ್ನೇ ಮರೆತುಬಿಟ್ಟಿವೆ. ಭಾರತದಲ್ಲಿ ಮಾರುಕಟ್ಟೆ ಸಂಸ್ಕøತಿಯ ಭಾಗವಾಗಿ ನವಫ್ಯಾಸಿಸಂ ಮೈದಳೆಯುತ್ತಿರುವ ಈ ಕಾಲದಲ್ಲಿ, ಜನಪರ ಸಿದ್ಧಾಂತ ಮತ್ತು ಚಳವಳಿಗಳು ಒಗ್ಗೂಡುವ ವಿಶಾಲ ರಾಜಕಾರಣ ರೂಪುಗೊಳ್ಳಬೇಕಿದೆ. ಇಂತಹ ಚಾರಿತ್ರಿಕ ಮತ್ತು ಸಂಕ್ರಮಣದ ಕಾಲಘಟ್ಟದಲ್ಲಿ ಈ ಕೃತಿ ಪ್ರಕಟವಾಗುತ್ತಿದ್ದು, ಇದು ಒಡಕಲು ಬಿಂ¨ಗಳಾಗಿರುವ ಚಳವಳಿ ಮತ್ತು ನಾಯಕತ್ವಗಳನ್ನು ಸಮಾನ ಆಶಯಕ್ಕಾಗಿ ಒಂದು ಹಾದಿಯ ಮೇಲೆ ತರುವ ಇರಾದೆಯನ್ನೂ ಹೊಂದಿದೆ.
ಅಂಬೇಡ್ಕರ್‍ವಾದದ ಹಿನ್ನೆಲೆಯಿಂದ ಹುಟ್ಟಿರುವ ಇಲ್ಲಿನ ಲೇಖನಗಳಲ್ಲಿ, ಭಾರತದ ದಲಿತರ ಕಷ್ಟಗಳು ಪ್ರಧಾನವಾಗಿ ಚರ್ಚಿತವಾಗಿರುವುದು ಸಹಜವೇ. ವಿಶೇಷವೆಂದರೆ, ಈ ಚರ್ಚೆಯು ಸಮಾಜದ ಎಲ್ಲಾ ದಮನಿತರ ನೋವಿಗೆ ಮಿಡಿಯುವಂತೆ ತನ್ನನ್ನು ವಿಸ್ತರಿಸಿಕೊಳ್ಳುವುದು. ಕೋಮುವಾದವು ದಲಿತರ ಸಮಸ್ಯೆಯಲ್ಲ, ಮಾರುಕಟ್ಟೆ ಪ್ರಣೀತ ಅಭಿವೃದ್ಧಿ ಪರಿಕಲ್ಪನೆಯ ಬಲಿಪಶುಗಳಾಗಿರುವ ಆದಿವಾಸಿಗಳ ಕಷ್ಟ ನಮ್ಮದಲ್ಲ, ಪುರುಷವಾದವು ಮಹಿಳೆಯರ ಸಮಸ್ಯೆ- ಎಂದೆಲ್ಲ ಭಾವಿಸುವ ಬಿಡಿತನದ ಆಲೋಚನೆ ನಮ್ಮ ನಡುವಿದೆ. ನಮಗೆ ರಾಜಕೀಯ ಅಧಿಕಾರ ಸಿಗುವುದಾದರೆ ರಾಜಕೀಯ ಪಕ್ಷಗಳಲ್ಲಿ ಅಸ್ಪøಶ್ಯತೆ ಆಚರಿಸಬೇಕಿಲ್ಲ ಎಂಬ ಅವಕಾಶವಾದವೂ ಇದೆ. ಈ ಹಿನ್ನೆಲೆಯಲ್ಲಿ ದಲಿತರು ಬಡವರು ಮಹಿಳೆಯರು ಕಾರ್ಮಿಕರು ಹಾಗೂ ಮುಸ್ಲಿಮರನ್ನು ಒಳಗೊಂಡಂತೆ ಸಮಸ್ತ ದಮನಿತರನ್ನು ತನ್ನವರೆಂದು ಭಾವಿಸುವ ಇಡಿತನದ  ವಿಶಾಲವಾದ ಗ್ರಹಿಕೆ ಈ ಕೃತಿಯಲ್ಲಿದೆ. ಇದನ್ನು ಅಂಬೇಡ್ಕರ್‍ವಾದ ಮತ್ತು ದಲಿತ ಚಿಂತನೆಯ ಹೊಸ ರೂಪಾಂತರ ಮತ್ತು ಸಮಕಾಲೀನ ವಿಸ್ತರಣೆ ಎನ್ನಬಹುದು. ಇಂತಹ ವಿಸ್ತರಣೆ ಮತ್ತು ರೂಪಾಂತರ ಮೊದಲಿಂದಲೂ ದೇವನೂರರ ಬರಹಗಳಲ್ಲಿದೆ. ಚಳುವಳಿಯ ಹೊಸ ಪ್ರತಿಭೆಗಳಾದ ಜಿಗ್ನೇಶ್, ಕನ್ಹಯ್ಯ ಕುಮಾರ್ ಹಾಗೂ ರೋಹಿತ್ ವೇಮುಲಾ ಅವರಲ್ಲೂ ಇದೆ. ಸ್ವವಿಮರ್ಷೆ ಮತ್ತು ಸಮಕಾಲೀನ ಆಶೋತ್ತರಗಳಿಗಾಗಿ ಪಡೆಯುವ ಈ ಮರುಹುಟ್ಟು ಮತ್ತು ವಿಸ್ತರಣೆಯ ರೂಪಾರಂತವು, ಕರ್ನಾಟಕದ ಚಳವಳಿಗಳಿಗೂ ದಮನಿತ ಸಮುದಾಯಗಳಿಗೂ ಅಗತ್ಯವಾಗಿದೆ. ನಿರ್ದಿಷ್ಟ ಸಿದ್ಧಾಂತದ ಹಿನ್ನೆಲೆಯುಳ್ಳ ಯಾವುದೇ ಒಂದು ಚಳುವಳಿ ಈಗ ಸಾಲುತ್ತಿಲ್ಲ. ಬದಲಿಗೆ ಸ್ವವಿಮರ್ಶೆ ಮತ್ತು ಸಮಾನ ಆಶಯದಲ್ಲಿ ಒಗ್ಗೂಡುವ ಸಹಮತದ ಚಳುವಳಿ ರಾಜಕಾರಣ, ನಮ್ಮ ಕಾಲದ ಪರ್ಯಾಯ ಹಾದಿಯಾಗುವಂತೆ ತೋರುತ್ತಿದೆ. ನೀಲಿ ಮತ್ತು ಕೆಂಪುಗಳು ತಮ್ಮ ಹಳೇ ವ್ಯಾಜ್ಯಗಳನ್ನು ಬದಿಗಿಟ್ಟು, ಒಗ್ಗೂಡಿ ಹೊಸ ಭಾರತ ಕಟ್ಟಬಲ್ಲವು ಎಂದು ಆಸೆ ಹುಟ್ಟಿಸುತ್ತಿವೆ. ಇವುಗಳೊಟ್ಟಿಗೆ ಭಾರತದ ಸಮಸ್ತ ಜಾತಿ-ಮತ-ಧರ್ಮಗಳಲ್ಲಿರುವ ಮಹಿಳೆಯರ ನಸುಗೆಂಪು ಸೇರಿಕೊಳ್ಳಬೇಕಾದ ಮೂರನೇ ಬಣ್ಣವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಕೃತಿಯಲ್ಲಿ ಸ್ತ್ರೀವಿಮೋಚನೆಯ ಪ್ರಸ್ತಾಪಗಳಿವೆ. ಚರಿತ್ರೆಯಿಂದ ಪಾಠ ಕಲಿಯುವ ಮಾತು ಸಾಕಷ್ಟು ಸವೆದುಹೋಗಿದೆ; ಚಳುವಳಿಗಳಿಗೆ ಅನೇಕ ಸಲ ಚಲನಶೀಲ ದೃಷ್ಟಿಕೋನದಲ್ಲಿ ಮರುವ್ಯಾಖ್ಯಾನ ಪಡೆಯದ ಚರಿತ್ರೆಯೇ ಕಾಲ್ತೊಡಕಾಗುವಷ್ಟು ಭಾರವಾಗಿದೆ. ಈ ದೃಷ್ಟಿಯಿಂದ ಚರಿತ್ರೆಯ ಹ್ಯಾಂಗೋವರುಗಳಿಂದ ಬಿಡಿಸಿಕೊಂಡು ಮುನ್ನಡೆಯುವ ಚಲನಶೀಲತೆಯನ್ನು ಈ ಕೃತಿ ತೋರುತ್ತಿದೆ.
– ರಹಮತ್ ತರೀಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...