Homeಅಂಕಣಗಳುತಲ್ಲಣದ ಜೀವನಾನುಭವಗಳ ಅನಾವರಣ

ತಲ್ಲಣದ ಜೀವನಾನುಭವಗಳ ಅನಾವರಣ

- Advertisement -
ಇತ್ತೀಚಿನ ದಿನಗಳಲ್ಲಿ ವರ್ತಮಾನದ ಸಾಮಾಜಿಕ ಆಗುಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತಿರುವ ವಿಕಾಸ್ ಮೌರ್ಯ, ಹೊಸತಲೆಮಾರಿನ ಪ್ರಖರ ಚಿಂತಕರಲ್ಲೊಬ್ಬರು. ಇದಕ್ಕೆ ಪುರಾವೆಯೆಂದರೆ ಕಳೆದ ಐದಾರು ವರ್ಷಗಳಿಂದ ಅವರು ಬರೆದ ಇಲ್ಲಿನ ಲೇಖನಗಳು. ಎಲ್ಲವೂ ಪುಟ್ಟ ಪುಟ್ಟ ಲೇಖನಗಳು; ಸರಳವೂ ನೇರವೂ ಸಂವಹನಶೀಲವೂ ಆದ ಭಾಷೆ; ಸಮಾಜ ಬದಲಾವಣೆಯ ದಿಕ್ಕಿನಲ್ಲಿ ಚಿಂತಿಸಲು ಮತ್ತು ಕ್ರಿಯಾಶೀಲರಾಗಲು ಕರೆಗೊಡುವ ಸಂಕಲ್ಪ ತುಂಬಿದ ವಾಕ್ಯಗಳು; ಪ್ರಾಮಾಣಿಕವಾದ ವೇದನೆಯನ್ನೂ ಆಕ್ರೋಶವನ್ನು ಚಿಂತನೆಯಾಗಿ ಮಾರ್ಪಡಿಸುವ ಸಂಯಮದ ಶೈಲಿ; ಎಚ್ಚರ ಮತ್ತು ಕನಸುಗಾರಿಕೆಯಿಂದ ಕೂಡಿದ ತರುಣ ಮನಸ್ಸು; ವರ್ತಮಾನದ ಇಂಡಿಯಾ ದಲಿತರನ್ನು ನಡೆಸಿಕೊಳ್ಳುತ್ತಿರುವ ಭೀಷಣ ವಾಸ್ತವವನ್ನು ಕಾಣಿಸುವಿಕೆ-ಇವು ಲೇಖನಗಳ ಹಿಂದಿರುವ ಮುಖ್ಯ ಚಹರೆಗಳು. ಈ ಲೇಖನಗಳಲ್ಲಿ ಕನ್ನಡ ಪ್ರಗತಿಪರ ಚಿಂತನೆ ಈಗಾಗಲೇ ಚರ್ಚಿಸಿರುವ ಎಳೆಗಳೇ ಇವೆ. ಆದರೆ ಇವುಗಳ ಹಿಂದಿನ ಬದ್ಧತೆ ಕಳಕಳಿ ತಲ್ಲಣ ಪ್ರಾಮಾಣಿಕತೆಗಳು ಲೇಖನಗಳಿಗೆ ಹೊಸ ಜೀವಂತಿಕೆಯನ್ನು ಹಾಯಿಸಿವೆ. ದಮನಿತ ಸಮುದಾಯದ ಪ್ರಾತಿನಿಧ್ಯ ಅವಾಹಿಸಿಕೊಂಡು ಹುಟ್ಟುವ ಆಕ್ಟಿವಿಸ್ಟ್ ಬರಹಗಳಲ್ಲಿ ಎದುರಾಳಿಯನ್ನು ಕಟಕಟೆಯಲ್ಲಿ ನಿಲ್ಲಿಸುವ ನಿಲುಮೆ ಸಾಮಾನ್ಯ. ವಿಶೇಷವೆಂದರೆ ಇಲ್ಲಿನ ಬರಹಗಳಲ್ಲಿ ಸ್ವವಿಮರ್ಶೆಯ ದನಿಯೂ ಸೇರಿರುವುದು. ಮೊದಲ ಲೇಖನವೇ ದಲಿತ ಮಧ್ಯಮವರ್ಗ ಮತ್ತು ದಲಿತ ಚಳವಳಿಗಳನ್ನು ಕುರಿತ ನಿಷ್ಠೂರವಾದ ಆತ್ಮವಿಮರ್ಶೆಯಿಂದ ಕೂಡಿದೆ. ಅಂಬೇಡ್ಕರರನ್ನು ದೈವವಾಗಿಸಿ ಅವರ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಮರೆತಿರುವ ದಲಿತರ ಬಗ್ಗೆ ಇಲ್ಲಿ ಕೋಪವಿದೆ. ತಲ್ಲಣ ಮತ್ತು ಭಾವನಾತ್ಮಕತೆ ಪ್ರಧಾನವಾಗಿರುವ ಇಲ್ಲಿನ ಚಿಂತನೆ, ಅಧ್ಯಯನಶೀಲತೆ ಮತ್ತು ಅಂಕಿಅಂಶಗಳ ಬಲವನ್ನೂ ಪಡೆದುಕೊಂಡಿದೆ. ಕೆಲವು ದಲಿತ ಚಿಂತಕರನ್ನು ಆವರಿಸಿಕೊಂಡಿರುವ ಸೈದ್ಧಾಂತಿಕ ಜಡತೆ, ಪಾಂಥಿಕ ಸಂಕುಚಿತತೆ ಮತ್ತು ನಿರಾಳತೆಗಳು ಇಲ್ಲಿಲ್ಲ. ಬದಲಿಗೆ ಸಿದ್ಧಾಂತಗಳಿಗೆ ಕಟ್ಟುಗೊಳ್ಳದೆ ಅವುಗಳ ಮೂಲಕ ಹೊಸಕಾಲಕ್ಕೆ ಬೇಕಾದ ಚೌಕಟ್ಟು ರೂಪಿಸಿಕೊಳ್ಳುವ ಚಲನಶೀಲತೆ ಮತ್ತು ತೆರೆದಮನಸ್ಸಿದೆ; ಸಂಗಾತಿ ಚಿಂತನೆಗಳ ಅಥವಾ ಚಳುವಳಿಗಳ ಮುಂದೆ ತಾತ್ವಿಕ ಭಿನ್ನಮತವನ್ನು ಪ್ರಶ್ನೆರೂಪದಲ್ಲಿ ಮುಂದಿಟ್ಟು ಸಂವಾದ ಮಾಡಬಯಸುವ ಧಾಟಿಯಿದೆ. ಇದು ಸದ್ಯ ಜರೂರಾಗಿರುವ ಪ್ರಜಾತಂತ್ರವಾದಿ ಕ್ರಮ ಕೂಡ. ಕರ್ನಾಟಕದಲ್ಲಿ ಪ್ರಜಾತಂತ್ರವಾದಿ ಮತ್ತು ಪ್ರಗತಿಪರ ಶಕ್ತಿಗಳು ಸಾಕಷ್ಟಿವೆ. ಆದರೆ ಅವು ಸೈದ್ಧಾಂತಿಕ ಭಿನ್ನತೆ ಮತ್ತು ಪಾಂಥಿಕವಾದ ಬಣರಾಜಕಾರಣದಲ್ಲಿ ಮುಳುಗಿ ಕೂಡಿಕಟ್ಟುವ ಬಂಧುತ್ವದ ಪರಿಭಾಷೆಯನ್ನೇ ಮರೆತುಬಿಟ್ಟಿವೆ. ಭಾರತದಲ್ಲಿ ಮಾರುಕಟ್ಟೆ ಸಂಸ್ಕøತಿಯ ಭಾಗವಾಗಿ ನವಫ್ಯಾಸಿಸಂ ಮೈದಳೆಯುತ್ತಿರುವ ಈ ಕಾಲದಲ್ಲಿ, ಜನಪರ ಸಿದ್ಧಾಂತ ಮತ್ತು ಚಳವಳಿಗಳು ಒಗ್ಗೂಡುವ ವಿಶಾಲ ರಾಜಕಾರಣ ರೂಪುಗೊಳ್ಳಬೇಕಿದೆ. ಇಂತಹ ಚಾರಿತ್ರಿಕ ಮತ್ತು ಸಂಕ್ರಮಣದ ಕಾಲಘಟ್ಟದಲ್ಲಿ ಈ ಕೃತಿ ಪ್ರಕಟವಾಗುತ್ತಿದ್ದು, ಇದು ಒಡಕಲು ಬಿಂ¨ಗಳಾಗಿರುವ ಚಳವಳಿ ಮತ್ತು ನಾಯಕತ್ವಗಳನ್ನು ಸಮಾನ ಆಶಯಕ್ಕಾಗಿ ಒಂದು ಹಾದಿಯ ಮೇಲೆ ತರುವ ಇರಾದೆಯನ್ನೂ ಹೊಂದಿದೆ.
ಅಂಬೇಡ್ಕರ್‍ವಾದದ ಹಿನ್ನೆಲೆಯಿಂದ ಹುಟ್ಟಿರುವ ಇಲ್ಲಿನ ಲೇಖನಗಳಲ್ಲಿ, ಭಾರತದ ದಲಿತರ ಕಷ್ಟಗಳು ಪ್ರಧಾನವಾಗಿ ಚರ್ಚಿತವಾಗಿರುವುದು ಸಹಜವೇ. ವಿಶೇಷವೆಂದರೆ, ಈ ಚರ್ಚೆಯು ಸಮಾಜದ ಎಲ್ಲಾ ದಮನಿತರ ನೋವಿಗೆ ಮಿಡಿಯುವಂತೆ ತನ್ನನ್ನು ವಿಸ್ತರಿಸಿಕೊಳ್ಳುವುದು. ಕೋಮುವಾದವು ದಲಿತರ ಸಮಸ್ಯೆಯಲ್ಲ, ಮಾರುಕಟ್ಟೆ ಪ್ರಣೀತ ಅಭಿವೃದ್ಧಿ ಪರಿಕಲ್ಪನೆಯ ಬಲಿಪಶುಗಳಾಗಿರುವ ಆದಿವಾಸಿಗಳ ಕಷ್ಟ ನಮ್ಮದಲ್ಲ, ಪುರುಷವಾದವು ಮಹಿಳೆಯರ ಸಮಸ್ಯೆ- ಎಂದೆಲ್ಲ ಭಾವಿಸುವ ಬಿಡಿತನದ ಆಲೋಚನೆ ನಮ್ಮ ನಡುವಿದೆ. ನಮಗೆ ರಾಜಕೀಯ ಅಧಿಕಾರ ಸಿಗುವುದಾದರೆ ರಾಜಕೀಯ ಪಕ್ಷಗಳಲ್ಲಿ ಅಸ್ಪøಶ್ಯತೆ ಆಚರಿಸಬೇಕಿಲ್ಲ ಎಂಬ ಅವಕಾಶವಾದವೂ ಇದೆ. ಈ ಹಿನ್ನೆಲೆಯಲ್ಲಿ ದಲಿತರು ಬಡವರು ಮಹಿಳೆಯರು ಕಾರ್ಮಿಕರು ಹಾಗೂ ಮುಸ್ಲಿಮರನ್ನು ಒಳಗೊಂಡಂತೆ ಸಮಸ್ತ ದಮನಿತರನ್ನು ತನ್ನವರೆಂದು ಭಾವಿಸುವ ಇಡಿತನದ  ವಿಶಾಲವಾದ ಗ್ರಹಿಕೆ ಈ ಕೃತಿಯಲ್ಲಿದೆ. ಇದನ್ನು ಅಂಬೇಡ್ಕರ್‍ವಾದ ಮತ್ತು ದಲಿತ ಚಿಂತನೆಯ ಹೊಸ ರೂಪಾಂತರ ಮತ್ತು ಸಮಕಾಲೀನ ವಿಸ್ತರಣೆ ಎನ್ನಬಹುದು. ಇಂತಹ ವಿಸ್ತರಣೆ ಮತ್ತು ರೂಪಾಂತರ ಮೊದಲಿಂದಲೂ ದೇವನೂರರ ಬರಹಗಳಲ್ಲಿದೆ. ಚಳುವಳಿಯ ಹೊಸ ಪ್ರತಿಭೆಗಳಾದ ಜಿಗ್ನೇಶ್, ಕನ್ಹಯ್ಯ ಕುಮಾರ್ ಹಾಗೂ ರೋಹಿತ್ ವೇಮುಲಾ ಅವರಲ್ಲೂ ಇದೆ. ಸ್ವವಿಮರ್ಷೆ ಮತ್ತು ಸಮಕಾಲೀನ ಆಶೋತ್ತರಗಳಿಗಾಗಿ ಪಡೆಯುವ ಈ ಮರುಹುಟ್ಟು ಮತ್ತು ವಿಸ್ತರಣೆಯ ರೂಪಾರಂತವು, ಕರ್ನಾಟಕದ ಚಳವಳಿಗಳಿಗೂ ದಮನಿತ ಸಮುದಾಯಗಳಿಗೂ ಅಗತ್ಯವಾಗಿದೆ. ನಿರ್ದಿಷ್ಟ ಸಿದ್ಧಾಂತದ ಹಿನ್ನೆಲೆಯುಳ್ಳ ಯಾವುದೇ ಒಂದು ಚಳುವಳಿ ಈಗ ಸಾಲುತ್ತಿಲ್ಲ. ಬದಲಿಗೆ ಸ್ವವಿಮರ್ಶೆ ಮತ್ತು ಸಮಾನ ಆಶಯದಲ್ಲಿ ಒಗ್ಗೂಡುವ ಸಹಮತದ ಚಳುವಳಿ ರಾಜಕಾರಣ, ನಮ್ಮ ಕಾಲದ ಪರ್ಯಾಯ ಹಾದಿಯಾಗುವಂತೆ ತೋರುತ್ತಿದೆ. ನೀಲಿ ಮತ್ತು ಕೆಂಪುಗಳು ತಮ್ಮ ಹಳೇ ವ್ಯಾಜ್ಯಗಳನ್ನು ಬದಿಗಿಟ್ಟು, ಒಗ್ಗೂಡಿ ಹೊಸ ಭಾರತ ಕಟ್ಟಬಲ್ಲವು ಎಂದು ಆಸೆ ಹುಟ್ಟಿಸುತ್ತಿವೆ. ಇವುಗಳೊಟ್ಟಿಗೆ ಭಾರತದ ಸಮಸ್ತ ಜಾತಿ-ಮತ-ಧರ್ಮಗಳಲ್ಲಿರುವ ಮಹಿಳೆಯರ ನಸುಗೆಂಪು ಸೇರಿಕೊಳ್ಳಬೇಕಾದ ಮೂರನೇ ಬಣ್ಣವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಕೃತಿಯಲ್ಲಿ ಸ್ತ್ರೀವಿಮೋಚನೆಯ ಪ್ರಸ್ತಾಪಗಳಿವೆ. ಚರಿತ್ರೆಯಿಂದ ಪಾಠ ಕಲಿಯುವ ಮಾತು ಸಾಕಷ್ಟು ಸವೆದುಹೋಗಿದೆ; ಚಳುವಳಿಗಳಿಗೆ ಅನೇಕ ಸಲ ಚಲನಶೀಲ ದೃಷ್ಟಿಕೋನದಲ್ಲಿ ಮರುವ್ಯಾಖ್ಯಾನ ಪಡೆಯದ ಚರಿತ್ರೆಯೇ ಕಾಲ್ತೊಡಕಾಗುವಷ್ಟು ಭಾರವಾಗಿದೆ. ಈ ದೃಷ್ಟಿಯಿಂದ ಚರಿತ್ರೆಯ ಹ್ಯಾಂಗೋವರುಗಳಿಂದ ಬಿಡಿಸಿಕೊಂಡು ಮುನ್ನಡೆಯುವ ಚಲನಶೀಲತೆಯನ್ನು ಈ ಕೃತಿ ತೋರುತ್ತಿದೆ.
– ರಹಮತ್ ತರೀಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....