HomeಮುಖಪುಟYes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

Yes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

- Advertisement -
- Advertisement -

ಅಮೆರಿಕಾ ಗಾಟ್ ಟ್ಯಾಲೆಂಟ್’ (AGT) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮುಂಬೈನ 28 ಬಾಲಕ ಬಾಲಕಿಯರು ತಮ್ಮ ಡ್ಯಾನ್ಸ್ ಪ್ರದರ್ಶನದಲ್ಲಿ ಟ್ರೋಫಿಯನ್ನು ಗೆದ್ದು ಅಮೆರಿಕನ್ನರನ್ನು ಮಾತ್ರವಲ್ಲ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದಾರೆ.

ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡುವ ಅಮೆರಿಕಾ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಭಾಗವಹಿಸಿ ಹೃದಯವೇ ನಿಂತುಹೋಗುವಂತಹ ಡ್ಯಾನ್ಸ್ ಪ್ರದರ್ಶನ ನೀಡಿ ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಈ ಯುವಜನರು ಪ್ರಪಂಚದ ಗಮನ ಸೆಳೆದಿದ್ದಾರೆ.

ಯಾರು ಈ “ವಿ ಅನ್‍ಬೀಟಬಲ್”

ವಿ ಅನ್‍ಬೀಟಬಲ್ ತಂಡ ಮುಂಬೈನ ಹಲವಾರು ಸ್ಲಂಗಳಲ್ಲಿ ವಾಸಿಸುವ ಯುವಜನರ ತಂಡ. ಮುಂಬೈನ ಸ್ಲಂಗಳಲ್ಲಿ ದುಸ್ತರವಾದ ಬದುಕು. ಕುಡಿಯಲು ಶುದ್ಧ ನೀರು ಸಿಗದೆ, ಕಾಲು ಚಾಚಿ ಮಲಗುವಷ್ಟು ಜಾಗವೂ ಇಲ್ಲದೆ, ಚಿಕ್ಕ ಶೆಡ್ಡುಗಳಂತಹ ಮನೆಗಳಲ್ಲಿ ಬದುಕುವ ಜನರ ಅಲ್ಲಿನ ನೋವುಗಳನ್ನು ಅನುಭವಿಸುತ್ತಾ ಬೆಳೆಯುತ್ತಿದ್ದ ಈ 28 ಯುವಜನರ ತಂಡವೇ ವಿ ಅನ್ಬೀಟಬಲ್.

ಮುಂಬೈನ ಸ್ಲಂಗಳಲ್ಲಿ ವಾಸಿಸುತ್ತಿರುವ 12ರಿಂದ 27ವಯಸ್ಸಿನವರೆಗಿನ ಬಾಲಕಬಾಲಕಿಯರು ಅವರು. “ಸ್ಲಂಗಳು ಅತ್ಯಂತ ಜನನಿಬಿಡವಾಗಿವೆ, ಕೊಳಕಾಗಿರುತ್ತದೆ, ಸೂಕ್ತ ವಿದ್ಯುತ್ ಸೌಲಭ್ಯ ಅಲ್ಲಿಲ್ಲ, ಒಂದೊಂದು ಸಣ್ಣ ಕೋಣೆಯಲ್ಲಿ 10 ಜನ ಇರಬೇಕಾಗುತ್ತದೆ, ಅಲ್ಲಿ ಬದುಕು ಉಳಿಸಿಕೊಳ್ಳುವುದೇ ಸವಾಲಿನ ಕೆಲಸ. ಇಂತಹ ಕಷ್ಟದ ಬದುಕಿನಲ್ಲಿ ಅವರು ಪ್ರಾರ್ಥಿಸುತ್ತಿದ್ದದ್ದು ಉತ್ತಮವಾದ, ಸ್ವಾವಲಂಬಿ-ಸ್ವಾಭಿಮಾನದ ಘನತೆಯ ಬದುಕಿಗಾಗಿ. ಆದರೆ ಆ ಯುವಜನರಿಗೆ ಸ್ಲಂಗಳಲ್ಲಿ ಸಿಗುತ್ತಿದ್ದ ಅವಕಾಶವೇ ಕಡಿಮೆ.., ಆದರೂ, ಬೆಳಗ್ಗೆಯಿಂದ ಸಂಜೆಯವರೆಗೂ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಈ ಯುವಜನರು, ಸಂಜೆಯ ಸಮಯದಲ್ಲಿ ಒಟ್ಟಿಗೆ ಸೇರಿ ಡ್ಯಾನ್ಸ್ ಮಾಡುತ್ತಾ ತಮ್ಮೆಲ್ಲರ ಮನಸ್ಸಿನ ಮಾನಸಿಕ ದುಗುಡ, ತಳಮಳ, ಬದುಕಿನ ಮೇಲಿನ ಆಕ್ರೋಶವನ್ನು ಕಳೆದುಕೊಂಡು, ಮನಸ್ಸನ್ನು ಹಗುರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಈ 28 ಯುವಜನರ ತಂಡ ತಾವು ಒಟ್ಟುಗೂಡಿ ಡ್ಯಾನ್ಸ್ ಮಾಡುವ ಸಂದರ್ಭದಲ್ಲಿ ತಮ್ಮ ಡ್ಯಾನ್ಸಿನ ಸ್ಕಿಲ್ಲನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಯೂಟ್ಯೂಬ್‌ನಲ್ಲಿ ನಾನಾ ರೀತಿಯ ಶೋಗಳನ್ನು ನೋಡುತ್ತಿದ್ದರು. ಡ್ಯಾನ್ಸ್ ಬಗ್ಗೆ ತುಡಿತ ಹೊಂದಿದ್ದ ಈ ಯುವಜನರ ಕಣ್ಣಿಗೆ ಕಂಡದ್ದು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ರಿಯಾಲಿಟಿ ಶೋ. ಆ ಕಾರ್ಯಕ್ರಮವನ್ನು ನೋಡುವಾಗ ಆ ಯುವ ಮನಸ್ಸುಗಳಲ್ಲಿ ಮೂಡಿದ್ದು ನಾವು ಒಂದು ದಿನ ಅಲ್ಲಿಗೆ ಹೋಗಬಹುದಾ ಎಂಬ ಕನಸು. ಆ ಕನಸಿನ್ನು ನನಸಾಗಿಸಿಕೊಳ್ಳುವತ್ತ ಹೆಜ್ಜೆ ಹಾಕಿದ್ದ ಆ ತಂಡ ’ವಿ ಅನ್‍ಬೀಟಬಲ್’ ಹೆಸರನ್ನಿಟ್ಟುಕೊಂಡು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ವೇದಿಯ ಮೇಲೇರಿ ತಮ್ಮ ಕನಸನ್ನ ನನಸಾಗಿಸಿಕೊಂಡಿದ್ದಾರೆ.

ವಿ ಅನ್‍ಬೀಟಬಲ್ ಗೆಲುವಿನ ಹಾದಿ!

V Unbeatable ಎಂಬ ಡ್ಯಾನ್ಸ್ ತಂಡ ಕಟ್ಟಿಕೊಂಡು ವಾರಗಳ ಕಾಲ ತಾಲೀಮು ನಡೆಸಿಕೊಂಡು ಎನ್‍ಬಿಸಿ ರಿಯಾಲಿಟಿ ಟಿವಿ ನಡೆಸುವ ‘ಅಮೆರಿಕ ಗಾಟ್ ಟ್ಯಾಲೆಂಟ್’ (AGT) ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಬಂದು ನಿಂತಾಗ ತಮ್ಮೆದುರು ತೀರ್ಪುಗಾರರಾಗಿ ಕುಳಿತ ಸೈಮನ್ ಕೌವೆಲ್, ಹೌವೀ ಮಂಡೆಲ್, ಗ್ಯಾಬ್ರಿಯೆಲ್ ಯೂನಿಯನ್ ಮತ್ತು ಜ್ಯೂಲಿಯನ್ ಹೌ ಅವರಿಗಾಗಲೀ, ಪ್ರೇಕ್ಷಕರಿಗಾಗಲೀ ಆ ಕಂದು ಬಣ್ಣದ ಹುಡುಗರು ಏನು ಮಾಡಲಿದ್ದಾರೆ ಎಂಬ ಊಹೆಯೂ ಇರಲಿಲ್ಲ.

ಶೋ ಆರಂಭದ ಮೊದಲ ದಿನ, ವಿಶಾಲ್ ದಾದ್ಲಾನಿಯ “ಮಲ್ಹಾರಿ” ಹಾಡಿಗೆ ಹುಡುಗರು ಮಾಡುವ ಡ್ಯಾನ್ಸ್ ಕೆಲ ನಿಮಿಷಗಳ ಕಾಲ ಎಲ್ಲರ ಎದೆಬಡಿತ ಹೆಚ್ಚಿಸುತ್ತದೆ. ಅದರಲ್ಲೂ ಸಣ್ಣ ಹುಡುಗರನ್ನು ಎತ್ತಿ ಹಾರಿಸುವ ಕೆಲವು ದೃಶ್ಯಗಳಂತೂ ಮೈ ಜುಮ್ ಎನಿಸಿದ್ದವು. ಬೊಂಬುಗಳನ್ನು ತಂದು ನಿಲ್ಲಿಸಿ ಅದರ ಮೇಲೆ ಕಾಲ್ಬೆರಳ ತುದಿಯಲ್ಲಿ ನಡೆದು, ನೆಗೆದು ತೋರಿಸುವ ದೃಶ್ಯಗಳಂತೂ ಚೇತೋಹಾರಿಯಾಗಿದ್ದವು.

ಆ ದೃಶ್ಯಗಳನ್ನು ನೋಡಿದರೆ, ಅಂತಹ ಪ್ರದರ್ಶನಗಳನ್ನು ಚೀನಾದ ತಂಡಗಳು ಮಾತ್ರ ನೀಡಲು ಸಾಧ್ಯ, ಮತ್ತಾರೂ ಮಾಡಲಾರರು ಎನ್ನುವಂತಿದ್ದವು. ಅಂತಹ ನೃತ್ಯವನ್ನು ಸೂಕ್ತ ತರಬೇತಿ ಸಿಕ್ಕಿದರೆ ಭಾರತದಲ್ಲಿ ವಾಸಿಸುವ ಸ್ಲಂ ಮಕ್ಕಳೂ ಸಹ ಅಸಾಧ್ಯವಾದುದನ್ನು ಸಾಧಿಸಿ ಜಗತ್ತೇ ನಿಬ್ಬೆರಗಾಗುವಂತೆ ಮಾಡಬಲ್ಲರು ಎಂಬುದನ್ನು ವಿ ಅನ್ ಬೀಟಬಲ್ ತಂಡ ತೋರಿಸಿದೆ.

ಅಂದು ರಿಯಾಲಿಟಿ ಶೋ ವೇದಿಕೆ ಮೇಲೆ ನಿಂತ ಈ ಯುವಜನರನ್ನು ಅಮೆರಿಕಾ ಗಾಟ್ ಟ್ಯಾಲೆಂಟ್ ವಿನ್ನರ್ಸ್ ಪಟ್ಟಿಯಲ್ಲಿ ಸೇರಿದರೆ ನಿಮ್ಮ ಭವಿಷ್ಯಕ್ಕೆ ಏನು ಲಾಭ ಎಂದು ಜಡ್ಜ್ ಗ್ಯಾಬ್ರಿಯೆಲ್ ಕೇಳಿದ್ದಕ್ಕೆ ಮುಂಬೈ ಹುಡುಗ, “ಗೆಲುವು ಸಾಧಿಸಿದ್ದು ವಿ ಅನ್ ಬೀಟಬಲ್” ಎಂದು ಇಡೀ ಜಗತ್ತಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಇಂದು ಇಲ್ಲಿ ಸಿಕ್ಕಿರುವ ಅವಕಾಶ ನಮ್ಮ ಬದುಕನ್ನು ಬದಲಿಸಬಹುದು ಎಂಬ ಕನಸು ಹೊತ್ತು ಎಲ್ಲರೂ ಇಲ್ಲಿದ್ದೇವೆ ಎಂದು ಹೇಳಿದ್ದ.

ತಮ್ಮೆಲ್ಲರ ಕನಸನ್ನು ನನಸಾಗಿಸಿಕೊಂಡು ಅಮೆರಿಕಾ ಗಾಟ್ ಟ್ಯಾಲೆಂಟ್ ವೇದಿಕೆ ಏರಿದ್ದಷ್ಟೇ ಅಲ್ಲದೆ, ಈ ಶೋನ ಟ್ರೋಫಿಯನ್ನೂ ಗೆದ್ದು, ತಾವು ಬಯಸಿದ್ದ ಸಾಧನೆಯನ್ನು ಮಾಡಿ ಇಂದು ತಾವು ಗೆದ್ದಿದ್ದೇವೆಂದು ಆ 28 ಜನರ ತಂಡ ಇಡೀ ಜಗತ್ತಿಗೆ ಸಾರಿದ್ದಾರೆ.

ಇದು ಕೇವಲ ಮುಂಬೈನ ಸ್ಲಂ ಯುವಜನರ ಕತೆ ಅಷ್ಟೇ ಅಲ್ಲ, ಇಂತಹ ಎಲೆ ಮರೆಯ ಪ್ರತಿಭೆಗಳು ಈ ದೇಶದ ಅಸಮಾನತೆ ಮತ್ತು ಅವಕಾಶ ವಂಚನೆಯಿಂದಾಗಿ ತೆರೆಮರೆಯಲ್ಲೇ ಹುದುಗಿ ಹೋಗುತ್ತಿವೆ. ಕೆಲವು ವರ್ಷಗಳ ಹಿಂದೆ ಮಂಡ್ಯ ನಗರದ ಸ್ಲಂ ಹುಡುಗರೂ ಸಹ ಇಂತಹುದೇ ಡ್ಯಾನ್ಸ್ ತಂಡ ಕಟ್ಟಿಕೊಂಡಿದ್ದರು, ಉತ್ತರ ಕರ್ನಾಟಕದ ಬೀದರ್ ನಗರದ ಸ್ಲಂಗಳಲ್ಲಿಯೂ ಅಲೆಮಾರಿ ಸಮುದಾಯಗಳ ಹುಡುಗರು ಅದ್ಭುತ ಡ್ಯಾನ್ಸ್ ತಂಡಗಳನ್ನು ಕಟ್ಟಿಕೊಂಡಿದ್ದರು. ದೇಶದ ಸ್ಲಂಗಳಲ್ಲಿ/ಹಳ್ಳಿಗಳಲ್ಲಿ ಅಡಗಿರುವ ಈ ಸುಪ್ತ ಪ್ರತಿಭೆಗಳಿಗೆ ಸರಿಯಾದ ವೇದಿಕೆ ಸಿಕ್ಕಿದ್ದೇ ಆದಲ್ಲಿ ಭಾರತೀಯ ಯುವಜನರ ಹೊಸ ಯಶೋಗಾಥೆಯನ್ನು ಬರೆಯುವುದರಲ್ಲಿ ಸಂಶಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...